Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮುಂದುವರಿದ ಮಳೆ ಅಬ್ಬರ: ಬೆಂಗ್ಳೂರು ರಸ್ತೆಗಳೆಲ್ಲಾ ಜಲಾವೃತ, ಜಿಲ್ಲೆಗಳಲ್ಲಿ ಎಲ್ಲಾ ಕಡೆ ನೀರೋ ನೀರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bagalkot | ಮುಂದುವರಿದ ಮಳೆ ಅಬ್ಬರ: ಬೆಂಗ್ಳೂರು ರಸ್ತೆಗಳೆಲ್ಲಾ ಜಲಾವೃತ, ಜಿಲ್ಲೆಗಳಲ್ಲಿ ಎಲ್ಲಾ ಕಡೆ ನೀರೋ ನೀರು

Bagalkot

ಮುಂದುವರಿದ ಮಳೆ ಅಬ್ಬರ: ಬೆಂಗ್ಳೂರು ರಸ್ತೆಗಳೆಲ್ಲಾ ಜಲಾವೃತ, ಜಿಲ್ಲೆಗಳಲ್ಲಿ ಎಲ್ಲಾ ಕಡೆ ನೀರೋ ನೀರು

Public TV
Last updated: October 12, 2017 9:27 am
Public TV
Share
2 Min Read
bng rain 3 1
SHARE

ಬೆಂಗಳೂರು: ರಾಜ್ಯಾದಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಸತತ ಮಳೆಯಿಂದ ಸಾಕಷ್ಟು ಹಾನಿಯಾಗಿದೆ. ಬಾಗಲಕೋಟೆ, ಬೀದರ್, ರಾಯಚೂರು, ವಿಜಯಪುರ ಸೇರಿದಂತೆ ಉತ್ತರ ಕರ್ನಾಟಕದ ಹಲವೆಡೆ ಮಳೆರಾಯ ಅಬ್ಬರಿಸಿದ್ದಾನೆ. ವರುಣನ ಅಬ್ಬರದಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.

bng rain 2 1

ಕೋಟೆನಾಡು ಚಿತ್ರದುರ್ಗ ನಗರದಲ್ಲಿ ಸತತ ಒಂದು ಗಂಟೆ ಸುರಿದ ಮಳೆಗೆ ರಸ್ತೆಗಳಿಗೆ ನೀರು ನುಗ್ಗಿ ರಸ್ತೆ ಸಂಚಾರ ಅಸ್ತವ್ಯಸ್ತವಾಗಿದ್ದು ವಾಹನ ಸವಾರರು ಪರದಾಡಿದ್ದಾರೆ. ಜಿಲ್ಲೆಯ ಹಲವು ಕೆರೆ ಕಟ್ಟೆ ಹಳ್ಳಗಳು ಭರ್ತಿಯಾಗಿವೆ. ಅಲ್ಲದೇ ಹಲವು ಗ್ರಾಮಗಳಲ್ಲಿ ಬಿದ್ದ ಭಾರೀ ಮಳೆಯಿಂದಾಗಿ ರಸ್ತೆಗಳು ಹಳ್ಳಗಳಂತಾಗಿವೆ. ಚಳ್ಳಕೆರೆ ತಾಲೂಕಿನ ಕುರುಡಿಹಳ್ಳಿ ಚೆಕ್ ಡ್ಯಾಂ ತುಂಬಿ ರಸ್ತೆಯಲ್ಲಿ ನೀರು ಹರಿಯುತ್ತಿದೆ. ಬೇಡರೆಡ್ಡಿ, ಭರಮಸಾಗರ ಸೇರಿದಂತೆ ಐಮಂಗಲ, ವದ್ದಿಕೆರೆ ಗ್ರಾಮಗಳಲ್ಲೂ ಭಾರೀ ಮಳೆಯಾಗಿ ಆ ಭಾಗದ ಎಲ್ಲಾ ಕೆರೆಗಳು ಭರ್ತಿಯಾಗಿವೆ. ಅಲ್ಲದೇ ಘಟಪರ್ತಿ ಹೊನ್ನೂರು ಭರಮಸಾಗರದ ಅಡಿಕೆ-ತೆಂಗಿನ ತೋಟಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ. ಹೊನ್ನೂರು ಘಟಪರ್ತಿ ಗ್ರಾಮಗಳ ರಸ್ತೆ ಸಂಪರ್ಕ ಸಂಪೂರ್ಣ ಬಂದ್ ಅಗಿದ್ದರೂ ಬಹಳ ವರ್ಷಗಳ ನಂತರ ಭರ್ಜರಿಯಾಗಿ ಮಳೆ ಸುರಿಯುತ್ತಿರೋದರಿಂದ ಜನರು ಹರ್ಷಿತರಾಗಿದ್ದಾರೆ.

bng rain 1 1

ಬಾಗಲಕೋಟೆಯ ಮೈಗೂರಿನಲ್ಲಿ ಪೀಡಶೆಟ್ಟಿ ಎಂಬವರ ಮನೆ ಗೋಡೆ ಕುಸಿದು ಮನೆಯಲಿದ್ದ ಮೀನಾಕ್ಷಿ ಎಂಬವರಿಗೆ ಗಾಯವಾಗಿದೆ. ಅಬ್ಬರದ ಮಳೆಗೆ ನಗರದ ಜಮಖಂಡಿ ಬಸ್ ನಿಲ್ದಾಣ, ಹನುಮಾನ್ ಚೌಕ ಜಲಾವೃತಗೊಂಡಿವೆ.

ಬೆಳಗಾವಿಯ ಗೋಕಾಕ್‍ನಲ್ಲಿ ಮಳೆರಾಯ ಅಬ್ಬರಿಸಿದ್ದು, ಸತತ 2 ಗಂಟೆಗಳ ಕಾಲ ಸುರಿದ ಮಳೆಗೆ ಕೆರೆ-ಕಟ್ಟೆ ಒಡೆದು 15ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಮಳೆ ನೀರು ಮನೆಗೆ ನುಗ್ಗಿದ್ದರಿಂದ ಸಂಗ್ರಹಿಸಿಟ್ಟಿದ್ದ ದವಸ-ಧಾನ್ಯ ಸಂಪೂರ್ಣ ಹಾಳಾಗಿದೆ.

ಬೆಣ್ಣೆ ನಗರಿ ದಾವಣಗೆರೆಯ ಹರಿಹರ, ಹೊನ್ನಾಳಿ ಸೇರಿದಂತೆ ವಿವಿಧೆಡೆ ಧಾರಾಕಾರ ಮಳೆಯಾಗಿದ್ದು ತಗ್ಗುಪ್ರದೇಶಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿದೆ.

ತುಮಕೂರಿನಲ್ಲಿ ಕೊರಟಗೆರೆ, ಮಧುಗಿರಿ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗಿದೆ. ಕೊರಟಗೆರೆಯ ಕಾಳಿದಾಸ ನಗರ ಸಂಪೂರ್ಣ ಜಲಾವೃತವಾಗಿದ್ದು 20ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಮನೆಗಳಿಗೆ ನುಗ್ಗಿರುವ ನೀರು ಹೊರಹಾಕಲು ಜನ ಹರಸಾಹಸ ಪಡುತ್ತಿದ್ದಾರೆ. ಅಲ್ಲದೇ ಜಿಲ್ಲೆಯ ವಿವಿಧೆಡೆ ವಿದ್ಯುತ್ ಸ್ಥಗಿತವಾಗಿದ್ದು, ಜನ ಕತ್ತಲೆಯಲ್ಲಿ ಕಾಲ ಕಳೆಯುವಂತಾಗಿದೆ.

ಬಳ್ಳಾರಿಯಲ್ಲಿ ಕಳೆದ ರಾತ್ರಿ ಸುರಿದ ಮಳೆಗೆ ನಗರದ ಎಂಪಿಎಂಸಿಯ ಲಾರಿ ಟರ್ಮಿನಲ್ ಬಳಿಯ ಮನೆಯೊಂದು ಕುಸಿದು ಇಬ್ಬರು ಗಾಯಗೊಂಡಿದ್ದಾರೆ. ಘಟನೆಯಲ್ಲಿ ಗಾಯಗೊಂಡವರನ್ನು ಮಾರಕ್ಕ ಮತ್ತು ಆಕೆಯ ಮಗು ನಾಗರಾಜ ಎಂದು ಗುರುತಿಸಲಾಗಿದೆ. ಇನ್ನೂ ಗುಗ್ಗರಹಟ್ಟಿ ಬಳಿಯ ತಗ್ಗು ಪ್ರದೇಶಗಳ ಮನೆಗಳಿಗೆ ಭಾರೀ ಪ್ರಮಾಣದ ನೀರು ನುಗ್ಗಿದೆ. ಹೀಗಾಗಿ ಜನರು ಮನೆಗೆ ನುಗ್ಗಿರುವ ನೀರನ್ನು ಹೊರಹಾಕುವಲ್ಲಿ ನಿರತರಾಗಿದ್ದಾರೆ. ಪಾಲಿಕೆ ಆಯುಕ್ತರು ಮುಂಜಾನೆಯಿಂದಲೇ ನಗರ ಸಂಚಾರ ಆರಂಭಿಸಿದ್ದು, ತಗ್ಗು ಪ್ರದೇಶದ ಜನರಿಗೆ ಸಹಾಯ ಮಾಡುವಲ್ಲಿ ನಿರಾತರಾಗಿದ್ದಾರೆ.

ಇನ್ನು ಮುಂದಿನ 48 ಗಂಟೆಗಳ ಕಾಲ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

bag rain 7

 

blr rain

vlcsnap 2017 10 12 09h04m25s180

vlcsnap 2017 10 12 09h04m09s241

vlcsnap 2017 10 12 09h04m41s89

 

TAGGED:bagalkotBangaloreBelgaumbellarydavanagerePublic TVraichurrainದಾವಣಗೆರೆಪಬ್ಲಿಕ್ ಟಿವಿಬಳ್ಳಾರಿಬಾಗಲಕೋಟೆಬೆಂಗಳೂರುಬೆಳಗಾವಿಮಳೆರಾಯಚೂರು
Share This Article
Facebook Whatsapp Whatsapp Telegram

Cinema news

Darshan 7
ದರ್ಶನ್ ಹೆಚ್ಚುವರಿ ಬ್ಲಾಂಕೆಟ್‌ ಸೌಲಭ್ಯಕ್ಕೆ ಕುತ್ತು – ಕಾರಾಗೃಹ ಡಿಜಿಪಿ ಹೊಸ ಆದೇಶ
Bengaluru City Cinema Latest Sandalwood
Veer Kambala
ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ʻವೀರ ಕಂಬಳʼಕ್ಕೆ ರಿಲೀಸ್ ಡೇಟ್ ಫಿಕ್ಸ್
Cinema Latest Sandalwood Top Stories
Raghavendra Mahatme
ಶ್ರೀ ರಾಘವೇಂದ್ರ ಮಹಾತ್ಮೆ : ವಿವಾಹ ವೈಭವ ಸಂಚಿಕೆ
Cinema Latest Top Stories TV Shows
vidnyan mane and palash smriti
ಬೇರೊಬ್ಬಳೊಂದಿಗೆ ಏಕಾಂತದಲ್ಲಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಪಾಲಶ್ – ಸ್ಮೃತಿ ಮಂಧಾನ ಗೆಳೆಯ ವಿಧ್ಯಾನ್ ಮಾನೆ
Bollywood Cricket Latest National Sports Top Stories

You Might Also Like

Bangladesh Hindu Man 1
Latest

ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯ ಸಜೀವ ದಹನ – ಪ್ರೀ ಪ್ಲ್ಯಾನ್ಡ್‌ ಮರ್ಡರ್‌ ಅಂತ ಕುಟುಂಬ ಆರೋಪ

Public TV
By Public TV
24 minutes ago
Dryfruits
Bengaluru City

ಇರಾನ್‌ನಲ್ಲಿ ಹಿಂಸಾಚಾರ, ಯುದ್ಧದ ಆತಂಕ – ರಂಜಾನ್ ಹೊಸ್ತಿಲಲ್ಲೇ ಡ್ರೈಫ್ರೂಟ್ಸ್ ಸಪ್ಲೈ ಬಂದ್

Public TV
By Public TV
1 hour ago
Bhupesh Baghel
Latest

2017 ರ ಸೆಕ್ಸ್ ಸಿಡಿ ಪ್ರಕರಣ – ಕಾಂಗ್ರೆಸ್‌ ನಾಯಕ ಭೂಪೇಶ್ ಬಘೇಲ್ ಖುಲಾಸೆ ರದ್ದುಗೊಳಿಸಿದ ಸಿಬಿಐ ಕೋರ್ಟ್‌

Public TV
By Public TV
2 hours ago
One Way Riding DL Cancel
Bengaluru City

ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಪ್ಲ್ಯಾನ್ – ಒನ್ ವೇ ಸವಾರರೇ ಟಾರ್ಗೆಟ್, ಸಿಕ್ಕಿಬಿದ್ದೋರ ಡಿಎಲ್ ಕ್ಯಾನ್ಸಲ್

Public TV
By Public TV
2 hours ago
Manali
Latest

ಮನಾಲಿಯಲ್ಲಿ ಭಾರೀ ಹಿಮಪಾತ – 8 ಕಿಮೀ ಟ್ರಾಫಿಕ್‌ ಜಾಮ್‌, ರಸ್ತೆಯಲ್ಲೇ ನಿಂತ ಪ್ರವಾಸಿಗರು

Public TV
By Public TV
2 hours ago
Belagavi Police 2
Belgaum

ಬೆಳಗಾವಿ | ದೇಶದ ಅತಿದೊಡ್ಡ ರಾಬರಿ ಪ್ರಕರಣ ಬೆಳಕಿಗೆ – ಚಲಾವಣೆ ಇಲ್ಲದ 400 ಕೋಟಿ ದರೋಡೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?