Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಿಕ್ಕಬಳ್ಳಾಪುರದಲ್ಲಿ ಮಳೆ ಅವಾಂತರ- ಹೂ ತೋಟಗಳು ಜಲಾವೃತ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ಚಿಕ್ಕಬಳ್ಳಾಪುರದಲ್ಲಿ ಮಳೆ ಅವಾಂತರ- ಹೂ ತೋಟಗಳು ಜಲಾವೃತ

Chikkaballapur

ಚಿಕ್ಕಬಳ್ಳಾಪುರದಲ್ಲಿ ಮಳೆ ಅವಾಂತರ- ಹೂ ತೋಟಗಳು ಜಲಾವೃತ

Public TV
Last updated: October 27, 2021 10:29 am
Public TV
Share
2 Min Read
CKB ROSE
SHARE

ಚಿಕ್ಕಬಳ್ಳಾಪುರ: ಜಿಲ್ಲೆಯಾದ್ಯಾಂತ ಧಾರಕಾರ ಮಳೆ ಒಂದೆಡೆಯಾದ್ರೆ ಮತ್ತೊಂದೆಡೆ ಎಚ್ ಎನ್ ವ್ಯಾಲಿ ಯೋಜನೆಯ ಅಧಿಕಾರಿಗಳು ಮಾಡಿದ ಎಡವಟ್ಟಿನಿಂದ ಅಪಾರ ಪ್ರಮಾಣದ ಬೆಳೆ ನಷ್ಟ ಆಗಿ ರೈತರು ಸಂಕಷ್ಟಕ್ಕಿಡಾಗುವಂತೆ ಮಾಡಿದೆ.

ಚಿಕ್ಕಬಳ್ಳಾಪುರ ತಾಲೂಕಿನ ಚಲಕಾಯಲಪರ್ತಿ ಗ್ರಾಮದಲ್ಲಿ ನೂರಾರು ಎಕರೆ ಬೆಳೆಗಳು ಜಲಾವೃತವಾಗಿ ರೈತರು ಸಂಕಷ್ಟಕ್ಕೀಡಾಗುವಂತೆ ಮಾಡಿದೆ. ಗುಲಾಬಿ, ಸೇವಂತಿಗೆ, ಚೆಂಡು ಹೂ, ಆಲೂಗಡ್ಡೆ, ದ್ರಾಕ್ಷಿ, ಮಾವು, ರಾಗಿ ಸೇರಿದಂತೆ ತೋಟಗಾರಿಕಾ ಬೆಳೆಗಳು ಸಂಪೂರ್ಣ ಜಲಾವೃತವಾಗಿ ರೈತರಿಗೆ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.

CKB BELE NASHA 1

ಅಂದಹಾಗೆ ಚಲಕಾಯಲಪರ್ತಿ ಗ್ರಾಮದ ಸುತ್ತಮುತ್ತಲೂ ಮೂರು ಕೆರೆಗಳಿದ್ದು, ಮೂರು ಕೆರೆಗಳಿಗೆ ಮೊದಲು ಎಚ್ ಎನ್ ವ್ಯಾಲಿ ಯೋಜನೆಯಿಂದ ನೀರು ತುಂಬಿಸಲಾಗಿತ್ತು. ಇತ್ತೀಚೆಗೆ ಬೇರೆ ಧಾರಕಾರ ಮಳೆಯಾಗಿದೆ. ಮಳೆಯಾಗಿದ್ರೂ ಸಹ ಈಗಲೂ ಒಂದು ಕೆರೆಯಿಂದ ಮತ್ತೊಂದು ಕೆರೆಗೆ ಎಚ್ ಎನ್ ವ್ಯಾಲಿ ಯೋಜನೆಯ ನೀರನ್ನ ಹರಿಬಿಡಲಾಗುತ್ತಿದೆ. ಆದರೆ ಒಂದು ಕೆರೆಯಿಂದ ಮತ್ತೊಂದು ಕೆರೆಗೆ ಸರಾಗವಾಗಿ ನೀರು ಸಾಗಲು ಸಮರ್ಪಕವಾದ ಕಾಲುವೆಗಳನ್ನ ಮಾಡಿಲ್ಲ. ಕಾಲುವೆಗಳನ್ನ ಮಾಡದೆ ಹಾಗೆ ಕೆರೆಗಳಿಗೆ ನೀರನ್ನ ಹರಿದುಬಿಡಲಾಗುತ್ತಿದ್ದು, ಇದರಿಂದ ಕಾಲುವೆ ಅಕ್ಕಪಕ್ಕದ ರೈತರ ಜಮೀನುಗಳು ಜಲಾವೃತವಾಗುತ್ತಿವೆ.

CKB BELE NASHA 2

ಕೆರೆಗಳು ಸಹ ಮೈದುಂಬಿಕೊಂಡಿದ್ದು, ಗೊಳ್ಳು ಗ್ರಾಮಸ್ಥರು ತಮ್ಮೂರಿನ ಕೆರೆಯ ನೀರನ್ನ ಹೊರಗೆ ಬಿಡೋಕೆ ಅಡ್ಡಿಪಡಿಸುತ್ತಿದ್ದಾರೆ. ಕೆರೆಯ ಹಿಂಭಾಗಕ್ಕೆ ನೀರು ನುಗ್ಗುತ್ತಿದ್ದು, ಇದರಿಂದ ಹಿನ್ನೀರಿನ ಪ್ರದೇಶದಲ್ಲಿರೋ ರೈತರು ಜಮೀನುಗಳೆಲ್ಲವೂ ಮುಳುಗಡೆಯಾಗಿ ಬೆಳೆದ ಬೆಳೆಗಳೆಲ್ಲವೂ ಕೆರೆಯ ನೀರು ಪಾಲಾಗಿವೆ. ಇದರಿಂದ ಲಕ್ಷಾಂತರ ಬಂಡವಾಳ ಹೂಡಿ ಬೆಳೆದಿದ್ದ ಬೆಳೆಗಳೆಲ್ಲವೂ ಕಣ್ಣೆದುರೇ ಹಾಳಾಗುತ್ತಿದ್ದು, ರೈತರು ಏನೂ ಮಾಡಲಾಗದೆ ದಿಕ್ಕು ತೋಚದಂತಾಗಿದ್ದಾರೆ. ಹೀಗಾಗಿ ಅಧಿಕಾರಿಗಳು ಕೂಡಲೇ ಸೂಕ್ತ ಕಾಲುವೆಗಳ ನಿರ್ಮಾಣ ಮಾಡಿ, ಗೊಳ್ಳು ಗ್ರಾಮದ ಕೆರೆಯ ನೀರನ್ನ ಮುಂದಿನ ಕೆರೆಗೆ ಬಿಟ್ಟರೆ ಹಿನ್ನೀರಿನ ಪ್ರದೇಶದ ಬೆಳೆಗಳು ಉಳಿದುಕೊಳ್ಳಲಿವೆ ಅಂತ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಸೌಂದರ್ಯ ಜಗದೀಶ್ ಕುಟುಂಬಸ್ಥರಿಂದ ಹಲ್ಲೆ ಪ್ರಕರಣ- ಮನೆ ಸೆಕ್ಯೂರಿಟಿ ಗಾರ್ಡ್ ಅರೆಸ್ಟ್

CKB BELE NASHA 3

ಗ್ರಾಮದ ರೈತ ಗಂಗಾಧರ್ ಮಾತನಾಡಿ, ಮೊದಲಿಗೆ ಎಚ್ ಎನ್ ವ್ಯಾಲಿ ಯೋಜನೆಯ ಮೂಲಕ ನಮ್ಮೂರಿನ ಕೆರೆಗೆ ಕಟ್ಟೆಯನ್ನ ನಿರ್ಮಾಣ ಮಾಡಿದ್ದು ಅದು ಅವೈಜ್ಞಾನಿಕವಾಗಿದೆ. ಕೆರೆಗೆ ನೀರು ಹರಿಯುವ ಜಾಗಗಳನ್ನ ಮುಚ್ಚಿ ಹಾಕಿ ತಡೆಗೋಡೆ ಮಾಡಿದ್ದಾರೆ. ಇದರಿಂದ ಕೆರೆಗೆ ನೀರು ಹರಿಯದೆ ಮಳೆಯಾದಾಗ ರೈತರ ಜಮೀನುಗಳಲ್ಲೇ ಉಳಿದುಕೊಳ್ಳುತ್ತಿದೆ. ಕೆರೆಯ ತೂಬನ್ನ ಸಹ ತುಂಬಾ ಕೆಳಗೆ ಆಳವಡಿಸಿರೋದ್ರಿಂದ ಕೆರೆ ಸಂಪೂರ್ಣವಾಗಿ ತುಂಬದೆ ಮತ್ತೊಂದು ಕೆರೆಗೆ ಹೋಗುತ್ತಿದ್ದು, ಜಮೀನುಗಳನ್ನ ಜಲಾವೃತ ಮಾಡುತ್ತಿದೆ. ಎಚ್ ಎನ್ ವ್ಯಾಲಿ ಯೋಜನೆ ಅಧಿಕಾರಿಗಳು ಮಾಡಿರುವ ಎಡವಟ್ಟಿಗೆ ರೈತರು ಪರದಾಡುವಂತಾಗಿದೆ ಅಂತ ಅಸಮಾಧಾನ ಹೊರಹಾಕಿದ್ದಾರೆ. ಇನ್ನೂ ಇದೇ ರೀತಿ ಹಲವು ಗ್ರಾಮಗಳಲ್ಲಿ ಅಧಿಕಾರಿಗಳ ಎಡವಟ್ಟಿನಿಂದ ಕೆರೆಯ ಅಕ್ಕ ಪಕ್ಕದ ಜಮೀನುಗಳೆಲ್ಲವೂ ಜಲಾವೃತವಾಗುತ್ತಿವೆ ಎಂಬ ದೂರುಗಳು ಕೇಳಿಬಂದಿವೆ.

vlcsnap 2021 10 27 10h04m08s105

ಅಧಿಕಾರಿಗಳು ಹೇಳೋದು ಏನು…?
ಈ ಬಗ್ಗೆ ಪಬ್ಲಿಕ್ ಟಿವಿ ಗೆ ಪ್ರತಿಕ್ರಿಯಿಸಿರುವ ಎಚ್ ಎನ್ ವ್ಯಾಲಿ ಯೋಜನೆಯ ಎಇಇ ರವೀಂದ್ರನಾಥ್, ಕೆರೆಗಳಿಗೆ ಆದಷ್ಟು ಬೇಗ ನೀರು ತುಂಬಿಸುವ ಉದ್ದೇಶದಿಂದ ಕಳೆದ 1 ವರ್ಷದಿಂದ ಕೆರೆಗಳಿಗೆ ನೀರು ಹರಿಸಲಾಗುತ್ತಿತ್ತು. ಕೆರೆಯಿಂದ ಕೆರೆಗೆ ನೀರು ಹರಿಸಲು ಕಾಲುವೆಗಳನ್ನ ಮಾಡಬೇಕಿತ್ತು. ಆದರೆ ಕೊರೊನಾ ಕಾರಣದಿಂದ ಮಾಡಲಾಗಲಿಲ್ಲ. ಇರುವ ಕಾಲುವೆಗಳ ಮುಖಾಂತರವೇ ನೀರು ಹರಿಸಲಾಗುತ್ತಿತ್ತು. ಆದರೆ ಈಗ ಊಹಿಸದಂತಹ ಮಳೆಯಾದ ಪರಿಣಾಮ ಯಥೇಚ್ಛವಾದ ಮಳೆ ನೀರು ಬಂದಿದ್ದು, ಸಹಜವಾಗಿ ಬೆಳೆಗಳು ಜಲಾವೃತವಾಗಿವೆ. ಆದಷ್ಟು ಬೇಗ ಸಮರ್ಪಕ ಕಾಲುವೆಗಳನ್ನ ಮಾಡಿ ಸಮಸ್ಯೆ ಬಗೆಹರಿಸಲಾಗುವುದು ಅಂತ ಭರವಸೆ ನೀಡಿದ್ದಾರೆ.

TAGGED:ChikkaballapurafarmerPublic TVrainಚಿಕ್ಕಬಳ್ಳಾಪುರಪಬ್ಲಿಕ್ ಟಿವಿಮಳೆರೈತ
Share This Article
Facebook Whatsapp Whatsapp Telegram

Cinema news

Rakshita Shetty 2
ಮನೆಮಗಳು ತರ ನೋಡಿದ್ದೀರಿ, ಇದಕ್ಕಿಂತ ಹೆಚ್ಚೇನು ಬೇಕಿಲ್ಲ: ರಕ್ಷಿತಾ ಶೆಟ್ಟಿ
Cinema Latest Main Post Sandalwood TV Shows
Pavithra Gowda 1
ಪವಿತ್ರಗೌಡಗೆ ಮನೆ ಊಟ ನಿರಾಕರಿಸಿದ್ದು ಒಳ್ಳೆಯದು – ಅಲೋಕ್ ಕುಮಾರ್
Cinema Districts Karnataka Latest Sandalwood Shivamogga States Top Stories
CM Siddaramaiah congratulates Gilli Nata on winning Kannada Bigg Boss
ಬಿಗ್‌ಬಾಸ್‌ ಗೆದ್ದ ಗಿಲ್ಲಿಯನ್ನು ಅಭಿನಂದಿಸಿದ ಸಿಎಂ
Bengaluru City Cinema Districts Karnataka Latest Top Stories TV Shows
Payal Changappa
ʻಅಮೃತ ಅಂಜನ್‌ʼ ಸಿನಿಮಾದ ಫೀಲಿಂಗ್‌ ಸಾಂಗ್‌ ರಿಲೀಸ್‌
Cinema Latest Sandalwood

You Might Also Like

kalaburagi newly wed women suicide
Crime

ಕಲಬುರಗಿ| ಪ್ರೀತಿಸಿ ಮದುವೆಯಾದ ಎರಡೇ ತಿಂಗಳಲ್ಲಿ ನವವಿವಾಹಿತೆ ಆತ್ಮಹತ್ಯೆ

Public TV
By Public TV
10 minutes ago
Raichur Child Death
Crime

ಕೆಕೆಆರ್‌ಟಿಸಿ ಬಸ್ ಹರಿದು 4 ವರ್ಷದ ಕಂದಮ್ಮ ಸಾವು

Public TV
By Public TV
19 minutes ago
Border Security Forces
Latest

ಗಣರಾಜ್ಯೋತ್ಸವಕ್ಕೆ 2 ದಿನ ಬಾಕಿ – ಪಂಜಾಬ್‌, ಜಮ್ಮು ಕಾಶ್ಮೀರ, ರಾಜಸ್ಥಾನ ಗಡಿಗಳಲ್ಲಿ ಹೈ ಅಲರ್ಟ್

Public TV
By Public TV
41 minutes ago
Prajwal Revanna
Bengaluru City

ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತು; ತನಿಖಾ ತಂಡಕ್ಕೆ 25 ಲಕ್ಷ ರೂ. ಬಹುಮಾನ ಘೋಷಣೆ

Public TV
By Public TV
49 minutes ago
Chitradurga Pigeon Came Back From Sabarimala
Chitradurga

ಶಬರಿಮಲೆಯಿಂದ 900 ಕಿ.ಮೀ ಕ್ರಮಿಸಿ ಮರಳಿ ಗೂಡು ಸೇರಿದ ಪಾರಿವಾಳ

Public TV
By Public TV
1 hour ago
BMTC 1
Bengaluru City

ಶನಿವಾರದಿಂದ ಸತತ ಮೂರು ದಿನ ರಜೆ – ಬಿಎಂಟಿಸಿಯಿಂದ ಹೆಚ್ಚುವರಿ ಬಸ್‌ಗಳ ನಿಯೋಜನೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?