– ಮರ, ವಿದ್ಯುತ್ ಕಂಬಗಳು ಧರೆಗೆ
ಗದಗ: ಜಿಲ್ಲೆಯ ಹಲವೆಡೆ ಬುಧವಾರ ತಡರಾತ್ರಿ ಧಾರಾಕಾರವಾಗಿ ಮಳೆ ಸುರಿದಿದ್ದು, ಭಾರೀ ಅವಾಂತರವನ್ನು ಸೃಷ್ಟಿಸಿದದೆ.
ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಗದಗ ಜಿಲ್ಲೆಯ ಹಲವಡೆ ಅನೇಕ ಆಸ್ತಿಪಾಸ್ತಿ ಹಾನಿಯಾಗಿದೆ. ವರುಣನ ಆರ್ಭಟಕ್ಕೆ ನಗರದ ಬೆಟಗೇರಿ ನೇಕಾರ ಕಾಲೋನಿಲ್ಲಿ ಬೃಹತ್ ಮರ ಮನೆಯ ಮೇಲೆ ಅಪ್ಪಳಿಸಿದ್ದು, ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
- Advertisement
ತಾಲೂಕಿನ ಹರ್ಲಾಪುರ ಗ್ರಾಮದ ಅನೇಕ ಮನೆಗಳ ಮೇಲ್ಛಾವಣಿ ಹಾರಿಹೋಗಿವೆ. ಮರ ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿದ್ದು, ಬಿರುಗಾಳಿಗೆ ಮೇವಿನ ಬಣವಿಗಳು ನಾಶವಾಗಿವೆ. ರಾತ್ರಿಯಿಡೀ ಸುರಿದ ಮಳೆಗೆ ಭಾರೀ ಹಾನಿಯುಂಟಾಗಿದ್ದು, ಅನೇಕ ಕುಟುಂಬಗಳು ಕಣ್ಣೀರಿನಲ್ಲಿ ಕೈತೊಳೆಯುವಂತಾಗಿದೆ. ಜಿಲ್ಲೆ ಅನೇಕ ಕಡೆಗಳಲ್ಲಿ ಬಿರುಗಾಳಿ ಮಳೆಗೆ ಅಪಾರ ಪ್ರಮಾಣದ ಆಸ್ತಿಪಾಸ್ತಿ ಹಾನಿ ಸಂಭವಿಸಿದೆ. ಕೊರೊನಾ ನಟುವೆ ಸುರಿಯುತ್ತಿರುವ ಭಾರೀ ಮಳೆಗೆ ಜನ ತತ್ತರಿಸಿ ಹೋಗಿದ್ದಾರೆ.