ಕೊಪ್ಪಳದಲ್ಲಿ ಬೆಳ್ಳಂಬೆಳಗ್ಗೆ ಧಾರಾಕಾರ ಮಳೆ- ಕಾಂಪ್ಲೆಕ್ಸ್ ಗೆ ಚರಂಡಿ ನೀರು ನುಗ್ಗಿ ಅವಾಂತರ

Public TV
1 Min Read
KLP RAIN

ಕೊಪ್ಪಳ: ಈ ಬಾರಿ ಬಿಸಿಲಿನ ಬೆಗೆಯಿಂದ ತತ್ತರಿಸಿದ್ದ ಜನತೆಗೆ ಇಂದು ಮುಂಜಾನೆ ಸುರಿದ ಬಾರಿ ಮಳೆ ಜನರಿಗೆ ಸಂತಸ ಮೂಡಿಸಿದೆ. ಆದರೆ ಇನ್ನೊಂದೆಡೆ ಕಾಂಪ್ಲೆಕ್ಸ್ ಗೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ.

ಕೊಪ್ಪಳ ನಗರ ಸೇರಿದಂತೆ ಹಲವೆಡೆ ಇಂದು ನಸುಕಿನ ಜಾವ ಸುರಿದ ಬಾರಿ ಮಳೆ ಅವಾಂತರವನ್ನು ಸೃಷ್ಟಿ ಮಾಡಿದೆ. ಕೊಪ್ಪಳದ ಗಡಿಯಾರ ಕಂಬದ ಬಳಿ ಇರುವ ನಗರ ಸಭೆಯ ಮಳಿಗೆಗಳಿಗೆ ಚರಂಡಿ ನೀರು ನುಗ್ಗಿದ್ದು ಭಾರೀ ಪ್ರಮಾಣದ ಎಲೆಕ್ಟ್ರಾನಿಕ್ಸ್ ವಸ್ತುಗಳು ಚರಂಡಿ ನೀರಲ್ಲಿ ತೇಲುತ್ತಿವೆ. ಅಷ್ಟೇ ಅಲ್ಲದೇ ನಗರಸಭೆಯ ಒಳಚರಂಡಿ ವ್ಯವಸ್ಥೆಯ ದುರಸ್ಥಿ ಕಾಮಗಾರಿಯ ಅವ್ಯವಸ್ಥೆಯಿಂದ ಅಂಗಡಿ ಮುಂಗಟ್ಟುಗಳಿಗೆ ಚರಂಡಿ ನೀರು ನುಗ್ಗಿ ಲಕ್ಷಾಂತರ ರೂಪಾಯಿ ಹಾನಿಯಾಗಿದೆ.

ಒಳಚರಂಡಿ ದುರಸ್ತಿ ಕಾಮಗಾರಿ ಸರಿಯಾಗಿ ಮಾಡದೆ ಇರುವುದು ಇದಕ್ಕೆಲ್ಲಾ ಕಾರಣವಾಗಿದ್ದು, ಈ ಕುರಿತು ಬಾಡಿಗೆದಾರರು ಸಾಕಷ್ಟು ಬಾರಿ ನಗರಸಭೆಗೆ ದೂರು ನೀಡಿದ್ದರೂ ಅಧಿಕಾರಿಗಳು ಮಾತ್ರ ಇದನ್ನು ಸರಿಪಡಿಸುವ ಗೋಜಿಗೆ ಹೋಗದೇ ಇರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

Share This Article
Leave a Comment

Leave a Reply

Your email address will not be published. Required fields are marked *