ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯಾದ್ಯಾಂತ ಇನ್ನೂ ಮೂರು ದಿನಗಳ ಕಾಲ ಅಬ್ಬರದ ಮಳೆ ಸುರಿಯುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನೆಲೆಯಲ್ಲಿ ಮೇ 27 ರ ವರೆಗೆ ರೆಡ್ ಅಲರ್ಟ್ ಇರಲಿದೆ.
ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಎಚ್ಚರಿಕೆ!
ಉತ್ತರ ಕನ್ನಡ ಜಿಲ್ಲೆಯಲ್ಲಿ 439 ಭೂ ಪ್ರದೇಶಗಳು ಅತೀ ಸೂಕ್ಷ್ಮವಿದ್ದು ಯಾವ ಭಾಗದಲ್ಲಿಯಾದರೂ ಮಳೆಯಿಂದ ಗುಡ್ಡ ಕುಸಿಯುವ ಆತಂಕವಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 66 ಹಾಗೂ ಘಟ್ಟ ಭಾಗದಲ್ಲಿ ಪ್ರಯಾಣಿಸುವ ಪ್ರಯಾಣಿಕರು ಎಚ್ಚರಿಕೆಯಿಂದ ಇರುವಂತೆ ತಿಳಿಸಿದ್ದು, ಗುಡ್ಡ ಭಾಗದಲ್ಲಿ ಇರುವ ಜನರಿಗೆ ವಿಶೇಷ ಎಚ್ಚರಿಕೆಯಿಂದರಲು ಸೂಚಿಸಿದೆ. ಇದನ್ನೂ ಓದಿ: ರೈತರಿಗೆ ಸಿಹಿ ಸುದ್ದಿ – ವಾಡಿಕೆಗೂ ಮೊದಲೇ ಕೇರಳಕ್ಕೆ ಮುಂಗಾರು ಪ್ರವೇಶ
ಅಂಕೋಲದ ಶಿರೂರು ಭಾಗದ ಹೆದ್ದಾರಿ ಭಾಗದ ಗುಡ್ಡ ಪ್ರದೇಶದಲ್ಲಿ ಮಣ್ಣು ಸಡಿಲವಾಗಿದ್ದು, ಚಿಕ್ಕ ಪ್ರಮಾಣದಲ್ಲಿ ಕುಸಿಯುತ್ತಿದೆ. ಆ ಭಾಗದಲ್ಲಿ ಸಂಚರಿಸುವವರು ಎಚ್ಚರದಿಂದಿರಬೇಕು ಎಂದಿದೆ. ಗುಡುಗು-ಸಿಡಿಲಿನೊಂದಿಗೆ ಗಾಳಿಯ ವೇಗವೂ ಹೆಚ್ಚಿದ್ದು, ಆದಷ್ಟು ಮನೆಯಲ್ಲೇ ಇರಲು ಸೂಚಿಸಿದೆ. ಮೀನುಗಾರರಿಗೆ ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ವಿದ್ಯುತ್ ವ್ಯತ್ಯಯ
ಅಧಿಕ ಮಳೆ ಇರುವುದರಿಂದ ಹಾಗೂ ದುರ್ಬಲ ಮರಗಳನ್ನು ಕತ್ತರಿಸಬೇಕಾದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಾಂತ ಆಗಾಗ ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ತಿಳಿಸಲಾಗಿದೆ. ಇದನ್ನೂ ಓದಿ: ನಿರಂತರ ಮಳೆ ಚಿಕ್ಕಪಡಸಲಗಿ ಬ್ಯಾರೇಜ್ಗೆ ಜೀವಕಳೆ – ರೈತರ ಮೊಗದಲ್ಲಿ ಮಂದಹಾಸ