Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದ ಈ ಭಾಗಗಳಲ್ಲಿ ಭಾರೀ ಮಳೆ- ಬೆಂಗಳೂರಿನಲ್ಲಿ ಸಿಡಿಮದ್ದಿಗೆ ಸಿಡಿಲು ಬಡಿದು ಇಬ್ಬರು ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯದ ಈ ಭಾಗಗಳಲ್ಲಿ ಭಾರೀ ಮಳೆ- ಬೆಂಗಳೂರಿನಲ್ಲಿ ಸಿಡಿಮದ್ದಿಗೆ ಸಿಡಿಲು ಬಡಿದು ಇಬ್ಬರು ಸಾವು

Bengaluru City

ರಾಜ್ಯದ ಈ ಭಾಗಗಳಲ್ಲಿ ಭಾರೀ ಮಳೆ- ಬೆಂಗಳೂರಿನಲ್ಲಿ ಸಿಡಿಮದ್ದಿಗೆ ಸಿಡಿಲು ಬಡಿದು ಇಬ್ಬರು ಸಾವು

Public TV
Last updated: May 19, 2017 9:09 am
Public TV
Share
2 Min Read
RAIN fmd
SHARE

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಸಂಜೆಯಿಂದ ಸುರಿದ ಗುಡುಗು ಸಿಡಿಲು ಸಹಿತ ಧಾರಾಕಾರ ಮಳೆಯಿಂದಾಗಿ ಹಲವೆಡೆ ಮರಗಳು ಧರೆಗಪ್ಪಳಿಸಿವೆ. ಕೆ.ಜಿ.ನಗರ, ವಿದ್ಯಾರಣ್ಯಪುರ, ಆರ್.ಆರ್.ನಗರ, ನಾಗರಬಾವಿ, ಮಾರುತಿ ನಗರ, ಸಿಟಿ ಸಿವಿಲ್ ಕೋರ್ಟ್ ಬಳಿ ಮರಗಳು ಧರೆಗಪ್ಪಳಿಸಿದ್ದವು.

rain 3 1

ಬಸವೇಶ್ವರನಗರದ ಪುಟ್ಟೇಗೌಡ ಎಂಬವರ ಮನೆ ಮೇಲೆ ಬುಡ ಸಮೇತ ಮರ ಕಿತ್ತು ಬಿದ್ದಿದ್ದರಿಂದ, ಮನೆಯ ವರಾಂಡದಲ್ಲೆಲ್ಲಾ ಮರದ ಕೊಂಬೆಗಳು ಮುರಿದು ಬಿದ್ದಿತ್ತು. ಬಿಬಿಎಂಪಿ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಮನೆಯ ಮೇಲೆ ಬಿದ್ದ ಮರ ತೆರವುಗೊಳಿಸಲು ಹರಸಾಹಸ ಪಡುವಂತಾಯಿತು.

rain 6

ಬೆಸ್ಕಾಂಗೆ ಫೋನ್ ದೂರುಗಳ ಸುರಿ`ಮಳೆ: ತಿಳಿ ಮುಸ್ಸಂಜೆಯಿಂದ ಆರಂಭವಾದ ಮಳೆ ಆರ್ಭಟ ನಡುರಾತ್ರಿವರೆಗೆ ಆರ್ಭಟ ಮುಂದುವರಿದಿತ್ತು. ಕೇವಲ ಮೂರು ಗಂಟೆಯಲ್ಲಿ ಬೆಸ್ಕಾಂಗೆ ಬರೋಬ್ಬರಿ 3715 ದೂರುಗಳು ಬಂದಿವೆ. ಕರೆ ಸ್ವೀಕರಿಸಲಾಗದೇ 1912-ಬೆಸ್ಕಾಂ ಸಹಾಯವಾಣಿ ಸಂಪೂರ್ಣ ಸ್ಥಗಿತಗೊಂಡಿದೆ.

rain 5

ಬೆಂಗಳೂರು ಹೊರವಲಯದ ತಾವರೆಕೆರೆ ಠಾಣೆಯ ಮಾದಪಟ್ಟಣದ ಬಳಿ ಕಲ್ಲುಬಂಡೆ ಸಿಡಿಸಲು ಇಟ್ಟಿದ್ದ ಸಿಡಿಮದ್ದಿನ ಬಾಕ್ಸ್ ಗೆ ಸಿಡಿಲು ಬಡಿದು ಜಿಲೆಟಿನ್ ಕಡ್ಡಿಗಳು ಸ್ಫೋಟವಾಗಿ, ಇಬ್ಬರು ಸಾವನ್ನಪ್ಪಿದ್ದು, 8 ಮಂದಿ ಗಂಭೀರ ಗಾಯಗೊಂಡಿದ್ದಾರೆ.

rain 1 2

ಹವಾಮಾನ ವೈಪರೀತ್ಯದಿಂದಾಗಿ ವಿಮಾನಗಳ ಸಂಚಾರದಲ್ಲೂ ವ್ಯತ್ಯಯ ಉಂಟಾಯ್ತು. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚೆನ್ನೈ, ಹೈದ್ರಾಬಾದ್ ಕಡೆ ವಿಮಾನಗಳು ಮಾರ್ಗ ಬದಲಿಸಿದ್ವು. ಇನ್ನೊಂದೆಡೆ ಕಾರು ಚಾಲಕನ ನಿಯಂತ್ರಣ ತಪ್ಪಿ ಬೈಕ್‍ಗೆ ಡಿಕ್ಕಿ ಹೊಡೆದು ವಿದ್ಯುತ್ ಕಂಬಕ್ಕೆ ಗುದ್ದಿದ ಘಟನೆ ಬಸವನಗುಡಿಯ ಶಂಕರಪುರ ಠಾಣೆ ಬಳಿ ಘಟನೆ ನಡೆದಿದೆ. ಡ್ರೈವ್ ಮಾಡುತ್ತಿದ್ದ ವೃದ್ಧನ ಕೈ ಮುರಿದಿದೆ.

rain 2

ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿ ಸಾಕಷ್ಟು ಆಸ್ತಿಪಾಸ್ತಿ ಹಾನಿ ಸಂಭವಿಸಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಯಕ್ಲಾಸಪೂರ ಗ್ರಾಮ ನಿನ್ನೆ ಸಂಜೆಯಿಂದ ಸುರಿದ ಮಳೆಗೆ ಬಹುತೇಕ ಗ್ರಾಮ ಜಲಾವೃತವಾಗಿದೆ. ಗಾಳಿ ಮಳೆಗೆ ಮನೆಗಳು, ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿವೆ. ಕೆಲವು ಮನೆಗಳ ಮೆಲ್ಛಾವಣಿ ತಗಡುಗಳು ಹಾರಿಹೋಗಿದ್ದು ಜನ ಹೈರಾಣಾಗಿದ್ದಾರೆ.

rain 4 1

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಬಂಡಮಿಂದಪಲ್ಲಿ ಗ್ರಾಮದಲ್ಲಿ ಸಿಡಿಲು ಬಡಿದು ಐದು ಮಂದಿ ಗಾಯಗೊಂಡು ಆಸ್ಪತ್ರೆ ಪಾಲಾಗಿದ್ದಾರೆ. ರಾಮನಗರ ತಾಲ್ಲೂಕಿನ ರಾಮನಹಳ್ಳಿ ಗ್ರಾಮದ ನಾಗರಾಜು ಎಂಬುವವರ ಮನೆಯ ಶೀಟುಗಳು ಗಾಳಿಗೆ ಹಾರಿ ಹೋಗಿವೆ. ಇಟ್ಟುಮಡು ಗ್ರಾಮದಲ್ಲಿ 5 ವಿದ್ಯುತ್ ಕಂಬಗಳು ಹಾಗೂ ನಾಲ್ಕು ಮರಗಳು ಧರೆಗೆ ಉರುಳಿಬಿದ್ದಿವೆ.

rain 11

ಕೋಲಾರ ಜಿಲ್ಲೆ ಮುಳಬಾಗಲು ತಾಲೂಕಿನ ಪಾತಿಪಾಳ್ಯದಲ್ಲಿ ಸುರಿದ ಭಾರಿ ಮಳೆಗೆ ಚಿನ್ನಕ್ಕ ಎಂಬುವರ ಮನೆಯ ಗೋಡೆ ಕುಸಿದಿದೆ. ಅದೃಷ್ಟವಶಾತ್ ಮನೆಯಲ್ಲಿ ಯಾರು ಇರಲಿಲ್ಲ.

rain 9

ಶಿವಮೊಗ್ಗದಲ್ಲಿ ಮಳೆಯ ಆರ್ಭಟಕ್ಕೆ ಸಾಗರ ರಸ್ತೆಯ ಎಪಿಎಂಸಿ ಬಳಿ 20ಕ್ಕೂ ಹೆಚ್ಚು ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿ ಸಂಚಾರ ಈ ಪ್ರದೇಶದಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಂಡು ಜನ ಕತ್ತಲೆಯಲ್ಲಿ ಕಳೆಯುವಂತಾಯ್ತು.

rain 10

ಮಂಡ್ಯದಲ್ಲಿ ರಾತ್ರಿ ಸುರಿದ ಮಳೆಯಿಂದಾಗಿ ಮನೆಗಳಿಗೆ ನೀರು ನುಗ್ಗಿದ್ದ ಪರಿಣಾಮ, ಮಕ್ಕಳು ವೃದ್ಧರೆನ್ನದೇ ಹಲವರು ಬೀದಿಯಲ್ಲೇ ರಾತ್ರಿ ಕಳೆದಿದ್ದಾರೆ. ನಿನ್ನೆ ರಾತ್ರಿ ಮಂಡ್ಯ ದಲ್ಲಿ ಸಾಧಾರಣ ಮಳೆಯಾಗಿತ್ತು. ಆದ್ರೆ ಒಳ ಚರಂಡಿಯನ್ನು ಟೈಂಗೆ ಕ್ಲೀನ್ ಮಾಡಿಸದ ಕಾರಣ ಗಾಂಧಿನಗರದ ಮೂರನೇ ಕ್ರಾಸ್‍ನಲ್ಲಿ ನೀರು ಸಂಪೂರ್ಣ ಬ್ಲಾಕ್ ಆಗಿ ಮನೆಗಳಿಗೆ ನುಗ್ಗಿದೆ. ಪರಿಣಾಮ ಮನೆಯೊಳಗೆ ಇದ್ದ ದಿನಸಿ, ದಿನ ಬಳಕೆ ವಸ್ತುಗಳೆಲ್ಲಾ ನೀರು ಪಾಲಾಗಿವೆ. ಮನೆಯೊಳಗೆ ನೀರು ಹೆಚ್ಚಾದ ಹಿನ್ನೆಲೆಯಲ್ಲಿ ಎಲ್ರೂ ಹೊರಗೆ ಬಂದು ರಾತ್ರಿ ಕಳೆದಿದ್ದಾರೆ. ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

rain 7

rain 8

rain 12

rain 13

rain 14

rain 15

vlcsnap 2017 05 19 08h42m05s193

TAGGED:bengaluruChikkaballapurakolarapublictvrainramanagaraಕೋಲಾರಚಿಕ್ಕಬಳ್ಲಾಪುರಪಬ್ಲಿಕ್ ಟಿವಿಬೆಂಗಳೂರುಮಳೆರಾಮನಗರ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

BJP Leader Sukhbir Singh Jaunapuria
Latest

‘ನೀವು ಮೋದಿಯನ್ನು ನಿಂದಿಸುತ್ತೀರಿ..’: ಮುಸ್ಲಿಂ ಮಹಿಳೆಗೆ ಕಂಬಳಿ ಕೊಡಲು ನಿರಾಕರಿಸಿದ ಬಿಜೆಪಿ ನಾಯಕ

Public TV
By Public TV
21 minutes ago
Weather
Bagalkot

ರಾಜ್ಯದಲ್ಲಿ ಈ ಬಾರಿ ವಾಡಿಕೆಗಿಂತ ಅಧಿಕ ತಾಪಮಾನ ವರದಿ – ಹವಾಮಾನ ಇಲಾಖೆ ಎಚ್ಚರಿಕೆ

Public TV
By Public TV
41 minutes ago
T20 Team India
Cricket

Semifinal Scenario | ಪವಾಡವೇ ನಡೆಯಬೇಕು – ಭಾರತದ ಸೆಮಿಸ್‌ ಹಾದಿ ತುಂಬಾ ಕಠಿಣ

Public TV
By Public TV
44 minutes ago
Hassan Accident Priya
Crime

ಹೆಲ್ಮೆಟ್ ಧರಿಸದೇ ಬುಲೆಟ್‌ನಲ್ಲಿ ಜಾಲಿ ರೈಡ್ – ಹಂಪ್ಸ್‌ ಕಾಣದೇ ರಸ್ತೆಗೆ ಬಿದ್ದು ಯುವತಿ ಸಾವು

Public TV
By Public TV
1 hour ago
Cyber Crime
Bengaluru City

ಸ್ನೇಹಿತನ ಅಕೌಂಟ್ ಬಳಸಿ ಸೈಬರ್ ವಂಚನೆ – ಬರೋಬ್ಬರಿ 7 ಕೋಟಿ ವರ್ಗಾವಣೆ

Public TV
By Public TV
1 hour ago
g parameshwara 2
Bengaluru City

ಸಿದ್ದರಾಮಯ್ಯರ ರಾಜಕೀಯ ಅಡಿಪಾಯವೇ ಸಾಮಾಜಿಕ ನ್ಯಾಯ: ಪರಮೇಶ್ವರ್‌ ಬ್ಯಾಟಿಂಗ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?