Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದಲ್ಲಿ ಮುಂದುವರಿದ ವರುಣನ ಅಬ್ಬರ – KRSನಿಂದ ಲಕ್ಷ ಕ್ಯೂಸೆಕ್ ನೀರು ಹೊರಕ್ಕೆ, ಪ್ರವಾಹ ಭೀತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯದಲ್ಲಿ ಮುಂದುವರಿದ ವರುಣನ ಅಬ್ಬರ – KRSನಿಂದ ಲಕ್ಷ ಕ್ಯೂಸೆಕ್ ನೀರು ಹೊರಕ್ಕೆ, ಪ್ರವಾಹ ಭೀತಿ

Bengaluru City

ರಾಜ್ಯದಲ್ಲಿ ಮುಂದುವರಿದ ವರುಣನ ಅಬ್ಬರ – KRSನಿಂದ ಲಕ್ಷ ಕ್ಯೂಸೆಕ್ ನೀರು ಹೊರಕ್ಕೆ, ಪ್ರವಾಹ ಭೀತಿ

Public TV
Last updated: August 8, 2022 9:37 pm
Public TV
Share
2 Min Read
RAIN 11
SHARE

ಬೆಂಗಳೂರು: ವರುಣನ ಆರ್ಭಟಕ್ಕೆ ಅರ್ಧ ಕರುನಾಡು ಜಲಮಯವಾಗಿದೆ. ಎಲ್ಲಿ ನೋಡಿದ್ರು ನೀರೋ ನೀರು. ನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿವೆ.

RAIN 12

ಉಡುಪಿಯ ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ 7 ವರ್ಷದ ಬಾಲಕಿ ಸನ್ನಿಧಿ ಶಾಲೆಯಿಂದ ಮನೆಗೆ ಮರಳುವಾಗ ನೀರಿನಲ್ಲಿ ಕೊಚ್ಚಿ ಹೋಗಿದ್ದಾಳೆ. ಹಾಸನದ ಹೆಗ್ಗದ್ದೆಯಲ್ಲಿ 190 ಮಿಲಿಮೀಟರ್, ಕೊಡಗಿನ ಭಾಗಮಂಡಲದಲ್ಲಿ 182 ಮಿಲಿಮೀಟರ್ ಮಳೆ ಬಿದ್ದಿದೆ. ಕಾವೇರಿ ನೀರಿನ ಮಟ್ಟ ಕ್ಷಣ ಕ್ಷಣಕ್ಕೂ ಏರಿಕೆ ಆಗ್ತಿದೆ. ಕುಶಾಲನಗರದ ಸಾಯಿ ಬಡಾವಣೆ, ಕುವೆಂಪು ಬಡಾವಣೆಗಳನ್ನು ಪ್ರವಾಹ ಆವರಿಸ್ತಿದೆ. ಜನರೆಲ್ಲಾ ಮನೆ ಖಾಲಿ ಮಾಡಿದ್ದಾರೆ. ಕೆಆರ್‍ಎಸ್‍ನಿಂದ ಭಾರೀ ಪ್ರಮಾಣದಲ್ಲಿ ನೀರನ್ನು ಹೊರಬಿಟ್ಟಿರೋದ್ರಿಂದ ನದಿ ಪಾತ್ರದಲ್ಲಿ ಪ್ರವಾಹದ ಭೀತಿ ಎದುರಾಗಿದೆ.

RAIN 10

ಶ್ರೀರಂಗಪಟ್ಟಣ, ಪಾಂಡವಪುರದ 40 ಗ್ರಾಮಗಳ ಜಮೀನು ಜಲಾವೃತವಾಗ್ತಿವೆ. ಶ್ರೀರಂಗಪಟ್ಟಣದ ನಿಮಿಷಾಂಬಾದ ಸ್ನಾನ ಘಟ್ಟ ಮುಳುಗಡೆಯಾಗಿದೆ. ಶ್ರೀರಂಗಪಟ್ಟಣದ ವೆಲ್ಲೆಸ್ಲಿ ಸೇತುವೆ ಮುಳುಗಡೆ ಹಂತದಲ್ಲಿದೆ. ಆದರೂ ತಾಲೂಕಾಡಳಿತ ಯಾವುದೇ ಕ್ರಮ ತಗೊಂಡಿಲ್ಲ. ಮಹದೇವಪುರ ಗ್ರಾಮಸ್ಥರು ಅಂತ್ಯಕ್ರಿಯೆಗೂ ಪರದಾಡುವಂತಾಗಿದೆ. ಶವವನ್ನು ಪ್ರವಾಹದಲ್ಲಿಯೇ ಶವಹೊತ್ತು ಸಾಗಿದ್ದಾರೆ. ಚಿಕ್ಕಮಗಳೂರಿನ ಹೆಬ್ಬಾಳೆ ಸೇತುವೆ ಕಳೆದ ಮೂರು ದಿನದಿಂದ ಮುಳುಗಡೆ ಸ್ಥಿತಿಯಲ್ಲಿಯೇ ಇದೆ. ಅಪಾಯ ಲೆಕ್ಕಿಸದೇ ಕೆಎಸ್‍ಆರ್‍ಟಿಸಿ ಬಸ್ ಸೇತುವೆ ದಾಟಿದೆ. ಕಳಸ ಬಳಿಯ ನೆಲ್ಲಿಬೀಡು ಬಳಿ ರಾಜ್ಯ ಹೆದ್ದಾರಿ ನದಿಯಂತಾಗಿದೆ.

RAIN 9

ಶಿವಮೊಗ್ಗದ ಪುರದಾಳ್ ಚೆಕ್‍ಡ್ಯಾಂ ತುಂಬಿ ಹರಿದಿದೆ. ಮಳೆಯಿಂದ ನಮ್ಮೂರ್‍ಗೆ ರಸ್ತೆಯಿಲ್ಲ. ಕರೆಂಟ್ ಇಲ್ಲ ಡಿಸಿ ಅಂಕಲ್.. ಪ್ಲೀಸ್ ಕಲ್ಪಿಸಿ ಎಂದು ಕಾರ್ಗಲ್ ಸಮೀಪದ ಉರುಳುಗಲ್ ಗ್ರಾಮದ ಪುಟ್ಟ ಬಾಲಕಿ ಸಾನ್ವಿ ಮನವಿ ಮಾಡಿದ್ದಾಳೆ. ಹಾಸನದ ರಾಮನಾಥಪುರ ರಸ್ತೆ ಕೊಚ್ಚಿ ಹೋಗಿದೆ. ಸಕಲೇಶಪುರದಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ರಾಮನಗರದ ಗದಗಯ್ಯನದೊಡ್ಡಿ ಸೇತುವೆ ಸಂಪೂರ್ಣ ಕೊಚ್ಚಿಹೋಗಿದೆ. ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಸಚಿವ ಅಶ್ವಥ್‍ನಾರಾಯಣ್ ಭಾರೀ ಆಕ್ರೋಶ ಎದುರಿಸಿದ್ದಾರೆ.

RAIN 8

ತುಮಕೂರಿನ ಯಾಲದಹಳ್ಳಿಯಲ್ಲಿ ಕೋಳಿ ಶೆಡ್ ಕುಸಿದು ಸಾವಿರಾರು ಕೋಳಿ ಸಾವನ್ನಪ್ಪಿವೆ. ಕಾರವಾರದಲ್ಲಿ ಕಡೆಲ್ಕೊರೆತಕ್ಕೆ ತಡೆಗೋಡೆ ಕೊಚ್ಚಿಹೋಗಿದೆ. ಹೊನ್ನಾವರದ ಅಪ್ಸರಕೊಂಡದಲ್ಲಿ ಭೂಕುಸಿತದ ಆತಂಕ ಎದುರಾಗಿದ್ದು, 12 ಮಂದಿಯನ್ನು ಕಾಳಜಿ ಕೇಂದ್ರಕ್ಕೆ ಶಿಫ್ಟ್ ಮಾಡಲಾಗಿದೆ. ದಕ್ಷಿಣ ಕನ್ನಡದ ಸಮುದ್ರ ಪ್ರಕ್ಷುಬ್ಧಗೊಂಡಿರುವ ಕಾರಣ ಆಗಸ್ಟ್ 11ರವರೆಗೆ ಮೀನುಗಾರಿಕೆ ಬಂದ್ ಮಾಡಲಾಗಿದೆ. ಇದನ್ನೂ ಓದಿ: ನನ್ನ ಚುನಾವಣಾ ಸ್ಪರ್ಧೆ ಬಗ್ಗೆ ಪಕ್ಷ ತೀರ್ಮಾನಿಸುತ್ತೆ: ವಿಜಯೇಂದ್ರ

RAIN 7

ಇತ್ತ ಉತ್ತರ ಕರ್ನಾಟಕದಲ್ಲಿ ಭಾರೀ ಮಳೆಯಾಗ್ತಿದೆ. ಒಂದೇ ವರ್ಷದಲ್ಲಿ ಮೂರು ಸಾರಿ ಟಿಬಿ ಜಲಾಶಯ ತುಂಬಿದ್ದು, ಡ್ಯಾಂನಿಂದ ಅಪಾರ ನೀರು ಹೊರಬಿಡಲಾಗ್ತಿದೆ. ಪರಿಣಾಮ ಹಂಪಿಯ ಬಹುತೇಕ ಸ್ಮಾರಕಗಳು ಮುಳುಗಡೆ ಆಗಿವೆ. ಅಪಾಯದ ಮಟ್ಟ ಮೀರಿದ ನದಿಯಲ್ಲಿ ಕೆಲವರು ಮುಳುಗೇಳುವ ಸಾಹಸ ಮಾಡ್ತಿದ್ದಾತೆ. ಕಂಪ್ಲಿ-ಗಂಗಾವತಿ ಸೇತುವೆ ಮುಳುಗಡೆಯಾಗಿದ್ದು, ವಾಹನ ಸಂಚಾರ ಬಂದ್ ಆಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಮಳೆಯ ಆರ್ಭಟ ಜೋರಾಗಿದೆ.

RAIN 2

ಘಟಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಶಿಂಗಳಾಪುರ ಸೇತುವೆ ಮೇಲೆ ನೀರು ಪ್ರವಹಿಸ್ತಾ ಇದೆ. ಹಲವು ಕೆಳಹಂತದ ಸೇತುವೆಗಳು ಮುಳುಗಡೆಯಾಗಿದೆ. ಬೆಳಗಾವಿಯ ಶ್ರೀನಗರ, ಜಯನಗರ ಸೇರಿ ಹಲವು ಬಡಾವಣೆಗಳು ಜಲಮಯವಾಗಿವೆ. ಆಸ್ಪತ್ರೆ, ಮೆಡಿಕಲ್ ಶಾಪ್‍ಗೂ ನೀರು ನುಗ್ಗಿದೆ. ರಸ್ತೆಗಳಲ್ಲಿ ಎರಡು ಅಡಿ ನೀರು ನಿಂತು ವಾಹನ ಸಂಚಾರ ಅಸ್ತವ್ಯಸ್ತವಾಗಿದೆ. ಶಹಾಪುರದಲ್ಲಿ ಅನಗೋಳದಲ್ಲಿ ಹಲವು ಮನೆ ಕುಸಿದಿವೆ. ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ. ಬೆಳಗಾವಿಯ ಚಿಕ್ಕೋಡಿ, ವಿಜಯಪುರ, ಬಾಗಲಕೋಟೆ ಜಿಲ್ಲೆಯ ಸಾವಿರಾರು ಎಕರೆ ಹೊಲ ತೋಟಗಳು ಮುಳುಗಡೆ ಆಗಿವೆ. ರೈತರು ಅಪಾರ ನಷ್ಟ ಅನುಭವಿಸಿದ್ದಾರೆ. ಸೂಕ್ತ ಪರಿಹಾರಕ್ಕೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಬೆಂಗಳೂರು, ಮಳೆ, bengaluru, rain

Live Tv
[brid partner=56869869 player=32851 video=960834 autoplay=true]

Share This Article
Facebook Whatsapp Whatsapp Telegram

Cinema news

Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories

You Might Also Like

Massive fire breaks out in plastic godown PG girls in Bengaluru save their lives by jumping over wall
Bengaluru City

ಪ್ಲಾಸ್ಟಿಕ್ ಗೋಡೌನ್‌ನಲ್ಲಿ ಅಗ್ನಿ ಅವಘಡ- ಗೋಡೆ ಹಾರಿ ಜೀವ ಉಳಿಸಿಕೊಂಡ ಬೆಂಗಳೂರಿನ ಪಿಜಿ ಯುವತಿಯರು

Public TV
By Public TV
3 minutes ago
Indonesia Train Accident
Crime

ಇಂಡೋನೇಷ್ಯಾದಲ್ಲಿ ಎರಡು ರೈಲುಗಳ ನಡುವೆ ಭೀಕರ ಅಪಘಾತ – 7 ಪ್ರಯಾಣಿಕರು ಸಾವು, 81 ಮಂದಿಗೆ ಗಾಯ

Public TV
By Public TV
44 minutes ago
Rs 1 lakh to close a pothole in Bengaluru GBAs expensive pothole business exposed 2
Bengaluru City

ಅಬ್ಬಬ್ಬಾ.. ಬೆಂಗಳೂರಿನಲ್ಲಿ ಒಂದು ಗುಂಡಿ ಮುಚ್ಚಲು 1 ಲಕ್ಷ!- ಬಯಲಾಯ್ತು ಜಿಬಿಎ ‘ದುಬಾರಿ’ ಗುಂಡಿ ಬಿಸಿನೆಸ್!

Public TV
By Public TV
60 minutes ago
BESCOM Electricity Bill Name Change
Bengaluru City

ವಿದ್ಯುತ್ ಗ್ರಾಹಕರಿಗೆ ಗುಡ್‌ನ್ಯೂಸ್ – ಮನೆಯಿಂದಲೇ ಕರೆಂಟ್ ಬಿಲ್‌ನಲ್ಲಿ ಹೆಸರು ಬದಲಾವಣೆಗೆ ಹೊಸ ಲಿಂಕ್ ಬಿಡುಗಡೆ

Public TV
By Public TV
1 hour ago
Karnataka Government bus overturns near Challakere Chitradurga 44 passengers rescued 1
Bellary

ಚಳ್ಳಕೆರೆ ಬಳಿ ಬೆಂಗಳೂರಿಗೆ ಬರುತ್ತಿದ್ದ ಸರ್ಕಾರಿ ಬಸ್ ಪಲ್ಟಿ- 44 ಪ್ರಯಾಣಿಕರು ಪಾರು

Public TV
By Public TV
2 hours ago
US Iran War 500 million dollar superyacht Nord linked to Putin aide Alexey Mordashov sails through Hormuz amid blockade 1
Latest

ದಿಗ್ಬಂಧನದ ಮಧ್ಯೆ ಹಾರ್ಮೂಜ್‌ ದಾಟಿತು 4,700 ಕೋಟಿ ರೂ. ಮೌಲ್ಯದ ಸೂಪರ್‌ಯಾಚ್‌!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?