ಚಿಕ್ಕಮಗಳೂರು: ಕಾಫಿನಾಡಿನ ಮಲೆನಾಡು ಭಾಗದಲ್ಲಿ ಕೆಲವು ದಿನಗಳಿಂದ ವರುಣ ದೇವ ಅಬ್ಬರಿಸಿ ಬೊಬ್ಬಿರಿದಿದ್ದಾನೆ. ಪರಿಣಾಮ ಐತಿಹಾಸಿಕ ಹಿರೇಕೊಳಲೆ ಕೆರೆಯಲ್ಲಿ ಕೋಡಿ ಬಿದ್ದಿದೆ.
ಗಿರಿ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಚಿಕ್ಕಮಗಳೂರು ತಾಲೂಕಿನ ಹಿರೇಕೊಳಲೆ ಕೆರೆಯಲ್ಲಿ ನಾಲ್ಕು ವರ್ಷಗಳ ಬಳಿಕ ಕೋಡಿ ಬಿದ್ದಿದೆ. ಇದರಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.
ಚಿಕ್ಕಮಗಳೂರು ನಗರಕ್ಕೆ ಕುಡಿಯುವ ನೀರನ್ನ ಪೂರೈಸುವ ಕೆರೆಯಾಗಿದ್ದು ಈ ಕೆರೆಯಲ್ಲಿ ಅನೇಕ ಸಿನಿಮಾಗಳನ್ನೂ ಚಿತ್ರಿಸಲಾಗಿದೆ.
ಏಪ್ರಿಲ್ ನಲ್ಲಿ ಹಿರೇಕೊಳಲೆ ಕೆರೆಯಲ್ಲಿ ಸಂಗ್ರಹಗೊಂಡಿದ್ದ ನೀರು
ನಾಲ್ಕು ವರ್ಷಗಳ ಬಳಿಕ ಕೋಡಿ ಬಿದ್ದಿರುವುದರಿಂದ ಪ್ರವಾಸಿಗರು ಅಧಿಕ ಸಂಖ್ಯೆಯಲ್ಲಿ ಇಲ್ಲಿಗೆ ಭೇಟಿ ಕೊಡುತ್ತಿದ್ದಾರೆ. ಈ ಕೆರೆ ಚಿಕ್ಕಮಗಳೂರಿನಿಂದ ಎಂಟು ಕಿ.ಮೀ.ದೂರದಲ್ಲಿ. ಅಷ್ಟೇ ಅಲ್ಲದೇ ಭಾರೀ ಮಳೆಯಿಂದ ಕಾಫಿನಾಡಿನ ಪಂಚನದಿಗಳು ಮೈದುಂಬಿ ಹರಿಯುತ್ತಿವೆ.
ಈಗ ಹಿರೇಕೊಳಲೆ ಕೆರೆಯಲ್ಲಿ ಸಂಗ್ರಹಗೊಂಡಿರುವ ನೀರು
ತುಂಗಾ-ಭದ್ರಾ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದರೆ, ಶೃಂಗೇರಿಯ ಘಟ್ಟ ಪ್ರದೇಶದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೆರೆ ಹಾವಳಿ ಭೀತಿ ಎದುರಾಗಿದೆ. ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಮುಂಜಾಗೃತ ಕ್ರಮವಾಗಿ ಮಲೆನಾಡು ಭಾಗದ ನಾಲ್ಕು ತಾಲೂಕುಗಳಾದ ಎನ್.ಆರ್.ಪುರ, ಮೂಡಿಗೆರೆ, ಶೃಂಗೇರಿ ಹಾಗೂ ಕೊಪ್ಪ ತಾಲೂಕಿನ ಶಾಲಾ-ಕಾಲೇಜಿಗೆ ರಜೆ ಘೋಷಿಸಲಾಗಿದೆ.