– ಪರಿಹಾರಕ್ಕೆ ವೃದ್ಧೆ ಮನವಿ
ಚಿಕ್ಕಮಗಳೂರು: ಮುಂದುವರಿದ ಧಾರಾಕಾರ ಮಳೆಯಿಂದಾಗಿ ಮನೆ ಗೋಡೆಗಳು ಕುಸಿದಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಅಂಬಳೆ ಗ್ರಾಮದಲ್ಲಿ ನಡೆದಿದೆ.
ಜಯಮ್ಮ ಎಂಬವರಿಗೆ ಸೇರಿದ ಮನೆಯ ಗೋಡೆ ಸಂಪೂರ್ಣ ಕುಸಿದಿದ್ದು, ಮನೆಯಲ್ಲಿದ್ದ ಗೃಹಪಯೋಗಿ ವಸ್ತುಗಳು ಮಣ್ಣುಪಾಲಾಗಿವೆ. ಇದರಿಂದಾಗಿ ಕಂಗಾಲಾದ ವೃದ್ಧೆ ಜಯಮ್ಮ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಅಷ್ಟೇ ಅಲ್ಲದೇ ಮಲೆನಾಡಲ್ಲಿ ಕೂಡ ಮಳೆ ಆರ್ಭಟ ಮುಂದುವರಿದಿದ್ದು, ಕೊಪ್ಪ ತಾಲೂಕಿನ ಹೇರೂರು, ಮೇಗೂರು ಗ್ರಾಮದಲ್ಲಿ ಮೂರು ಮನೆಗಳ ಗೋಡೆ ಕುಸಿದಿವೆ. ಆ ಮನೆಗಳು ಹೇರೂರು ಗ್ರಾಮದ ಶಂಕರ, ರಾಮು ಹಾಗೂ ಮೇಗೂರಿನ ತಿಮ್ಮೆಗೌಡ ಎಂಬವರಿಗೆ ಸೇರಿವೆ. ಮನೆಯ ಗೋಡೆ ಸಂಪೂರ್ಣ ಕುಸಿದು ಹೋಗಿರೋದ್ರಿಂದ ಮನೆಯವರು ಕಂಗಾಲಾಗಿದ್ದು, ಮನೆಯಲ್ಲಿದ್ದ ಗೃಹಪಯೋಗಿ ವಸ್ತುಗಳು ನಾಶವಾಗಿವೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv