ಭಾರೀ ಮಳೆಗೆ ಕುಸಿದ ಮನೆಯ ಮೇಲ್ಛಾವಣಿ- 4 ಎತ್ತು, 1 ಆಕಳು ಸಾವು

Public TV
1 Min Read
HBL OX 4

ಹುಬ್ಬಳ್ಳಿ: ಭಾರೀ ಮಳೆಗೆ ಮನೆಯ ಮೇಲ್ಛಾವಣಿ ಮತ್ತು ಗೋಡೆ ಕುಸಿದು ಜಾನುವಾರಗಳು ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ಗಣೇಶ ಪೇಟೆಯ ಬಡಾವಣೆಯಲ್ಲಿ ನಡೆದಿದೆ.

ನಗರದ ಗಣೇಶ ಪೇಟೆ ಶೆಟ್ಟರ್ ಓಣಿಯಲ್ಲಿ ಮಲ್ಲಿಕಾರ್ಜುನ್ ಕೊರವಿ ಅವರ ಶಿಥಿಲಾವಸ್ಥೆಯಲ್ಲಿದ್ದ, ಮನೆಯ ಮೇಲ್ಛಾವಣಿ ಮತ್ತು ಗೋಡೆ ಕುಸಿದಿದೆ. ಈ ಪರಿಣಾಮ ನಾಲ್ಕು ಎತ್ತು ಮತ್ತು ಒಂದು ಆಕಳು ಸಾವನ್ನಪ್ಪಿವೆ.

HBL OX 3

ಎತ್ತುಗಳನ್ನು ಕಳೆದುಕೊಂಡಿದ್ದರಿಂದ ಮನೆಯವರ ಆಕ್ರಂದನ ಮುಗಿಲು ಮುಟ್ಟಿದೆ. ಈ ವೇಳೆ ಮಲ್ಲಿಕಾರ್ಜುನ್ ಅವರ ಮಗಳು ವನಜಾ ಅಸ್ವಸ್ಥಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಆಗಮಿಸಿದ ಉಪನಗರ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಜೆಸಿಬಿ ಯಂತ್ರ ಬಳಸಿ ಎತ್ತುಗಳನ್ನು ಹೊರ ತೆಗೆಯಲು ಗ್ರಾಮಸ್ಥರ ಸಹಾಯದಿಂದ ಪೊಲೀಸ್ ಸಿಬ್ಬಂದಿ ಹೊರ ತೆಗೆದಿದ್ದಾರೆ.

HBL OX 2

HBL OX 1

Share This Article
Leave a Comment

Leave a Reply

Your email address will not be published. Required fields are marked *