Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಿಕ್ಕಬಳ್ಳಾಪುರ, ಕೋಲಾರದಲ್ಲಿ ವರುಣಾರ್ಭಟ- ದಾವಣೆಗೆರೆಯಲ್ಲಿ ದೇಗುಲ ಜಲಾವೃತ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಚಿಕ್ಕಬಳ್ಳಾಪುರ, ಕೋಲಾರದಲ್ಲಿ ವರುಣಾರ್ಭಟ- ದಾವಣೆಗೆರೆಯಲ್ಲಿ ದೇಗುಲ ಜಲಾವೃತ

Bengaluru City

ಚಿಕ್ಕಬಳ್ಳಾಪುರ, ಕೋಲಾರದಲ್ಲಿ ವರುಣಾರ್ಭಟ- ದಾವಣೆಗೆರೆಯಲ್ಲಿ ದೇಗುಲ ಜಲಾವೃತ

Public TV
Last updated: November 20, 2021 7:42 am
Public TV
Share
2 Min Read
RAIN 4 2
SHARE

ಬೆಂಗಳೂರು: ರಾಜ್ಯಾದ್ಯಂತ ಮಳೆಯಬ್ಬರ ಮುಂದುವರಿದಿದೆ. ರಣಮಳೆಗೆ ಮಧ್ಯ ಕರ್ನಾಟಕ ಮುಳುಗಿದೆ. ಇನ್ನು ದಕ್ಷಿಣ, ಮಧ್ಯಕರ್ನಾಟಕದಲ್ಲಿ ಅಕಾಲಿಕ ಮಳೆ ಅವಾಂತರ ಸೃಷ್ಟಿಸಿದ್ದು, ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಬೊಬ್ಬಿರಿಯುತ್ತಿದ್ದಾನೆ. ರಾಜ್ಯಾದ್ಯಂತ ಮಹಾಮಳೆಗೆ ಈವರೆಗೆ 6 ಮಂದಿ ಬಲಿಯಾಗಿದ್ದಾರೆ.

RAIN 3 3

ಬರದನಾಡು ಚಿಕ್ಕಬಳ್ಳಾಪುರದಲ್ಲಿ ಕಂಡು ಕೇಳರಿಯದ ಮಳೆಯಾಗ್ತಿದೆ. ಪರಿಣಾಮ ಗೌರಿಬಿದನೂರಿನಲ್ಲಿ ಉತ್ತರ ಪಿನಾಕಿನಿ ನದಿ ಮೈದುಂಬಿ ಹರಿಯುತ್ತಿದ್ದು, ನದಿಯ ಅಕ್ಕಪಕ್ಕದಲ್ಲಿ ವಾಸಿಸುತ್ತಿರುವ ಸಾವಿರಾರು ಜನರು ಮನೆ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಅವರನ್ನು ತಾಲೂಕು ಆಡಳಿತ, ನಗರಸಭೆ ವತಿಯಿಂದ ನಗರದ ಖಾಸಗಿ ಕಲ್ಯಾಣ ಮಂಟಪಗಳಿಗೆ ಶಿಫ್ಟ್ ಮಾಡಲಾಗಿದೆ. ಇದನ್ನೂ ಓದಿ: ಬಿಡಿಎ ಅಧಿಕಾರಿಗಳಿಗೆ ಎಸಿಬಿ ಶಾಕ್‌- ಕಂತೆ ಕಂತೆ ನೋಟು, ಬ್ಯಾಗ್‌ಗಟ್ಟಲೆ ದಾಖಲೆಗಳು ವಶ!

RAIN 6 1

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬಿರಿಯುತ್ತಿದ್ದಾನೆ. ಮಂಚೇನಹಳ್ಳಿ ಬಳಿ ಉತ್ತರಪಿನಾಕಿನ ನದಿಯ ಭೋರ್ಗೆರೆತ ಜೋರಾಗಿದ್ದು, ಮಂಚೇನಹಳ್ಳಿ-ತೊಂಡೆಬಾವಿ ಮಾರ್ಗ ಮಧ್ಯೆ ಇರುವ ಸೇತುವೆ ತಳಪಾಯ ಕೊಚ್ಚಿ ಹೋಗಿದೆ. ಸೇತುವೆ ಮೇಲೆ ವಾಹನಗಳ ಓಡಾಟ ಸಂಪೂರ್ಣ ನಿಷೇಧಿಸಲಾಗಿದೆ.

RAIN 10

ವರುಣನ ಅರ್ಭಟಕ್ಕೆ ಕೋಲಾರ ಜನರು ಅಕ್ಷರಶಃ ತತ್ತರಿಸಿ ಹೋಗಿದ್ದಾರೆ. ಕೋಲಾರ ನಗರ, ಬಂಗಾರಪೇಟೆ, ಶ್ರೀನಿವಾಸಪುರ ಪಟ್ಟಣ, ಗೌನಿಪಲ್ಲಿ, ಕೆಜಿಎಫ್ ನಗರದಲ್ಲಿ ಹಲವು ಬಡಾವಣೆಗಳಿಗೆ ನೀರು ನುಗ್ಗಿದೆ. ಇಬ್ಬರು ಮೃತಪಟ್ಟಿದ್ದಾರೆ. 9 ಮನೆಗಳು ಬಿದ್ದಿದೆ. 306 ಮನೆಗಳು ಭಾಗಶಃ ಹಾನಿಯಾಗಿವೆ. ಬಿಜಿಎಸ್ ಶಾಲೆಯೂ ಮುಳುಗಡೆಯಾಗಿದೆ. ಇನ್ನು ಅಕಾಲಿಕ ಮಳೆಯಿಂದಾಗಿ ಸಾವಿರಾರು ಎಕರೆ ಬೆಳೆ ನಾಶವಾಗಿದೆ. ಜಿಲ್ಲೆಯ ಶೇ.98ರಷ್ಟು ಕೆರೆಗಳು ತುಂಬಿ ಕೋಡಿ ಹರಿದಿವೆ.

RAIN 7 1

ನಿರಂತರ ಮಳೆಯಿಂದ ಕೊಡಗಿನ ಹಲವೆಡೆ ಭತ್ತ, ಜೋಳದ ಬೆಳೆ ನಾಶವಾಗಿದೆ. ಗದ್ದೆಗಳಲ್ಲಿ ನೀರು ನಿಂತು ಭತ್ತದ ಬೆಳೆ ಕೊಳೆಯುತ್ತಿದೆ. ಇನ್ನು ಕುಶಾಲನಗರ ತಾಲ್ಲೂಕು ಒಂದರಲ್ಲೇ ಬರೋಬ್ಬರಿ 800 ಎಕರೆಯಷ್ಟು ಮೆಕ್ಕೆಜೋಳ ನಷ್ಟವಾಗಿದೆ. ಸತತ ಮಳೆಯಿಂದ ಮೆಕ್ಕೆಜೋಳ ಗಿಡದಲ್ಲೇ ಮೊಳಕೆ ಒಡೆಯುತ್ತಿದೆ. ಇದರಿಂದಾಗಿ ರೈತರು ಕಣ್ಣೀರಲ್ಲಿ ಕೈತೊಳೆಯುವಂತಾಗಿದೆ. ದಾವಣಗೆರೆಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಹರಿಹರ ತಾಲೂಕಿನಲ್ಲಿ ಭತ್ತದ ಬೆಳೆ ಸಂಪೂರ್ಣ ನಾಶವಾಗಿದೆ. ಇನ್ನೇನು ಎರಡು ದಿನಗಳಲ್ಲಿ ಕಟಾವು ಮಾಡಿ ಮಾರುಕಟ್ಟೆ ಹಾಕಬೇಕು ಅಂತಿದ್ದ ಅನ್ನದಾತರು ಕಂಗಾಲಾಗಿದ್ದಾರೆ. ಆದಾಪುರ, ಜಿಗಳಿ, ಮಲೆಬೆನ್ನೂರಿನಲ್ಲೂ ಸಾವಿರಾರು ಎಕರೆ ಭತ್ತ ಸಂಪೂರ್ಣ ನೆಲ ಕಚ್ಚಿದೆ.

RAIN 5 1

ದಾವಣಗೆರೆಯಲ್ಲಿ ಮಳೆ ಅವಾಂತರ ಮುಂದುವರಿದಿದೆ. ನಿನ್ನೇ ರಾತ್ರಿಯಿಂದ ಬಿಡದೆ ಬರುತ್ತಿರುವ ಮಳೆಯಿಂದಾಗಿ ಕೆರೆ ಕಟ್ಟೆಗಳು ಸಂಪೂರ್ಣ ಭರ್ತಿಯಾಗಿದೆ. ಚನ್ನಗಿರಿ ತಾಲೂಕಿನ ಗೋಪೇನಹಳ್ಳಿ ಗ್ರಾಮಕ್ಕೆ ನೀರು ನುಗ್ಗಿದೆ. ಮಾವಿನಹಳ್ಳಿ ಕೆರೆ ಭರ್ತಿಯಾಗಿ ಕೋಡಿಬಿದ್ದಿದೆ. ಜೋಳದಾಳ್ ಅಮ್ಮನಗುಡ್ಡದ ಕಲ್ಲು ಕಟ್ಟುವ ಚೌಡೇಶ್ವರಿ ದೇವಾಲಯ ಮುಳುಗಡೆಯಾಗಿದೆ. ಹರಿದ್ರಾವತಿ ಹಳ್ಳ ತುಂಬಿ ಹರಿದು ಚನ್ನಗಿರಿ ತಾಲ್ಲೂಕಿನ ಬುಳಸಾಗರ ಗ್ರಾಮದಲ್ಲಿರೋ ಸಿದ್ದರಾಮೇಶ್ವರ ರಂಗನಾಥಸ್ವಾಮಿ, ಆಂಜನೇಯ ಸ್ವಾಮಿ ದೇವಾಲಯಗಳಿಗೆ ನೀರು ನುಗ್ಗಿದೆ. ರೈಲ್ವೇ ಅಂಡರ್‍ಪಾಸ್ ಮುಳುಗಡೆಯಾಗಿದೆ.

RAIN 11

ಅಕಾಲಿಕ ಮಳೆಯಿಂದ ಕೊಪ್ಪಳ ಜಿಲ್ಲಾದ್ಯಂತ ಸಾಕಷ್ಟು ಬೆಳೆ ಹಾನಿಯಾಗಿದೆ. ತುಂಗಭದ್ರಾ ಅಚ್ಚುಕಟ್ಟು ವ್ಯಾಪ್ತಿಯ ಗಂಗಾವತಿ ಮತ್ತು ಕಾರಟಗಿ ತಾಲೂಕಿನಲ್ಲಿ ಕಟಾವಿಗೆ ಬಂದಿದ್ದ ಭತ್ತ ಸಂಪೂರ್ಣವಾಗಿ ನೆಲ ಕಚ್ಚಿದೆ. ಕೊಯ್ಲಿಗೆ ಬಂದಿದ್ದ ಭತ್ತ ನೆಲಕ್ಕೆ ಬಿದ್ದು, ನೀರು ಪಾಲಾಗಿದೆ. ಇನ್ನು ತುಂಗಭದ್ರಾ ಜಲಾಶಯದ ಒಳ ಹರಿವು ಹೆಚ್ಚಳವಾಗಿದ್ದು ಜಲಾಶಯದಿಂದ ಅಪಾರ ಪ್ರಮಾಣ ನೀರನ್ನು ನದಿಗೆ ಬಿಡುಗಡೆ ಮಾಡಲಾಗ್ತಿದ್ದು ನದಿ ಪಾತ್ರದ ಜನರು ಎಚ್ಚರ ವಹಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

TAGGED:bengalurukarnatakarainಕರ್ನಾಟಕಬೆಂಗಳೂರುಮಳೆ
Share This Article
Facebook Whatsapp Whatsapp Telegram

Cinema news

Akhil Viswanath Malayalam film
ಮಲಯಾಳಂ ನಟ ಅಖಿಲ್ ವಿಶ್ವನಾಥ್ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆ – ಆತ್ಮಹತ್ಯೆ ಶಂಕೆ
Cinema Latest South cinema Top Stories
Dhurandhar Movie
ದುರಂಧರ್ ಚಿತ್ರ ಕಂಡು ಕಣ್ಣು ಕೆಂಪು ಮಾಡಿಕೊಂಡ ಪಾಕಿಸ್ತಾನ..ಏನ್ ಕಾರಣ?
Cinema Latest Top Stories
Premi Movie 2
`ಪ್ರೇಮಿ’ಗಾಗಿ ಮೊದಲ ಹಾಡು ಬಿಡುಗಡೆ
Cinema Latest Sandalwood
MB Khazima
ವಿಶ್ವ ಚಾಂಪಿಯನ್ ಖಾಜಿಮಾ ಬಯೋಪಿಕ್‌ಗೆ ಚಾಲನೆ
Cinema Latest Sandalwood South cinema Top Stories

You Might Also Like

fake PSI case
Bengaluru City

ಪೊಲೀಸ್‌ ಅಂತ ಬಿಲ್ಡಪ್‌ – ಬೆದರಿಕೆ ಹಾಕಿ ಹಣ ವಸೂಲಿ ಮಾಡ್ತಿದ್ದ ನಕಲಿ PSI ಸೇರಿ ನಾಲ್ವರ ಬಂಧನ

Public TV
By Public TV
33 minutes ago
Davanagere ZP CEO
Davanagere

ಗ್ರಾಮಸ್ಥರ ಅಹವಾಲು ಸ್ವೀಕರಿಸಿದ ಬಳಿಕವೇ ಕಚೇರಿ ಕೆಲಸ – ಜನ ಸೇವೆಗೆ ಅಧಿಕಾರಿ ಪಣ

Public TV
By Public TV
2 hours ago
cow theft in koppa chikkamagaluru outrage from hindu activists
Chikkamagaluru

ಹೈಟೆಕ್ ಕಾರಿನಲ್ಲಿ ಗೋ ಕಳ್ಳತನ – ಹಿಂದೂ ಕಾರ್ಯಕರ್ತರಿಂದ ಸಿನಿಮಾ ಶೈಲಿಯಲ್ಲಿ ಚೇಸ್!

Public TV
By Public TV
2 hours ago
coffee worth thousands of rupees stolen 6 arrested in hassan beluru
Crime

ಕಾಫಿ ಬೆಳೆಗಾರನಿಗೆ ಥಳಿಸಿ ಕಳ್ಳತನ – 6 ಮಂದಿ ಅರೆಸ್ಟ್

Public TV
By Public TV
3 hours ago
elephant mundagod
Latest

ಮುಂಡಗೋಡಿನ ಕಾತೂರಿನಲ್ಲಿ ಆನೆ ಪ್ರತ್ಯಕ್ಷ; ಗಂಟೆಗಟ್ಟಲೇ ರಸ್ತೆ ಬಂದ್

Public TV
By Public TV
3 hours ago
US Shooting
Crime

ಅಮೆರಿಕದಲ್ಲಿ ಎಂಜಿನಿಯರಿಂಗ್‌ ಪರೀಕ್ಷೆ ವೇಳೆ ಗುಂಡಿನ ದಾಳಿ; ಇಬ್ಬರು ಸಾವು, 8 ಮಂದಿಗೆ ಗಾಯ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?