Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಚಿಕ್ಕಬಳ್ಳಾಪುರ, ಕೋಲಾರದಲ್ಲಿ ವರುಣಾರ್ಭಟ- ದಾವಣೆಗೆರೆಯಲ್ಲಿ ದೇಗುಲ ಜಲಾವೃತ

Public TV
Last updated: November 20, 2021 7:42 am
Public TV
Share
2 Min Read
RAIN 4 2
SHARE

ಬೆಂಗಳೂರು: ರಾಜ್ಯಾದ್ಯಂತ ಮಳೆಯಬ್ಬರ ಮುಂದುವರಿದಿದೆ. ರಣಮಳೆಗೆ ಮಧ್ಯ ಕರ್ನಾಟಕ ಮುಳುಗಿದೆ. ಇನ್ನು ದಕ್ಷಿಣ, ಮಧ್ಯಕರ್ನಾಟಕದಲ್ಲಿ ಅಕಾಲಿಕ ಮಳೆ ಅವಾಂತರ ಸೃಷ್ಟಿಸಿದ್ದು, ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಬೊಬ್ಬಿರಿಯುತ್ತಿದ್ದಾನೆ. ರಾಜ್ಯಾದ್ಯಂತ ಮಹಾಮಳೆಗೆ ಈವರೆಗೆ 6 ಮಂದಿ ಬಲಿಯಾಗಿದ್ದಾರೆ.

RAIN 3 3

ಬರದನಾಡು ಚಿಕ್ಕಬಳ್ಳಾಪುರದಲ್ಲಿ ಕಂಡು ಕೇಳರಿಯದ ಮಳೆಯಾಗ್ತಿದೆ. ಪರಿಣಾಮ ಗೌರಿಬಿದನೂರಿನಲ್ಲಿ ಉತ್ತರ ಪಿನಾಕಿನಿ ನದಿ ಮೈದುಂಬಿ ಹರಿಯುತ್ತಿದ್ದು, ನದಿಯ ಅಕ್ಕಪಕ್ಕದಲ್ಲಿ ವಾಸಿಸುತ್ತಿರುವ ಸಾವಿರಾರು ಜನರು ಮನೆ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಅವರನ್ನು ತಾಲೂಕು ಆಡಳಿತ, ನಗರಸಭೆ ವತಿಯಿಂದ ನಗರದ ಖಾಸಗಿ ಕಲ್ಯಾಣ ಮಂಟಪಗಳಿಗೆ ಶಿಫ್ಟ್ ಮಾಡಲಾಗಿದೆ. ಇದನ್ನೂ ಓದಿ: ಬಿಡಿಎ ಅಧಿಕಾರಿಗಳಿಗೆ ಎಸಿಬಿ ಶಾಕ್‌- ಕಂತೆ ಕಂತೆ ನೋಟು, ಬ್ಯಾಗ್‌ಗಟ್ಟಲೆ ದಾಖಲೆಗಳು ವಶ!

RAIN 6 1

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬಿರಿಯುತ್ತಿದ್ದಾನೆ. ಮಂಚೇನಹಳ್ಳಿ ಬಳಿ ಉತ್ತರಪಿನಾಕಿನ ನದಿಯ ಭೋರ್ಗೆರೆತ ಜೋರಾಗಿದ್ದು, ಮಂಚೇನಹಳ್ಳಿ-ತೊಂಡೆಬಾವಿ ಮಾರ್ಗ ಮಧ್ಯೆ ಇರುವ ಸೇತುವೆ ತಳಪಾಯ ಕೊಚ್ಚಿ ಹೋಗಿದೆ. ಸೇತುವೆ ಮೇಲೆ ವಾಹನಗಳ ಓಡಾಟ ಸಂಪೂರ್ಣ ನಿಷೇಧಿಸಲಾಗಿದೆ.

RAIN 10

ವರುಣನ ಅರ್ಭಟಕ್ಕೆ ಕೋಲಾರ ಜನರು ಅಕ್ಷರಶಃ ತತ್ತರಿಸಿ ಹೋಗಿದ್ದಾರೆ. ಕೋಲಾರ ನಗರ, ಬಂಗಾರಪೇಟೆ, ಶ್ರೀನಿವಾಸಪುರ ಪಟ್ಟಣ, ಗೌನಿಪಲ್ಲಿ, ಕೆಜಿಎಫ್ ನಗರದಲ್ಲಿ ಹಲವು ಬಡಾವಣೆಗಳಿಗೆ ನೀರು ನುಗ್ಗಿದೆ. ಇಬ್ಬರು ಮೃತಪಟ್ಟಿದ್ದಾರೆ. 9 ಮನೆಗಳು ಬಿದ್ದಿದೆ. 306 ಮನೆಗಳು ಭಾಗಶಃ ಹಾನಿಯಾಗಿವೆ. ಬಿಜಿಎಸ್ ಶಾಲೆಯೂ ಮುಳುಗಡೆಯಾಗಿದೆ. ಇನ್ನು ಅಕಾಲಿಕ ಮಳೆಯಿಂದಾಗಿ ಸಾವಿರಾರು ಎಕರೆ ಬೆಳೆ ನಾಶವಾಗಿದೆ. ಜಿಲ್ಲೆಯ ಶೇ.98ರಷ್ಟು ಕೆರೆಗಳು ತುಂಬಿ ಕೋಡಿ ಹರಿದಿವೆ.

RAIN 7 1

ನಿರಂತರ ಮಳೆಯಿಂದ ಕೊಡಗಿನ ಹಲವೆಡೆ ಭತ್ತ, ಜೋಳದ ಬೆಳೆ ನಾಶವಾಗಿದೆ. ಗದ್ದೆಗಳಲ್ಲಿ ನೀರು ನಿಂತು ಭತ್ತದ ಬೆಳೆ ಕೊಳೆಯುತ್ತಿದೆ. ಇನ್ನು ಕುಶಾಲನಗರ ತಾಲ್ಲೂಕು ಒಂದರಲ್ಲೇ ಬರೋಬ್ಬರಿ 800 ಎಕರೆಯಷ್ಟು ಮೆಕ್ಕೆಜೋಳ ನಷ್ಟವಾಗಿದೆ. ಸತತ ಮಳೆಯಿಂದ ಮೆಕ್ಕೆಜೋಳ ಗಿಡದಲ್ಲೇ ಮೊಳಕೆ ಒಡೆಯುತ್ತಿದೆ. ಇದರಿಂದಾಗಿ ರೈತರು ಕಣ್ಣೀರಲ್ಲಿ ಕೈತೊಳೆಯುವಂತಾಗಿದೆ. ದಾವಣಗೆರೆಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಹರಿಹರ ತಾಲೂಕಿನಲ್ಲಿ ಭತ್ತದ ಬೆಳೆ ಸಂಪೂರ್ಣ ನಾಶವಾಗಿದೆ. ಇನ್ನೇನು ಎರಡು ದಿನಗಳಲ್ಲಿ ಕಟಾವು ಮಾಡಿ ಮಾರುಕಟ್ಟೆ ಹಾಕಬೇಕು ಅಂತಿದ್ದ ಅನ್ನದಾತರು ಕಂಗಾಲಾಗಿದ್ದಾರೆ. ಆದಾಪುರ, ಜಿಗಳಿ, ಮಲೆಬೆನ್ನೂರಿನಲ್ಲೂ ಸಾವಿರಾರು ಎಕರೆ ಭತ್ತ ಸಂಪೂರ್ಣ ನೆಲ ಕಚ್ಚಿದೆ.

RAIN 5 1

ದಾವಣಗೆರೆಯಲ್ಲಿ ಮಳೆ ಅವಾಂತರ ಮುಂದುವರಿದಿದೆ. ನಿನ್ನೇ ರಾತ್ರಿಯಿಂದ ಬಿಡದೆ ಬರುತ್ತಿರುವ ಮಳೆಯಿಂದಾಗಿ ಕೆರೆ ಕಟ್ಟೆಗಳು ಸಂಪೂರ್ಣ ಭರ್ತಿಯಾಗಿದೆ. ಚನ್ನಗಿರಿ ತಾಲೂಕಿನ ಗೋಪೇನಹಳ್ಳಿ ಗ್ರಾಮಕ್ಕೆ ನೀರು ನುಗ್ಗಿದೆ. ಮಾವಿನಹಳ್ಳಿ ಕೆರೆ ಭರ್ತಿಯಾಗಿ ಕೋಡಿಬಿದ್ದಿದೆ. ಜೋಳದಾಳ್ ಅಮ್ಮನಗುಡ್ಡದ ಕಲ್ಲು ಕಟ್ಟುವ ಚೌಡೇಶ್ವರಿ ದೇವಾಲಯ ಮುಳುಗಡೆಯಾಗಿದೆ. ಹರಿದ್ರಾವತಿ ಹಳ್ಳ ತುಂಬಿ ಹರಿದು ಚನ್ನಗಿರಿ ತಾಲ್ಲೂಕಿನ ಬುಳಸಾಗರ ಗ್ರಾಮದಲ್ಲಿರೋ ಸಿದ್ದರಾಮೇಶ್ವರ ರಂಗನಾಥಸ್ವಾಮಿ, ಆಂಜನೇಯ ಸ್ವಾಮಿ ದೇವಾಲಯಗಳಿಗೆ ನೀರು ನುಗ್ಗಿದೆ. ರೈಲ್ವೇ ಅಂಡರ್‍ಪಾಸ್ ಮುಳುಗಡೆಯಾಗಿದೆ.

RAIN 11

ಅಕಾಲಿಕ ಮಳೆಯಿಂದ ಕೊಪ್ಪಳ ಜಿಲ್ಲಾದ್ಯಂತ ಸಾಕಷ್ಟು ಬೆಳೆ ಹಾನಿಯಾಗಿದೆ. ತುಂಗಭದ್ರಾ ಅಚ್ಚುಕಟ್ಟು ವ್ಯಾಪ್ತಿಯ ಗಂಗಾವತಿ ಮತ್ತು ಕಾರಟಗಿ ತಾಲೂಕಿನಲ್ಲಿ ಕಟಾವಿಗೆ ಬಂದಿದ್ದ ಭತ್ತ ಸಂಪೂರ್ಣವಾಗಿ ನೆಲ ಕಚ್ಚಿದೆ. ಕೊಯ್ಲಿಗೆ ಬಂದಿದ್ದ ಭತ್ತ ನೆಲಕ್ಕೆ ಬಿದ್ದು, ನೀರು ಪಾಲಾಗಿದೆ. ಇನ್ನು ತುಂಗಭದ್ರಾ ಜಲಾಶಯದ ಒಳ ಹರಿವು ಹೆಚ್ಚಳವಾಗಿದ್ದು ಜಲಾಶಯದಿಂದ ಅಪಾರ ಪ್ರಮಾಣ ನೀರನ್ನು ನದಿಗೆ ಬಿಡುಗಡೆ ಮಾಡಲಾಗ್ತಿದ್ದು ನದಿ ಪಾತ್ರದ ಜನರು ಎಚ್ಚರ ವಹಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

TAGGED:bengalurukarnatakarainಕರ್ನಾಟಕಬೆಂಗಳೂರುಮಳೆ
Share This Article
Facebook Whatsapp Whatsapp Telegram

Cinema Updates

ram charan sukumar
ಹೊಸ ವರ್ಷಕ್ಕೆ ಪುಷ್ಪಾ ಡೈರೆಕ್ಟರ್ ಜೊತೆ ರಾಮ್‌ಚರಣ್ ಸಿನಿಮಾ..!?
Cinema Latest South cinema Top Stories
vijay deverakonda 4
ದಿಢೀರ್‌ ಆಸ್ಪತ್ರೆಗೆ ದಾಖಲಾದ ನಟ ವಿಜಯ್‌ ದೇವರಕೊಂಡ
Cinema Latest National South cinema Top Stories
vishnuvardhan karnataka ratna
ನಟ ವಿಷ್ಣುವರ್ಧನ್‌ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನಕ್ಕೆ ಮನವಿ
Cinema Latest Main Post Sandalwood
Thalaivan Thalaivii 03
ತಲೈವಾನ್ ತಲೈವಿ ಟ್ರೈಲರ್‌ ರಿಲೀಸ್ – ವಿಜಯ್ ಸೇತುಪತಿ-ನಿತ್ಯಾ ಮಸ್ತ್ ಮಸ್ತ್..!
Cinema Latest South cinema
Vinod Prabhakar
ಬಲರಾಮನ ದಿನಗಳು – ಮತ್ತೊಂದು ಸಿನಿಮಾ ಶೂಟಿಂಗ್ ಮುಗಿಸಿದ ವಿನೋದ್‌ ಪ್ರಭಾಕರ್
Cinema Latest Sandalwood

You Might Also Like

biklu shiva high court
Bengaluru City

ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಕೇಸ್‌ – ಹೇಬಿಯಸ್‌ ಕಾರ್ಪಸ್‌ ಅರ್ಜಿ ವಜಾ

Public TV
By Public TV
36 minutes ago
pratap simha
Districts

ಪ್ರಿಯಾಂಕ್‌ ಖರ್ಗೆ, ವಿಶ್ವವಿಖ್ಯಾತ ಆರ್ಥಿಕ ತಜ್ಞ ಸಂತೋಷ್ ಲಾಡ್‌ಗೆ ಬಡ್ಡಿ ಸಮೇತ ಚುಕ್ತಾ ಮಾಡ್ತಿನಿ: ಪ್ರತಾಪ್‌ ಸಿಂಹ

Public TV
By Public TV
37 minutes ago
Mandya 2
Crime

ಮಂಡ್ಯ | ಗ್ರಾಮಲೆಕ್ಕಾಧಿಕಾರಿ ನಾಪತ್ತೆ – ಕಾವೇರಿ ನದಿಗೆ ಹಾರಿರುವ ಶಂಕೆ

Public TV
By Public TV
2 hours ago
Vidhana Soudha
Bengaluru City

ಬೆಂಗಳೂರು ಬಿ ಖಾತಾದಾರರಿಗೆ ಗುಡ್ ನ್ಯೂಸ್: ಎ ಖಾತಾದಂತೆ ಬಿ ಖಾತೆಗಳಿಗೂ ಅಧಿಕೃತ ಮಾನ್ಯತೆ

Public TV
By Public TV
2 hours ago
Air India Ahmedabad Plane Crash Black box found on hostel rooftop
Latest

ಏರ್‌ ಇಂಡಿಯಾ ದುರಂತಕ್ಕೆ ಪೈಲಟ್ ಕಾರಣನಾ? – ಅಮೆರಿಕ ವರದಿಯಿಂದ ಗೊಂದಲ; ಪ್ರತಿಕ್ರಿಯೆಗೆ ಕೇಂದ್ರ ನಕಾರ

Public TV
By Public TV
2 hours ago
Randhir Jaiswal
Latest

ಇಂಧನಕ್ಕೆ ಪ್ರಮುಖ ಆದ್ಯತೆ – ನ್ಯಾಟೋ ಮುಖ್ಯಸ್ಥನ ನಿರ್ಬಂಧಗಳ ಬೆದರಿಕೆಗೆ ಭಾರತ ತಿರುಗೇಟು

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?