Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವರುಣನ ಆರ್ಭಟಕ್ಕೆ ಜಿಲ್ಲೆಗಳಲ್ಲಿ ಏನೆಲ್ಲಾ ಅನಾಹುತಗಳು ಸಂಭವಿಸಿವೆ?- ಸಂಪೂರ್ಣ ಮಾಹಿತಿ ಇಲ್ಲಿದೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವರುಣನ ಆರ್ಭಟಕ್ಕೆ ಜಿಲ್ಲೆಗಳಲ್ಲಿ ಏನೆಲ್ಲಾ ಅನಾಹುತಗಳು ಸಂಭವಿಸಿವೆ?- ಸಂಪೂರ್ಣ ಮಾಹಿತಿ ಇಲ್ಲಿದೆ

Bengaluru City

ವರುಣನ ಆರ್ಭಟಕ್ಕೆ ಜಿಲ್ಲೆಗಳಲ್ಲಿ ಏನೆಲ್ಲಾ ಅನಾಹುತಗಳು ಸಂಭವಿಸಿವೆ?- ಸಂಪೂರ್ಣ ಮಾಹಿತಿ ಇಲ್ಲಿದೆ

Public TV
Last updated: October 14, 2017 8:12 am
Public TV
Share
3 Min Read
rain bangalore 14
SHARE

ಬೆಂಗಳೂರು: ನಗರದ ಸೇರಿದಂತೆ ಜಿಲ್ಲೆಯಾದ್ಯಂತ ನಿನ್ನೆ ಭಾರೀ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ಥವಾಗಿತ್ತು. ಸಿಲಿಕಾನ್ ಸಿಟಿಯಲ್ಲಿ ಮಳೆಗೆ ಐವರು ಬಲಿಯಾಗಿದ್ದಾರೆ. ಅಲ್ಲದೇ ಜಾನುವಾರುಗಳು ಕೂಡ ಬಲಿಯಾಗಿವೆ.

ರೇಷ್ಮೆನಗರಿ ರಾಮನಗರ ಜಿಲ್ಲೆಯಾದ್ಯಂತ ಕೂಡಾ ರಾತ್ರಿ ವರುಣ ಆರ್ಭಟಿಸಿದ್ದಾನೆ. ಅದರಲ್ಲೂ ಚನ್ನಪಟ್ಟಣ ಹಾಗೂ ಕನಕಪುರ ತಾಲೂಕುಗಳಲ್ಲಿ ಗುಡುಗು ಸಿಡಿಲು ಸಹಿತ ಧಾರಾಕಾರ ಮಳೆಯಾಗಿದೆ. ಇನ್ನು ಮಳೆಯಿಂದಾಗಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ಅಲ್ಲದೇ ರಸ್ತೆಯಲ್ಲಿ ಉಂಟಾಗಿರುವ ಗುಂಡಿಗಳಲ್ಲಿ ಮಳೆಯ ನೀರು ನಿಂತು ಬೈಕ್ ಸವಾರರು ಪರದಾಡಿದ್ದಾರೆ. ಜೋರು ಮಳೆಯಾಗಿ ನಿಂತ ಬಳಿಕ ಮಧ್ಯರಾತ್ರಿವರೆಗೂ ಸಹ ತುಂತುರು ಮಳೆ ಬೀಳುತ್ತಲೇ ಇದೆ.

RAIN 8 1
ಕೋಟೆನಾಡು ಚಿತ್ರದುರ್ಗದಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಸುಮಾರು 2 ಗಂಟೆಗೂ ಹೆಚ್ಚು ಕಾಲ ಸುರಿದ ಮಳೆಯಿಂದ ಜೋಗಿಮಟ್ಟಿ ರಸ್ತೆ, ಐಯುಡಿಪಿ ಲೇಔಟ್, ನೆಹರೂನಗರ, ಜೈನ್ ಕಾಲೋನಿ, ಮಾರುತಿನಗರ, ಹೌಸಿಂಗ್ ಬೋರ್ಡ್ ಕಾಲೋನಿ ಸೇರಿದಂತೆ ತಗ್ಗು ಪ್ರದೇಶದ ಮನೆಗಳು ಜಲಾವೃತವಾಗಿವೆ. ರಾಜಕಾಲುವೆಗಳ ಒತ್ತುವರಿಯಿಂದ ರಸ್ತೆಗೆ ನುಗ್ಗಿ ಸಂಚಾರ ಅಸ್ತವ್ಯಸ್ತವಾಗಿದೆ. ಐತಿಹಾಸಿಕ ಹೊಂಡಗಳು ಭರ್ತಿಯಾಗಿ ನೀರು ಕೋಡಿ ಹರಿಯುತ್ತಿದೆ.

RAIN 13 1

ಚಿನ್ನದ ನಾಡು ಕೋಲಾರದಲ್ಲೂ ರಾತ್ರಿ ಸುರಿದ ಮಳೆ ಅನೇಕ ಅವಾಂತರ ಸೃಷ್ಟಿಸಿದೆ. ಬಂಗಾರಪೇಟೆ ತಾಲೂಕಿನ ತೊರಗನದೊಡ್ಡಿ ಗ್ರಾಮದ ಕೆರೆ ಕೋಡಿ ಒಡೆದು ರೈತರ ಬೆಳೆಗಳಿಗೆ ನೀರು ನುಗ್ಗಿ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಬೆಳೆ ನಷ್ಟವಾಗಿದೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ಅವಘಡ ಸಂಭವಿಸಿದೆ ಅಂತ ಗ್ರಾಮಸ್ಥರು ಆಕ್ರೋಶವ್ಯಕ್ತಪಡಿಸಿದ್ದಾರೆ. ಇನ್ನು ಸ್ಥಳಕ್ಕೆ ಬಾರದ ಕಂದಾಯ ಅಧಿಕಾರಿಗಳ ವಿರುದ್ದ ರೈತರ ಕಿಡಿಕಾರಿದ್ರು.

RAIN 7 1
ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಕೂಡ ಗುಡುಗು ಸಹಿತ ಸುರಿದ ಅಬ್ಬರದ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ರಸ್ತೆಗೆ ನೀರು ನುಗ್ಗಿ ವಾಹನ ಸವಾರರ ಪರದಾಡಿದ್ದಾರೆ. ಚಿಕ್ಕಮಗಳೂರಿನ ಅಂಬಳೆ ಗ್ರಾಮದಲ್ಲಿ ಸಿಡಿಲು ಬಡಿದು ರೈತ 55 ವರ್ಷದ ಲಕ್ಷ್ಮಯ್ಯ ಮೃತಪಟ್ಟಿದ್ದಾರೆ. ಜಮೀನಿನಲ್ಲಿ ಕೆಲಸ ಮಾಡುವಾಗ ಅವಘಡ ಸಂಭವಿಸಿದೆ. ಚಿಕ್ಕಮಗಳೂರು ಪಟ್ಟಣ ಅಲ್ಲದೇ ಅಲ್ಲಂಪುರ, ಹಿರೇಮಗಳೂರು, ಅಂಬಳೆ ಗ್ರಾಮಗಳು ಸಂಪೂರ್ಣ ಜಲಾವೃತವಾಗಿವೆ. ಇನ್ನು ನೋವು ಕೇಳದ ಅಧಿಕಾರಿಗಳ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

RAIN 1 1
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಸಿಡಿಲು,ಗುಡುಗು ಸಹಿತ ಭಾರಿ ಮಳೆಯಾಗಿದೆ. ಜಂಬಾನಿ ಗ್ರಾಮದಲ್ಲಿ ಸಿಡಿಲು ಬಡಿದು ಮೇಯಲು ಬಿಟ್ಟಿದ್ದ ಹಸು ಸಾವನ್ನಪ್ಪಿದೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿ ಪಟ್ಟಣದಲ್ಲಿ ಭಾರಿ ಮಳೆಗೆ ರಸ್ತೆ ಕಾಣದೇ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್‍ಗೆ ಕ್ರೂಸರ್ ಡಿಕ್ಕಿಯಾಗಿ 8 ಮಂದಿಗೆ ಗಾಯವಾಗಿದೆ.

RAIN 9 1

ಚಿಕ್ಕೋಡಿ ಹೊರವಲಯದ ಅಂಕಲಿ ರಸ್ತೆಯ ಬಿ.ಕೆ.ಕಾಲೇಜು ಬಳಿ ಘಟನೆ ನಡೆದಿದೆ. ಗಾಯಾಳುಗಳಿಗೆ ಚಿಕ್ಕೋಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಹುಕ್ಕೇರಿ, ಅಥಣಿ ತಾಲೂಕಿನಲ್ಲಿ ವರುಣ ಆರ್ಭಟಿಸಿದ್ದಾನೆ. ಅಥಣಿ ತಾಲೂಕಿನ ಮಲಾಬಾದ ಗ್ರಾಮದಲ್ಲಿ ಸಿಡಿಲು ಬಡಿದು ಸಿದ್ದಪ್ಪ ಭೀಮಪ್ಪ ವಾಘಮೋಡೆ ಮೃತಪಟ್ಟಿದ್ದಾರೆ. ಗುಡುಗು ಸಿಡಿಲಿನ ಮಳೆ ಸುರಿಯುವ ವೇಳೆ ಮನೆ ಮುಂದಿದ್ದ ಗುಡಿಸಲುಗಳನ್ನು ಒಳಗೆ ಕಟ್ಟುವ ವೇಳೆ ಸಿಡಿಲು ಬಡಿದಿದೆ.

RAIN 3 1

ಬೆಣ್ಣೆ ನಗರಿ ದಾವಣಗೆರೆಯಲ್ಲಿ ಮಳೆ ನೀರು ನುಗ್ಗಿ ತಗ್ಗು ಪ್ರದೇಶಗಳು ಜಲಾವೃತವಾಗಿವೆ. ದಾವಣಗೆರೆ ನಗರದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣ ಜಲಾವೃತವಾಗಿದ್ದು, ಪ್ರಯಾಣಿಕರು ಪರದಾಡಿದ್ದಾರೆ. ಇನ್ನು ಜಿಲ್ಲೆಯಲ್ಲಿ ಕಳೆದ 15 ದಿನಗಳಿಂದ ಸತತ ಮಳೆಯಾಗ್ತಿದೆ.

RAIN 10 1
ಮೈಸೂರಿನಲ್ಲಿ ಅಬ್ಬರದ ಮಳೆಗೆ ಅರಮನೆ, ಅಗ್ರಹಾರ, ನಜರ್‍ಬಾದ್, ಅರಸು ರಸ್ತೆಗಳು ಜಲಾವೃತವಾಗಿದ್ದು ವಾಹನ ಸವಾರರು ಪರದಾಡಿದ್ದಾರೆ. ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಹಕ್ಯಾಳ ಬಳಿ ಸೇತುವೆ ದಾಟುವಾಗ ನೀರಿನ ರಭಸಕ್ಕೆ ಯುವಕ ನೀರುಪಾಲಾಗಿದ್ದಾನೆ. ನೀರುಪಾಲಾದ ಯುವಕನ್ನ ಹಂದಿಖೇರಾ ಗ್ರಾಮದ 26 ವರ್ಷದ ಶಿವಾಜಿ ಚವ್ಹಾಣ ಎಂಬುವುದಾಗಿ ಗುರುತಿಸಲಾಗಿದೆ.

RAIN 12 1

RAIN 6 1

RAIN 5 1

RAIN 4 1

RAIN 2 1

CKM RAIN 2

TAGGED:ChikkamagaluruChitradurgadavanagerekolaramysurupublictvramanagarashivamoggaಕೋಲಾರಚಿಕ್ಕಮಗಳೂರುಚಿತ್ರದುರ್ಗದಾವಣಗೆರೆಪಬ್ಲಿಕ್ ಟಿವಿಮೈಸೂರುರಾಮನಗರಶಿವಮೊಗ್ಗ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories
Zee Short Film Contest
ಹೊಸ ಪ್ರತಿಭೆಗಳ ಹುಡುಕಾಟಕ್ಕೆ ಜೀ ಕಿರುಚಿತ್ರ ಸ್ಪರ್ಧೆ
Cinema Latest Top Stories
Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories
Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories

You Might Also Like

HD Devegowda
Bengaluru City

ಜಿಬಿಎ, ಸ್ಥಳೀಯ ಸಂಸ್ಥೆ ಚುನಾವಣೆ ಬಗ್ಗೆ ಬಿಜೆಪಿ ತೀರ್ಮಾನ ಮಾಡಲಿ: ದೇವೇಗೌಡ

Public TV
By Public TV
24 minutes ago
Pradeep Eshwar 5
Bengaluru City

ಆರೋಗ್ಯ ಇಲಾಖೆ ಕಾರ್ಯಕ್ರಮದಲ್ಲಿ ಉರ್ದು ಬಳಕೆ ಮಾಡಿದ್ರೆ ಖಂಡಿಸುತ್ತೇನೆ: ಪ್ರದೀಪ್ ಈಶ್ವರ್

Public TV
By Public TV
49 minutes ago
Students and Job Aspirants Stage Massive Protest Rally In Dharwad
Bengaluru City

ಮಾಜಿ ಪ್ರಧಾನಿ ದೇವೇಗೌಡರನ್ನ ಭೇಟಿಯಾಗಿ ಹೋರಾಟಕ್ಕೆ ಬೆಂಬಲ ಕೋರಿದ ಉದ್ಯೋಗಾಂಕ್ಷಿಗಳು

Public TV
By Public TV
1 hour ago
Pradeep Eshwar
Bengaluru City

ಮೊದಲ ಬಾರಿ ಗೆದ್ದ 5 ಶಾಸಕರಿಗೆ ಮಂತ್ರಿ ಸ್ಥಾನ ಕೊಡಬೇಕು: ಪ್ರದೀಪ್ ಈಶ್ವರ್

Public TV
By Public TV
1 hour ago
Shop owner stabbed Hindu organizations protest in Chitradurga
Chitradurga

ಅಂಗಡಿ ಮಾಲೀಕನಿಗೆ ಚಾಕು ಇರಿತ – ಚಿತ್ರದುರ್ಗದಲ್ಲಿ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ

Public TV
By Public TV
1 hour ago
Turkish Air Force
Latest

Video Viral | ಅಮೆರಿಕ ನಿರ್ಮಿತ ಎಫ್‌-16 ಯುದ್ಧ ವಿಮಾನ ಪತನ – ಪೈಲಟ್‌ ಸಾವು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?