Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dakshina Kannada

ಉಡುಪಿ, ದಕ್ಷಿಣ ಕನ್ನಡದಲ್ಲಿ ರೆಡ್ ಅಲರ್ಟ್ ವಿಸ್ತರಣೆ – ನೆರೆಯಿಂದಾಗಿ ಅಪಾರ ಪ್ರಮಾಣದ ಬೆಳೆಹಾನಿ

Public TV
Last updated: July 11, 2022 7:22 am
Public TV
Share
3 Min Read
MNG RAIN 3 1
SHARE

ಉಡುಪಿ/ಮಂಗಳೂರು: ಕಳೆದ ಹದಿನೈದು ದಿನಗಳಲ್ಲಿ ಸುರಿದ ಮಳೆ ಸೃಷ್ಟಿಸಿದ ಅವಾಂತರ ಅಷ್ಟಿಷ್ಟಲ್ಲ. ಹೀಗಾಗಿ ಉಡುಪಿ ಹಾಗೂ ದಕ್ಷಿಣ ಕನ್ನಡದಲ್ಲಿ ಮತ್ತೆರಡು ದಿನ ರೆಡ್ ಅಲರ್ಟ್ ಇದ್ದು ಜನರಲ್ಲಿ ಆತಂಕ ಶುರು ಮಾಡಿದೆ. ಈ 2 ಜಿಲ್ಲೆಯಲ್ಲಿ ಮುಂಗಾರು ಮಳೆ ಸದ್ಯಕ್ಕೆ ಬ್ರೇಕ್ ಕೊಡುವ ಲಕ್ಷಣ ಕಾಣಿಸ್ತಿಲ್ಲ. ಹಳೆಯ ಎಲ್ಲಾ ದಾಖಲೆಗಳನ್ನು ಮೀರಿ ವರುಣದೇವ ಮುನ್ನುಗ್ಗುತ್ತಿದ್ದಾನೆ.

MNG RAIN 2 1

ಉಡುಪಿ ಜಿಲ್ಲೆಯಲ್ಲಿ ಜುಲೈ 1ರಿಂದ ಇದುವರೆಗಿನ ವಾಡಿಕೆಯಂತೆ 367 ಮಿಲಿ ಮೀಟರ್ ಮಳೆ ಆಗ್ಬೇಕಿತ್ತು. ಇದುವರೆಗೆ 832 ಮಿಲಿ ಮೀಟರ್ ಮಳೆಯಾಗಿದ್ದು, 250 ಹೆಕ್ಟೇರ್ ಭತ್ತ ಬೆಳೆ ಹಾನಿಯಾಗಿದೆ. ರಸ್ತೆ, ಸೇತುವೆ, ಮನೆಗಳಿಗೆ ಹಾನಿಯಾಗಿ ಅಂದಾಜು 25 ಕೋಟಿಯಷ್ಟು ನಷ್ಟವಾಗಿದೆ.

MNG RAIN 5

ಬೈಂದೂರು ಶಾಸಕ ಸುಕುಮಾರ್ ಶೆಟ್ಟಿ ನೆರೆಪೀಡಿತ ಪ್ರದೇಶಗಳಿಗೆ ತೆರಳಿ ಸ್ವಂತ ಹಣದಲ್ಲಿ ಸಂತ್ರಸ್ತರಿಗೆ ಅಗತ್ಯ ವಸ್ತುಗಳನ್ನ ಪೂರೈಸಿದ್ದಾರೆ. ಡಿಸಿ ಕೂರ್ಮರಾವ್ ಸಿಇಒ, ಎಸಿ, ತಹಶೀಲ್ದಾರ್ ಬೈಂದೂರು, ಬ್ರಹ್ಮಾವರ ತಾಲೂಕಿನ ಉಪ್ಪೂರು ಗ್ರಾಮದ ಕುದ್ರು ಬೆಟ್ಟು ಮತ್ತು ಹೆರಾಯಿಬೆಟ್ಟಿನ ನೆರೆ ಪ್ರದೇಶಕ್ಕೆ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆ ಆಲಿಸಿದ್ರು. ಜನರಿಗೆ ಧೈರ್ಯ ತುಂಬಿದ್ದಾರೆ.

MNG RAIN 1 1

ಜಿಲ್ಲೆಯಲ್ಲಿ ಒಟ್ಟು 19 ಮನೆಗಳಿಗೆ ಗಾಳಿ ಮಳೆಯಿಂದ ಹಾನಿಯಾಗಿದ್ದು, ಬೈಂದೂರು ತಾಲೂಕಿನ ನಾವುಂದ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮೇಲ್ಛಾವಣಿ ಹಾರಿ ಹೋಗಿ 2.50 ಲಕ್ಷ ರೂ. ನಷ್ಟ ಉಂಟಾಗಿದೆ. ಜಿಲ್ಲೆಯಲ್ಲಿ ಸರಾಸರಿ 90 ಮಿಲಿಮೀಟರ್ ಮಳೆ ಸುರಿದಿದ್ದು, ಉಡುಪಿ ನಗರ ಭಾಗದ ತಗ್ಗುಪ್ರದೇಶಗಳು ಜಲಾವೃತವಾಗಿವೆ. ಇನ್ನು ಜಿಲ್ಲೆಯಲ್ಲಿ ಅಂಗನವಾಡಿ ಮಕ್ಕಳು ಸೇರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ನೀಡಲಾಗಿದೆ. ಉಳಿದಂತೆ ಪಿಯುಸಿ, ಪದವಿ ಮತ್ತು ಇತರ ಕಾಲೇಜುಗಳಿಗೆ ಎಂದಿನಂತೆ ತರಗತಿ ನಡೆಯಲಿವೆ.

MNG RAIN

ಕುಂದಾಪುರ ತಾಲೂಕಿನ ತೆಕ್ಕಟ್ಟೆ ಭಾಗದ ಕುದ್ರುವಿನ ಜನ ತಮ್ಮ ಜಾನುವಾರುಗಳನ್ನು ಎತ್ತರ ಪ್ರದೇಶಕ್ಕೆ ಶಿಫ್ಟ್ ಮಾಡಿದ್ದಾರೆ. ಜಿಲ್ಲೆಯಲ್ಲಿ ಮುಂದಿನ ಎರಡು ದಿನಗಳು ರೆಡ್ ಅಲರ್ಟ್ ಘೋಷಿಸಲಾಗಿದೆ. ಮೀನುಗಾರರು ಸಮುದ್ರಕ್ಕಿಳಿಯದಂತೆ, ನದಿಪಾತ್ರದ ಜನರು ಮುಂಜಾಗೃತ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಇದನ್ನೂ ಓದಿ: ಮುಂದಿನ ಚುನಾವಣೆಯಲ್ಲಿ ಮಹಾ ವಿಕಾಸ್ ಅಘಾಡಿ ಒಟ್ಟಾಗಿ ಸ್ಪರ್ಧೆ: ಶರದ್ ಪವಾರ್

MNG RAIN 4

ಇತ್ತ ದಕ್ಷಿಣ ಕನ್ನಡದಲ್ಲಿ ಅಲ್ಲಲ್ಲಿ ಗುಡ್ಡ ಕುಸಿತ, ಮನೆ ಕುಸಿತ, ಪ್ರವಾಹ ಸೇರಿದಂತೆ ಅನಾಹುತಗಳು ನಡೆಯುತ್ತಲೇ ಇದೆ. ಕರಾವಳಿಯಲ್ಲಿ ಈ ಬಾರಿ ಮಳೆಯೇ ಇಲ್ಲ ಎಂದು ಜನ ಜೂನ್ ತಿಂಗಳಿನಲ್ಲಿ ಆತಂಕದಿಂದಿದ್ದರು. ಆದರೆ ಜುಲೈ ಆರಂಭದಲ್ಲೇ ಸುರಿದ ಭಾರೀ ಮಳೆಗೆ ದಕ್ಷಿಣ ಕನ್ನಡ ಜಿಲ್ಲೆಯ ಜನ ಅಕ್ಷರಶಃ ತತ್ತರಿಸಿಸುತ್ತಿದ್ದಾರೆ. ಒಂದ್ಕಡೆ ಬಿಟ್ಟುಬಿಡದ ಮಳೆ, ಇನ್ನೊಂದ್ಕಡೆ ಸಾಲು ಸಾಲು ಅವಾಂತರ. ಜಿಲ್ಲೆಯಲ್ಲಿ ಇಂದೂ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಭಾರೀ ಮಾಳೆಯಾಗುವ ಸಾಧ್ಯತೆ ಇದೆ, ಈ ಹಿನ್ನೆಲೆ ಅಂಗನವಾಡಿಯಿಂದ ಪ್ರೌಢ ಶಾಲೆಯವರೆಗಿನ ಮಕ್ಕಳಿಗೆ ರಜೆ ನೀಡಲಾಗಿದೆ.

MNG RAIN 3

ಜುಲೈ 6ರಂದು ಕುಸಿದಿದ್ದ ಪಂಜಿಕಲ್ಲು ಗಡ್ಡದ ಮತ್ತೊಂದು ಭಾಗವೂ ಕುಸಿದಿದೆ. ಮನೆ ಮೇಲೆ ಬಿದ್ದಿದ್ದರಿಂದ ಮನೆಯವನ್ನು ಸ್ಥಳಾಂತರ ಮಾಡಿದ್ದಕ್ಕೆ ಅನಾಹುತ ತಪ್ಪಿದೆ. ಒಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆಗೆ ಜಿಲ್ಲಾದ್ಯಂತ ಮನೆಗಳು ಕುಸಿದಿದ್ದು, ಸಾಕಷ್ಟು ಹಾನಿಯಾಗಿದೆ. ಒಂದು ವಾರದಿಂದ ಇಂದಿನವರೆಗೆ ಒಟ್ಟು 56 ಮನೆಗಳು ಸಂಪೂರ್ಣ ಕುಸಿದಿದ್ದು, 82 ಮನೆಗಳು ಭಾಗಶಃ ಕುಸಿದಿದೆ. 11 ಗ್ರಾಮಗಳು ಭಾಗಶಃ ಮುಳುಗಡೆಯಾಗಿದೆ. ಮನೆ ಕುಸಿತ ಆಗಿರುವ ಎಲ್ಲಾ ಕಡೆಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಜನರನ್ನು ಸ್ಥಳಾಂತರ ಮಾಡಿರೋದ್ರಿಂದ ಯಾವುದೇ ಪ್ರಾಣ ಹಾನಿಯಾಗಿಲ್ಲ. ಸ್ಥಳಾಂತರ ಮಾಡಿರೋ ಎಲ್ಲರಿಗೂ ಜಿಲ್ಲಾಡಳಿತ ಸದ್ಯದ ಮಟ್ಟಿಗೆ ಬದಲಿ ಆಶ್ರಯ ಕಲ್ಪಿಸಿದೆ.

MNG RAIN 2

ಮಂಜೇಶ್ವರ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಾಣಿಯೂರು ಸಮೀಪದ ಮಧ್ಯರಾತ್ರಿ 12 ಗಂಟೆಗೆ ಸುಮಾರಿಗೆ ಉಕ್ಕಿ ಹರಿಯುವ ಹೊಳೆಗೆ ಕಾರೊಂದು ಹಾರಿ ಬಿದ್ದಿದೆ. ಒಟ್ಟಿನಲ್ಲಿ ಜಿಲ್ಲಾದ್ಯಂತ ಮಳೆ ಮುಂದುವರಿದಿದ್ದು, ನದಿಗಳು ತುಂಬಿ ಹರಿಯುತ್ತಿವೆ. ಹೀಗಾಗಿ ನದಿ ಪಾತ್ರದ ಜನರಲ್ಲಿ ಆತಂಕ ಸೃಷ್ಟಿಯಾಗಿದು,್ದ ಕೆಲವೆಡೆ ಈಗಾಗಲೇ ಪ್ರವಾಹದ ನೀರು ನುಗ್ಗಿದೆ. ಇನ್ನೂ ಎರಡು ದಿನಗಳ ಕಾಲ ರೆಡ್ ಅಲರ್ಟ್ ಇದ್ದು ಭಾರೀ ಮಳೆಯಾಗುವ ಸಾಧ್ಯತೆ ಇದೆ.

Live Tv
[brid partner=56869869 player=32851 video=960834 autoplay=true]

TAGGED:dakshina kannadarainuwupiಉಡುಪಿದಕ್ಷಿಣ ಕನ್ನಡಮಳೆ
Share This Article
Facebook Whatsapp Whatsapp Telegram

Cinema Updates

Ramya 2
ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುತ್ತೆ ಎಂದು ನಂಬಿದ್ದೇನೆ: ರಮ್ಯಾ
Cinema Karnataka Latest Main Post
Darshan Vijayalakshmi
ಥಾಯ್ಲೆಂಡ್‌ನಲ್ಲಿ ಮ್ಯಾಂಗೋ ಸ್ಟಿಕ್ಕಿ ರೈಸ್ ಸವಿದ ದರ್ಶನ್ ವಿಜಯಲಕ್ಷ್ಮಿ
Cinema Latest Sandalwood Top Stories
Darshan Pavithra
ದರ್ಶನ್‌-ಪವಿತ್ರಾ ಲಿವ್‌ ಇನ್‌ ರಿಲೇಷನ್‌ ಶಿಪ್‌ನಲ್ಲಿದ್ದರು: ಸರ್ಕಾರ ಪರ ವಕೀಲ
Bengaluru City Cinema Court Latest Main Post National Sandalwood
Darshan Court
ದರ್ಶನ್‌ ಜಾಮೀನು ಭವಿಷ್ಯ | ನಾವು ಹೈಕೋರ್ಟ್ ಮಾಡಿದ ತಪ್ಪು ಮಾಡಲ್ಲ, ತರಾತುರಿಯಲ್ಲಿ ಆದೇಶ ಕೊಡಲ್ಲ – ಸುಪ್ರೀಂ
Bengaluru City Cinema Court Latest Main Post National Sandalwood
Appu Cup League
ಅಪ್ಪು ಕಪ್ ಸೀಸನ್ 3; ಜರ್ಸಿ ಅನಾವರಣ
Bengaluru City Cinema Karnataka Latest Top Stories

You Might Also Like

Chikkamagaluru Suicide
Chikkamagaluru

ಮಗನ ಸಾವಿನಿಂದ ಮನನೊಂದ ತಾಯಿ – ಮೃತದೇಹ ಸಿಗುವ ಮುನ್ನವೇ ಕೆರೆಗೆ ಹಾರಿ ಆತ್ಮಹತ್ಯೆ

Public TV
By Public TV
18 minutes ago
Biklu Shiva
Bengaluru City

ಬಿಕ್ಲು ಶಿವ ಕೊಲೆ ಕೇಸ್‌ – ಮತ್ತೊಂದು ರಹಸ್ಯ ಸ್ಫೋಟ, ಕೊಲೆಯಾದ 15 ನಿಮಿಷಕ್ಕೆ ಎ1 ಜಗ್ಗ ಎಸ್ಕೇಪ್‌

Public TV
By Public TV
47 minutes ago
AI ಚಿತ್ರ
Latest

ಉಡುಪಿಯಲ್ಲಿ ಭಾರೀ ಮಳೆ – ಬೈಂದೂರು ತಾಲೂಕಿನ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ

Public TV
By Public TV
1 hour ago
human bridge punjab
Latest

ರಸ್ತೆ ಕುಸಿದು ಉಕ್ಕಿ ಹರಿದ ನೀರು – ಮಾನವ ಸೇತುವೆ ನಿರ್ಮಿಸಿ 35 ಶಾಲಾ ಮಕ್ಕಳನ್ನು ರಸ್ತೆ ದಾಟಿಸಿದ ಗ್ರಾಮಸ್ಥರು

Public TV
By Public TV
1 hour ago
Amit Shah 1
Latest

ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ 6 ತಿಂಗಳು ವಿಸ್ತರಣೆ – ಸದನದಲ್ಲಿ ಅನುಮೋದನೆ

Public TV
By Public TV
2 hours ago
Digital Arrest 2
Crime

Digital Arrest | ಸಿಬಿಐ ಅಧಿಕಾರಿ ಸೋಗಿನಲ್ಲಿ ಕರೆ – ಬ್ಯಾಂಕ್‌ ಅಧಿಕಾರಿಗೆ 56 ಲಕ್ಷಕ್ಕೂ ಅಧಿಕ ಹಣ ವಂಚನೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?