Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದಲ್ಲಿ ಮುಂದುವರಿದ ಮಳೆಯ ಆರ್ಭಟ – ಬಳ್ಳಾರಿಯಲ್ಲಿ ಮರವೇರಿ ಕುಳಿತಿದ್ದ ಅಂಗವಿಕಲ ರೈತನ ರಕ್ಷಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ರಾಜ್ಯದಲ್ಲಿ ಮುಂದುವರಿದ ಮಳೆಯ ಆರ್ಭಟ – ಬಳ್ಳಾರಿಯಲ್ಲಿ ಮರವೇರಿ ಕುಳಿತಿದ್ದ ಅಂಗವಿಕಲ ರೈತನ ರಕ್ಷಣೆ

Bellary

ರಾಜ್ಯದಲ್ಲಿ ಮುಂದುವರಿದ ಮಳೆಯ ಆರ್ಭಟ – ಬಳ್ಳಾರಿಯಲ್ಲಿ ಮರವೇರಿ ಕುಳಿತಿದ್ದ ಅಂಗವಿಕಲ ರೈತನ ರಕ್ಷಣೆ

Public TV
Last updated: October 13, 2017 9:28 am
Public TV
Share
2 Min Read
bly rain f
SHARE

ಬೆಂಗಳೂರು: ರಾಜ್ಯಾದ್ಯಂತ ಮಳೆ ಅಬ್ಬರ ಮುಂದುವರಿದಿದೆ. ತಡರಾತ್ರಿಯೂ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವರುಣ ಅಬ್ಬರಿಸಿದ್ದಾನೆ. ಇನ್ನೂ ಬಿಸಿಲ ನಗರಿ ಬಳ್ಳಾರಿಯಲ್ಲಿ ಭೀಕರ ಮಳೆಗೆ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಸಿಂಧವಾಳ ಗ್ರಾಮದಲ್ಲಿ ಪ್ರವಾಹಕ್ಕೆ ಸಿಲುಕಿದ್ದ ರೈತರೊಬ್ಬರನ್ನು ರಕ್ಷಣೆ ಮಾಡಲಾಗಿದೆ.

bry rain

ಗುರುವಾರ ಎಂದಿನಂತೆ ತೋಟಕ್ಕೆ ತೆರಳಿದ್ದ ರೈತ ಶ್ರೀನಿವಾಸ್ ಹಳ್ಳದ ನೀರಿನ ಪ್ರಮಾಣ ಹೆಚ್ಚಾಗಿದ್ದರಿಂದ ಜೀವದಾಸೆಗೆ ಮರವೇರಿ ಕುಳಿತಿದ್ದರು. ಈ ಮಾಹಿತಿ ಪಡೆದ ಜಿಲ್ಲಾಡಳಿತ 125 ಕ್ಕೂ ಹೆಚ್ಚಿನ ರಕ್ಷಣಾ ಸಿಬ್ಬಂದಿಯೊಂದಿಗೆ ರೈತ ಶ್ರೀನಿವಾಸ್ ಅವರನ್ನು ರಕ್ಷಣೆ ಮಾಡಿದೆ. ಈ ರಕ್ಷಣಾ ಕಾರ್ಯವನ್ನು ವೀಕ್ಷಿಸಲು ಸ್ಥಳದಲ್ಲಿ ನೂರಾರು ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು. ರಕ್ಷಣಾ ಕಾರ್ಯಚಾರಣೆ ವೇಳೆ ಬಳ್ಳಾರಿ ಎಸಿ, ತಹಶೀಲ್ದಾರ್, ಡಿವೈಎಸ್‍ಪಿ, ಅಗ್ನಿಶಾಮಕದಳದ ಸಿಬ್ಬಂದಿ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದರು. ರೈತ ಶ್ರೀನಿವಾಸ್ ಅಂಗವಿಕಲರಾಗಿದ್ದು, 12 ಗಂಟೆಗಳ ಕಾಲ ಮರ ಹತ್ತಿ ಕುಳಿತ ಧೈರ್ಯವನ್ನು ಮೆಚ್ಚಿ ಮಾಜಿ ಶಾಸಕ, ಗಣಿ ಉದ್ಯಮಿ ಸೂರ್ಯನಾರಾಯಣ ರೆಡ್ಡಿ 11 ಸಾವಿರ ರೂ. ಬಹುಮಾನ ಘೋಷಿಸಿದ್ದಾರೆ.

ಬಳ್ಳಾರಿ ತಾಲೂಕಿನ ಬಸರಕೋಡು ಗ್ರಾಮದ ಸುತ್ತ ಮುತ್ತ ಡ್ರೋನ್ ಕ್ಯಾಮೆರಾದ ಮೂಲಕ ಮಳೆ ದೃಶ್ಯಗಳನ್ನ ಪಬ್ಲಿಕ್ ಟಿವಿ ಸೆರೆ ಹಿಡಿದಿದೆ. ಫೋಟೋಗ್ರಾಫರ್ ಮಹೇಶ್ ಹನ್ಸಿ ಅನ್ನೋವ್ರು ಡ್ರೋನ್ ಬಳಸಿ ಈ ದೃಶ್ಯ ತೆಗೆದಿದ್ದಾರೆ.

rcr drone 1

 

ಅತ್ತ ರಾಯಚೂರಿನ ಲಿಂಗಸುಗೂರಿನಲ್ಲಿ ಸುರಿದ ಭಾರೀ ಮಳೆಗೆ ತಾಲೂಕಿನ ಬುದ್ದಿನ್ನಿ ಕೆರೆ ಒಡೆದಿದ್ದು ಸುತ್ತಮುತ್ತಲ ಗ್ರಾಮಗಳಿಗೆ ನೀರು ನುಗ್ಗಿದೆ. ಗುಡಿಹಾಳ ಗ್ರಾಮ ಸಂಪೂರ್ಣ ಜಲಾವೃತವಾಗಿದೆ. ಬುದ್ದಿನ್ನಿ, ಮಟ್ಟೂರಿನಲ್ಲೂ ಮನೆಗಳಿಗೆ ನೀರು ನುಗ್ಗಿದೆ. ಬೆಳಗಿನ ಜಾವ ಕೆರೆ ಒಡೆದಿದ್ದು ಜನ ಜೀವನ ಅಸ್ತವ್ಯಸ್ತವಾಗಿದೆ. ಹೊಲಗಳಲ್ಲಿ ನೀರು ನಿಂತಿದ್ದು ಬೆಳೆಗಳು ಸಂಪೂರ್ಣ ಹಾನಿಯಾಗಿವೆ. ರಸ್ತೆ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕೆರೆ ತುಂಬಿದ್ದು, ಕೆರೆ ಒಡೆದ ಹಿನ್ನೆಲೆಯಲ್ಲಿ ಮಸ್ಕಿ ನಾಲಾ ಡ್ಯಾಮಿಗೆ ಹೆಚ್ಚು ಪ್ರಮಾಣದ ನೀರು ಹರಿದು ಬರುತ್ತಿದೆ. ಹೀಗಾಗಿ ಡ್ಯಾಮ್ ನಿಂದ ಹೆಚ್ಚುವರಿ ನೀರು ಹಳ್ಳಕ್ಕೆ ಬಿಡುಗಡೆ ಮಾಡಲಾಗುತ್ತಿದೆ.

CTD RAIN EFFECT AV 10

ಹಾಸನ ಜಿಲ್ಲೆಯಾದ್ಯಂತ ರಾತ್ರಿಯಿಡೀ ಭಾರಿ ಮಳೆ ಸುರಿದಿದ್ದು, ತಾಲೂಕಿನ ತೇಜೂರು ಗ್ರಾಮದಲ್ಲಿ ಐದು ಮನೆಗಳು ಕುಸಿದಿವೆ. ಘಟನಾ ಸಂದರ್ಭದಲ್ಲಿ ಮನೆಯಲ್ಲಿದ್ದ ಮಗು ಪಾರಾಗಿದ್ದು ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಸತತವಾಗಿ ಸುರಿಯುತ್ತಿರುವ ಭಾರೀ ಮಳೆಗೆ ಜಿಲ್ಲೆಯಲ್ಲಿ ಅಪಾರ ಪ್ರಮಾಣದ ಬೆಳೆ ನಾಶವಾಗಿದ್ದು, ಲಕ್ಷಾಂತರ ರೂ. ನಷ್ಟವಾಗಿದೆ.

ಕಲಬುರಗಿ ಜಿಲ್ಲೆಯಲ್ಲಿ ಸತತ ಮಳೆಯ ಹಿನ್ನೆಲೆಯಲ್ಲಿ ಸೇಡಂ ಪಟ್ಟಣದ ಕಮಲಾವತಿ ನದಿ ಉಕ್ಕಿ ಹರಿದಿದೆ. ಎರಡು ತಿಂಗಳ ಹಿಂದೆಯಷ್ಟೆ ಒಂದೂವರೆ ಕೋಟಿ ರೂ. ಹಣ ಖರ್ಚು ಮಾಡಿ ನದಿಗೆ ನಿರ್ಮಾಣ ಮಾಡಲಾಗಿದ್ದ ಬ್ರಿಡ್ಜ್ ನೀರಿನಲ್ಲಿ ಕೊಚ್ಚಿ ಹೋಗಿದೆ. ಕಳಪೆ ಕಾಮಾಗಾರಿಯೇ ಬ್ರಿಡ್ಜ್ ನೀರಿನಲ್ಲಿ ಕೊಚ್ಚಿ ಹೋಗಲು ಕಾರಣ ಅಂತಾ ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೇ ಜಿಲ್ಲೆಯಲ್ಲಿ ಕಳೆದ 15 ದಿನಗಳಿಂದ ಸುರಿಯುತ್ತಿರುವ ಮಳೆಗೆ ತೊಗರಿ ಬೆಳೆ ಸಂಪೂರ್ಣ ನಾಶವಾಗಿದೆ. ಹೀಗಾಗಿ ಜಿಲ್ಲೆಯ ತೊಗರಿ ಬೆಳೆಗಾರರು ಸಂಕಷ್ಟದಲ್ಲಿದ್ದಾರೆ.

vlcsnap 2017 10 13 09h17m26s653

 

ರೇಷ್ಮೆನಗರಿ ರಾಮನಗರ ಜಿಲ್ಲೆಯಾದ್ಯಂತ ರಾತ್ರಿ ವರುಣ ಆರ್ಭಟಿಸಿದ್ದಾನೆ. ರಾತ್ರಿ ಜಿಲ್ಲೆಯಾದ್ಯಂತ ಜೋರು ಮಳೆಯಾಗಿದ್ದು ಅದರಲ್ಲೂ ಚನ್ನಪಟ್ಟಣ ಹಾಗು ಕನಕಪುರ ತಾಲೂಕುಗಳಲ್ಲಿ ಗುಡುಗು ಸಿಡಿಲು ಸಹಿತ ಜೋರು ಮಳೆಯಾಗಿದೆ. ಮಳೆಯಿಂದಾಗಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ಅಲ್ಲದೇ ರಸ್ತೆಯಲ್ಲಿ ಉಂಟಾಗಿರುವ ಗುಂಡಿಗಳಲ್ಲಿ ಮಳೆ ನೀರು ನಿಂತು ಬೈಕ್ ಸವಾರರು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿತ್ತು. ಜೋರು ಮಳೆ ನಿಂತ ಬಳಿಕ ಮಧ್ಯರಾತ್ರಿಯ ವರೆಗೂ ಸಹ ತುಂತುರು ಮಳೆ ಮುಂದುವರೆದಿತ್ತು.

CTD RAIN EFFECT AV 9

vlcsnap 2017 10 13 08h48m58s955

vlcsnap 2017 10 13 08h48m49s139

RCR RAIN EFFECT AV 7

RCR RAIN EFFECT AV 6

TAGGED:bellarybengalurufarmershassanKalaburugiprotectionPublic TVraichurrainramanagarಕಲಬುರುಗಿಪಬ್ಲಿಕ್ ಟಿವಿಬಳ್ಳಾರಿಬೆಂಗಳೂರುಮಳೆರಕ್ಷಣೆರಾಮನಗರರಾಯಚೂರುರೈತಹಾಸನ
Share This Article
Facebook Whatsapp Whatsapp Telegram

Cinema news

Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World

You Might Also Like

S Madhu Bangarappa
Bengaluru City

ಕರ್ನಾಟಕದಲ್ಲೂ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ – ಹಿಂದಿ ಹೇರಿಕೆಗೆ ಬ್ರೇಕ್?

Public TV
By Public TV
3 minutes ago
Ramnavami in raichuru
Districts

ರಾಮನವಮಿ ಸಡಗರ – ರಾಯಚೂರಿನ ದೇವಾಲಯಗಳಲ್ಲಿ ನಿರಂತರ ಪೂಜೆ, ಭಕ್ತರಿಗೆ ಅನ್ನಸಂತರ್ಪಣೆ

Public TV
By Public TV
36 minutes ago
Ricky Rai 4
Bengaluru City

ಡ್ರಿಫ್ಟಿಂಗ್ ಬಳಿಕ ರಿಕ್ಕಿ ರೈ ವಿರುದ್ಧ ಮತ್ತೊಂದು FIR – ಕಾರು ರಿಜಿಸ್ಟರ್ ಮಾಡದೇ ಟ್ಯಾಕ್ಟ್ ಕಟ್ಟದೇ ಸರ್ಕಾರಕ್ಕೆ ವಂಚನೆ

Public TV
By Public TV
59 minutes ago
Petrol Lockdown
Latest

ತೈಲ ಬಿಕ್ಕಟ್ಟಿನ ಮಧ್ಯೆ ಲಾಕ್‌ಡೌನ್ ಭೀತಿ – ವದಂತಿ ಅಲ್ಲಗಳೆದ ಕೇಂದ್ರ

Public TV
By Public TV
1 hour ago
Ayodhya Ram
Latest

ರಾಮನವಮಿ | ಅಯೋಧ್ಯೆ ಬಾಲರಾಮನ ಹಣೆಯ ಮೇಲೆ ಮೂಡಿದ ʻಸೂರ್ಯ ತಿಲಕʼ

Public TV
By Public TV
2 hours ago
ಸಾಂದರ್ಭಿಕ ಚಿತ್ರ
Chikkaballapur

ಗ್ಯಾಸ್ ಅಭಾವದ ಮಧ್ಯೆ ಚಿಕ್ಕಬಳ್ಳಾಪುರದಲ್ಲಿ 247 ಸಿಲಿಂಡರ್ ಜಪ್ತಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?