Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗಾಳಿ ಮಳೆ ಅಬ್ಬರಕ್ಕೆ ಮನೆ ಮೇಲೆ ಉರುಳಿದ ಬೃಹತ್ ಮರ – ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕದಿಂದ ತೆರವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಗಾಳಿ ಮಳೆ ಅಬ್ಬರಕ್ಕೆ ಮನೆ ಮೇಲೆ ಉರುಳಿದ ಬೃಹತ್ ಮರ – ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕದಿಂದ ತೆರವು

Chikkamagaluru

ಗಾಳಿ ಮಳೆ ಅಬ್ಬರಕ್ಕೆ ಮನೆ ಮೇಲೆ ಉರುಳಿದ ಬೃಹತ್ ಮರ – ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕದಿಂದ ತೆರವು

Public TV
Last updated: July 26, 2025 7:03 pm
Public TV
Share
4 Min Read
CHIKKAMAGALURU RAIN
SHARE

– ರಾಜ್ಯದ ಹಲವೆಡೆ ಮಳೆ ಅವಾಂತರ – ಎಲ್ಲೆಲ್ಲಿ ಏನು?

ಚಿಕ್ಕಮಗಳೂರು: ಗಾಳಿ-ಮಳೆ ಅಬ್ಬರಕ್ಕೆ ಬೃಹತ್ ಮರ ಮನೆ ಮೇಲೆ ಉರುಳಿ, ಸಂಪೂರ್ಣ ಜಖಂಗೊಂಡಿರುವುದು ಚಿಕ್ಕಮಗಳೂರು ತಾಲೂಕಿನ ಕಡಬಗೆರೆ ಗ್ರಾಮದಲ್ಲಿ ನಡೆದಿದೆ.

ಮೋಣಕ್ಕ ಎಂಬುವರ ಮನೆಯ ಮೇಲೆ ಮರ ಉರುಳಿ ಬಿದ್ದಿದ್ದು, ಮನೆಯ ಅರ್ಧ ಭಾಗ ಜಖಂಗೊಂಡಿದೆ. ಮನೆಯಲ್ಲಿದ್ದವರು ಬೇರೆ ರೂಂನಲ್ಲಿ ಇದ್ದಿದ್ದರಿಂದ ಭಾರೀ ಅನಾಹುತ ತಪ್ಪಿದೆ. ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕದ ಸಿಬ್ಬಂದಿ ಮನೆ ಮೇಲೆ ಬಿದ್ದ ಮರವನ್ನು ತೆರವುಗೊಳಿಸಿದ್ದಾರೆ. ಸ್ಥಳಕ್ಕೆ ಗ್ರಾಮ ಪಂಚಾಯಿತಿ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

CHIKKAMAGALURU RAIN 1

ತುಂಬಿ ಹರಿಯುತ್ತಿರುವ ತುಂಗಾ
ಕಳೆದ 2-3 ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಮಲೆನಾಡು ಜನರು ಹೈರಾಣಾಗಿದ್ದಾರೆ. ಶೃಂಗೇರಿ ತಾಲೂಕಿನ ಕೆರೆಕಟ್ಟೆ ಭಾಗದಲ್ಲಿ ಭಾರೀ ಮಳೆ ಆಗುತ್ತಿದೆ. ಪರಿಣಾಮ ತುಂಗಾ ನದಿಗೆ ಅಪಾರ ಪ್ರಮಾಣ ನೀರು ಹರಿದು ಬರುತ್ತಿದೆ.ಶೃಂಗೇರಿಯಲ್ಲಿ ಪಾರ್ಕಿಂಗ್ ಸ್ಥಳ ಜಲಾವೃತಗೊಂಡಿದೆ.

ಶೃಂಗೇರಿ ಗಾಂಧಿ ಮೈದಾನದ ಪಾರ್ಕಿಂಗ್ ಲಾಟ್ ಸಹ ಜಲಾವೃತವಾಗಿದೆ. ಕಟ್ಟಡಗಳ ಅಂಡರ್‍ಗ್ರೌಂಡ್‍ಗೂ ನೀರು ನುಗ್ಗಿದೆ. ಶಾರದಾಂಬೆ ದೇಗುಲದ ವಾಹನಗಳ ಪಾರ್ಕಿಂಗ್ ಜಾಗಕ್ಕೂ ಜಲದಿಗ್ಬಂಧನವಾಗಿದೆ. ರಸ್ತೆಯಲ್ಲಿ ಒಂದೂವರೆ-ಎರಡು ಅಡಿ ಎತ್ತರಕ್ಕೆ ನೀರು ಹರಿಯುತ್ತಿದೆ. ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ.

ಇನ್ನು ಚಿಕ್ಕಮಗಳೂರು ನಗರದ ಎಂಜಿ ರಸ್ತೆಯ ಹಾರ್ಡ್‍ವೇರ್ ಶಾಪ್‍ಗಳಿಗೆ ನೀರು ನುಗ್ಗಿದೆ. ಹಾರ್ಡ್‍ವೇರ್ ಶಾಪ್ ಒಳಗೆ ನದಿಯಂತೆ ನೀರು ನುಗ್ಗಿದೆ. ಅಂಗಡಿ ಕೆಳಮಹಡಿಯಲ್ಲಿರುವ ಕಾರಣ ನೀರು ಏಕಾಎಕಿ ಒಳಹೊಕ್ಕಿದೆ. ಅಂಗಡಿಯಲ್ಲಿದ್ದ ಬಹುತೇಕ ಎಲ್ಲಾ ವಸ್ತುಗಳು ನೀರಿನಲ್ಲಿ ಮುಳುಗಿವೆ.

CHIKKODI DAM

ಚಿಕ್ಕೋಡಿ – ದೂದ್ ಗಂಗಾ ನದಿ ತೀರದ ಜನರಿಗೆ ಎಚ್ಚರಿಕೆ
ಇನ್ನು ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಗಳಲ್ಲಿ ಭಾರಿ ಮಳೆ ಸುರಿಯುತ್ತಿರುವ ಪರಿಣಾಮ ಮಹಾರಾಷ್ಟ್ರದ ಜಲಾಶಯಗಳು ಭರ್ತಿ ಹಂತ ತಲುಪಿವೆ. ಕೊಲ್ಲಾಪುರ ಜಿಲ್ಲೆಯ ರಾಧಾನಗರ ಜಲಾಶಯ ಸಂಪೂರ್ಣ ಭರ್ತಿ ಆಗಿದೆ. ಈ ಹಿನ್ನೆಲೆ ದೂದಗಂಗಾ ನದಿ ಮೂಲಕ ಕೃಷ್ಣಾ ನದಿಗೆ 10 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. 8.5 ಟಿಎಂಸಿ ಸಾಮಥ್ರ್ಯದ ರಾಧಾನಗರಿ ಜಲಾಶಯದಿಂದ 4 ಗೇಟಗಳ ಮೂಲಕ 10 ಸಾವಿರ ಕ್ಯೂಸೆಕ್ ನೀರು ದೂದ್ ಗಂಗಾ ನದಿಗೆ ಬಿಡುಗಡೆ ಮಾಡಲಾಗಿದೆ. ಹೆಚ್ಚಿನ ನೀರು ಬಿಡುಗಡೆ ಹಿನ್ನೆಲೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಹಾಗೂ ಚಿಕ್ಕೋಡಿ ತಾಲೂಕಿನ ದೂದ್ ಗಂಗಾ ನದಿ ತೀರದ ಜನರಿಗೆ ಎಚ್ಚರಿಕೆಯಿಂದಿರುವಂತೆ ಸೂಚಿಸಲಾಗಿದೆ.

ಮುಲ್ಲಾಮಾರಿ ಜಲಾಶಯದಿಂದ 1,200 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಇದರಿಂದ ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಹಲಕೋಡ ಗ್ರಾಮದ ಬಳಿ ಕಾಗಿಣಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಕರ್ನಾಟಕ-ತೆಲಂಗಾಣ ಕೊನೆ ಗ್ರಾಮವಾಗಿರೋ ಹಲಕೋಡ ಗ್ರಾಮದಲ್ಲಿ ನಿರಂತರ ಮಳೆಗೆ ಕಾಗಿಣಾ ನದಿ ಮೈದುಂಬಿದೆ. ಮುಲ್ಲಾಮಾರಿ ಡ್ಯಾಂ ಭರ್ತಿಯಾಗಿದ್ದರಿಂದ ನದಿಗೆ ನೀರು ಬಿಡಲಾಗ್ತಿದೆ.

ಕಲಬುರಗಿ – ಕೊಚ್ಚಿ ಹೋದ ಜಾನುವಾರು 
ಇನ್ನು ಕಲಬುರಗಿಯ ಕಮಲಾಪುರ ತಾಲೂಕಿನ ಕುದಮೂಡ್ ಗ್ರಾಮದಲ್ಲಿ ಹಳ್ಳದ ನೀರಿನಲ್ಲಿ ಜಾನುವಾರುಗಳು ಕೊಚ್ಚಿಕೊಂಡು ಹೋಗಿವೆ. ರೈತರು ಹೊಲಕ್ಕೆ ಹೋಗುವಾಗ ಈ ದುರಂತ ಸಂಭವಿಸಿದೆ. ನೀರಿನ ರಭಸಕ್ಕೆ ರೈತರ ಎದುರಲ್ಲೇ ಜಾನುವಾರುಗಳು ಕೊಚ್ಚಿ ಹೋಗಿದೆ.

KARWAR LANDSLIDE

ಉತ್ತರ ಕನ್ನಡ – ದೇವಿಮನೆ ಘಟ್ಟದ ಬಳಿ ಮತ್ತೆ ಭೂಕುಸಿತ
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಗೆ ಮತ್ತೆ ಭೂ ಕುಸಿತವಾಗಿದೆ. ಕುಮಟಾ ತಾಲೂಕಿನ ದೇವಿಮನೆ ಘಟ್ಟದ ಕ್ಷೇತ್ರ ಪಾಲೇಶ್ವರ ದೇವಸ್ಥಾನದ ಬಳಿ ರಸ್ತೆಯ ಅಂಚಿನವರೆಗೂ ದೊಡ್ಡ ಪ್ರಮಾಣದಲ್ಲಿ ಭೂಕುಸಿತ ಸಂಭವಿಸಿದೆ. ಕಳೆದ 3 ದಿನದ ಹಿಂದೆ ಈ ಭಾಗದಲ್ಲಿ ನಿರಂತರ ಭೂ ಕುಸಿತವಾಗುತ್ತಿರುವ ಬಗ್ಗೆ `ಪಬ್ಲಿಕ್ ಟಿವಿ’ ವರದಿ ಬಿತ್ತರಿಸಿತ್ತು. ಡಿಸೆಂಬರ್ 2024ರಲ್ಲಿ ಇದೇ ಭಾಗದಲ್ಲಿ 3 ಸೆಕೆಂಡ್‍ನಷ್ಟು ಭೂಮಿ ಕಂಪಿಸಿತ್ತು. ಜಿಯಾಲಜಿಕಲ್ ಸರ್ವೆ ಆಫ್ ಇಂಡಿಯಾದ ಭೂ ವಿಜ್ಞಾನಿಗಳು ಸಹ ಸ್ಥಳ ಪರಿಶೀಲನೆ ನಡೆಸಿ ಮಣ್ಣಿನ ಪದರ ಸಡಿಲವಾಗಿರುವ ಕುರಿತು ಮಾಹಿತಿ ನೀಡಿದ್ದರು. ಇದೀಗ ಮತ್ತೆ ಇದೇ ಭಾಗದಲ್ಲಿ ಭೂ ಕುಸಿತವಾಗಿದೆ.

KODAGU RAIN

ಕೊಡಗು – ಮನೆ ಕುಸಿದು ಮಹಿಳೆ ಸಾವು
ಮಳೆಗೆ ಕೊಡಗು ಜಿಲ್ಲೆಯಲ್ಲಿ ಮನೆ ಕುಸಿದು ಮಹಿಳೆಯೋರ್ವರು ಸಾವನ್ನಪ್ಪಿದ್ದಾರೆ. ಸೋಮವಾರಪೇಟೆ ತಾಲ್ಲೂಕಿನ ಹಾನಗಲ್ ಗ್ರಾಮದಲ್ಲಿ ಬೆಳಿಗ್ಗೆ 5:30ರ ಸುಮಾರಿಗೆ ದುರಂತ ಸಂಭವಿಸಿದೆ. ಮಳೆ ಗಾಳಿಗೆ ಮನೆಯೊಂದು ಕುಸಿದು ಬಿದ್ದು ಸುಷ್ಮಾ ಎಂಬುವರು ಮೃತಪಟ್ಟಿದ್ದಾರೆ. ಮೂವರು ಮಕ್ಕಳು ಮತ್ತು ಆಕೆಯ ಸಹೋದರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಾವೇರಿಯಲ್ಲಿ  4 ಮನೆ ಕುಸಿತ
ಹಾವೇರಿ ಜಿಲ್ಲೆಯಲ್ಲಿ ಕಳೆದ 15 ದಿನಗಳಿಂದ ನಿರಂತರ ಮಳೆಯಾಗುತ್ತಿದೆ. ಪರಿಣಾಮ ಒಂದೇ ದಿನ 4 ಮನೆಗಳು ಕುಸಿದು ಬಿದ್ದಿವೆ. ಹಾವೇರಿ ತಾಲೂಕಿನ ದೇವಗಿರಿ ಯಲ್ಲಾಪುರ ಗ್ರಾಮದಲ್ಲಿ 3 ಮನೆಗಳು ಕುಸಿದು ಬಿದ್ದಿದೆ. ಗ್ರಾಮದ ಸಂಜನಾ ದಳವಾಯಿ ಕುಟುಂಬ ಸದಸ್ಯರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಜೊತೆಗೆ ಬ್ಯಾಡಗಿ ತಾಲೂಕು ಚಿಕ್ಕಣಜಿ ಗ್ರಾಮದ ಮೃತ್ಯುಂಜಯ ಬನ್ನಿಹಳ್ಳಿ ಎಂಬುವರ ಮನೆ ಗೋಡೆ ಕುಸಿತವಾಗಿದೆ. ಮನೆಯಲ್ಲಿ ಎಲ್ಲ ವಸ್ತುಗಳು ಸಂಪೂರ್ಣ ನಾಶವಾಗಿದೆ

ಮಂಡ್ಯ – ಕೆಆರ್‌ಎಸ್‌ಗೆ ಒಳಹರಿವು ಹೆಚ್ಚಳ
ಇನ್ನು ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮತ್ತೆ ಅಬ್ಬರಿಸುತ್ತಿದೆ. ಹೀಗಾಗಿ ಶ್ರೀರಂಗಪಟ್ಟಣದ ಕೆಆರ್‍ಎಸ್ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಡ್ಯಾಂನ ಒಳಹರಿವು 25,506 ಕ್ಯೂಸೆಕ್‍ಗೆ ಏರಿಕೆ ಆಗಿದೆ. ಜಲಾಶಯದಿಂದ 23,878 ಕ್ಯೂಸೆಕ್ ನೀರು ಹೊರಬಿಡಲಾಗ್ತಿದೆ. ರಾಜ್ಯದಲ್ಲಿ ಮತ್ತೆ ಮಳೆ ಚುರುಕು ಪಡೆದುಕೊಂಡಿದ್ದು, ಹಲವು ಅವಾಂತರಗಳನ್ನು ಸೃಷ್ಟಿಸುತ್ತಿದೆ.

TAGGED:ChikkamagaluruchikkodifloodKodagukrsmandyarain
Share This Article
Facebook Whatsapp Whatsapp Telegram

Cinema news

Suri Anna 2
ಹರೀಶ್ ರಾಯ್ ನಟಿಸಿದ ಕೊನೆ ಚಿತ್ರ ಸೂರಿ ಅಣ್ಣ ಟ್ರೈಲರ್ ಬಿಡುಗಡೆ
Cinema Latest Main Post Sandalwood
Arijith Singh
ಹಿನ್ನೆಲೆ ಗಾಯನಕ್ಕೆ ಗುಡ್ ಬೈ ಹೇಳಿದ ಅರಿಜಿತ್ ಸಿಂಗ್
Bollywood Cinema Latest Main Post
kavya gowda
ನಟಿ ಕಾವ್ಯ ಗೌಡ, ಪತಿ ಮೇಲೆ ಹಲ್ಲೆ ಆರೋಪ; ದೂರು ದಾಖಲು
Cinema Latest Main Post Sandalwood
Raghavendra Chitravani 1
ರಾಘವೇಂದ್ರ ಚಿತ್ರವಾಣಿಗೆ 50ರ ಸಂಭ್ರಮ – ಸಿನಿ ಗಣ್ಯರಿಂದ ಲೋಗೋ ಲಾಂಚ್
Cinema Latest Sandalwood Top Stories

You Might Also Like

Siddaramaiah 5
Bengaluru City

ಮುಡಾ ಹಗರಣದಲ್ಲಿ ಸಿಎಂ ಕಳಂಕ ಮುಕ್ತ; ಲೋಕಾಯುಕ್ತ ಸಲ್ಲಿಸಿದ್ದ ʻಬಿ ರಿಪೋರ್ಟ್‌ʼ ಒಪ್ಪಿದ ಕೋರ್ಟ್‌

Public TV
By Public TV
14 minutes ago
Ajith Pawar and dk shivakumar
Bengaluru City

ಅಜಿತ್ ಪವಾರ್ ಒಳ್ಳೆಯ ಪ್ರೋಗ್ರೆಸಿವ್ ಲೀಡರ್, ಇಂದು ನಮ್ಮಿಂದ ದೂರ ಆಗಿದ್ದಾರೆ – ಡಿಕೆಶಿ ಸಂತಾಪ

Public TV
By Public TV
36 minutes ago
Nepali
Bengaluru City

ಬೆಂಗಳೂರಿನ ಉದ್ಯಮಿ ಮನೆಯಲ್ಲಿ 18 ಕೋಟಿ ಮೌಲ್ಯದ ಚಿನ್ನಾಭರಣ ಲೂಟಿ – ಮನೆಗೆಲಸದವರಿಂದಲೇ ಕಳ್ಳತನ!

Public TV
By Public TV
45 minutes ago
Couple arrested for stealing womens gold
Bengaluru City

ರೋಡ್ ರೋಡಲ್ಲಿ ತಲೆ ಕೂದಲಿಗೆ ಪಿನ್ನು, ಬಳೆ ಅಂತಾ ಮಾರುತ್ತಿದ್ದ ದಂಪತಿಯಿಂದ ಕನ್ನ

Public TV
By Public TV
58 minutes ago
CK Ramamurthy 1
Bengaluru City

ಜಯನಗರ ಶಾಸಕ ಸಿ.ಕೆ ರಾಮಮೂರ್ತಿಗೆ ಸುಪ್ರೀಂ ಕೋರ್ಟ್‌ನಲ್ಲೂ ಹಿನ್ನಡೆ

Public TV
By Public TV
1 hour ago
kalaburagi brothers
Kalaburagi

ಕಲಬುರಗಿ| ಸಾವಿನಲ್ಲೂ ಒಂದಾದ ಸಹೋದರರು; ಅಣ್ಣನ ಅಂತ್ಯಕ್ರಿಯೆ ಮುಗಿದ ಮರುದಿನವೇ ತಮ್ಮ ಸಾವು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?