Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರಲ್ಲಿ ವರುಣನ ಅವಾಂತರ -ನದಿಯಂತಾಯ್ತು ರಸ್ತೆ, ಅಡಿಯುದ್ದ ನೀರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗಳೂರಲ್ಲಿ ವರುಣನ ಅವಾಂತರ -ನದಿಯಂತಾಯ್ತು ರಸ್ತೆ, ಅಡಿಯುದ್ದ ನೀರು

Bengaluru City

ಬೆಂಗಳೂರಲ್ಲಿ ವರುಣನ ಅವಾಂತರ -ನದಿಯಂತಾಯ್ತು ರಸ್ತೆ, ಅಡಿಯುದ್ದ ನೀರು

Public TV
Last updated: May 8, 2019 7:14 am
Public TV
Share
2 Min Read
RAIN UPDATE
SHARE

– ಇಲಾಖೆಯಿಂದ ರಾಜ್ಯಾದ್ಯಂತ ಹೈ ಅಲರ್ಟ್

ಬೆಂಗಳೂರು: ಮಂಗಳವಾರ ಸುರಿದ ಗುಡುಗು, ಸಿಡಿಲು ಸಹಿತ ಮಳೆ ಗಾಳಿಗೆ ಬೆಂಗಳೂರಿಗರು ತತ್ತರಿಸಿ ಹೋಗಿದ್ದಾರೆ. ಮಂಗಳವಾರ ಸಂಜೆ ವೇಳೆಗೆ ಶುರುವಾದ ಮಳೆ ರಾತ್ರಿ ಸುಮಾರು 11 ಗಂಟೆವರೆಗೂ ಎಡೆಬಿಡದೆ ಧಾರಾಕಾರವಾಗಿ ಸುರಿದಿದೆ.

ಯಶವಂತಪುರ, ಮಲ್ಲೇಶ್ವರಂ, ನವರಂಗ್, ವಿಜಯನಗರ, ರಾಜಾಜಿನಗರ, ಸದಶಿವನಗರ, ಹೆಬ್ಬಾಳ, ನಾಗವಾರ, ಮೆಜೆಸ್ಟಿಕ್, ಇಂದ್ರನಗರ, ನೆಲಮಂಗಲ ಸೇರಿದಂತೆ ಹಲವು ಕಡೆ ಮಳೆಯಿಂದಾಗಿ ಟ್ರಾಫಿಕ್ ಜಾಮ್ ಆಯಿತು. ತಗ್ಗುಪ್ರದೇಶದ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ ಮಾಡಿತ್ತು. 40ಕ್ಕೂ ಹೆಚ್ಚು ಕಡೆ ಮರಗಳು ಧರೆಗೆ ಉರುಳಿದ್ದು, ಹಲವು ಕಡೆಗಳಲ್ಲಿ ಕಾರು, ಬೈಕ್‍ಗಳ ಮೇಲೆ ಮರ ಬಿದ್ದು ವಾಹನಗಳು ಜಖಂ ಆಗಿತ್ತು. ಇದು ನದಿಯೋ ರಸ್ತೆಯೋ ಎಂಬಂತೆ ರಸ್ತೆಯಲ್ಲಿ ಅಡಿಯುದ್ದ ನೀರು ಹರಿದು, ವಾಹನ ಸವಾರರು ಪರದಾಡಿದ್ದರು.

RAIN

ಮಳೆ ಸುರಿಯುತ್ತಿದ್ದ ವೇಳೆ ವಿದ್ಯುತ್ ಕಂಬ, ಟ್ರಾನ್ಸ್ ಫಾರ್ಮರ್ ಗಳಿಗೆ ಹಾನಿ ಆಗಿತ್ತು. ಅದರಿಂದಾಗಿ ನಗರದ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿತ್ತು. ದೊಡ್ಡಬಿದರಕಲ್ಲಿನಲ್ಲಿ ಅತಿಹೆಚ್ಚು ಅಂದರೆ 147 ಮಿಲಿಮೀಟರ್ ಮಳೆ ಆಗಿದೆ. ಚಿಕ್ಕಬಿದರಕಲ್ಲಿನಲ್ಲಿ 97 ಮಿ.ಮೀಟರ್ ಮಳೆ, ಸಿಡೆದಹಳ್ಳಿಯಲ್ಲಿ 90 ಮಿ.ಮೀಟರ್ ಮಳೆ, ಪೀಣ್ಯಾ, ಮಾದಾವರದಲ್ಲಿ 88 ಮಿ.ಮೀಟರ್ ಮಳೆ, ಸಾರಕ್ಕಿ, ಬಸವನಗುಡಿಯಲ್ಲಿ 64 ಮಿ.ಮೀಟರ್ ಮಳೆ, ಗಾಳಿ ಆಂಜನೇಯ ದೇಗುಲದ ಬಳಿ 55 ಮಿ.ಮೀ ಮಳೆಯಾಗಿದೆ.

ಇಂದು ನಾಳೆ ಕೂಡ ಗುಡುಗು ಸಿಡಿಲು ಸಹಿತ ಜೋರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನ ಬಿಟಿಎಂ ಲೇಔಟ್‍ನ 29ನೇ ಮುಖ್ಯ ರಸ್ತೆಯಲ್ಲಿ ಸೌಪರ್ಣಿಕಾ ಅಪಾರ್ಟ್ ಮೆಂಟ್‍ಗೆ ಮಳೆ ನೀರು ನುಗ್ಗಿದೆ. ಡ್ರೈನೇಜ್ ಪೈಪ್ ಒಡೆದ ಪರಿಣಾಮ ಪಾರ್ಕಿಂಗ್ ಲಾಟ್‍ನಲ್ಲಿ ಐದು ಅಡಿಯಷ್ಟು ನೀರು ನಿಂತಿತ್ತು. ಹಲವು ವಾಹನಗಳು ನೀರಿನಲ್ಲಿ ಮುಳುಗಿವೆ. ಇನ್ನು ಜಯನಗರದ ಸೌಥ್ ಎಂಡ್ ಸರ್ಕಲ್ ಬಳಿಯ ರಣಧೀರ ಕಂಠೀರವ ಪಾರ್ಕ್ ಮತ್ತು ಬಸವನಗುಡಿಯ ಆರ್ಮುಗಂ ಸರ್ಕಲ್ ಬಳಿ ರಸ್ತೆಗೆ ಅಡ್ಡಲಾಗಿ ಮರ ಬಿದ್ದು, ವಾಹನ ಸವಾರರು ಪರದಾಡುವಂತಾಗಿತ್ತು. ಸ್ಥಳಕ್ಕೆ ಬಂದ ಬಿಬಿಎಂಪಿ ಸಿಬ್ಬಂದಿ ಮರ ತೆರವುಗೊಳಿಸಿದ್ದರು.

vlcsnap 2019 05 08 06h58m26s443

ಗಾಯಿತ್ರಿ ನಗರದಲ್ಲಿ ಬೃಹತ್ ಮರ ಬಿದ್ದು ಹತ್ತಾರು ದ್ವಿಚಕ್ರ ವಾಹನಗಳು ಜಖಂ ಆಗಿವೆ. ಒಂದೇ ಕಡೆ ಮೂರು ಮರಗಳು ಬಿದ್ದು, ಅನಾಹುತ ಸಂಭವಿಸಿದೆ. ಅವಘಡದಲ್ಲಿ ಪೂಜಾ ಅನ್ನೋ ಯುವತಿ ತಲೆಗೆ ಪೆಟ್ಟು ಬಿದ್ದಿದೆ. ಪೂಜಾರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೊಬ್ಬ ಮಹಿಳೆ ಸಹ ಗಾಯಗೊಂಡಿದ್ದಾರೆ. ಇನ್ನು ಮರ ಬಿದ್ದು ರಸ್ತೆ ಬಂದ್ ಆದ ಕಾರಣ ಟ್ರಾಫಿಕ್ ಜಾಮ್ ಉಂಟಾಗಿತ್ತು. ಕಳೆದ ವರ್ಷ ಮಳೆಯಿಂದಾಗಿ ರಸ್ತೆಗಳು ಗುಂಡಿ ಬಿದ್ದು ಅಮಾಯಕ ವಾಹನ ಸವಾರರು ಪ್ರಾಣ ಕಳೆದುಕೊಂಡಿದ್ದರು. ಹೈಕೋರ್ಟ್ ಛೀಮಾರಿ ಹಾಕಿದ್ದರೂ ಪಾಲಿಕೆ ಎಚ್ಚೆತ್ತುಕೊಂಡಿಲ್ಲ. ನಿನ್ನೆ ಸುರಿದ ಭಾರೀ ಮಳೆಗೆ ಸಿಲಿಕಾನ್ ಸಿಟಿಯಲ್ಲಿ ರಸ್ತೆಯೊಂದು ಅಕ್ಷರಃ ಕೊಚ್ಚಿಹೋಗಿದೆ.

190507kpn74

ಯಶವಂತಪುರದಿಂದ ಮಲ್ಲೇಶ್ವರಂಗೆ ಹೋಗುವ ರಸ್ತೆಯಲ್ಲಿ ಭಾರೀ ಹೊಂಡವೊಂದು ಸೃಷ್ಟಿಯಾಗಿದೆ. ಸುಮಾರು ಮೂರ್ನಾಲ್ಕು ಅಡಿಯಷ್ಟು ದೊಡ್ಡ ಗುಂಡಿ ಬಿದ್ದಿದೆ. ಇತ್ತ ಭಾರೀ ಮಳೆಯಿಂದಾಗಿ ರಾಜಾಜಿನಗರದ ಮುಖ್ಯರಸ್ತೆಗಳು ನದಿಯಂತಾಗಿತ್ತು. ಗುಡುಗು ಸಿಡಿಲಿನ ಆರ್ಭಟಕ್ಕೆ ವಿದ್ಯುತ್ ಕೈ ಕೊಟ್ಟಿತ್ತು. ಕತ್ತಲಲ್ಲಿ ನೀರಿನ ಮಧ್ಯೆ ವಾಹನ ಸವಾರರು ಪರದಾಡಿದ್ದರು. ಮಳೆಯ ಅವಾಂತರಕ್ಕೆ ರಸ್ತೆಗಳೆಲ್ಲಾ ಜಲಾವೃತವಾದರೆ, ವಾಹನಗಳು ಮುಳುಗಡೆ ಆಗುತ್ತಿದ್ದವು. ತುಮಕೂರು ರಸ್ತೆಯ ಪೀಣ್ಯ ಎಸ್‍ಆರ್‍ಎಸ್ ಬಸ್ ಸ್ಟಾಪ್ ಬಳಿ ನೀರು ತುಂಬಿದೆ. ವೈಟ್‍ಫೀಲ್ಡ್ ಮುಖ್ಯರಸ್ತೆ ಸಂಪೂರ್ಣ ಜಲಾವೃತವಾಗಿತ್ತು.

TAGGED:DamagePublic TVrainroadvehiclewaterನೀರುಪಬ್ಲಿಕ್ ಟಿವಿಮಳೆರಸ್ತೆವಾಹನಹಾನಿ
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

Basanagouda Patil Yatnal
Bengaluru City

ಚುನಾವಣೆಯಲ್ಲಿ ಅಕ್ರಮ ಆರೋಪ – ಯತ್ನಾಳ್ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂ

Public TV
By Public TV
8 minutes ago
Hampi Utsava
Bellary

ಹಂಪಿ ಉತ್ಸವದಲ್ಲಿ ಫಲಪುಷ್ಪ ಪ್ರದರ್ಶನ – ಹೂವಲ್ಲೇ ವಿಜಯನಗರ ಸಾಮ್ರಾಜ್ಯದ ಗತವೈಭವ ಸೃಷ್ಟಿ

Public TV
By Public TV
10 minutes ago
zameer ahmed students
Bellary

ಸ್ವಂತ ಖರ್ಚಿನಲ್ಲಿ ಸರ್ಕಾರಿ ಶಾಲಾ ಮಕ್ಕಳನ್ನ ಹೆಲಿಕಾಪ್ಟರ್‌ನಲ್ಲಿ ಸುತ್ತಾಡಿಸಿದ ಸಚಿವ ಜಮೀರ್

Public TV
By Public TV
12 minutes ago
Hassan Lady Missing
Crime

ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ – ಚಿನ್ನಾಭರಣಕ್ಕಾಗಿ ಕೊಲೆ ಶಂಕೆ

Public TV
By Public TV
35 minutes ago
Anti India Terror Accused
Latest

ಭಾರತ ವಿರೋಧಿ ಭಯೋತ್ಪಾದನಾ ಆರೋಪಿಗಳಿಗೆ ಬಾಂಗ್ಲಾ ಚುನಾವಣೆಯಲ್ಲಿ ಗೆಲುವು

Public TV
By Public TV
42 minutes ago
Mumbai metro
Crime

ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್ ಕುಸಿತ – ಓರ್ವ ಸಾವು, ಮೂವರು ಗಂಭೀರ

Public TV
By Public TV
60 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?