Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದಲ್ಲಿ ಮುಂದುವರಿದ ಮಳೆಯಬ್ಬರ- ಹೆಬ್ಬಾಳೆ ಸೇತುವೆ ಮತ್ತೆ ಮುಳುಗಡೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chamarajanagar | ರಾಜ್ಯದಲ್ಲಿ ಮುಂದುವರಿದ ಮಳೆಯಬ್ಬರ- ಹೆಬ್ಬಾಳೆ ಸೇತುವೆ ಮತ್ತೆ ಮುಳುಗಡೆ

Chamarajanagar

ರಾಜ್ಯದಲ್ಲಿ ಮುಂದುವರಿದ ಮಳೆಯಬ್ಬರ- ಹೆಬ್ಬಾಳೆ ಸೇತುವೆ ಮತ್ತೆ ಮುಳುಗಡೆ

Public TV
Last updated: August 6, 2022 7:45 am
Public TV
Share
2 Min Read
RAIN
SHARE

ಬೆಂಗಳೂರು: ರಾಜ್ಯದಲ್ಲಿ ವರುಣನ ಅಬ್ಬರ ಮುಂದುವರಿದಿದೆ. ಎಲ್ಲಾ ಕಡೆ ಉತ್ತಮ ಮಳೆ ಆಗ್ತಿದ್ದು, ಅವಾಂತರಗಳು ಮುಂದುವರಿದಿವೆ. ಆಗುಂಬೆಯಲ್ಲಿ ನಿನ್ನೆ 230 ಮಿಲಿಮೀಟರ್ ಮಳೆ ಆಗಿದ್ದು, ಪ್ರಸಕ್ತ ಮುಂಗಾರಿನಲ್ಲಿ ಆಗುಂಬೆಯಲ್ಲಿ ಬಿದ್ದ ಮಳೆಯ ಪ್ರಮಾಣ 5000 ಮಿಲಿಮೀಟರ್ ದಾಟಿದೆ.

RAIN MANGALURU

ಪಶ್ಚಿಮ ಘಟ್ಟಗಳಲ್ಲಿ ಮಳೆ ಅವಾಂತರ ಮುಂದುವರಿದಿದೆ. ಕುದುರೆಮುಖ ಭಾಗದಲ್ಲಿ ಭಾರೀ ಮಳೆ ಆಗ್ತಿದ್ದು, ಭದ್ರಾ ನದಿ ಹರಿವಿನಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಹೊರನಾಡು-ಕಳಸ ಸಂಪರ್ಕ ಕಲ್ಪಿಸುವ ಹೆಬ್ಬಾಳೆ ಸೇತುವೆ ಮತ್ತೆ ಮುಳುಗಡೆಯಾಗಿದೆ. ಹೀಗಾಗಿ ಪರ್ಯಾಯ ಮಾರ್ಗ ಹಳುವಳ್ಳಿ ರಸ್ತೆಯಲ್ಲಿ ವಾಹನಗಳು ಸಂಚರಿಸುತ್ತಿವೆ.

RAIN SHIMSHAVATHI RIVER

ದಕ್ಷಿಣ ಕನ್ನಡದ ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಿದೆ. ನೇತ್ರಾವತಿ ನದಿ ನೀರಿನ ಮಟ್ಟ 6.5 ಮೀಟರ್ ತಲುಪಿದೆ. 8 ಮೀಟರ್ ತಲುಪಿದರೆ ಅಪಾಯ ಎದುರಾಗಲಿದೆ. ಹಳೆ ಮೈಸೂರು ಭಾಗದಲ್ಲಿ ಸಣ್ಣಪುಟ್ಟ ನದಿಗಳು ಕೂಡ ಉಕ್ಕೇರುತ್ತಿವೆ. ಚಾಮರಾಜನಗರದ ಸುವರ್ಣಾವತಿ, ಚಿಕ್ಕಹೊಳೆ ಜೋಡಿ ಜಲಾಶಯಗಳು ತುಂಬಿ ಹರಿಯುತ್ತಿವೆ. ಸುವರ್ಣವತಿ ನದಿಯ ಹಿಂದಿನ ಪ್ರವಾಹ ಮಟ್ಟಕ್ಕಿಂತ 1.2 ಮೀಟರ್ ಎತ್ತರದಲ್ಲಿ ಹರಿಯುತ್ತಿದೆ. ಹಲವೆಡೆ ಪ್ರವಾಹ ಪರಿಸ್ಥಿತಿ ಏರ್ಪಟ್ಟಿದೆ.

RAIN HAVERI

ಕೊಳ್ಳೆಗಾಲದ ಜನ ಹಿಂದೆಂದೂ ಇಂತಹ ಸ್ಥಿತಿಯನ್ನು ಕಂಡೇ ಇಲ್ಲ ಎನ್ನುತ್ತಿದ್ದಾರೆ. ಅಪಾರ ಕಬ್ಬು, ಬಾಳೆ, ತೆಂಗು, ಅಡಿಕೆ ತೋಟ ಜಲಾವೃತವಾಗಿದೆ. ಮಂಡ್ಯ ಜಿಲ್ಲೆಯ ಶಿಂಷಾವತಿ ನದಿ ಅಬ್ಬರ ಮುಂದುವರಿದಿದೆ. ಹಲಗೂರಿನ ಟಿಕೆ ಹಳ್ಳಿ ಬಳಿ ಶಿಂಷಾ ಅಪಾಯದ ಮಟ್ಟ ಮೀರಿದೆ. ಶಿಂಷಾ ನದಿ ಕಾವೇರಿಗೆ ಕನಿಷ್ಠ ಅಂದ್ರೂ 50ಸಾವಿರ ಕ್ಯೂಸೆಕ್ ನೀರನ್ನು ಸೇರಿಸ್ತಾ ಇದೆ. ಬೆಂಗಳೂರು-ಮೈಸೂರು ಹೈವೇಯಲ್ಲಿ ತೆರಳುವ ಮಂದಿ ಒಂದು ಕ್ಷಣ ನಿಂತು ಶಿಂಷಾ ವೈಭವವನ್ನು ಕಣ್ತುಂಬಿಕೊಳ್ತಿದ್ದಾರೆ. ಕೊರಟಗೆರೆ ತಾಲೂಕಿನ ತೀತಾ ಡ್ಯಾಂ ಭರ್ತಿಯಾಗಿದೆ. ಜಯಮಂಗಲಿ ನದಿಯ ನೀರು ಪ್ರವಾಹದ ರೀತಿಯಲ್ಲಿ ಡ್ಯಾಂಗೆ ಸೇರುತ್ತಿದೆ. ಪ್ರವಾಸಿಗರ ಸಂಖ್ಯೆ ಹೆಚ್ಚಳವಾಗಿದೆ.

RAIN HASSAN

ಹಾವೇರಿಯ ರಾಣೆಬೆನ್ನೂರು, ರಟ್ಟೀಹಳ್ಳಿ ಸೇರಿ ಹಲವೆಡೆ ಬೆಳೆ ಹಾನಿ. ಮೆಕ್ಕೆಜೋಳ ಬೆಳೆ ಕೆಂಪು ಬಣ್ಣಕ್ಕೆ ತಿರುಗಿ ಕೊಳೆತು ಹಾಳಾಗುತ್ತಿದೆ. ಅನ್ನದಾತ ಕಂಗಾಲಾಗಿದ್ದಾನೆ. ದಾವಣಗೆರೆಯ ಚನ್ನಗಿರಿಯಲ್ಲಿ ಕೆರೆ ಕಟ್ಟೆ ಒಡೆದಿದೆ. ಹರಿದ್ರಾವತಿ ನದಿ ತುಂಬಿ ಹರಿಯುತ್ತಿದೆ. ಹತ್ತಾರು ಹಳ್ಳಿಗಳ ಸಂಪರ್ಕವೇ ಕಟ್ ಆಗಿದೆ. ಗದಗ ಜಿಲ್ಲೆಯ ಹಲವೆಡೆ ಮೆಕ್ಕೆಜೋಳ, ಸೂರ್ಯಕಾಂತಿ, ಹತ್ತಿ, ಮಾವು, ಕಬ್ಬು ಹೀಗೆ ಅನೇಕ ಬೆಳೆಗಳು ನಾಶವಾಗಿವೆ. ಇದನ್ನೂ ಓದಿ: ಇಂದು ಉಪರಾಷ್ಟ್ರಪತಿ ಚುನಾವಣೆಗೆ ವೋಟಿಂಗ್ – NDA ಅಭ್ಯರ್ಥಿ ಜಗದೀಪ್ ಧನ್ಕರ್ ಆಯ್ಕೆ ಖಚಿತ

RAIN HASSAN

ಹಾಸನದಲ್ಲಿ ಹಲವೆಡೆ ಕೆರೆಗಳು ಕೋಡಿ ಬಿದ್ದು ಜಮೀನುಗಳಿಗೆ ನೀರು ನುಗ್ಗಿದೆ. ರೈತರು ಕಂಗಾಲಾಗಿದ್ದಾರೆ. ಕೋಲಾರದ ಹಲವೆಡೆ ನೂರಾರು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಟೊಮ್ಯಾಟೊ, ರಾಗಿ, ಭತ್ತ, ಮೂಲಂಗಿ ಸೇರಿದಂತೆ ಹಲವು ಬೆಳೆಗಳು ಜಲಾವೃತಗೊಂಡಿವೆ. ಇತ್ತ ಕೊಡಗು ಜಿಲ್ಲೆಯಲ್ಲಿ ಜಲಸ್ಫೋಟ ಬೆನ್ನಲ್ಲೇ ಇದೀಗ ಮತ್ತೆ ಭೂಕುಸಿತದ ಆತಂಕ ಮನೆಮಾಡಿದೆ. ಈ ಹಿಂದಷ್ಟೇ ಮಡಿಕೇರಿ ತಾಲೂಕಿನ ಚೆಂಬು, ಕರಿಕೆ ಸಂಪಾಜೆ ವ್ಯಾಪ್ತಿಯಲ್ಲಿ ಹಾಗೂ ಗಡಿಭಾಗವಾದ ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲುಗುಂಡಿ, ಗೂನಡ್ಕ ಭಾಗದಲ್ಲೂ ಸರಣಿ ಭೂಕಂಪನ ಅಗಿತ್ತು. ಅಷ್ಟೇ ಅಲ್ಲದೇ ವಿಚಿತ್ರ ಶಬ್ಧ ಕೇಳಿರುವುದಾಗಿ ಅಲ್ಲಿನ ಜನ ಹೇಳಿದ್ರು.

RAIN CHIKKAMAGALURU

ಇದೀಗ ಭೂಕಂಪ ಅಗಿರುವ ಸ್ಥಳಗಳಲ್ಲೇ ಮಳೆ ಅವಾಂತರಗಳು ಮುಂದುವರಿದಿದೆ. ಅದರಲ್ಲೂ ಪಯಸ್ವಿನಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. 2018ರ ರೀತಿಯಲ್ಲೇ ಮತ್ತೆ ಗಂಡಾಂತರ ಎದುರಾಗುತ್ತಾ ಅನ್ನೋ ಆತಂಕ ಮನೆ ಮಾಡಿದೆ. ಈವರೆಗೂ ಕೊಡಗು ಜಿಲ್ಲೆಯಲ್ಲಿ 265 ಮನೆಗಳಿಗೆ ಹಾನಿಯಾಗಿದೆ. 1174 ಕಿಲೋ ಮೀಟರ್ ರಸ್ತೆಗೆ ಹಾನಿಯಾಗಿದೆ.

Live Tv
[brid partner=56869869 player=32851 video=960834 autoplay=true]

TAGGED:bengaluruKaranatakarainಕರ್ನಾಟಕಬೆಂಗಳೂರುಮಳೆ
Share This Article
Facebook Whatsapp Whatsapp Telegram

Cinema news

PRAJWAL DEVARAJ 2
ಸಹೋದರನ ಚಿತ್ರಕ್ಕೆ ನಿರ್ಮಾಪಕನಾದ ಪ್ರಜ್ವಲ್ ದೇವರಾಜ್ – ಚಿತ್ರದ ಫಸ್ಟ್ ಲುಕ್ ಲಾಂಚ್
Cinema Latest Sandalwood Top Stories
actor mayur patel car accident
ಕುಡಿದು ವಾಹನ ಚಲಾಯಿಸಿ ಕಾರುಗಳಿಗೆ ಸರಣಿ ಅಪಘಾತ; ನಟ ಮಯೂರ್ ಪಟೇಲ್ ವಿರುದ್ಧ FIR
Cinema Crime Latest Main Post Sandalwood
Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ʻಹೆಣ್ಣು ದೆವ್ವʼ ಅಂತ ಅಪಮಾನ – ರಣವೀರ್ ಸಿಂಗ್‌ ವಿರುದ್ಧ FIR
Bengaluru City Cinema Crime Latest Main Post
Suri Anna 2
ಹರೀಶ್ ರಾಯ್ ನಟಿಸಿದ ಕೊನೆ ಚಿತ್ರ ಸೂರಿ ಅಣ್ಣ ಟ್ರೈಲರ್ ಬಿಡುಗಡೆ
Cinema Latest Main Post Sandalwood

You Might Also Like

Byrathi Suresh
Bengaluru City

ಟೆಂಡರ್‌ಗೂ ಮಂತ್ರಿಗಳಿಗೂ ಏನ್‌ ಸಂಬಂಧ? – ಗಾಳಿಯಲ್ಲಿ ಗುಂಡು ಹಾರಿಸಬೇಡಿ: ಬೈರತಿ ಸುರೇಶ್ ತಾಕೀತು

Public TV
By Public TV
32 minutes ago
Tumakuru Siddaganga Mutt
Districts

ಪಬ್ಲಿಕ್ ಟಿವಿ ಇಂಪ್ಯಾಕ್ಟ್ – 1.96 ಕೋಟಿ ವಿದ್ಯುತ್ ಬಿಲ್ ಪಾವತಿಸಿದ KIADB

Public TV
By Public TV
34 minutes ago
siddaramaiah
Bengaluru City

ಸಿಎಂ ಎಂಟ್ರಿ ಬೆನ್ನಲ್ಲೇ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರ ಚುನಾವಣೆ ಮುಂದೂಡಿಕೆ

Public TV
By Public TV
51 minutes ago
Pakistan Cricket Team
Cricket

T20 World Cup | ಫ್ಲೈಟ್‌ ಟಿಕೆಟ್‌ ಬುಕ್‌ ಮಾಡಿ ನಿರ್ಧಾರ ಪೆಂಡಿಂಗ್‌ ಇಟ್ಟ ಪಾಕ್‌!

Public TV
By Public TV
58 minutes ago
Serial accident on Belagavi
Belgaum

ಬೆಳಗಾವಿ ಹೈವೇಯಲ್ಲಿ ಸರಣಿ ಅಪಘಾತ – ಅದೃಷ್ಟವಶಾತ್‌ ಪ್ರಾಣಹಾನಿ ಇಲ್ಲ

Public TV
By Public TV
1 hour ago
Kanneri Shri
Districts

ನಿರ್ಬಂಧ ಹೇರಿದ್ದ ಊರಲ್ಲಿ ಕನ್ನೇರಿ ಶ್ರೀಗಳಿಗೆ ಅದ್ದೂರಿ ಸ್ವಾಗತ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?