ಹಾಸನ: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಆರಂಭವಾಗಿದ್ದು, ಶಿರಾಡಿಘಾಟ್ (Shiradi Ghat) ರಸ್ತೆ 75ರಲ್ಲಿ ಮತ್ತೆ ಭೂಕುಸಿತ ಉಂಟಾಗಿದೆ.
ಸಕಲೇಶಪುರ (Sakaleshpura) ತಾಲೂಕಿನ ಮಾರನಹಳ್ಳಿ ಸಮೀಪ ಭೂಕುಸಿತದ ಪರಿಣಾಮ ರಸ್ತೆ ಕಾಮಗಾರಿ ಸ್ಥಗಿತಗೊಳಿಸಲಾಗಿದೆ. ಭಾರೀ ಪ್ರಮಾಣದಲ್ಲಿ ಭೂಕುಸಿತ ಉಂಟಾಗುತ್ತಿದ್ದು, ಅಧಿಕಾರಿಗಳು ಇಟಾಚಿ, ಲಾರಿ ಮೂಲಕ ಮಣ್ಣು ತೆರವು ಕಾರ್ಯ ಮಾಡಿದ್ದಾರೆ. ಇದನ್ನೂ ಓದಿ: ಮಂಗಳೂರಲ್ಲಿ ಕಡಲಬ್ಬರ – ನಾಡದೋಣಿ ಮಗುಚಿ ಇಬ್ಬರು ಮೀನುಗಾರರು ನೀರುಪಾಲು
ಮಣ್ಣು ಕುಸಿದ ಕೂಡಲೇ ಇಟಾಚಿ ಮೂಲಕ ಮಣ್ಣು ತೆರವು ಕಾರ್ಯಕ್ಕೆ ಅಧಿಕಾರಿಗಳು ವ್ಯವಸ್ಥೆ ಮಾಡಿದ್ದು, ನಿರಂತರ ಸುರಿಯುತ್ತಿರುವ ಮಳೆಗೆ ಹೆಚ್ಚಿನ ಪ್ರಮಾಣದಲ್ಲಿ ಭೂಮಿ ಕುಸಿಯುವ ಆತಂಕ ಎದುರಾಗಿದೆ. ಇದನ್ನೂ ಓದಿ: ತಪ್ಪು ಮಾಡಿದ್ಮೇಲೆ ಕ್ಷಮೆ ಕೇಳೋದ್ರಲ್ಲಿ ತಪ್ಪೇನಿದೆ- ಕಮಲ್ ಹಾಸನ್ ಹೇಳಿಕೆಗೆ ರಚಿತಾ ರಾಮ್ ಕಿಡಿ