ಬೆಂಗಳೂರು: ಭಾನುವಾರ ರಾತ್ರಿ ಸುರಿದ ಬಿರುಗಾಳಿ ಸಹಿತ ಧಾರಾಕಾರ ಮಳೆಗೆಯಿಂದಾಗಿ ಕಾಂಪೌಂಡ್ ಕುಸಿದು ಅನೇಕ ಮರಗಳು ಹಾಗೂ ಹತ್ತು ವಿದ್ಯುತ್ ಕಂಬಗಳು ಧರೆಗುರುಳಿದ ಘಟನೆ ಸಂಭವಿಸಿದೆ.
ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಮಂಚೇನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಹಿಂದೂ ಮಹಾಸಾಗರದಲ್ಲಿ ಉಂಟಾದ ಬಿರುಗಾಳಿ ಹಿನ್ನೆಲೆಯಲ್ಲಿ ಕಳೆದ ಮೂರು ದಿನಗಳಿಂದ ರಾಜ್ಯದ ಹಲವೆಡೆ ಉತ್ತಮ ಮಳೆಯಾಗುತ್ತಿದೆ. ಈ ಮಳೆಗೆ ಮಂಚೇನಹಳ್ಳಿ ಗ್ರಾಮಸ್ಥರು ರಾತ್ರಿಯಿಡೀ ವಿದ್ಯುತ್ ಇಲ್ಲದೆ ಪರದಾಡುವಂತಾದ ಪರಿಸ್ಥಿತಿ ಉಂಟಾಗಿದೆ.
ಇನ್ನೂ ಮರವೊಂದು ಉರುಳಿ ಬಿದ್ದಿದ್ದು, ಮರತೆಗೆಸುವಂತೆ ಗ್ರಾಮಸ್ಥರು ಅರಣ್ಯಧಿಕಾರಿಗಳಿಗೆ ಒತ್ತಾಯಿಸಿದ್ದಾರೆ. ಆದರೆ ಸ್ಥಳಕ್ಕೆ ಬೆಸ್ಕಾಂ ಅಧಿಕಾರಿಗಳು ಆಗಮಿಸಿದ ಕಾರಣ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಗ್ರಾಮಸ್ಥರೇ ಮರ ತೆರವಿಗೆ ಮುಂದಾಗಿದ್ದಾರೆ.
ಇನ್ನೂ ಮೂರುದಿನ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.