ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ನಿನ್ನೆ ಸಂಜೆ ಶುರುವಾದ ಮಳೆ ಬಿಟ್ಟು ಬಿಡದೇ ಸುರಿಯುತ್ತಲೇ ಇದೆ. ಮಳೆಯ ಪರಿಣಾಮ ಹಲವು ಬಡಾವಣೆಯ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಬಿಬಿಎಂಪಿ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನಿಸುತ್ತಿದ್ದಾರೆ.
ಮಹಾಮಳೆಗೆ ವಿಧಾನಸೌಧವೂ ಜಲಾವೃತವಾಗಿದೆ. ವಿಧಾನಸೌಧದ ಕ್ಯಾಂಟೀನ್ಗೆ ಮಳೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ. ಚರಂಡಿ ಬ್ಲಾಕ್ ಆದ ಕಾರಣ ಕ್ಯಾಂಟೀನ್ ಒಳಗೆ ಮಳೆ ನೀರು ನುಗ್ಗಿದ್ದು, ಕ್ಯಾಂಟೀನ್ ಸಿಬ್ಬಂದಿ ಪಂಪ್ ಮೂಲಕ ನೀರು ಹೊರತೆಗೆಯುತ್ತಿರುವ ಕೆಲಸಕ್ಕೆ ಮುಂದಾಗಿದ್ದಾರೆ. ಇದನ್ನೂ ಓದಿ: ಬೆಂಗಳೂರಿಗೆ ಕಾವೇರಿ ನೀರು ಪೂರೈಕೆ ಮಾಡೋ ಟಿಕೆ ಹಳ್ಳಿ ಪಂಪ್ ಸ್ಟೇಷನ್ ಮುಳುಗಡೆ
ಸರ್ಜಾಪುರ ಮುಖ್ಯ ರಸ್ತೆಯಲ್ಲೂ ಭಾರೀ ಟ್ರಾಫಿಕ್ ಸಮಸ್ಯೆ ಉಂಟಾಗಿದೆ. ಟ್ರಾಫಿಕ್ ನಲ್ಲಿ ಸಿಕ್ಕಿಕೊಂಡ ವಾಹನಗಳು ಮುಂದಕ್ಕೆ ಸಾಗಲು ರಸ್ತೆಯಿಲ್ಲದಂತೆ ಕಿಲೋ ಮೀಟರ್ಗಟ್ಟಲೆ ಒಂದೇ ಕಡೆ ನಿಂತಿವೆ.