Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 4 ವರ್ಷದ ಬಳಿಕ ಪಾಲಾರ್‌ ಜಲಾಶಯ ಭರ್ತಿ- ಬರದ ನಾಡು ಕೋಲಾರದಲ್ಲಿ ಭಾರೀ ಮಳೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | 4 ವರ್ಷದ ಬಳಿಕ ಪಾಲಾರ್‌ ಜಲಾಶಯ ಭರ್ತಿ- ಬರದ ನಾಡು ಕೋಲಾರದಲ್ಲಿ ಭಾರೀ ಮಳೆ

Districts

4 ವರ್ಷದ ಬಳಿಕ ಪಾಲಾರ್‌ ಜಲಾಶಯ ಭರ್ತಿ- ಬರದ ನಾಡು ಕೋಲಾರದಲ್ಲಿ ಭಾರೀ ಮಳೆ

Public TV
Last updated: October 15, 2021 9:00 pm
Public TV
Share
2 Min Read
kolara rain 2
SHARE

ಕೋಲಾರ: ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ಸುರಿದ ಜೋರು ಮಳೆಯಿಂದಾಗಿ ರಸ್ತೆಗಳು ಸೇರಿದಂತೆ ರೈತರು ಬೆಳೆದ ನೂರಾರು ಎಕರೆ ಬೆಳೆಗಳು ಸಂಪೂರ್ಣ ಜಲಾವೃತವಾಗಿದೆ. ತಗ್ಗು ಪ್ರದೇಶದಲ್ಲಿರುವ ಗ್ರಾಮಗಳನ್ನ ಆವರಿಸಿರುವ ಮಳೆ ನೀರು ಮನೆಗಳಿಗೆ ನುಗ್ಗಿ ಸಾಕಷ್ಟು ಅವಾಂತರ ಸೃಷ್ಟಿಸಿದೆ.

ಉತ್ತಮ ಮಳೆಯಾದ ಹಿನ್ನೆಲೆ ಜಿಲ್ಲೆಯ ಬಹುತೇಕ ಕೆರೆಗಳು ತುಂಬಿ ಹರಿದಿವೆ. ಅದರಲ್ಲೂ ಜಿಲ್ಲೆಯ ದೊಡ್ಡ ಕೆರೆಗಳಾದ ಅಗ್ರಹಾರ, ಮುದುವಾಡಿ, ಪಾಲಾರ್ ಕೆರೆಗಳು ತುಂಬಿ ಹರಿಯುತ್ತಿವೆ.

kolara rain 1

ಪಾಲಾರ್ ನದಿಗೆ ಅಡ್ಡಲಾಗಿ ಕಟ್ಟಿರುವ ಬೇತಮಂಗಲದ ಪಾಲಾರ್ ಜಲಾಶಯ ಕೆರೆ ಕೂಡ ತುಂಬಿ ಕೋಡಿ ಹರಿದಿದೆ. ಮತ್ತೊಂದೆಡೆ ಜಲಾಶಯಕ್ಕೆ ಅಡ್ಡಲಾಗಿ ಅಡ್ಡಲಾಗಿ ಕಟ್ಟಿರುವ ಸೇತುವೆಯ ಬಾಗಿಲುಗಳು ಹಾಗೂ ಕೆರೆ ಕಟ್ಟೆಯ ಭಾಗ ಬಿರುಕು ಬಿಟ್ಟಿರುವುದು ಸ್ಥಳೀಯರಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ. ಕೆರೆ ಕಟ್ಟೆಯಲ್ಲಿ ಬಿರುಕಾಗಿ ಸಾಕಷ್ಟು ನೀರು ಪೋಲಾಗುತ್ತಿದೆ.ಇದರ ಜೊತೆಗೆ ಸರಿಯಾದ ನಿರ್ವಹಣೆ ಇಲ್ಲದೆ ಕ್ರಸ್ಟ್ ಗೇಟ್‌ಗಳ ಮೂಲಕವೂ ನೀರು ಸಾಕಷ್ಟು ಸೋರಿಕೆಯಾಗುತ್ತಿದೆ.

kolara rain 3

ಕಳೆದ ರಾತ್ರಿ ಕೂಡ ಶ್ರೀನಿವಾಸಪುರ ತಾಲೂಕಿನಲ್ಲಿ ಉತ್ತಮ ಮಳೆಯಾಗಿದ್ದು, ಚಲ್ದಿಗಾನಹಳ್ಳಿ ಗ್ರಾಮದ ಲಕ್ಷೀ ದೇವಮ್ಮ, ಶ್ರೀನಿವಾಸ್, ವೆಂಕಟಸ್ವಾಮಿ ಎಂಬುವವರ ಮನೆಗಳಿಗೆ ನೀರು ನುಗ್ಗಿತ್ತು. ಗ್ರಾಮಸ್ಥರಲ್ಲಿ ಆತಂಕ ಎದುರಾಗಿದ್ದು ಸ್ಥಳಕ್ಕೆ ಆಗಮಿಸಿ ತಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದರ ಜೊತೆಗೆ ಬೆಳೆ ನಾಶಕ್ಕೆ ಪರಿಹಾರ ನೀಡುವಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ದುರ್ಗಾದೇವಿ ಮೆರವಣಿಗೆ ವೇಳೆ ಹರಿದ ಕಾರು 1 ಸಾವು 20 ಜನರಿಗೆ ಗಾಯ

2 ದಿನದ ಹಿಂದೆ ಮುಳಬಾಗಲು, ಕೆಜಿಎಫ್ ತಾಲ್ಲೂಕು ಸೇರಿದಂತೆ ವಿವಿಧೆಡೆ ಬಹುತೇಕ ಕೆರೆಗಳು ಕೋಡಿ ಹೋಗಿದ್ದು, ಕೆಜಿಎಫ್ ತಾಲೂಕಿನ ದಾಸೇನಹಳ್ಳಿ ಮತ್ತು ತಲ್ಲಪಳ್ಲಿ ಗ್ರಾಮದ ಬಳಿ ರೈತರ ತೋಟಗಳಿಗೆ ನೀರು ನುಗ್ಗಿದೆ. ಪರಿಣಾಮ ನೂರಾರು ಎಕರೆ ತೋಟಗಾರಿಕಾ ಬೆಳೆಗಳು ನೀರಿನಲ್ಲಿ ಮುಳುಗಡೆಯಾಗಿವೆ. ಜೊತೆಗೆ ರಾಜಕಾಲುವೆಗಳು ಹಾಗೂ ಸಣ್ಣಪುಟ್ಟ ಕಾಲುವೆಗಳು ತುಂಬಿ ರಸ್ತೆಗಳು ಜಲಾವೃತವಾಗಿದ್ದು, ರೈತರು ಬೆಳೆದ ಟೊಮ್ಯಾಟೊ, ಹೂವು, ತೊಗರಿ ಸೇರಿದಂತೆ ಅನೇಕ ಬೆಳೆಗಳು ನಾಶವಾಗಿದೆ.

kolara rain 4

ಮುಳಬಾಗಲು ತಾಲೂಕಿನ ಮಡಿವಾಳ, ತಾಯಲೂರು, ಕನ್ನಸಂದ್ರ, ಮದ್ದೇರಿ, ಮೇಲಗಾಣಿ ಕೆರೆಗಳು ಕೋಡಿಹರಿದಿದ್ದು, ಹಲವಾರು ವರ್ಷಗಳ ನಂತರ ಕೆರೆಗಳು ಕೋಡಿ ಹರಿಯುತ್ತಿರುವುದಕ್ಕೆ ಸ್ಥಳೀಯರು ಸಂತಸ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ಮಾತನಾಡಿದ ಗ್ರಾಮಸ್ಥ ಸುರೇಶ್, ಮುಳಬಾಗಿಲು ತಾಲೂಕಿನಲ್ಲಿರುವ ಸುಮಾರು 25ಕ್ಕೂ ಹೆಚ್ಚಿನ ಕೆರೆಗಳು ಕೋಡಿ ಹರಿಯುತ್ತಿದ್ದು, ಸರಿಯಾದ ಕಾಲುವೆ, ಅಣೆಕಟ್ಟು ಇಲ್ಲದ ಪರಿಣಾಮ, ಕೆರೆಗಳ ನೀರು ಗ್ರಾಮದತ್ತ ಬರುತ್ತಿವೆ. ಮಳೆಯಿಂದಾಗಿ ಈ ಭಾಗದಲ್ಲಿ ನೂರಾರು ಎಕರೆ ರೈತರ ಜಮೀನು ಜಲಾವೃತವಾಗಿ ರೈತರು ಬೆಳೆದ ಬೆಳೆಗಳು ಸಂಪೂರ್ಣ ನಾಶವಾಗಿದ್ದು, ಬೆಳೆ ಪರಿಹಾರ ನೀಡಬೇಕೆಂದು ಮನವಿ ಮಾಡಿದ್ದಾರೆ. ಜೊತೆಗೆ ಕೆಜಿಎಫ್ ತಾಲೂಕಿನ ಸುವರ್ಣಹಳ್ಳಿ ಗ್ರಾಮದ ಮನೆಗಳು ಹಾಗೂ ಜಮೀನುಗಳಿಗೆ ನೀರು ನುಗ್ಗಿದ ಪರಿಣಾಮ ಲಕ್ಷಾಂತರ ರೂಪಾಯಿ ಬೆಳೆಗಳು ಹಾನಿಯಾಗಿದೆ.

ಒಟ್ಟಿನಲ್ಲಿ ನೀರು ನೀರು ಎನ್ನುತ್ತಿದ್ದ ಬರದ ನಾಡು, ಬಯಲುಸೀಮೆ ಕೋಲಾರ ಜಿಲ್ಲೆಯಲ್ಲಿ ಎಲ್ಲಿ ನೋಡಿದರೂ ನೀರೆ ತುಂಬಿ ತುಳಕುತ್ತಿದೆ. ಕಳೆದ 20 ವರ್ಷಗಳಿಂದ ಇಲ್ಲದ ಮಳೆ ಈ ಬಾರಿ ಕೋಲಾರ ಜಿಲ್ಲೆಗೆ ವರದಾನವಾದರೂ ನೂರಾರು ರೈತರು ಬೆಳೆಗಳನ್ನು ಕಳೆದುಕೊಂಡಿದ್ದಾರೆ.

TAGGED:floodkarnatakakolararainಕೋಲಾರಪಾಲಾರ್‌ ಜಲಾಶಯಮಳೆಶ್ರೀನಿವಾಸಪುರ
Share This Article
Facebook Whatsapp Whatsapp Telegram

Cinema news

rashmika vijay dkshivakumar 1
ವಿಜಯ್, ರಶ್ಮಿಕಾ ಆರತಕ್ಷತೆಗೆ ತೆರಳಿ ಶುಭಕೋರಿದ ಡಿಕೆ ಶಿವಕುಮಾರ್
Cinema Latest Top Stories
honey singh 1
ನಾನು ದುಬೈನಲ್ಲಿ ಸೇಫ್ ಆಗಿದ್ದೇನೆ: ವದಂತಿಗಳಿಗೆ ಕಿವಿಗೊಡಬೇಡಿ ಎಂದ ಹನಿ ಸಿಂಗ್
Cinema Latest National Top Stories
Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood
mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories

You Might Also Like

indian navy
Latest

ಇರಾನ್‌ ಮೇಲಿನ ದಾಳಿಗೆ ಅಮೆರಿಕವು ಭಾರತೀಯ ನೌಕಾನೆಲೆ ಬಳಸುತ್ತಿದೆ ಅನ್ನೋದು ಶುದ್ಧ ಸುಳ್ಳು – ಎಂಇಎ

Public TV
By Public TV
22 minutes ago
G PARAMESHWAR
Bengaluru City

ನೇಮಕಾತಿಯಲ್ಲಿ ಒಳಮೀಸಲಾತಿ ಗೊಂದಲ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆ: ಪರಮೇಶ್ವರ್

Public TV
By Public TV
34 minutes ago
doomsday
Latest

ಯುದ್ಧದ ನಡುವೆ ವಿನಾಶಕಾರಿ ʻಡೂಮ್ಸ್‌ಡೇʼ ಕ್ಷಿಪಣಿ ಪರೀಕ್ಷಿಸಿದ ಅಮೆರಿಕ – 3ನೇ ಮಹಾಯುದ್ಧ ಫಿಕ್ಸಾ?

Public TV
By Public TV
51 minutes ago
Gadag Tata Ace Accident
Crime

ಕಾಮಣ್ಣನ ಉತ್ಸವ ಮುಗಿಸಿ ಬರುವಾಗ ಮರಕ್ಕೆ ಟಾಟಾ ಏಸ್ ಡಿಕ್ಕಿ – ಇಬ್ಬರು ಸ್ಥಳದಲ್ಲೇ ಸಾವು

Public TV
By Public TV
1 hour ago
Bidar 3
Bidar

ಮೌಲ್ವಿಗಳ ಮೇಲೆ ಕೇಸ್‌ – ಠಾಣೆ ಮುಂದೆ ಹೈಡ್ರಾಮಾ; FIR ದಾಖಲಾದ 49 ಜನರ ಪೈಕಿ 20 ಮಂದಿ ಅರೆಸ್ಟ್‌

Public TV
By Public TV
1 hour ago
Devanahalli Businessman Robbed 20 lakhs by showing gold desire at low price
Bengaluru City

ಕಡಿಮೆ ಬೆಲೆಗೆ ಚಿನ್ನದ ಆಸೆ ತೋರಿಸಿ ಉದ್ಯಮಿಯಿಂದ 20 ಲಕ್ಷ ದರೋಡೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?