Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಳೆಯಬ್ಬರಕ್ಕೆ ಕರಾವಳಿ, ಮಲೆನಾಡಿನ ಜನ ತತ್ತರ – ಉಡುಪಿಯಲ್ಲಿ ಶಾಲಾ, ಕಾಲೇಜಿಗೆ ರಜೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಳೆಯಬ್ಬರಕ್ಕೆ ಕರಾವಳಿ, ಮಲೆನಾಡಿನ ಜನ ತತ್ತರ – ಉಡುಪಿಯಲ್ಲಿ ಶಾಲಾ, ಕಾಲೇಜಿಗೆ ರಜೆ

Bengaluru City

ಮಳೆಯಬ್ಬರಕ್ಕೆ ಕರಾವಳಿ, ಮಲೆನಾಡಿನ ಜನ ತತ್ತರ – ಉಡುಪಿಯಲ್ಲಿ ಶಾಲಾ, ಕಾಲೇಜಿಗೆ ರಜೆ

Public TV
Last updated: July 24, 2019 7:46 am
Public TV
Share
2 Min Read
rain copy
SHARE

ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಹಲವೆಡೆ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿದೆ. ಜಿಲ್ಲೆಯ ಕರಾವಳಿ ಭಾಗದ ಕುಮಟ ತಾಲೂಕಿನ ಕೂಜಳ್ಳಿ, ಕೋನಳ್ಳಿ ಗ್ರಾಮ ಬಹುತೇಕ ಜಲಾವೃತವಾಗಿದ್ದು, ಕುಮಟ ತಾಲೂಕಿನ ಬಡಗಣಿ ನದಿ ತುಂಬಿ ಹರಿಯುತ್ತಿದೆ. ಇದರಿಂದ ಪ್ರವಾಹದ ಭೀತಿ ಎದುರಾಗಿದೆ. ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ ಅಗತ್ಯ ಕ್ರಮಕ್ಕೆ ಮುಂದಾಗಿದ್ದಾರೆ.

vlcsnap 2019 07 24 07h38m08s317

ಹೆಚ್ಚಿನ ಮಳೆಯಾದಲ್ಲಿ ಮೂರಕ್ಕೂ ಹೆಚ್ಚು ಗ್ರಾಮಗಳು ಮುಳುಗುವ ಸಾಧ್ಯತೆ ಇದೆ. ಹೀಗಾಗಿ ಗಂಜಿ ಕೇಂದ್ರ ತೆರೆಯಲು ಜಿಲ್ಲಾಡಳಿತ ಸೂಚಿಸಿದೆ. ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಕಳೆದ ಎರಡು ದಿನದಿಂದ ಭಾರೀ ಮಳೆಯಾಗುತ್ತಿದ್ದು, ಇಂದು ಹೈ ಅಲರ್ಟ್ ಘೋಷಣೆ ಮಾಡಿದೆ.

ಕೊಡಗು ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಜಿಲ್ಲೆಯಲ್ಲಿ ರೇಡ್ ಅಲರ್ಟ್ ನಡುವೆ ತಲಕಾವೇರಿ ಭಾಗಮಂಡಲದಲ್ಲಿ ಮಳೆಯ ಪ್ರಮಾಣ ಕೊಂಚ ಕಡಿಮೆಯಾದ ಹಿನ್ನೆಲೆಯಲ್ಲಿ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಕೊಂಚ ಇಳಿಕೆಯಾಗಿದೆ. ಮಳೆ ಕಡಿಮೆಯಾದ ಹಿನ್ನೆಲೆಯಲ್ಲಿ ಭಗಂಡೇಶ್ವರ ದೇವಾಲಯಕ್ಕೆ ಉಡುಪಿಯ ಪೇಜಾವರ ಮಠಾದೀಶ ವಿಶ್ವೇಶ ತೀರ್ಥ ಸ್ವಾಮೀಜಿ ಅವರು ಭೇಟಿ ನೀಡಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇತ್ತ ಮಂಜಿನ ನಗರಿ ಮಡಿಕೇರಿಯಲ್ಲಿ ಮಳೆ ಸಹಿತ ಚಳಿ ಇದೆ. ಹೀಗಾಗಿ ಮುಂಜಾಗೃತಾ ಕ್ರಮವಾಗಿ ಎನ್‍ಡಿಆರ್‍ಎಫ್ ತಂಡವು ಜಿಲ್ಲೆಯಲ್ಲಿ ಬೀಡುಬಿಟ್ಟಿದೆ.

vlcsnap 2019 07 24 07h36m50s317

ಉಡುಪಿ ಜಿಲ್ಲೆಯಲ್ಲಿ ಕಳೆದ ಐದು ದಿನಗಳಿಂದ ಮುಂಗಾರು ಮಳೆ ನಿರಂತರವಾಗಿ ಸುರಿಯುತ್ತಿದೆ. ಈ 24 ಗಂಟೆಯಲ್ಲಿ 135 ಮಿಲಿ ಮೀಟರ್ ಮಳೆ ಬಿದ್ದಿದೆ. ಕುಂದಾಪುರ ತಾಲೂಕಲ್ಲಿ ಅತೀ ಹೆಚ್ಚು 155 ಮಿಲಿಮೀಟರ್ ಮಳೆಯಾಗಿದೆ. ಉಡುಪಿಯಲ್ಲಿ 130, ಕಾರ್ಕಳದಲ್ಲಿ 90 ಮಿಲಿಮೀಟರ್ ಮಳೆಯಾಗಿದೆ. ಕಳೆದ ರಾತ್ರಿಯಿಂದ ಭಾರೀ ಮಳೆಯಾಗುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತವಾಗಿದೆ. ಉಡುಪಿ ನಗರದ ಕಲ್ಸಂಕ- ಬನ್ನಂಜೆ ವ್ಯಾಪ್ತಿಯ ಹತ್ತಾರು ಮನೆಗಳಿಗೆ ಕೃತಕ ನೆರೆ ನೀರು ನುಗ್ಗಿದೆ.

vlcsnap 2019 07 24 07h37m46s525

ಬೈಲಕೆರೆಯ ಸುಮಾರು 15 ಮನೆಗಳಿಗೆ ಕಾಲುವೆಯ ನೀರು ನುಗ್ಗಿದೆ. ಮೂಡನಿಡಂಬೂರು ವ್ಯಾಪ್ತಿಯಲ್ಲಿ ಕಾಲುವೆ ಉಕ್ಕಿ ಹರಿದಿದೆ. ಗದ್ದೆಗಳೆಲ್ಲ ಜಲಾವೃತವಾಗಿದೆ. ಮಳೆ ನೀರು ರಸ್ತೆಯಲ್ಲೆಲ್ಲ ಹರಿದಿದ್ದು ವಾಹನ ಸಂಚಾರ ಮತ್ತು ಪಾದಾಚಾರಿಗಳಿಗೆ ಸಮಸ್ಯೆಯಾಗಿತ್ತು. ಅಂಬಾಗಿಲು ರಸ್ತೆಯಲ್ಲಿ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದ್ದು, ಕೆಲಮನೆಗಳಿಗೆ ಜಲ ದಿಗ್ಭಂಧನವಾಗಿದೆ. ಐದು ದಿನಗಳಲ್ಲಿ ಜಿಲ್ಲೆಯಲ್ಲಿ 500 ಮಿಲಿಮೀಟರ್ ಮಳೆಯಾಗಿದ್ದು, ಮುಂಗಾರು ಪ್ರಬಲವಾಗಿರುವುದಕ್ಕೆ ಪ್ರೌಢಶಾಲೆಯವರೆಗೆ ಡಿಸಿ ರಜೆ ಘೋಷಣೆ ಮಾಡಿದ್ದರು. ಇಂದು ವಿಪರೀತ ಮಳೆಯಾಗಿದ್ದರಿಂದ ಪದವಿ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಪೋಷಕರ ಒತ್ತಡಕ್ಕೆ ಮಣಿದು ಡಿಗ್ರಿ ಕಾಲೇಜುಗಳಿಗೂ ರಜೆ ಘೋಷಣೆ ಮಾಡಿದ್ದಾರೆ.

vlcsnap 2019 07 24 07h36m07s654

ಹವಾಮಾನ ಇಲಾಖೆ ಅಂದಾಜಿನ ಪ್ರಕಾರ, ಇನ್ನೂ ಎರಡು ದಿನ ಮಳೆಯಾಗಲಿದ್ದು, ವಿಕೋಪ ನಿರ್ವಹಣೆಗೆ ಜಿಲ್ಲಾಡಳಿತ ಎಲ್ಲ ರೀತಿಯಲ್ಲಿ ಸಜ್ಜಾಗಿದೆ. ಇದೇ ವೇಳೆ ಮಂಗಳೂರು – ಬೆಂಗಳೂರು ಸಂಚರಿಸುವ ಎಲ್ಲ ರೀತಿಯ ರೈಲುಗಳನ್ನು ಸಂಪೂರ್ಣ ರದ್ದುಪಡಿಸಲಾಗಿದೆ. ಕೇರಳದ ಕಣ್ಣೂರು ಮತ್ತು ಕಾರವಾರದಿಂದ ಬೆಂಗಳೂರಿಗೆ ಹೋಗುವ ರೈಲು ಸೇವೆಯನ್ನು ಮಂಗಳೂರಿನವರೆಗೆ ಮಾತ್ರ ನಡೆಸಲಾಗುತ್ತಿದೆ. ಇದರಿಂದ ರೈಲು ಪ್ರಯಾಣಿಕರು ಸಂಕಷ್ಟ ಪಡುವಂತಾಗಿದೆ.

TAGGED:collegeDamagekarwarmadikeriPublic TVrainriverschooludupiVacationಉಡುಪಿಕಾರವಾರಕಾಲೇಜುನದಿಪಬ್ಲಿಕ್ ಟಿವಿಮಡಿಕೇರಿಮಳೆರಜೆಶಾಲೆಹಾನಿ
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

pds kerosene
Latest

ಪಡಿತರ ಅಂಗಡಿಗಳಲ್ಲಿ ಸಿಗಲಿದೆ ಸೀಮೆಎಣ್ಣೆ – ಗ್ರಾಮೀಣ ಭಾಗದಲ್ಲಿ 45 ದಿನಕ್ಕೆ ಒಂದು ಸಿಲಿಂಡರ್‌

Public TV
By Public TV
6 minutes ago
Prahlad Joshi 1
Latest

ದೇಶದ ವಿದ್ಯುತ್ ಉತ್ಪಾದನಾ ಸಾಮರ್ಥ್ಯದಲ್ಲಿ ನವೀಕರಿಸಬಹುದಾದ ಇಂಧನದ್ದೇ ಅಗ್ರಪಾಲು – ಜೋಶಿ

Public TV
By Public TV
25 minutes ago
Cement lorry fell 50 feet deep driver cleaner miraculously escape mudigere chikmagaluru 2
Chikkaballapur

50 ಅಡಿ ಆಳಕ್ಕೆ ಬಿದ್ದ ಸಿಮೆಂಟ್ ಲಾರಿ – ಚಾಲಕ, ಕ್ಲೀನರ್ ಪವಾಡಸದೃಶ ಪಾರು

Public TV
By Public TV
58 minutes ago
Indian Origin Savani Brothers
Latest

ಭಾರತೀಯ ಮೂಲದ ಸಹೋದರರಿಗೆ 400 ವರ್ಷ ಶಿಕ್ಷೆ?

Public TV
By Public TV
1 hour ago
Kavya Maran Abrar Ahmed
Cricket

ಕಾವ್ಯ ಮಾರನ್‌ ತಂಡದಲ್ಲಿ ಪಾಕ್‌ ಸ್ಪಿನ್ನರ್‌ – ನೆಟ್ಟಿಗರಿಂದ ಭಾರೀ ಆಕ್ರೋಶ

Public TV
By Public TV
1 hour ago
Vijayapura Car Accident
Crime

ಕಾರು ಪಲ್ಟಿಯಾಗಿ ಅವಘಡ – ಶ್ರೀಶೈಲಕ್ಕೆ ಹೋಗ್ತಿದ್ದ ಇಬ್ಬರು ದುರ್ಮರಣ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?