Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮತ್ತೆ ಚುರುಕಾಯ್ತು ಮುಂಗಾರು ಮಳೆ – ಜಲಾಶಯಗಳಿಗೆ ಒಳಹರಿವು ಹೆಚ್ಚಳ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮತ್ತೆ ಚುರುಕಾಯ್ತು ಮುಂಗಾರು ಮಳೆ – ಜಲಾಶಯಗಳಿಗೆ ಒಳಹರಿವು ಹೆಚ್ಚಳ

Bengaluru City

ಮತ್ತೆ ಚುರುಕಾಯ್ತು ಮುಂಗಾರು ಮಳೆ – ಜಲಾಶಯಗಳಿಗೆ ಒಳಹರಿವು ಹೆಚ್ಚಳ

Public TV
Last updated: July 19, 2017 6:03 pm
Public TV
Share
3 Min Read
MDK RAIN AV 1
SHARE

– ಭಾಗಮಂಡಲದ ತ್ರಿವೇಣಿ ಸಂಗಮ ಭರ್ತಿ
– ಕೇರಳದಲ್ಲಿ ಮಳೆ – ಕಬಿನಿ ಒಳ ಹರಿವು ಹೆಚ್ಚಳ

ಬೆಂಗಳೂರು: ರಾಜ್ಯದ ಹಲವೆಡೆ ಮಳೆ ಚುರುಕಾಗಿದೆ. ಕಳೆದೆರಡು ದಿನಗಳಿಂದ ಮಲೆನಾಡು ಭಾಗದಲ್ಲಿ ಮಳೆ ಚುರುಕಾಗಿತ್ತು. ಕಳೆದ ಎರಡು ಮೂರು ದಿನಗಳಿಂದ ಮೋಡದ ಮರೆಯಲ್ಲೇ ಮಳೆಯ ನಿರೀಕ್ಷೆಯಲ್ಲಿದ್ದ ಬೆಂಗಳೂರು ಜನರಿಗೆ ಇಂದು ಬೆಳಗ್ಗೆಯಿಂದ ಮಳೆಯ ದರ್ಶನವಾಗಿದೆ. ಪುನರ್ವಸು ಮಳೆಯ ಕೊನೆಯ ದಿನವಾಗಿರುವ ಇಂದು ಹಲವೆಡೆ ಜೋರು ಮಳೆಯಾಗುತ್ತಿದೆ.

ಸಿಲಿಕಾನ್ ಸಿಟಿಯಲ್ಲಿ ಭಾರಿ ಮಳೆಯಾಗುತ್ತಿದ್ದು ಮೆಜೆಸ್ಟಿಕ್, ಕೆ ಆರ್ ಮಾರ್ಕೆಟ್, ಕೆ ಪಿ ಅಗ್ರಹಾರ, ಚಾಮರಾಜ ಪೇಟೆ, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮಳೆ ಬಿದ್ದಿದೆ. ಮಳೆಯಿಂದಾಗಿ ಮೆಜೆಸ್ಟಿಕ್ ಸುತ್ತಮುತ್ತ ಪ್ರತಿ ಬಾರಿಯಂತೆ ಟ್ರಾಫಿಕ್ ಜಾಮ್ ಆಗಿತ್ತು. ಇನ್ನು ಕೆಲವೆಡೆ ಮಳೆಯಿಂದಾಗಿ ಜನರು ಸಂಚಾರಕ್ಕೆ ಮೆಟ್ರೋ ರೈಲು ಹತ್ತಿದರು.

ಕೊಡಗು ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭಾಗಮಂಡಲ ವ್ಯಾಪ್ತಿಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕಳೆದ ಎರಡು ದಿನಗಳಿಂದ ಭಾಗಮಂಡಲ, ತಲಕಾವೇರಿ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗುತ್ತಿದೆ. ಮಳೆಯ ತೀವ್ರತೆಗೆ ಭಾಗಮಂಡಲದ ತ್ರಿವೇಣಿ ಸಂಗಮ ಭರ್ತಿಯಾಗಿದೆ. ಸಂಗಮದ ಸ್ನಾನಘಟ್ಟ ಜಲಾವೃತವಾಗಿದೆ. ಜಿಲ್ಲೆಯ ಜನ ಜೀವನ ಅಸ್ತವ್ಯಸ್ತ, ಕೃಷಿ ಚಟುವಟಿಕೆಗೆ ಅಡ್ಡಿಯಾಗಿದೆ. ಜಿಲ್ಲೆಯ ಹಳ್ಳ ಕೊಳ್ಳ, ನದಿ ತೊರೆಗಳು ಉಕ್ಕಿ ಹರಿಯುತ್ತಿವೆ.

MDK RAIN AV 5

ಕೇರಳದ ವಯನಾಡು ಪ್ರದೇಶದಲ್ಲೀ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಪ್ರಮಾಣದ ಏರಿಕೆಯಾಗಿದೆ. ಕಬಿನಿ ಜಲಾಶಯದ ಇಂದಿನ ಒಳಹರಿವು 7,100 ಕ್ಯೂಸೆಕ್ ಗೆ ಏರಿಕೆಯಾಗಿದ್ದು, ಜಲಾಶಯದ ಹೊರ ಹರಿವು 1,000 ಕ್ಯೂಸೆಕ್ ಇದೆ. ಜಲಾಶಯದ ಗರಿಷ್ಠ ಮಟ್ಟ 2284 ಅಡಿ ಇದ್ದು, ಜಲಾಶಯದ ಇಂದಿನ ನೀರಿನ ಮಟ್ಟ 2267 ಅಡಿ ಇದೆ.

dam hsn

ಹಾಸನ ಜಿಲ್ಲೆಯಲ್ಲಿ ಮಳೆ ಕೊಂಚ ಬಿರುಸುಗೊಂಡಿದೆ. ಇದರಿಂದಾಗಿ ಬೆಳೆ ನಷ್ಟದ ಭೀತಿಯಲ್ಲಿದ್ದ ರೈತರ ಮೊಗದಲ್ಲಿ ಹರ್ಷ ಕಾಣಿಸಿದೆ. ಜಿಲ್ಲೆಯ ಹಲವು ಕಡೆ ಉತ್ತಮ ಮಳೆಯಾಗುತ್ತಿದೆ. ಹೇಮಾವತಿ ಜಲಾಶಯದ ಒಳ ಹರಿವು ಹೆಚ್ಚಾಗಿದೆ. ಇಂದು ಜಲಾಶಯಕ್ಕೆ 5441 ಕ್ಯೂಸೆಕ್ ಒಳ ಹರಿವು ಇದ್ದು, ಜಲಾಶಯದ ಗರಿಷ್ಟ ಮಟ್ಟ 2922 ಅಡಿ ಇದೆ. ಜಲಾಶಯದಲ್ಲಿ ಇಂದು 2876.93 ಅಡಿ ತಲುಪಿದೆ. ಕಳೆದ ವರ್ಷ ಇದೇ ಅವಧಿಗೆ ಈ ಡ್ಯಾಂ ಅರ್ಧದಷ್ಟು ತುಂಬಿತ್ತು. ಆದರೆ ಈ ಬಾರಿ ಕಾಲು ಭಾಗದಷ್ಟೂ ಭರ್ತಿಯಾಗಿಲ್ಲ.

ಉತ್ತರ ಕರ್ನಾಟಕ: ಮಹಾರಾಷ್ಟ್ರ ಕೊಂಕಣ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣಾ ನದಿಯ ಒಳ ಹರಿವು ಹೆಚ್ಚಳವಾಗಿದೆ. ಧಾರಾಕಾರ ಮಳೆಗೆ ಬ್ರಿಜ್ ಕಂ ಬ್ಯಾರೇಜ್ ಮುಳುಗಡೆಯಾಗಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡುರ ಕಲ್ಲೊಳ ಗ್ರಾಮದ ನಡುವಿನ ಸಂಪರ್ಕ ಸೇತುವೆ ಮಳೆಗೆ ಮುಳುಗಿದೆ. ಮಳೆ ಹೀಗೆಯೇ ಮುಂದುವರಿದಲ್ಲಿ ನದಿಯಲ್ಲಿ ನೀರಿನ ಹರಿವಿನ ಪ್ರಮಾಣ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ. ಸಂಪರ್ಕ ಕಡಿತದಿಂದಾಗಿ ಜನರು 7 ಕಿ.ಮೀ. ಸುತ್ತಿ ಬಳಸಿ ಸಂಚಾರ ಮಾಡುತ್ತಿದ್ದಾರೆ.

blg rain 1

ರಾಮದುರ್ಗ ತಾಲೂಕಿನಲ್ಲ ಮಳೆ ಅವಾಂತರಕ್ಕೆ ಮನೆ ಕುಸಿದು ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಬೆಳಗಾವಿ ಜಿಲ್ಲೆ ರಾಮದುರ್ಗತಾಲೂಕಿನ ಸಾಲಹಳ್ಳಿ ಗ್ರಾಮದಲ್ಲಿ ಮನೆ ಕುಸಿದ ಪರಿಣಾಮ ಮಲ್ಲಿಕಾರ್ಜುನ @ ಸಂತೋಷ ಮುದಕಪ್ಪ ಮಸ್ಕಿ (31) ಮೃತಪಟ್ಟಿದ್ದಾನೆ.

ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ವರುಣನ ಅಬ್ಬರ ಹಿನ್ನೆಲೆಯಲ್ಲಿ ಬೆಳಗಾವಿ ತಾಲೂಕಿನ ರಕ್ಕಸಕೊಪ್ಪ ಜಲಾಶಯದ ಒಳ ಹರಿವು ಹೆಚ್ಚಳವಾಗಿದೆ. ಕಳೆದ 24 ಗಂಟೆಯಲ್ಲಿ ಜಲಾಶಯಕ್ಕೆ 2 ಅಡಿ ನೀರು ಬಂದಿದೆ. ಜಲಾಶಯದ ಗರಿಷ್ಠ ಮಟ್ಟ 2476.50 ಅಡಿಯಾಗಿದ್ದು, ಇಂದು ನೀರಿನ ಪ್ರಮಾಣ 2464 ಅಡಿಗೆ ತಲುಪಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲೂ ಮಳೆಯ ಅಬ್ಬರ ಮುಂದುವರೆದಿದೆ. ಕಳೆದ ಎರಡು ದಿನಗಳಿಂದ ಮಳೆ ಧಾರಾಕಾರವಾಗಿ ಸುರಿಯುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿದೆ. ಚಿಕ್ಕಮಗಳೂರು ತಾಲೂಕು ಸೇರಿದಂತೆ ಮೂಡಿಗೆರೆ, ಕೊಪ್ಪ, ಶೃಂಗೇರಿ, ಎನ್.ಆರ್.ಪುರ ತಾಲೂಕುಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮಳೆಯಿಂದಾಗಿ ಭದ್ರಾ, ತುಂಗಾ, ಹೇಮಾವತಿ ಜಲಾಶಯಗಳ ಒಳ ಹರಿವು ಹೆಚ್ಚಾಗಿದೆ.

MDK RAIN AV 4

MDK RAIN AV 3

 

smg rain 2

smg rain 1

blg rain 3

 

rain 3

rain 2

rain 1

rain 4

TAGGED:bengalurukarnatakaKodagurainshivamoggaudupiಉಡುಪಿಕರ್ನಾಟಕಕಾವೇರಿಭಾಗಮಂಡಲಮಳೆಶಿವಮೊಗ್ಗ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
6 hours ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
7 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
7 hours ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
8 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
8 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
8 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?