Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಿಕ್ಕಬಳ್ಳಾಪುರದಲ್ಲಿ ಮಳೆ ಅವಾಂತರ- ಹೂ ತೋಟಗಳು ಜಲಾವೃತ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ಚಿಕ್ಕಬಳ್ಳಾಪುರದಲ್ಲಿ ಮಳೆ ಅವಾಂತರ- ಹೂ ತೋಟಗಳು ಜಲಾವೃತ

Chikkaballapur

ಚಿಕ್ಕಬಳ್ಳಾಪುರದಲ್ಲಿ ಮಳೆ ಅವಾಂತರ- ಹೂ ತೋಟಗಳು ಜಲಾವೃತ

Public TV
Last updated: October 27, 2021 10:29 am
Public TV
Share
2 Min Read
CKB ROSE
SHARE

ಚಿಕ್ಕಬಳ್ಳಾಪುರ: ಜಿಲ್ಲೆಯಾದ್ಯಾಂತ ಧಾರಕಾರ ಮಳೆ ಒಂದೆಡೆಯಾದ್ರೆ ಮತ್ತೊಂದೆಡೆ ಎಚ್ ಎನ್ ವ್ಯಾಲಿ ಯೋಜನೆಯ ಅಧಿಕಾರಿಗಳು ಮಾಡಿದ ಎಡವಟ್ಟಿನಿಂದ ಅಪಾರ ಪ್ರಮಾಣದ ಬೆಳೆ ನಷ್ಟ ಆಗಿ ರೈತರು ಸಂಕಷ್ಟಕ್ಕಿಡಾಗುವಂತೆ ಮಾಡಿದೆ.

ಚಿಕ್ಕಬಳ್ಳಾಪುರ ತಾಲೂಕಿನ ಚಲಕಾಯಲಪರ್ತಿ ಗ್ರಾಮದಲ್ಲಿ ನೂರಾರು ಎಕರೆ ಬೆಳೆಗಳು ಜಲಾವೃತವಾಗಿ ರೈತರು ಸಂಕಷ್ಟಕ್ಕೀಡಾಗುವಂತೆ ಮಾಡಿದೆ. ಗುಲಾಬಿ, ಸೇವಂತಿಗೆ, ಚೆಂಡು ಹೂ, ಆಲೂಗಡ್ಡೆ, ದ್ರಾಕ್ಷಿ, ಮಾವು, ರಾಗಿ ಸೇರಿದಂತೆ ತೋಟಗಾರಿಕಾ ಬೆಳೆಗಳು ಸಂಪೂರ್ಣ ಜಲಾವೃತವಾಗಿ ರೈತರಿಗೆ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.

CKB BELE NASHA 1

ಅಂದಹಾಗೆ ಚಲಕಾಯಲಪರ್ತಿ ಗ್ರಾಮದ ಸುತ್ತಮುತ್ತಲೂ ಮೂರು ಕೆರೆಗಳಿದ್ದು, ಮೂರು ಕೆರೆಗಳಿಗೆ ಮೊದಲು ಎಚ್ ಎನ್ ವ್ಯಾಲಿ ಯೋಜನೆಯಿಂದ ನೀರು ತುಂಬಿಸಲಾಗಿತ್ತು. ಇತ್ತೀಚೆಗೆ ಬೇರೆ ಧಾರಕಾರ ಮಳೆಯಾಗಿದೆ. ಮಳೆಯಾಗಿದ್ರೂ ಸಹ ಈಗಲೂ ಒಂದು ಕೆರೆಯಿಂದ ಮತ್ತೊಂದು ಕೆರೆಗೆ ಎಚ್ ಎನ್ ವ್ಯಾಲಿ ಯೋಜನೆಯ ನೀರನ್ನ ಹರಿಬಿಡಲಾಗುತ್ತಿದೆ. ಆದರೆ ಒಂದು ಕೆರೆಯಿಂದ ಮತ್ತೊಂದು ಕೆರೆಗೆ ಸರಾಗವಾಗಿ ನೀರು ಸಾಗಲು ಸಮರ್ಪಕವಾದ ಕಾಲುವೆಗಳನ್ನ ಮಾಡಿಲ್ಲ. ಕಾಲುವೆಗಳನ್ನ ಮಾಡದೆ ಹಾಗೆ ಕೆರೆಗಳಿಗೆ ನೀರನ್ನ ಹರಿದುಬಿಡಲಾಗುತ್ತಿದ್ದು, ಇದರಿಂದ ಕಾಲುವೆ ಅಕ್ಕಪಕ್ಕದ ರೈತರ ಜಮೀನುಗಳು ಜಲಾವೃತವಾಗುತ್ತಿವೆ.

CKB BELE NASHA 2

ಕೆರೆಗಳು ಸಹ ಮೈದುಂಬಿಕೊಂಡಿದ್ದು, ಗೊಳ್ಳು ಗ್ರಾಮಸ್ಥರು ತಮ್ಮೂರಿನ ಕೆರೆಯ ನೀರನ್ನ ಹೊರಗೆ ಬಿಡೋಕೆ ಅಡ್ಡಿಪಡಿಸುತ್ತಿದ್ದಾರೆ. ಕೆರೆಯ ಹಿಂಭಾಗಕ್ಕೆ ನೀರು ನುಗ್ಗುತ್ತಿದ್ದು, ಇದರಿಂದ ಹಿನ್ನೀರಿನ ಪ್ರದೇಶದಲ್ಲಿರೋ ರೈತರು ಜಮೀನುಗಳೆಲ್ಲವೂ ಮುಳುಗಡೆಯಾಗಿ ಬೆಳೆದ ಬೆಳೆಗಳೆಲ್ಲವೂ ಕೆರೆಯ ನೀರು ಪಾಲಾಗಿವೆ. ಇದರಿಂದ ಲಕ್ಷಾಂತರ ಬಂಡವಾಳ ಹೂಡಿ ಬೆಳೆದಿದ್ದ ಬೆಳೆಗಳೆಲ್ಲವೂ ಕಣ್ಣೆದುರೇ ಹಾಳಾಗುತ್ತಿದ್ದು, ರೈತರು ಏನೂ ಮಾಡಲಾಗದೆ ದಿಕ್ಕು ತೋಚದಂತಾಗಿದ್ದಾರೆ. ಹೀಗಾಗಿ ಅಧಿಕಾರಿಗಳು ಕೂಡಲೇ ಸೂಕ್ತ ಕಾಲುವೆಗಳ ನಿರ್ಮಾಣ ಮಾಡಿ, ಗೊಳ್ಳು ಗ್ರಾಮದ ಕೆರೆಯ ನೀರನ್ನ ಮುಂದಿನ ಕೆರೆಗೆ ಬಿಟ್ಟರೆ ಹಿನ್ನೀರಿನ ಪ್ರದೇಶದ ಬೆಳೆಗಳು ಉಳಿದುಕೊಳ್ಳಲಿವೆ ಅಂತ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಸೌಂದರ್ಯ ಜಗದೀಶ್ ಕುಟುಂಬಸ್ಥರಿಂದ ಹಲ್ಲೆ ಪ್ರಕರಣ- ಮನೆ ಸೆಕ್ಯೂರಿಟಿ ಗಾರ್ಡ್ ಅರೆಸ್ಟ್

CKB BELE NASHA 3

ಗ್ರಾಮದ ರೈತ ಗಂಗಾಧರ್ ಮಾತನಾಡಿ, ಮೊದಲಿಗೆ ಎಚ್ ಎನ್ ವ್ಯಾಲಿ ಯೋಜನೆಯ ಮೂಲಕ ನಮ್ಮೂರಿನ ಕೆರೆಗೆ ಕಟ್ಟೆಯನ್ನ ನಿರ್ಮಾಣ ಮಾಡಿದ್ದು ಅದು ಅವೈಜ್ಞಾನಿಕವಾಗಿದೆ. ಕೆರೆಗೆ ನೀರು ಹರಿಯುವ ಜಾಗಗಳನ್ನ ಮುಚ್ಚಿ ಹಾಕಿ ತಡೆಗೋಡೆ ಮಾಡಿದ್ದಾರೆ. ಇದರಿಂದ ಕೆರೆಗೆ ನೀರು ಹರಿಯದೆ ಮಳೆಯಾದಾಗ ರೈತರ ಜಮೀನುಗಳಲ್ಲೇ ಉಳಿದುಕೊಳ್ಳುತ್ತಿದೆ. ಕೆರೆಯ ತೂಬನ್ನ ಸಹ ತುಂಬಾ ಕೆಳಗೆ ಆಳವಡಿಸಿರೋದ್ರಿಂದ ಕೆರೆ ಸಂಪೂರ್ಣವಾಗಿ ತುಂಬದೆ ಮತ್ತೊಂದು ಕೆರೆಗೆ ಹೋಗುತ್ತಿದ್ದು, ಜಮೀನುಗಳನ್ನ ಜಲಾವೃತ ಮಾಡುತ್ತಿದೆ. ಎಚ್ ಎನ್ ವ್ಯಾಲಿ ಯೋಜನೆ ಅಧಿಕಾರಿಗಳು ಮಾಡಿರುವ ಎಡವಟ್ಟಿಗೆ ರೈತರು ಪರದಾಡುವಂತಾಗಿದೆ ಅಂತ ಅಸಮಾಧಾನ ಹೊರಹಾಕಿದ್ದಾರೆ. ಇನ್ನೂ ಇದೇ ರೀತಿ ಹಲವು ಗ್ರಾಮಗಳಲ್ಲಿ ಅಧಿಕಾರಿಗಳ ಎಡವಟ್ಟಿನಿಂದ ಕೆರೆಯ ಅಕ್ಕ ಪಕ್ಕದ ಜಮೀನುಗಳೆಲ್ಲವೂ ಜಲಾವೃತವಾಗುತ್ತಿವೆ ಎಂಬ ದೂರುಗಳು ಕೇಳಿಬಂದಿವೆ.

vlcsnap 2021 10 27 10h04m08s105

ಅಧಿಕಾರಿಗಳು ಹೇಳೋದು ಏನು…?
ಈ ಬಗ್ಗೆ ಪಬ್ಲಿಕ್ ಟಿವಿ ಗೆ ಪ್ರತಿಕ್ರಿಯಿಸಿರುವ ಎಚ್ ಎನ್ ವ್ಯಾಲಿ ಯೋಜನೆಯ ಎಇಇ ರವೀಂದ್ರನಾಥ್, ಕೆರೆಗಳಿಗೆ ಆದಷ್ಟು ಬೇಗ ನೀರು ತುಂಬಿಸುವ ಉದ್ದೇಶದಿಂದ ಕಳೆದ 1 ವರ್ಷದಿಂದ ಕೆರೆಗಳಿಗೆ ನೀರು ಹರಿಸಲಾಗುತ್ತಿತ್ತು. ಕೆರೆಯಿಂದ ಕೆರೆಗೆ ನೀರು ಹರಿಸಲು ಕಾಲುವೆಗಳನ್ನ ಮಾಡಬೇಕಿತ್ತು. ಆದರೆ ಕೊರೊನಾ ಕಾರಣದಿಂದ ಮಾಡಲಾಗಲಿಲ್ಲ. ಇರುವ ಕಾಲುವೆಗಳ ಮುಖಾಂತರವೇ ನೀರು ಹರಿಸಲಾಗುತ್ತಿತ್ತು. ಆದರೆ ಈಗ ಊಹಿಸದಂತಹ ಮಳೆಯಾದ ಪರಿಣಾಮ ಯಥೇಚ್ಛವಾದ ಮಳೆ ನೀರು ಬಂದಿದ್ದು, ಸಹಜವಾಗಿ ಬೆಳೆಗಳು ಜಲಾವೃತವಾಗಿವೆ. ಆದಷ್ಟು ಬೇಗ ಸಮರ್ಪಕ ಕಾಲುವೆಗಳನ್ನ ಮಾಡಿ ಸಮಸ್ಯೆ ಬಗೆಹರಿಸಲಾಗುವುದು ಅಂತ ಭರವಸೆ ನೀಡಿದ್ದಾರೆ.

TAGGED:ChikkaballapurafarmerPublic TVrainಚಿಕ್ಕಬಳ್ಳಾಪುರಪಬ್ಲಿಕ್ ಟಿವಿಮಳೆರೈತ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

Davangere South Ticket Fight Siraj Ahmed
Davanagere

ಜಮೀರ್‌ ಬಳಿ ಕ್ಷಮೆ ಕೇಳದೇ ಇದ್ರೆ ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಎಫೆಕ್ಟ್ ಆಗುತ್ತೆ: ಮಲ್ಲಿಕಾರ್ಜುನ್‌ಗೆ ಸಿರಾಜ್ ಅಹ್ಮದ್‌ ವಾರ್ನಿಂಗ್‌

Public TV
By Public TV
2 minutes ago
Shehbaz Sharif
Latest

ಇಂಧನ ಹೊಡೆತಕ್ಕೆ ಪಾಕ್ ತತ್ತರ – ಶಾಲೆಗಳಿಗೆ 2 ವಾರ ರಜೆ, ಸರ್ಕಾರಿ ಕಚೇರಿಗಳಿಗೆ 4 ದಿನ ಕೆಲಸ

Public TV
By Public TV
3 minutes ago
Raichur Couple Death
Districts

ನಿರ್ಮಾಣ ಹಂತದ ಮನೆಯ ಮೆಟ್ಟಿಲು ಕುಸಿದು ದಂಪತಿ ಸಾವು

Public TV
By Public TV
25 minutes ago
lpg sylender
Latest

ಇರಾನ್‌ ಯುದ್ಧ| ಎಲ್‌ಪಿಜಿ ಕನಿಷ್ಠ ಬುಕ್ಕಿಂಗ್‌ ಅವಧಿಯನ್ನು ಹೆಚ್ಚಿಸಿದ ಕೇಂದ್ರ

Public TV
By Public TV
2 hours ago
GBA Maheshwar Rao
Bengaluru City

ಪರಿಷ್ಕೃತ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಿದ ಜಿಬಿಎ

Public TV
By Public TV
2 hours ago
HD Devegowda
Karnataka

ರಾಜ್ಯ ಸರ್ಕಾರದಿಂದಲೇ ಎತ್ತಿನಹೊಳೆಗೆ ಆಮೆಗತಿ, ಮೇಕೆದಾಟು ವಿಳಂಬವಾಗುತ್ತಿದೆ: ಕಾಂಗ್ರೆಸ್‌ ವಿರುದ್ಧ ಹೆಚ್‌ಡಿಡಿ ಕಿಡಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?