Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಶ್ಚಿಮ ಘಟ್ಟದಲ್ಲಿ ಹೆಚ್ಚಿದ ಮಳೆ ಅಬ್ಬರ – ಕಪಿಲಾ ನದಿ ತುಂಬಿ ಶಿಶಿಲೇಶ್ವರ ದೇವಸ್ಥಾನ ಜಲಾವೃತ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಪಶ್ಚಿಮ ಘಟ್ಟದಲ್ಲಿ ಹೆಚ್ಚಿದ ಮಳೆ ಅಬ್ಬರ – ಕಪಿಲಾ ನದಿ ತುಂಬಿ ಶಿಶಿಲೇಶ್ವರ ದೇವಸ್ಥಾನ ಜಲಾವೃತ

Dakshina Kannada

ಪಶ್ಚಿಮ ಘಟ್ಟದಲ್ಲಿ ಹೆಚ್ಚಿದ ಮಳೆ ಅಬ್ಬರ – ಕಪಿಲಾ ನದಿ ತುಂಬಿ ಶಿಶಿಲೇಶ್ವರ ದೇವಸ್ಥಾನ ಜಲಾವೃತ

Public TV
Last updated: June 25, 2025 10:06 pm
Public TV
Share
4 Min Read
Mangaluru Shishileshwara Temple
SHARE

– ತುಂಬಿ ಹರಿಯುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯ ನದಿಗಳು

ಮಂಗಳೂರು: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದ್ದರೂ ಪಶ್ಚಿಮ ಘಟ್ಟದಲ್ಲಿ (Western Ghats) ಭಾರೀ ಮಳೆಯಾಗಿದೆ. ಘಟ್ಟ ಪ್ರದೇಶದಿಂದ ಹರಿದು ಬಂದ ಭಾರೀ ಮಳೆ ನೀರಿನಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಪ್ರದೇಶದ ನದಿಗಳೆಲ್ಲಾ ತುಂಬಿ ಹರಿಯುತ್ತಿದೆ. ಬೆಳ್ತಂಗಡಿ ಸಮೀಪದ ಕಪಿಲಾ ನದಿ ತುಂಬಿ ಹರಿದಿದ್ದು, ಮತ್ಸ್ಯಕ್ಷೇತ್ರ ಶಿಶಿಲದ ಶಿಶಿಲೇಶ್ವರ ದೇವಸ್ಥಾನ ಜಲಾವೃತವಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಸ್ವಲ್ಪಮಟ್ಟಿಗೆ ಕಡಿಮೆಯಾಗಿದ್ದು ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗಿದೆ. ಪಶ್ಚಿಮ ಘಟ್ಟ ಭಾಗದಲ್ಲಿ ಸುರಿದ ಭಾರೀ ಮಳೆಯ ಪರಿಣಾಮ ಬೆಳ್ತಂಗಡಿಯ ಕಪಿಲಾ ನದಿಯಲ್ಲಿ ಭಾರೀ ನೀರಿನ ಹರಿವು ಹೆಚ್ಚಾಗಿದೆ. ಬೆಳ್ತಂಗಡಿಯ ಶಿಶಿಲದ ಕಪಿಲಾ ನದಿ ತಟದಲ್ಲಿರುವ ಮತ್ಸ್ಯಕ್ಷೇತ್ರ ಎಂದೇ ಪ್ರಸಿದ್ಧಿಯಾಗಿರುವ ಶಿಶಿಲೇಶ್ವರ ದೇವಸ್ಥಾನ (Shishileshwara Temple) ಜಲಾವೃತಗೊಂಡಿದೆ. ಭಾರೀ ನೀರಿನ ಹರಿವು ಹಿನ್ನೆಲೆ ದೇವಸ್ಥಾನ ಸಂಪರ್ಕದ ಸೇತುವೆ ಮುಳುಗಡೆಯಾಗಿದೆ. ಧುಮ್ಮಿಕ್ಕಿ ಹರಿಯುವ ನದಿಯ ನೀರಿನೊಂದಿಗೆ ಮರದ ದಿಮ್ಮಿಗಳೂ ತೇಲಿ ಬರುತ್ತಿದೆ. ದೇವಸ್ಥಾನದ ಸುತ್ತಲೂ ನೀರು ತುಂಬಿದ್ದು, ಮತ್ತಷ್ಟು ಮಳೆಯಾದರೆ ದೇವಸ್ಥಾನ ಸಂಪೂರ್ಣ ಜಲಾವೃತವಾಗುವ ಭೀತಿ ಎದುರಾಗಿದೆ. ಇದನ್ನೂ ಓದಿ: ವಿದ್ಯಾರ್ಥಿ ಸೋಗಿನಲ್ಲಿ ಐಐಟಿ ಬಾಂಬೆ ಕ್ಯಾಂಪಸ್‌ಗೆ ಅಕ್ರಮ ಪ್ರವೇಶ – ಮಂಗಳೂರು ಯುವಕ ಅರೆಸ್ಟ್‌

Kapila River 2

ಕಪಿಲಾ ನದಿ ಭೋರ್ಗರೆಯುತ್ತಾ ಹರಿಯುತ್ತಿದ್ದು, ದೇವಸ್ಥಾನದ ಸುತ್ತಲೂ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ನದಿಯ ನೀರು ರಭಸದಿಂದ ದೇವಸ್ಥಾನದ ಒಳಭಾಗಕ್ಕೂ ಹರಿದು ಬರುತ್ತಿದೆ. ಇದೇ ರೀತಿ ಪಶ್ಚಿಮ ಘಟ್ಟದಲ್ಲಿ ಮಳೆ ಪ್ರಮಾಣ ಹೆಚ್ಚಾದರೆ ಮತ್ತಷ್ಟು ನೀರು ನುಗ್ಗಿ ಬರುವ ಸಾಧ್ಯತೆ ಇದೆ. ಇದನ್ನೂ ಓದಿ: ಯುಪಿನಲ್ಲಿ ಅಂತಾರಾಷ್ಟ್ರೀಯ ಆಲೂಗಡ್ಡೆ ಪ್ರಾದೇಶಿಕ ಕೇಂದ್ರ ಸ್ಥಾಪಿಸಲು ಮೋದಿ ಅಧ್ಯಕ್ಷತೆಯ ಸಂಪುಟ ಅಸ್ತು!

ಮಂಗಳೂರು ನಗರದಲ್ಲಿ ಮಳೆ ಕಡಿಮೆಯಾಗಿದ್ದರೂ, ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗದ ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕು ಸೇರಿದಂತೆ ಹಲವೆಡೆ ಭಾರೀ ಮಳೆಯಾಗುತ್ತಿದೆ. ಹಲವೆಡೆ ಗುಡ್ಡಕುಸಿತಗಳು ಸೇರಿದಂತೆ ಅವಾಂತರಗಳು ಸೃಷ್ಟಿಯಾಗಿದೆ. ಒಟ್ಟಿನಲ್ಲಿ ಮತ್ತೆ ಮಳೆಯಾಗುವ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದ್ದು, ನದಿ ಪಾತ್ರದ ಜನ ಸೇರಿದಂತೆ ಜಿಲ್ಲೆಯ ಜನ ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚಿಸಿದೆ. ಇದನ್ನೂ ಓದಿ: ಲೋಕಸಭಾಧ್ಯಕ್ಷ ಓಂ ಬಿರ್ಲಾರನ್ನು ಭೇಟಿ ಮಾಡಿದ ಯು.ಟಿ.ಖಾದರ್

Hassan Rain

ಹಾಸನ ಜಿಲ್ಲೆಯಲ್ಲಿ ಮುಂಗಾರು ಮಳೆ ಅಬ್ಬರ:
ಇನ್ನೂ ಹಾಸನ (Hassan) ನಗರ ಹಾಗೂ ಜಿಲ್ಲಾದ್ಯಂತ ಮುಂಗಾರು ಮಳೆ ಅಬ್ಬರಿಸುತ್ತಿದೆ. ಅದರಲ್ಲೂ ಮಲೆನಾಡು ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ನದಿ, ಹಳ್ಳ ಕೊಳ್ಳ ಉಕ್ಕಿ ಹರಿಯುತ್ತಿವೆ. ಸಕಲೇಶಪುರ ತಾಲೂಕಿನ, ದೋನಹಳ್ಳಿಯ ಬೆಣಗಿನಹಳ್ಳ ಉಕ್ಕಿ ಹರಿದು ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. 2018ರಲ್ಲಿ ಭಾರೀ ಮಳೆಗೆ ಕಿರು ಸೇತುವೆ ಕೊಚ್ಚಿಹೋಗಿತ್ತು. ಏಳು ವರ್ಷ ಆದರೂ ಹೊಸ ಸೇತುವೆ ನಿರ್ಮಾಣ ಮಾಡದೆ ನಿರ್ಲಕ್ಷ್ಯ ವಹಿಸಿದ್ದು, ಮಳೆ ಹೆಚ್ಚಾದ ಹಿನ್ನೆಲೆ ಬೆಣಗಿನಹಳ್ಳ ಉಕ್ಕಿ ಹರಿಯುತ್ತಿದೆ. ಹಳ್ಳದ ಮತ್ತೊಂದು ಬದಿಯಲ್ಲಿರುವ ಜಮೀನುಗಳಿಗೆ ತೆರಳಲಾಗದೆ ರೈತರು ಪರದಾಡುತ್ತಿದ್ದಾರೆ. ಗ್ರಾ.ಪಂ. ಕಚೇರಿ, ಆಸ್ಪತ್ರೆ, ಮಾರುಕಟ್ಟೆಗೆ ಹತ್ತಾರು ಕಿಮೀ ಸುತ್ತಾಡಬೇಕಾದ ಅನಿವಾರ್ಯತೆ ನಿರ್ಮಾಣವಾಗಿದೆ. ಸೇತುವೆ ನಿರ್ಮಿಸಿ ಕೊಡದ ಅಧಿಕಾರಿಗಳು, ಜನ ಪ್ರತಿನಿಧಿಗಳ ವಿರುದ್ಧ ಜನರು ಆಕ್ರೋಶ ಹೊರ ಹಾಕಿದ್ದಾರೆ. ಇದನ್ನೂ ಓದಿ: Rain Alert | ಹಾಸನ ಜಿಲ್ಲೆಯ 3, ಉತ್ತರ ಕನ್ನಡ ಜಿಲ್ಲೆಯ 2 ತಾಲೂಕಿನ ಶಾಲೆಗಳಿಗೆ ಗುರುವಾರ ರಜೆ

Hassan Rain 1

ಮಳೆ ಹಾನಿ ಪ್ರದೇಶ ರಾಷ್ಟ್ರೀಯ ಹೆದ್ದಾರಿ 75ಕ್ಕೆ ಡಿಸಿ ಕೆ.ಎಸ್.ಲತಾಕುಮಾರಿ ಭೇಟಿ ನೀಡಿ ಪರಿಶೀಲಿಸಿದರು. ಸಕಲೇಶಪುರ ತಾಲೂಕಿನ ಕೊಲ್ಲಹಳ್ಳಿ, ಆನೆಮಹಲ್ ಸೇರಿ ಶಿರಾಡಿಘಾಟ್‌ನ ಹಲವು ಕಡೆ ಪರಿಶೀಲನೆ ನಡೆಸಿದರು. ಕೊಲ್ಲಹಳ್ಳಿ ಬಳಿ ಹೆದ್ದಾರಿ ತಡೆಗೋಡೆ ಬಿರುಕುಬಿಟ್ಟಿದ್ದು, ಮಳೆ ಹೆಚ್ಚಾದರೆ ಕುಸಿಯುವ ಆತಂಕ ಎದುರಾಗಿದೆ. ಇದನ್ನೂ ಓದಿ: ಇರಾನ್‌ ಮೇಲೆ ಅಮೆರಿಕ ದಾಳಿ ಸಂಪೂರ್ಣ ಯಶಸ್ವಿಯಾಗಿಲ್ಲ – ಟ್ರಂಪ್ ಮುಜುಗರಕ್ಕೆ ಕಾರಣವಾದ ಗುಪ್ತಚರ ವರದಿ

Kodagu Rain 1

ಕೊಡಗಿನಲ್ಲಿ ಆರ್ದ್ರಾ ಮಳೆ ಆರ್ಭಟಕ್ಕೆ ಕಂಗಾಲಾದ ಜನ:
ಕೊಡಗು (Kodagu) ಜಿಲ್ಲೆಯಲ್ಲಿ ಮಳೆಯ ವಾತಾವರಣ ಮತ್ತೆ ಮುಂದುವರಿದಿದ್ದು, ಜನ ಕಂಗಾಲಾಗಿದ್ದಾರೆ. ಹಲವೆಡೆ ಆಸ್ತಿ-ಪಾಸ್ತಿ ಸಾಕಷ್ಟು ಹಾನಿಯಾಗುತ್ತಿದೆ. ಜಿಲ್ಲೆಯ ವಿರಾಜಪೇಟೆ ತಾಲೂಕು ಹಾಗೂ ಪೊನ್ನಂಪೇಟೆ ತಾಲೂಕಿನ ಹಲವೆಡೆ ಮಳೆಯಿಂದ ನಾನಾ ರೀತಿಯ ಅವಾಂತರಗಳು ಸೃಷ್ಟಿಯಾಗಿದೆ. ಅದರಲ್ಲೂ ಬಿರುನಾಣಿ-ಹುದಿಕೇರಿ (ಹೈಸೊಡ್ಲೂರು-ಪೊರಾಡ್ ಸೇತುವೆ ಬಳಿ) ರಸ್ತೆ ಬಳಿ ಸಣ್ಣ ಪ್ರಮಾಣದ ಗುಡ್ಡ ಕುಸಿತವಾಗಿದೆ. ಇದರಿಂದ ಬೃಹತ್ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಅಲ್ಲದೇ ಕುಟ್ಟ, ಬಿರುನಾಣಿ, ಶೆಟ್ಟಿಗೇರಿ, ಹುದಿಕೇರಿ, ಬಿ. ಶೆಟ್ಟಿಗೇರಿ ವ್ಯಪ್ತಿಯಲ್ಲಿ ಸತತವಾಗಿ ಮಳೆ ಸುರಿಯುತ್ತಿರುವುದರಿಂದ ನದಿ ತುಂಬಿ ಹರಿಯುತ್ತಿದೆ. ಇದನ್ನೂ ಓದಿ: Honeymoon Murder | ಕೊನೆಗೂ ತಮ್ಮಿಬ್ಬರ ಸಂಬಂಧ ಒಪ್ಪಿಕೊಂಡ ಸೋನಂ ರಘುವಂಶಿ – ರಾಜ್

ಈ ನಡುವೆ ಬಿರುನಾಣಿ ಗ್ರಾಮದ ಪೂಕಳ ಎಂಬಲ್ಲಿ ಮಳೆಯ ನೀರು ಸೇತುವೆ ಮೇಲೆ ಹರಿಯುತ್ತಿದ್ದಾಗಲೇ ಚಾಲಕನೊಬ್ಬ ಶಾಲಾ ವಾಹನ ಚಾಲನೆ ಮಾಡಿ ಹುಚ್ಚಾಟ ಮೆರೆದಿದ್ದಾನೆ. ಇನ್ನೂ ಮಡಿಕೇರಿ ತಾಲೂಕಿನ ನಾಪೋಕ್ಲು ವಿರಾಜಪೇಟೆ ರಸ್ತೆಯ ಎಡಪಾಲ ಸೇತುವೆ ಬಳಿ ಕಾವೇರಿ ನದಿ ನೀರಿನ ಪ್ರಮಾಣ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಇದೀಗ ಗ್ರಾಮಗಳ ಸಂಪರ್ಕ ಕಡಿತಗೊಳ್ಳುವ ಭೀತಿ ಎದುರಾಗಿದೆ. ಇದನ್ನೂ ಓದಿ: ಕುಮಾವೂನ್ ವಿವಿ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಮೂರ್ಛೆ ಹೋದ ಜಗದೀಪ್ ಧನಕರ್

TAGGED:dakshina kannadahassankarnatakaKodaguMangalururainShishileshwara Templeಕರ್ನಾಟಕಕೊಡಗುದಕ್ಷಿಣ ಕನ್ನಡಮಂಗಳೂರುಮಳೆಶಿಶಿಲೇಶ್ವರ ದೇವಸ್ಥಾನಹಾಸನ
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Bidar Youth Farmer Death
Bidar

ಬೀದರ್‌ನಲ್ಲಿ ಸಿಡಿಲು ಬಡಿದು ಯುವರೈತ ಸ್ಥಳದಲ್ಲೇ ಸಾವು

Public TV
By Public TV
11 minutes ago
CRIME
Bengaluru City

ಉತ್ತರ ಪ್ರದೇಶದಲ್ಲಿ ಪೂಜಾರಿ, ಬೆಂಗಳೂರಲ್ಲಿ ಪೆಡ್ಲರ್ – ಹೆರಾಯಿನ್‌ ಸಪ್ಲೈ ಮಾಡುತ್ತಿದ್ದ ಇಬ್ಬರ ಬಂಧನ

Public TV
By Public TV
16 minutes ago
LPG 2
Bellary

ದುಪ್ಪಟ್ಟು ದರಕ್ಕೆ ಸಿಲಿಂಡರ್‌ ಮಾರುತ್ತಿದ್ದ ಅಡ್ಡೆ ಮೇಲೆ ಪೊಲೀಸರಿಂದ ದಾಳಿ – 9 ಸಿಲಿಂಡರ್‌ ಜಪ್ತಿ

Public TV
By Public TV
23 minutes ago
Tiger
Districts

ಮಾಲ್ತಾರೆ ಅರಣ್ಯ ಮಾರ್ಗದಲ್ಲಿ ಹುಲಿ ದರ್ಶನ – ಪ್ರವಾಸಿಗರು ಫುಲ್‌ ಖುಷ್‌

Public TV
By Public TV
38 minutes ago
Mojtaba Khamenei
Latest

ಯುದ್ಧ ಶುರುವಾದಾಗಿನಿಂದ ಮಾತುಕತೆ ನಡೆದಿಲ್ಲ, ಪಾಕ್‌ ಮಧ್ಯಸ್ಥಿಕೆಯಲ್ಲಿ ಅಮೆರಿಕದ ಮನವಿಯಷ್ಟೇ ಬಂದಿದೆ: ಇರಾನ್

Public TV
By Public TV
55 minutes ago
Masood Azhar
Latest

ಜೈಶ್ ಮುಖ್ಯಸ್ಥ ಮಸೂದ್ ಅಜರ್ ಸಹೋದರ ಪಾಕಿಸ್ತಾನದಲ್ಲಿ ನಿಗೂಢ ಸಾವು

Public TV
By Public TV
56 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?