ಗಾಳಿ ಸಹಿತ ಭಾರೀ ಮಳೆ- ಧರೆಗುರುಳಿತು ಕೊಡಗಿನ ಡಿಸಿ ಮನೆ ಮುಂದಿದ್ದ ಮರಗಳು!

Public TV
1 Min Read
KODAGU DC HOME

ಮಡಿಕೇರಿ: ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ಮುಂಗಾರು ಮಳೆ ಭಾರೀ ಪ್ರಮಾಣದಲ್ಲಿ ಸುರಿಯುತ್ತಿದ್ದು, ಮಳೆಯ ಅವಾಂತರದ ಬಿಸಿ ಜಿಲ್ಲಾಧಿಕಾರಿ ಶ್ರೀವಿದ್ಯಾ ಅವರ ಬಂಗಲೆಗೂ ತಟ್ಟಿದೆ.

ಶನಿವಾರ ಗಾಳಿ ಸಹಿತ ಸುರಿದ ಭಾರೀ ಮಳೆಯಿಂದಾಗಿ ಡಿಸಿ ಬಂಗಲೆಯ ಮುಂದಿದ್ದ ನಾಲ್ಕು ಮರಗಳು ಉರುಳಿ ಬಿದ್ದಿವೆ. ಡಿಸಿ ಮನೆಯ ಕಾವಲು ಸಿಬ್ಬಂದಿಯ ಮನೆ ಸಂಪೂರ್ಣ ಜಖಂಗೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.

MDK RAIN AV 19

ಮಾಹಿತಿ ದೊರೆತ ಬಳಿಕ ಇಂದು ಬೆಳಗ್ಗೆ ಅಗ್ನಿಶಾಮಕ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು, ಮರ ತೆರವು ಕಾರ್ಯಾಚರಣೆಗೆ ಮುಂದಾಗಿದ್ದಾರೆ. ಜಿಲ್ಲೆಯಲ್ಲಿ ಮಾತ್ರವಲ್ಲದೇ ರಾಜ್ಯಾದ್ಯಂತ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಸಾಕಷ್ಟು ಹಾನಿ ಸಂಭವಿಸಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು.

Share This Article
Leave a Comment

Leave a Reply

Your email address will not be published. Required fields are marked *