Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಿಕ್ಕಬಳ್ಳಾಪುರ, ಕೋಲಾರದಲ್ಲಿ ವರುಣಾರ್ಭಟ- ದಾವಣೆಗೆರೆಯಲ್ಲಿ ದೇಗುಲ ಜಲಾವೃತ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಚಿಕ್ಕಬಳ್ಳಾಪುರ, ಕೋಲಾರದಲ್ಲಿ ವರುಣಾರ್ಭಟ- ದಾವಣೆಗೆರೆಯಲ್ಲಿ ದೇಗುಲ ಜಲಾವೃತ

Bengaluru City

ಚಿಕ್ಕಬಳ್ಳಾಪುರ, ಕೋಲಾರದಲ್ಲಿ ವರುಣಾರ್ಭಟ- ದಾವಣೆಗೆರೆಯಲ್ಲಿ ದೇಗುಲ ಜಲಾವೃತ

Public TV
Last updated: November 20, 2021 7:42 am
Public TV
Share
2 Min Read
RAIN 4 2
SHARE

ಬೆಂಗಳೂರು: ರಾಜ್ಯಾದ್ಯಂತ ಮಳೆಯಬ್ಬರ ಮುಂದುವರಿದಿದೆ. ರಣಮಳೆಗೆ ಮಧ್ಯ ಕರ್ನಾಟಕ ಮುಳುಗಿದೆ. ಇನ್ನು ದಕ್ಷಿಣ, ಮಧ್ಯಕರ್ನಾಟಕದಲ್ಲಿ ಅಕಾಲಿಕ ಮಳೆ ಅವಾಂತರ ಸೃಷ್ಟಿಸಿದ್ದು, ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಬೊಬ್ಬಿರಿಯುತ್ತಿದ್ದಾನೆ. ರಾಜ್ಯಾದ್ಯಂತ ಮಹಾಮಳೆಗೆ ಈವರೆಗೆ 6 ಮಂದಿ ಬಲಿಯಾಗಿದ್ದಾರೆ.

RAIN 3 3

ಬರದನಾಡು ಚಿಕ್ಕಬಳ್ಳಾಪುರದಲ್ಲಿ ಕಂಡು ಕೇಳರಿಯದ ಮಳೆಯಾಗ್ತಿದೆ. ಪರಿಣಾಮ ಗೌರಿಬಿದನೂರಿನಲ್ಲಿ ಉತ್ತರ ಪಿನಾಕಿನಿ ನದಿ ಮೈದುಂಬಿ ಹರಿಯುತ್ತಿದ್ದು, ನದಿಯ ಅಕ್ಕಪಕ್ಕದಲ್ಲಿ ವಾಸಿಸುತ್ತಿರುವ ಸಾವಿರಾರು ಜನರು ಮನೆ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಅವರನ್ನು ತಾಲೂಕು ಆಡಳಿತ, ನಗರಸಭೆ ವತಿಯಿಂದ ನಗರದ ಖಾಸಗಿ ಕಲ್ಯಾಣ ಮಂಟಪಗಳಿಗೆ ಶಿಫ್ಟ್ ಮಾಡಲಾಗಿದೆ. ಇದನ್ನೂ ಓದಿ: ಬಿಡಿಎ ಅಧಿಕಾರಿಗಳಿಗೆ ಎಸಿಬಿ ಶಾಕ್‌- ಕಂತೆ ಕಂತೆ ನೋಟು, ಬ್ಯಾಗ್‌ಗಟ್ಟಲೆ ದಾಖಲೆಗಳು ವಶ!

RAIN 6 1

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬಿರಿಯುತ್ತಿದ್ದಾನೆ. ಮಂಚೇನಹಳ್ಳಿ ಬಳಿ ಉತ್ತರಪಿನಾಕಿನ ನದಿಯ ಭೋರ್ಗೆರೆತ ಜೋರಾಗಿದ್ದು, ಮಂಚೇನಹಳ್ಳಿ-ತೊಂಡೆಬಾವಿ ಮಾರ್ಗ ಮಧ್ಯೆ ಇರುವ ಸೇತುವೆ ತಳಪಾಯ ಕೊಚ್ಚಿ ಹೋಗಿದೆ. ಸೇತುವೆ ಮೇಲೆ ವಾಹನಗಳ ಓಡಾಟ ಸಂಪೂರ್ಣ ನಿಷೇಧಿಸಲಾಗಿದೆ.

RAIN 10

ವರುಣನ ಅರ್ಭಟಕ್ಕೆ ಕೋಲಾರ ಜನರು ಅಕ್ಷರಶಃ ತತ್ತರಿಸಿ ಹೋಗಿದ್ದಾರೆ. ಕೋಲಾರ ನಗರ, ಬಂಗಾರಪೇಟೆ, ಶ್ರೀನಿವಾಸಪುರ ಪಟ್ಟಣ, ಗೌನಿಪಲ್ಲಿ, ಕೆಜಿಎಫ್ ನಗರದಲ್ಲಿ ಹಲವು ಬಡಾವಣೆಗಳಿಗೆ ನೀರು ನುಗ್ಗಿದೆ. ಇಬ್ಬರು ಮೃತಪಟ್ಟಿದ್ದಾರೆ. 9 ಮನೆಗಳು ಬಿದ್ದಿದೆ. 306 ಮನೆಗಳು ಭಾಗಶಃ ಹಾನಿಯಾಗಿವೆ. ಬಿಜಿಎಸ್ ಶಾಲೆಯೂ ಮುಳುಗಡೆಯಾಗಿದೆ. ಇನ್ನು ಅಕಾಲಿಕ ಮಳೆಯಿಂದಾಗಿ ಸಾವಿರಾರು ಎಕರೆ ಬೆಳೆ ನಾಶವಾಗಿದೆ. ಜಿಲ್ಲೆಯ ಶೇ.98ರಷ್ಟು ಕೆರೆಗಳು ತುಂಬಿ ಕೋಡಿ ಹರಿದಿವೆ.

RAIN 7 1

ನಿರಂತರ ಮಳೆಯಿಂದ ಕೊಡಗಿನ ಹಲವೆಡೆ ಭತ್ತ, ಜೋಳದ ಬೆಳೆ ನಾಶವಾಗಿದೆ. ಗದ್ದೆಗಳಲ್ಲಿ ನೀರು ನಿಂತು ಭತ್ತದ ಬೆಳೆ ಕೊಳೆಯುತ್ತಿದೆ. ಇನ್ನು ಕುಶಾಲನಗರ ತಾಲ್ಲೂಕು ಒಂದರಲ್ಲೇ ಬರೋಬ್ಬರಿ 800 ಎಕರೆಯಷ್ಟು ಮೆಕ್ಕೆಜೋಳ ನಷ್ಟವಾಗಿದೆ. ಸತತ ಮಳೆಯಿಂದ ಮೆಕ್ಕೆಜೋಳ ಗಿಡದಲ್ಲೇ ಮೊಳಕೆ ಒಡೆಯುತ್ತಿದೆ. ಇದರಿಂದಾಗಿ ರೈತರು ಕಣ್ಣೀರಲ್ಲಿ ಕೈತೊಳೆಯುವಂತಾಗಿದೆ. ದಾವಣಗೆರೆಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಹರಿಹರ ತಾಲೂಕಿನಲ್ಲಿ ಭತ್ತದ ಬೆಳೆ ಸಂಪೂರ್ಣ ನಾಶವಾಗಿದೆ. ಇನ್ನೇನು ಎರಡು ದಿನಗಳಲ್ಲಿ ಕಟಾವು ಮಾಡಿ ಮಾರುಕಟ್ಟೆ ಹಾಕಬೇಕು ಅಂತಿದ್ದ ಅನ್ನದಾತರು ಕಂಗಾಲಾಗಿದ್ದಾರೆ. ಆದಾಪುರ, ಜಿಗಳಿ, ಮಲೆಬೆನ್ನೂರಿನಲ್ಲೂ ಸಾವಿರಾರು ಎಕರೆ ಭತ್ತ ಸಂಪೂರ್ಣ ನೆಲ ಕಚ್ಚಿದೆ.

RAIN 5 1

ದಾವಣಗೆರೆಯಲ್ಲಿ ಮಳೆ ಅವಾಂತರ ಮುಂದುವರಿದಿದೆ. ನಿನ್ನೇ ರಾತ್ರಿಯಿಂದ ಬಿಡದೆ ಬರುತ್ತಿರುವ ಮಳೆಯಿಂದಾಗಿ ಕೆರೆ ಕಟ್ಟೆಗಳು ಸಂಪೂರ್ಣ ಭರ್ತಿಯಾಗಿದೆ. ಚನ್ನಗಿರಿ ತಾಲೂಕಿನ ಗೋಪೇನಹಳ್ಳಿ ಗ್ರಾಮಕ್ಕೆ ನೀರು ನುಗ್ಗಿದೆ. ಮಾವಿನಹಳ್ಳಿ ಕೆರೆ ಭರ್ತಿಯಾಗಿ ಕೋಡಿಬಿದ್ದಿದೆ. ಜೋಳದಾಳ್ ಅಮ್ಮನಗುಡ್ಡದ ಕಲ್ಲು ಕಟ್ಟುವ ಚೌಡೇಶ್ವರಿ ದೇವಾಲಯ ಮುಳುಗಡೆಯಾಗಿದೆ. ಹರಿದ್ರಾವತಿ ಹಳ್ಳ ತುಂಬಿ ಹರಿದು ಚನ್ನಗಿರಿ ತಾಲ್ಲೂಕಿನ ಬುಳಸಾಗರ ಗ್ರಾಮದಲ್ಲಿರೋ ಸಿದ್ದರಾಮೇಶ್ವರ ರಂಗನಾಥಸ್ವಾಮಿ, ಆಂಜನೇಯ ಸ್ವಾಮಿ ದೇವಾಲಯಗಳಿಗೆ ನೀರು ನುಗ್ಗಿದೆ. ರೈಲ್ವೇ ಅಂಡರ್‍ಪಾಸ್ ಮುಳುಗಡೆಯಾಗಿದೆ.

RAIN 11

ಅಕಾಲಿಕ ಮಳೆಯಿಂದ ಕೊಪ್ಪಳ ಜಿಲ್ಲಾದ್ಯಂತ ಸಾಕಷ್ಟು ಬೆಳೆ ಹಾನಿಯಾಗಿದೆ. ತುಂಗಭದ್ರಾ ಅಚ್ಚುಕಟ್ಟು ವ್ಯಾಪ್ತಿಯ ಗಂಗಾವತಿ ಮತ್ತು ಕಾರಟಗಿ ತಾಲೂಕಿನಲ್ಲಿ ಕಟಾವಿಗೆ ಬಂದಿದ್ದ ಭತ್ತ ಸಂಪೂರ್ಣವಾಗಿ ನೆಲ ಕಚ್ಚಿದೆ. ಕೊಯ್ಲಿಗೆ ಬಂದಿದ್ದ ಭತ್ತ ನೆಲಕ್ಕೆ ಬಿದ್ದು, ನೀರು ಪಾಲಾಗಿದೆ. ಇನ್ನು ತುಂಗಭದ್ರಾ ಜಲಾಶಯದ ಒಳ ಹರಿವು ಹೆಚ್ಚಳವಾಗಿದ್ದು ಜಲಾಶಯದಿಂದ ಅಪಾರ ಪ್ರಮಾಣ ನೀರನ್ನು ನದಿಗೆ ಬಿಡುಗಡೆ ಮಾಡಲಾಗ್ತಿದ್ದು ನದಿ ಪಾತ್ರದ ಜನರು ಎಚ್ಚರ ವಹಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

TAGGED:bengalurukarnatakarainಕರ್ನಾಟಕಬೆಂಗಳೂರುಮಳೆ
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

POCSO Special Court
Bengaluru City

POCSO Act – ಖಾಸಗಿ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ರಿಲೀಸ್

Public TV
By Public TV
27 minutes ago
Chikkaballapura APMC 2
Chikkaballapur

ಟೊಮೆಟೊ ಕೆಜಿ 10 ರೂ., ಕ್ಯಾರೆಟ್‌ 8 ರೂ. – ಚಿಕ್ಕಬಳ್ಳಾಪುರ ಮಾರುಕಟ್ಟೆಯಲ್ಲಿ ತರಕಾರಿಗಳ ಬೆಲೆ ಭಾರೀ ಇಳಿಕೆ

Public TV
By Public TV
35 minutes ago
Abhishek Sharma
Cricket

IPL 2026 | ಅಂಪೈರ್‌ ಜೊತೆಗೆ ಕಿತ್ತಾಡಿದ ಅಭಿಷೇಕ್‌ ಶರ್ಮಾಗೆ ಭಾರೀ ದಂಡ

Public TV
By Public TV
35 minutes ago
plane
Latest

ಕೇಂದ್ರದಿಂದ ಯೂಟರ್ನ್‌ – ವಿಮಾನಗಳಲ್ಲಿ 60% ಸೀಟು ಉಚಿತ ಆಯ್ಕೆ ನಿಯಮಕ್ಕೆ ತಾತ್ಕಾಲಿಕ ತಡೆ

Public TV
By Public TV
38 minutes ago
Basangouda Patil Yatnal has been called for campaigning as BJP fears defeat in Bagalkot by Election CM Siddaramaiah
Bagalkot

ಸೋಲಿನ ಭಯ ಕಾಣಿಸಿದ್ದಕ್ಕೆ ಯತ್ನಾಳ್‌ರಿಂದ ಪ್ರಚಾರ: ಬಿಜೆಪಿಗೆ ಸಿಎಂ ಗುದ್ದು

Public TV
By Public TV
1 hour ago
womans crazy behavior on bike
Bengaluru City

ಬೈಕ್‌ನಲ್ಲಿ ಯುವತಿಯ ಹುಚ್ಚಾಟ – ಹೆಲ್ಮೆಟ್ ಧರಿಸದೇ, ಬಾಟಲ್ ಹಿಡಿದು ಜಾಲಿ ಮೂಡಲ್ಲಿ ಲೇಡಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?