Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Rain Alert | ರಾಜ್ಯದಲ್ಲಿ ಮುಂದಿನ 5 ದಿನ ಭಾರಿ ಮಳೆ – ಮಲೆನಾಡು ಭಾಗದಲ್ಲಿ ರೆಡ್‌ ಅಲರ್ಟ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bagalkot | Rain Alert | ರಾಜ್ಯದಲ್ಲಿ ಮುಂದಿನ 5 ದಿನ ಭಾರಿ ಮಳೆ – ಮಲೆನಾಡು ಭಾಗದಲ್ಲಿ ರೆಡ್‌ ಅಲರ್ಟ್‌

Bagalkot

Rain Alert | ರಾಜ್ಯದಲ್ಲಿ ಮುಂದಿನ 5 ದಿನ ಭಾರಿ ಮಳೆ – ಮಲೆನಾಡು ಭಾಗದಲ್ಲಿ ರೆಡ್‌ ಅಲರ್ಟ್‌

Public TV
Last updated: August 18, 2025 8:02 am
Public TV
Share
3 Min Read
weather
SHARE

– ಉತ್ತರ ಕನ್ನಡದ 11 ತಾಲೂಕಿನಲ್ಲಿ ಶಾಲೆಗಳಿಗೆ ರಜೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಸಾಧ್ಯತೆ ಹಿನ್ನೆಲೆ, ರಾಜ್ಯದಲ್ಲಿ ಮುಂದಿನ 5 ದಿನ ಭಾರಿ ಮಳೆ ಮುನ್ಸೂಚನೆ (Rain Alert) ನೀಡಲಾಗಿದೆ.

ಕರಾವಳಿಯ ಮೂರು ಜಿಲ್ಲೆಗಳಿಗೆ ಭಾರಿ ಮಳೆ ಸಾಧ್ಯತೆಯಿದ್ದು, ಕರಾವಳಿ ಭಾಗದ ದಕ್ಷಿಣ ಕನ್ನಡ (Dakshina Kannada), ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು, ಬೆಳಗಾವಿ (Belagavi), ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಕೊಪ್ಪಳ ಜಿಲ್ಲೆಗಳಿಗೆ ಎರಡು ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

Weather

ಸದ್ಯ ಬೆಂಗಳೂರಲ್ಲಿ ಮೂರು ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ತಾಲೂಕು ಹೊರತು ಪಡಿಸಿ 11 ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.

ಶಿವಮೊಗ್ಗದಲ್ಲಿ ಮಳೆ ಅಲರ್ಟ್ ಹಿನ್ನೆಲೆ ಜಿಲ್ಲೆಯ ಅಂಗನವಾಡಿ, ಶಾಲೆ ಮತ್ತು ಪಿಯುಸಿ ಮತ್ತು ಪದವಿ ಕಾಲೇಜಿಗೆ ರಜೆ ಘೋಷಿಸಲಾಗಿದೆ.

ಕೊಡಗಿನಲ್ಲಿ ನಿರಂತರ ಮಳೆ
ಇನ್ನೂ ಕೊಡಗು ಜಿಲ್ಲೆಯಲ್ಲಿ ಬಿಟ್ಟೂ ಬಿಡದೇ ಮಳೆ ಸುರಿಯುತ್ತಿದೆ. ಮಳೆಯಿಂದಾಗಿ ಜಿಲ್ಲೆಯ ನಾನಾ ಭಾಗದಲ್ಲಿ ಅವಾಂತರ ಮುಂದುವರಿದಿದ್ದು, ಹಲವೆಡೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ಬೃಹತ್‌ ಮರಗಳು, ವಿದ್ಯುತ್‌ ಕಂಬಗಳು, ಧರಾಶಾಹಿಯಾಗಿವೆ.

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೀದರ್‌ನಲ್ಲೂ ಮಳೆಯ ಅವಾಂತರ
ಸತತವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಗಡಿ ಜಿಲ್ಲೆ ಬೀದರ್‌ನಲ್ಲಿ ಬಾರಿ ಅವಾಂತರಗಳು ಸೃಷ್ಟಿಯಾಗಿದೆ. ಜಿಲ್ಲೆಯ ಸಾವಿರಾರು ಎಕರೆಯಲ್ಲಿ ಬೆಳೆದ ವಿವಿಧ ಬೆಳೆಗಳು ಹಾಗೂ ಹಲವು ಗ್ರಾಮಗಳ ರಸ್ತೆ ಸಂಪರ್ಕ ಕಟ್ ಆಗಿದೆ. ಬೀದರ್ ತಾಲೂಕಿನ ಬುಧೇರಾ ಗ್ರಾಮದ ಸುತ್ತಮುತ್ತ ಸಾವಿರಾರು ಎಕರೆಯಲ್ಲಿ ಬೆಳೆದಿದ್ದ ಸೋಯಾ, ಕಬ್ಬು, ಉದ್ದು ಹಾಗೂ ತೊಗರಿ ಸೇರಿದಂತೆ ವಿವಿಧ ಬೆಳೆಗಳು ಸಂಪೂರ್ಣವಾಗಿ ನೀರು ಪಾಲಾಗಿದೆ. ಟಿ ಮಿರಜಾಪೂ ಟು ಬುಧೇರಾ ಗ್ರಾಮ ಸೇರಿದಂತೆ ಕಾಜಾನಗರ, ಚಟ್ನಳಿ, ಸಾತೋಳಿ, ಭರಿದಾಬಾದಿ, ಕಾಡವಾದಿ ಹಳ್ಳಿಗಳ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಟ್ ಆಗಿದೆ. ಪ್ರತಿ ಬಾರಿಯೂ ಮಳೆ ಬಂದಾಗ ಇದೇ ಪರಿಸ್ಥಿತಿ ನಿರ್ಮಾಣವಾಗುತ್ತೆ.. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಎಷ್ಟೇ ಮಾಹಿತಿ ನೀಡಿದ್ರು ಸ್ಪಂದಿಸುತ್ತಿಲ್ಲ ಅಂತ ಜನರು ಹಿಡಿಶಾಪ ಹಾಕಿದ್ದಾರೆ.

weather

ಕಲಬುರಗಿ: ಬೆಣ್ಣೆತೋರಾ ಜಲಾಶಯ ಭರ್ತಿ
ಕಲಬುರಗಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸತತ ಮಳೆ ಹಿನ್ನೆಲೆ ಜಿಲ್ಲೆಯ ಬೆಣ್ಣೆತೋರಾ ಜಲಾಶಯ ಭರ್ತಿಯಾಗಿದ್ದು, ಇದರ ಪರಿಣಾಮ ಅಪಾರ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಬಿಟ್ಟ ಹಿನ್ನಲೆ ನದಿ ದಡದ ಜಮೀನುಗಳಲ್ಲಿನ ಬೆಳೆಗಳು ನೀರು ಪಾಲಾಗಿದೆ. ಜಿಲ್ಲೆಯ ಕಾಳಗಿ ತಾಲೂಕಿನ ಹೆಬ್ಬಾಳ ಗ್ರಾಮದ ನೂರಾರು ಎಕರೆ ಪ್ರದೇಶದಲ್ಲಿ ಬೆಳೆದ ಹೆಸರು ಬೆಳೆ ಸಂಪೂರ್ಣವಾಗಿ ಬುಡ ಸಮೇತ ನೆಲಕಚ್ಚಿದೆ. ಅದೇ ರೀತಿ ಎಳ್ಳು ಸಹ ಜಮೀನಿನಲ್ಲಿ ನೀರಿನ ರಭಸಕ್ಕೆ ಕಿತ್ತು ಹೋದ್ರೆ, ತೊಗರಿಯ ಬುಡದಲ್ಲಿ ನೀರು ನಿಂತು ನೆಟ್ಟೆ ರೋಗಕ್ಕೆ ತುತ್ತಾಗಿವೆ. ಹೀಗಿದ್ರು ಸಹ ಇಲ್ಲಿಯವರೆಗೆ ಕೃಷಿ ಇಲಾಖೆ ಅಧಿಕಾರಿಗಳು ಸಹ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿಲ್ಲ ಅಂತ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

weather

ಹಾಸನದಲ್ಲೂ ವರಣನ ಆರ್ಭಟ ಜೋರು
ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ವರುಣನ ಅಬ್ಬರಕ್ಕೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮೊನ್ನೆಯಿಂದ ಸುರಿಯುತ್ತಿರುವ ಭಾರಿ ಮಳೆಗೆ ರಸ್ತೆಯ ತುಂಬೆಲ್ಲ ನೀರು ಹರಿಯುತ್ತಿದೆ. ಹಲವು ಕಡೆಗಳಲ್ಲಿ ಭೂಕುಸಿತ ಉಂಟಾಗಿದ್ದು, ಬಿರುಗಾಳಿ ಸಹಿತ ಮಳೆಯ ಅಬ್ಬರಕ್ಕೆ ಮರಗಳು ನೆಲಕ್ಕುರುಳಿವೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನರು ಮನೆಯಿಂದ ಹೊರಬರದ ಪರಿಸ್ಥಿತಿ ನಿರ್ಮಾಣವಾಗಿದೆ. ಸಕಲೇಶಪುರ ತಾಲೂಕಿನ ಕಡಗರವಳ್ಳಿ ಗ್ರಾಮದಲ್ಲಿ ಗುಡ್ಡ, ಮರಗಳು ಧರಾಶಾಹಿಯಾಗಿದ್ದು ಸ್ಥಳಕ್ಕೆ ಎಸಿ ರಾಜೇಶ್, ತಹಸೀಲ್ದಾರ್ ಸುಪ್ರಿತಾ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಾಗೇ ಗುಡ್ಡ ಕುಸಿತದಿಂದ ಕಡಗರವಳ್ಳಿ, ಬಾಚೀಹಳ್ಳಿ, ವಳಲಹಳ್ಳಿ, ಹೊಂಗಡಹಳ್ಳ ಗ್ರಾಮಗಳಿಗೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ಮಳೆ ಮುಂದುವರೆದಿದ್ದು ಮತ್ತೆ ಗುಡ್ಡ ಕುಸಿಯುವ ಆತಂಕ ಎದುರಾಗಿದೆ.

TAGGED:bengaluruIMDkarnatakaKodagu RainsRain AlertRain Fallಕರ್ನಾಟಕಕೊಡಗುಬೆಂಗಳೂರುಮಳೆ ಅವಾಂತರ
Share This Article
Facebook Whatsapp Whatsapp Telegram

Cinema news

Arijith Singh
ಹಿನ್ನೆಲೆ ಗಾಯನಕ್ಕೆ ಗುಡ್ ಬೈ ಹೇಳಿದ ಅರಿಜಿತ್ ಸಿಂಗ್
Bollywood Cinema Latest Main Post
kavya gowda
ನಟಿ ಕಾವ್ಯ ಗೌಡ, ಪತಿ ಮೇಲೆ ಹಲ್ಲೆ ಆರೋಪ; ದೂರು ದಾಖಲು
Cinema Latest Main Post Sandalwood
Raghavendra Chitravani 1
ರಾಘವೇಂದ್ರ ಚಿತ್ರವಾಣಿಗೆ 50ರ ಸಂಭ್ರಮ – ಸಿನಿ ಗಣ್ಯರಿಂದ ಲೋಗೋ ಲಾಂಚ್
Cinema Latest Sandalwood Top Stories
Gilli Nata 6
ಚನ್ನಪಟ್ಟಣದಲ್ಲಿ ಗಿಲ್ಲಿ ಕ್ರೇಜ್ – ವೇದಿಕೆ ಏರಿದ ಅಭಿಮಾನಿಗಳ ನಿಯಂತ್ರಣಕ್ಕೆ ಪೊಲೀಸರ ಹರಸಾಹಸ
Cinema Districts Karnataka Latest Ramanagara States Top Stories

You Might Also Like

RCB
Bengaluru City

ಮತ್ತೆ ಬೆಂಗಳೂರಿನಲ್ಲೇ ಆರ್‌ಸಿಬಿ ಮ್ಯಾಚ್ ಫಿಕ್ಸ್? – ಸರ್ಕಾರದ ಜೊತೆ ಚರ್ಚೆಗೆ ಮುಂದಾದ ಮ್ಯಾನೇಜ್‌ಮೆಂಟ್

Public TV
By Public TV
14 minutes ago
shivamogga sleeper bus
Latest

ಶಿವಮೊಗ್ಗದಲ್ಲಿ ಧಗಧಗನೇ ಹೊತ್ತಿ ಉರಿದ ಖಾಸಗಿ ಸ್ಲೀಪರ್ ಬಸ್

Public TV
By Public TV
19 minutes ago
Transport Employees Bengaluru Chalo
Bengaluru City

ನಾಳೆ ಸಾರಿಗೆ ನೌಕರರಿಂದ ಬೆಂಗಳೂರು ಚಲೋ – ಸರ್ಕಾರ ಸ್ಪಂದಿಸದಿದ್ರೆ ಸಾಮೂಹಿಕ ರಾಜೀನಾಮೆಗೆ ಪ್ಲಾನ್

Public TV
By Public TV
54 minutes ago
house fire
Latest

ಕಾರವಾರ| ಯಾರೂ ಇಲ್ಲದ ವೇಳೆ ಮನೆಗೆ ಬೆಂಕಿ ಇಟ್ಟ ದುಷ್ಕರ್ಮಿ

Public TV
By Public TV
56 minutes ago
US Immigration Visa
Latest

75 ʼಹೈ-ರಿಸ್ಕ್‌ʼ ದೇಶಗಳಿಗೆ ವಲಸೆ ವೀಸಾ ನಿರ್ಬಂಧಿಸಿದ ಅಮೆರಿಕ – ಕಾರಣ ಏನು?

Public TV
By Public TV
1 hour ago
Gujarat Giants 1
Cricket

23 ರನ್‌ ಬಿಟ್ಟು ಕೊಟ್ರೂ ಕೊನೆಯಲ್ಲಿ ಸೋಫಿ ಮ್ಯಾಜಿಕ್‌ – ಗುಜರಾತ್‌ಗೆ ರೋಚಕ 3 ರನ್‌ ಜಯ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?