Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅರಬ್ಬಿ ಸಮುದ್ರದ ಮೇಲ್ಮೈನಲ್ಲಿ ಸುಳಿಗಾಳಿ – ರಾಜ್ಯಾದ್ಯಂತ ಅಬ್ಬರಿಸ್ತಿದೆ ಮಳೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅರಬ್ಬಿ ಸಮುದ್ರದ ಮೇಲ್ಮೈನಲ್ಲಿ ಸುಳಿಗಾಳಿ – ರಾಜ್ಯಾದ್ಯಂತ ಅಬ್ಬರಿಸ್ತಿದೆ ಮಳೆ

Bengaluru City

ಅರಬ್ಬಿ ಸಮುದ್ರದ ಮೇಲ್ಮೈನಲ್ಲಿ ಸುಳಿಗಾಳಿ – ರಾಜ್ಯಾದ್ಯಂತ ಅಬ್ಬರಿಸ್ತಿದೆ ಮಳೆ

Public TV
Last updated: October 11, 2021 7:21 am
Public TV
Share
2 Min Read
RAIN 9 1
SHARE

– ಭಾರೀ ಮಳೆಗೆ ನಾಲ್ವರು ಬಲಿ
– ಮೈಸೂರು ದಸರಾ ಸಂಭ್ರಮಕ್ಕೂ ಮಳೆ ಅಡ್ಡಿ
– 3 ದಿನ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಅರಬ್ಬಿ ಸಮುದ್ರದ ಮೇಲ್ಮೈನಲ್ಲಿ ಸುಳಿಗಾಳಿ ಪರಿಣಾಮ ರಾಜ್ಯಾದ್ಯಂತ ವರುಣನ ಅಬ್ಬರ ಜೋರಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮಳೆಯಾಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ವರುಣನ ಅವಾಂತರ ಸೃಷ್ಟಿಯಾಗಿದೆ. ರಾಜ್ಯದಲ್ಲಿ ನಿನ್ನೆ ಸುರಿದ ಮಳೆಗೆ ನಾಲ್ವರು ಬಲಿಯಾಗಿದ್ದಾರೆ.

RAIN DEATH

ದಾವಣಗೆರೆಯಲ್ಲಿ ಮಳೆಯಿಂದಾಗಿ ಕರೆಂಟ್ ಶಾಕ್‍ಗೆ ಯುವಕ ಬಲಿಯಾಗಿದ್ದಾನೆ. ಯಲ್ಲಮ್ಮನಗರದ ಕುಂದುವಾಡ ರಸ್ತೆಯ ಬಳಿ ಘಟನೆ ಸಂಭವಿಸಿವೆ. ಭರತ್ ಕಾಲೋನಿ ಯುವಕ ಮನೋಜ್ ಮೂತ್ರ ವಿಸರ್ಜನೆಗೆ ಅಂತ ಹೋಗಿದ್ದ ಸಂದರ್ಭದಲ್ಲಿ ವಿದ್ಯುತ್ ಕಂಬ ಗ್ರೌಂಡ್ ಆಗಿದೆ. ಪರಿಣಾಮ ಶಾಕ್ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

RAIN 7

ಬೆಳಗಾವಿ ಜಿಲ್ಲೆಯಲ್ಲಿ ಮಳೆಗೆ ಇಬ್ಬರು ಸಹೋದರರು ಬಲಿಯಾಗಿದ್ದಾರೆ. ತಗಡಿನ ಶೆಡ್ ಕುಸಿದ ಪರಿಣಾಮ ವಿದ್ಯುತ್ ಶಾಕ್ ಹೊಡೆದಿದೆ. ದುರ್ಘಟನೆಯಲ್ಲಿ ಇಬ್ಬರು ಸಹೋದರರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಬೆಳಗಾವಿ ತಾಲೂಕಿನ ದೇಸೂರ ಗ್ರಾಮದಲ್ಲಿ ಘಟನೆ ನಡೆದಿದ್ದು, ಬಸವರಾಜ್ ವಡ್ಡರ್, ವೆಂಕಟೇಶ ವಡ್ಡರ್ ಸಾವನ್ನಪ್ಪಿದ್ದಾರೆ. ಇನ್ನು ಬೆಂಗಳೂರಿನಲ್ಲಿ ಸಿಡಿಲು ಬಡಿದು 46 ವರ್ಷದ ತಿಪ್ಪೆಸ್ವಾಮಿ ಎಂಬುವರು ಸಾವಿಗೀಡಾಗಿದ್ದಾರೆ.

RAIN 2 1

ರಾಯಚೂರು ತಾಲೂಕಿನ ವಿವಿಧೆಡೆ ಸುರಿದ ಮಳೆಗೆ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಇಡಪನೂರು ಗ್ರಾಮದ ಹಳ್ಳದ ಸೇತುವೆ ಭಾಗಶಃ ಹಾಳಾಗಿವೆ. ಹಳ್ಳ ತುಂಬಿ ಹರಿಯುತ್ತಿದ್ದು ಇಡಪನೂರು – ಪಂಚಮುಖಿ ಮಾರ್ಗ ಬಂದ್ ಆಗಿದೆ. ಹಾಳಾದ ಸೇತುವೆ ಮೇಲೆಯೇ ಜನರು ಜೀವ ಕೈಯಲ್ಲಿ ಹಿಡಿದು ಓಡಾಡುವಂತಾಗಿದೆ. ತಗ್ಗು ಗುಂಡಿಗಳೇ ಇರುವ ಸೇತುವೆ ಮೇಲೆ ಬೈಕ್ ಸವಾರರು ಹರಸಾಹಸ ಪಡ್ತಿದ್ದಾರೆ. ಇನ್ನು ಥಿಯೇಟರ್ ಒಂದಕ್ಕೆ ಮಳೆ ನೀರು ನುಗ್ಗಿ ಜಲಪಾತದಂತೆ ಹರಿಯುತ್ತಿತ್ತು. ಇಡೀ ಥಿಯೇಟರ್ ಮಳೆ ನೀರಿನಿಂದ ಜಲಾವೃತವಾಗಿತ್ತು. ಇದನ್ನೂ ಓದಿ: ಸ್ವಪ್ರತಿಷ್ಠೆಗೋಸ್ಕರ ಬಡ ಮಕ್ಕಳ ಶಿಕ್ಷಣಕ್ಕೆ ಕೊಳ್ಳಿಯಿಟ್ಟ ಬಾಬುರಾವ್ ಚಿಂಚನಸೂರ್

RAIN 9

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಮಳೆ ಅವಾಂತರವನ್ನೇ ಸೃಷ್ಟಿಸಿದೆ. ಭಾರೀ ಮಳೆಯಿಂದಾಗಿ ನೀರು ಬಸ್ ನಿಲ್ದಾಣಕ್ಕೆ ನುಗ್ಗಿ ಪ್ರಯಾಣಿಕರು ಪರದಾಡುವಂತಾಯ್ತು. ಸತತ 2 ಗಂಟೆಗಳ ಕಾಲ ಸುರಿದ ಮಳೆಯಿಂದಾಗಿ ತಗ್ಗು ಪ್ರದೇಶಗಳು ಜಲಾವೃತವಾದವು. ಇನ್ನು ವಿಶ್ವ ವಿಖ್ಯಾತ ಮೈಸೂರು ದಸರಾ ಸಂಭ್ರಮಕ್ಕೂ ಮಳೆ ಅಡ್ಡಿಯಾಗಿದೆ. ನಿನ್ನೆ ಸಂಜೆ ಅರಮನೆ ಮುಂಭಾಗ ಹಮ್ಮಿಕೊಂಡಿದ್ದ ಸಾಂಸ್ಕøತಿಕ ಕಾರ್ಯಕ್ರಮಕ್ಕೆ ಮಳೆ ಅಡ್ಡಿಯಾಯ್ತು. ವಿವಿಐಪಿ ಆಸನಗಳು, ವೇದಿಕೆ ಎಲ್ಲವೂ ಮಳೆ ನೀರಿನಲ್ಲಿ ತೋಯ್ದು ತೊಪ್ಪೆ ಆಗಿತ್ತು. ಇನ್ನು ಮೈಸೂರಲ್ಲಿ ರಾತ್ರಿಯಾಗ್ತಿದ್ದಂತೆ ವಿದ್ಯುತ್ ದೀಪಾಲಂಕಾರ ನೋಡೋದೇ ಚಂದ. ಆದರೆ ಮಳೆಯಿಂದಾಗಿ ವಿದ್ಯುತ್ ದೀಪಾಲಂಕಾರ ಸ್ಥಗಿತಗೊಳಿಸಲಾಗಿದೆ. ರಾಮಸ್ವಾಮಿ ವೃತ್ತದಲ್ಲಿ ಶಾರ್ಟ್‍ ಸರ್ಕ್ಯೂಟ್ ಆಗಿತ್ತು. ಈ ಹಿನ್ನೆಲೆಯಲ್ಲೂ ಎಚ್ಚೆತ್ತುಕೊಂಡ ಚೆಸ್ಕಾಂ ಲೈಟಿಂಗ್ಸ್ ಆಫ್ ಮಾಡ್ತು. ಇದನ್ನೂ ಓದಿ: ರೈಲಿನಲ್ಲಿ ಮರೆತ 7.31 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಹಿಂದಿರುಗಿಸಿದ ರೈಲ್ವೇ ಭದ್ರತಾ ಪಡೆ

RAIN 8

ಕೋಟೆನಾಡು ಚಿತ್ರದುರ್ಗದಲ್ಲಿ ಮಳೆ ಅಬ್ಬರಕ್ಕೆ ಹೊಸದುರ್ಗ ತಾಲೂಕಿನ ಮಾಚೇನಹಳ್ಳಿ ಗ್ರಾಮ ಸರ್ಕಾರಿ ಶಾಲೆ ಜಲಾವೃತವಾಗಿತ್ತು. ಶಾಲೆಯೊಳಗಿನ ಪುಸ್ತಕ, ದಾಖಲೆಗಳು, ಪೀಠೋಪಕರಣ, ಆಟದ ಸಾಮಾಗ್ರಿಗಳು ನೀರುಪಾಲಾದ್ವು. ಗ್ರಾಮಸ್ಥರು, ಮಕ್ಕಳು ಶಾಲೆಗೆ ಧಾವಿಸಿ ಶಾಲಾ ಸಾಮಗ್ರಿಗಳನ್ನು ರಕ್ಷಿಸಿದ್ರು. ಇನ್ನು ಹಾಲುರಾಮೇಶ್ವರದಲ್ಲಿ ಗುಡುಗು-ಸಿಡಿಲು ಸಹಿತ 1 ಗಂಟೆಗೂ ಹೆಚ್ಚು ಕಾಲ ಜೋರು ಮಳೆಯಾಯ್ತು. ಇತ್ತ ಬಾಗಲಕೋಟೆ ಜಿಲ್ಲೆಯಲ್ಲೂ ಧಾರಾಕಾರ ಮಳೆಯಾಗಿದೆ. ಇಳಕಲ್ ತಾಲೂಕಿನ ಬೇಕಮಲದಿನ್ನಿ ಗ್ರಾಮದ ಹಳ್ಳ ತುಂಬಿ ಹರಿದ ಪರಿಣಾಮ ಹುನಗುಂದ-ಕರಡಿ ರಸ್ತೆ ಮಾರ್ಗ ಬಂದ್ ಆಗಿತ್ತು. ಹಳ್ಳದ ನೀರಿನಲ್ಲಿ ಬಸ್ ಸಿಲುಕಿ ಪ್ರಯಾಣಿಕರು ಪರದಾಡುವಂತಾಯ್ತು. ಟ್ರ್ಯಾಕ್ಟರ್ ಮೂಲಕ ಬಸ್ ಹೊರಗೆಳೆಯಲು ಹರಸಾಹಸಪಡುವಂತಾಯ್ತು.

TAGGED:karnatakamysuru dasara 2021Public TVrainಕರ್ನಾಟಕಪಬ್ಲಿಕ್ ಟಿವಿಮಳೆಮೈಸೂರು ದಸರಾ 2021
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Madhya Pradesh Murder
Crime

ಲವ್ವರ್‌ ಜೊತೆ ಸೇರಿ ಗಂಡನ ಕೊಲೆ – ದರೋಡೆ ಅಂತ ಬಿಂಬಿಸಿದ್ದ ಖತರ್ನಾಕ್‌ ಪತ್ನಿ ಬಂಧನ

Public TV
By Public TV
4 minutes ago
narendra modi
Districts

ಏ.15ಕ್ಕೆ ಬಾಲಗಂಗಾಧರನಾಥ ಶ್ರೀಗಳ ಗದ್ದುಗೆ ಉದ್ಘಾಟಿಸಲಿದ್ದಾರೆ ಮೋದಿ

Public TV
By Public TV
8 minutes ago
Karnataka PUC Result Student passes with 111 marks out of 100 Hindi
Bengaluru City

2nd PUC Result 2026 – 100ಕ್ಕೆ 111 ಅಂಕ ನೀಡಿದ ಪಿಯು ಬೋರ್ಡ್‌!

Public TV
By Public TV
15 minutes ago
Peenya Flyover
Bengaluru City

ಮುಂದಿನ ವಾರ ತುಮಕೂರು ರಸ್ತೆ ಫ್ಲೈಓವರ್‌ ಬಂದ್‌ ಸಾಧ್ಯತೆ

Public TV
By Public TV
2 hours ago
lokayukta police arrest chief officer of sirwara town panchayat for accepting bribe of rs 1 lakh
Crime

1 ಲಕ್ಷ ಲಂಚ ಪಡೆದು ಪರಾರಿಗೆ ಯತ್ನ – ಅಧಿಕಾರಿಯನ್ನು ಚೇಸ್ ಮಾಡಿ ಹಿಡಿದ ʻಲೋಕಾʼ ಪೊಲೀಸರು

Public TV
By Public TV
3 hours ago
CJ Roy
Bengaluru City

ಮಾನಸಿಕ ಖಿನ್ನತೆಯಿಂದ ಸಿಜೆ ರಾಯ್‌ ಆತ್ಮಹತ್ಯೆ – ಎಸ್‌ಐಟಿ ತನಿಖೆ ಪೂರ್ಣ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?