Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಹಾರಾಷ್ಟ್ರದ ಕೊಯ್ನಾ ಡ್ಯಾಮ್‍ನಿಂದ ಮತ್ತಷ್ಟು ನೀರು ಹೊರಕ್ಕೆ – ಕೃಷ್ಣಾ ನದಿ ತೀರದಲ್ಲಿ ಹೈ ಅಲರ್ಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bagalkot | ಮಹಾರಾಷ್ಟ್ರದ ಕೊಯ್ನಾ ಡ್ಯಾಮ್‍ನಿಂದ ಮತ್ತಷ್ಟು ನೀರು ಹೊರಕ್ಕೆ – ಕೃಷ್ಣಾ ನದಿ ತೀರದಲ್ಲಿ ಹೈ ಅಲರ್ಟ್

Bagalkot

ಮಹಾರಾಷ್ಟ್ರದ ಕೊಯ್ನಾ ಡ್ಯಾಮ್‍ನಿಂದ ಮತ್ತಷ್ಟು ನೀರು ಹೊರಕ್ಕೆ – ಕೃಷ್ಣಾ ನದಿ ತೀರದಲ್ಲಿ ಹೈ ಅಲರ್ಟ್

Public TV
Last updated: August 4, 2019 7:28 am
Public TV
Share
3 Min Read
Rain
SHARE

-ಚಿಕ್ಕೋಡಿಯಲ್ಲಿ ಸೇತುವೆ, ದೇವಾಲಯ ಜಲಾವೃತ
– ಜಮಖಂಡಿ, ರಾಯಚೂರಲ್ಲಿ ಹೆಚ್ಚಿದ ಆತಂಕ

ರಾಯಚೂರು/ಬೆಳಗಾವಿ/ಬಾಗಲಕೋಟೆ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಧಾರಕಾರ ಮಳೆಯಿಂದ ಕೊಯ್ನಾ ಡ್ಯಾಂ ಭರ್ತಿಯಾಗಿದ್ದು, ಅಪಾರ ಪ್ರಮಾಣದ ನೀರು ಹೊರಬಿಟ್ಟಿದ್ದಾರೆ. ಇದರಿಂದ ಬೆಳಗಾವಿ ಜಿಲ್ಲೆಯ ಸಪ್ತ ನದಿಗಳು ತುಂಬಿ ಹರಿಯುತ್ತಿವೆ. ಮಾರ್ಕಂಡೇಯ ನದಿಯ ಗೊಡಚಿನಮಲ್ಕಿ ಜಲಪಾತದಲ್ಲಿ ಭಾರಿ ನೀರು ಬರುತ್ತಿದೆ. ನಯನಮನೊಹರ ದೃಶ್ಯ ನೋಡಲು ಪ್ರವಾಸಿಗರ ದಂಡು ಹರಿದು ಬಂತು.

ಬೆಳಗಾವಿ ಜಿಲ್ಲೆಯಲ್ಲಿ 25ಕ್ಕೂ ಹೆಚ್ಚು ಸೇತುವೆಗಳು ಮುಳುಗಡೆಯಾಗಿವೆ. ಪ್ರಸಿದ್ಧ ಕೋಲ್ಹಾಪುರ ಮಹಾಲಕ್ಷ್ಮಿ ದೇವಾಸ್ಥಾನದ ಸುತ್ತ ಪ್ರವಾಹದಂತೆ ನೀರು ಹರಿದಿದೆ. ನೀರಿನ ರಭಸಕ್ಕೆ ದೇವಾಸ್ಥಾನದ ಅಕ್ಕ-ಪಕ್ಕ ನಿಲ್ಲಿಸಿದ ಬೈಕ್‍ಗಳು ಕೊಚ್ಚಿಕೊಂಡು ಹೋಗುವ ದೃಶ್ಯ ಸಿನಿಮೀಯ ಶೈಲಿ ರೀತಿಯಲ್ಲಿ ಕಂಡು ಬಂದಿದೆ. ಪ್ರವಾಹ ರೂಪದಂತೆ ಬಂದ ನೀರಿನ ರಭಸಕ್ಕೆ ಹೂವಿನ ಅಂಗಡಿ ಹಾಗೂ ರಸ್ತೆಬದಿ ನಿಲ್ಲಿಸಿದ ವಾಹನಗಳು ಮಾರು ದೂರ ಹರಿದು ಹೋಗಿವೆ.

ಮಿಲಿಟರಿ ಪಡೆ ಆಗಮನ:
ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯಲ್ಲಿ ಪ್ರವಾಹ ಭೀತಿ ಹಿನ್ನೆಲೆಯಲ್ಲಿ ಚಿಕ್ಕೋಡಿಗೆ ಮಿಲಿಟರಿ ಪಡೆ ಆಗಮಿಸಿದೆ. ತಲಾ ಐವತ್ತು ಸೈನಿಕರಿರುವ 2 ತುಕಡಿಗಳಲ್ಲಿ ಯೋಧರು ಆಗಮಿಸಿದ್ದಾರೆ. ಪ್ರವಾಹದಲ್ಲಿ ಸಿಲುಕಿದವರನ್ನ ರಕ್ಷಣೆಗೆ ಬೇಕಾದ ಸಾಮಾಗ್ರಿಗಳ ಸಮೇತ ಧಾವಿಸಿದ್ದಾರೆ. ಚಿಕ್ಕೋಡಿ ಪಟ್ಟಣದ ಲೋಕೋಪಯೋಗಿ ಇಲಾಖೆಯ ಸಮುದಾಯ ಭವನದಲ್ಲಿ ವಾಸ್ತವ್ಯ ಹೂಡಿದ್ದು, ತಮ್ಮ ಸ್ಥಳಗಳಿಗೆ ತೆರಳಿದ್ದಾರೆ.

Rain 1

ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಕೊಯ್ನಾ ಡ್ಯಾಂ ಭರ್ತಿಯಾಗಿದ್ದು, 6 ಗೇಟ್‍ಗಳಿಂದ 20 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಿದ್ದಾರೆ. ಕೊಯ್ನಾ ಜಲಾಶಯದಿಂದ ನೀರು ಬಿಡುಗಡೆ ಮಾಡಿದ್ದರಿಂದ ಮಹಾರಾಷ್ಟ್ರ ಹಾಗೂ ಕರ್ನಾಟಕದ ಕೃಷ್ಣಾ ನದಿ ತೀರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಇನ್ನು ಚಿಕ್ಕೋಡಿ ಉಪ ವಿಭಾಗದ 37 ಗ್ರಾಮಗಳ ಜನರಿಗೆ ಎಚ್ಚರಿಕೆ ನೀಡಲಾಗಿದೆ.

ಕೃಷ್ಣಾ ನದಿಯ ಪ್ರವಾಹಪೀಡಿತ ಪ್ರದೇಶದ ಜನರಿಗಾಗಿ 8 ಕಡೆ ಗಂಜಿ ಕೇಂದ್ರ ತೆರೆಯಲಾಗಿದೆ. ಇಂಗಳಿ, ಯಡೂರವಾಡಿ, ಕಾಗವಾಡ ತಾಲೂಕಿನ ಜುಗೂಳು/ಶಹಾಪೂರ, ಬಣಜವಾಡ, ಅಥಣಿ ತಾಲೂಕಿನ ರಡೇರಟ್ಟಿ, ಸಪ್ತಸಾಗರ, ನಾಗನೂರು, ರಾಯಬಾಗ ತಾಲೂಕಿನ ಶಿರಗೂರು ಗ್ರಾಮಗಳಲ್ಲಿ ಗಂಜಿಕೇಂದ್ರಗಳು ಆರಂಭಗೊಂಡಿವೆ. ಆಯಾ ಗ್ರಾಮದ ಶಾಲೆ, ಸಮುದಾಯ ಭವನ, ಅಂಗನವಾಡಿಗಳಲ್ಲಿ ಗಂಜಿಕೇಂದ್ರಗಳನ್ನು ಆರಂಭಿಸಲಾಗಿದೆ. ಈಗಾಗಲೇ ಸ್ಥಳಾಂತರಗೊಂಡ ಜನರಿಗೆ ಗಂಜಿಕೇಂದ್ರಗಳಲ್ಲಿ ಊಟ, ವಸತಿ ವ್ಯವಸ್ಥೆಯನ್ನು ಜಿಲ್ಲಾಡಳಿತ ಕಲ್ಪಿಸಿಕೊಟ್ಟಿದೆ.

Rain 2

ರಸ್ತೆ ಸಂಪರ್ಕ ಕಡಿತ: ಅಬ್ಬರದ ಮಳೆಯಿಂದಾಗಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹಲವು ಗ್ರಾಮಗಳ ರಸ್ತೆ ಸಂಪರ್ಕ ಕಡಿತವಾಗಿದೆ. ತಾಲೂಕಿನ ಜಂಬಗಿ-ತುಬಚಿ ರಸ್ತೆ ಸಂಪರ್ಕ ಕಡಿತವಾಗಿದೆ. ಮುತ್ತೂರು, ಕಂಕಣವಾಡಿ, ತುಬುಚಿ, ಶೂರ್ಪಾಲಿ ಗ್ರಾಮಗಳು ಜಲಾವೃತವಾಗಿವೆ. ಹಿಪ್ಪರಗಿ ಜಲಾಶಯಕ್ಕೆ 2.28 ಲಕ್ಷ ಕ್ಯೂಸೆಕ್ ಒಳಹರಿವಿನಿಂದಾಗಿ ಸುಮಾರು 25 ಗ್ರಾಮಗಳಿಗೆ ಭಾಗಶ ಪ್ರವಾಹದ ಭೀತಿ ಎದುರಾಗಿದೆ.

ಮುತ್ತೂರು ಗ್ರಾಮದ ತೋಟದ ವಸತಿ ಪ್ರದೇಶಗಳಿಗೆ ನೀರು ನುಗ್ಗಿದ್ದರಿಂದ ವಸತಿ ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಲ್ಲಿ ಸ್ಥಳಾಂತರ ಮಾಡಲಾಗಿದೆ. ಜಲಾವೃತವಾದ ಗ್ರಾಮಗಳಿಗೆ ಜಮಖಂಡಿ ಶಾಸಕ ಆನಂದ ನ್ಯಾಮಗೌಡ ನೇತೃತ್ವದಲ್ಲಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಗತ್ಯ ಸೌಲಭ್ಯಗಳನ್ನು ನೀಡುವಂತೆ ಶಾಸಕರು ಸೂಚನೆ ನೀಡಿದರು.

ಸೇತುವೆ ಮುಳುಗಡೆ: ರಾಯಚೂರಿನಲ್ಲಿ ಸಹ ಪ್ರವಾಹ ಭೀತಿ ಹೆಚ್ಚಾಗಿದೆ. ನಾರಾಯಣಪುರ ಡ್ಯಾಂನಿಂದ ಬಿಡಲಾಗುತ್ತಿರುವ ನೀರಿನ ಪ್ರಮಾಣವನ್ನು 2 ಲಕ್ಷ ಸಾವಿರ ಕ್ಯೂಸೆಕ್‍ಗೆ ಹೆಚ್ಚಿಸಲಾಗಿದೆ. ಇದರಿಂದಾಗಿ, ರಾಯಚೂರು ಜಿಲ್ಲೆಯಲ್ಲಿ ಜಮೀನುಗಳಿಗೆ ನೀರು ನುಗ್ಗುವ ಸಾಧ್ಯತೆ ದಟ್ಟವಾಗಿದೆ. ದೇವದುರ್ಗದ ಹೂವಿನಹೆಡಗಿ, ಲಿಂಗಸುಗೂರಿನ ಯರಗೋಡಿ ಸೇತುವೆ ಮುಳುಗಡೆಯಾಗಿದೆ. ತುರ್ತು ಸ್ಥಿತಿಯಲ್ಲಿ ರಕ್ಷಿಸಲು ಎನ್ ಡಿಆರ್ ಎಫ್ ನ 30 ಸಿಬ್ಬಂದಿ ಹಾಗು 2 ಬೋಟುಗಳು ಸಿದ್ಧವಾಗಿವೆ.

Rain 3

ನಡುಗಡ್ಡೆ ಪ್ರದೇಶದಲ್ಲಿ ಆಹಾರ ಧಾನ್ಯ, ಅಗತ್ಯ ವಸ್ತುಗಳ ವಿತರಣೆ ಮಾಡಲಾಗುತ್ತಿದೆ. ನದಿಗೆ ಇಳಿಯದಂತೆ ಡಂಗೂರ ಹಾಗು ಮೈಕ್ ಮುಖಾಂತರ ಜನರಿಗೆ ಎಚ್ಚರಿಕೆ ನೀಡಲಾಗುತ್ತಿದೆ. ಗುರ್ಜಾಪುರ ಬ್ರಿಡ್ಜ್ ಕಂ ಬ್ಯಾರೇಜ್ ಮುಳುಗುವ ಹಂತದಲ್ಲಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಾದ್ಯಂತ ಸುರಿಯುತ್ತಿರೋ ಧಾರಾಕಾರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಕೊಟ್ಟಿಗೆಹಾರದಲ್ಲಿ ಮಳೆ ಅಬ್ಬರ ಕಂಡು ಜನ ಕಂಗಾಲಾಗಿದ್ದಾರೆ. ಕೊಟ್ಟಿಗೆಹಾರ ಮಾರ್ಗದಿಂದ ಆಲೇಖಾನ್ ಹೊರಟ್ಟಿ, ಮಲೇಮನೆ ಸೇರಿದಂತೆ ನಾಲ್ಕು ಗ್ರಾಮಕ್ಕೆ ಸಂಪರ್ಕ ಕಲ್ಪಿಸೋ ಮಾರ್ಗದ ಮೇಲೆ ಬೃಹತ್ ಬಂಡೆ ಕುಸಿದಿದ್ದು ಸಂಚಾರ ಸಂಪೂರ್ಣ ಸ್ಥಗಿತಗೊಂಡು, ಮಕ್ಕಳು ಶಾಲೆಗೆ ಹೋಗದಂತ ಸ್ಥಿತಿ ನಿರ್ಮಾಣವಾಗಿದೆ. ಈ ಬಂಡೆ ಎರಡು ಅಡಿಯಷ್ಟು ಪಕ್ಕಕ್ಕೆ ಸರಿದಿದ್ರೆ ಕೊಟ್ಟಿಗೆಹಾರ-ಧರ್ಮಸ್ಥಳ-ಮಂಗಳೂರು ಮಾರ್ಗದ ಸಂಚಾರ ಸ್ಥಗಿತಗೊಳ್ಳುತ್ತಿತ್ತು.

TAGGED:bagalkotbelagavifloodKoyna DammaharashtraPublic TVraichurrainಕೊಯ್ನಾ ಡ್ಯಾಂಪಬ್ಲಿಕ್ ಟಿವಿಪ್ರವಾಹಬಾಗಲಕೋಟೆಬೆಳಗಾವಿಮಹಾರಾಷ್ಟ್ರಮಳೆರಾಯಚೂರು
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema

You Might Also Like

Basavaraj Rayareddy Daughter
Koppal

ಇಸ್ರೇಲ್‌-ಇರಾನ್‌ ಯುದ್ಧ; ದುಬೈನಲ್ಲಿ ಸಿಲುಕಿರೋ ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಪುತ್ರಿ

Public TV
By Public TV
5 hours ago
Sanju Samson
Cricket

ಸಂಜು ಬೆಂಕಿ ಆಟ, 5 ವಿಕೆಟ್‌ಗಳ ರೋಚಕ ಜಯ – ಸೆಮಿಗೆ ಟೀಂ ಇಂಡಿಯಾ

Public TV
By Public TV
6 hours ago
bjp leader
Chamarajanagar

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ – ತಮ್ಮ ವಾಹನದಲ್ಲೇ ಆಸ್ಪತ್ರೆಗೆ ದಾಖಲಿಸಿದ ಬಿಜೆಪಿ ಮುಖಂಡ

Public TV
By Public TV
6 hours ago
mohammed bin salman and trump
Latest

ಇರಾನ್‌ ಮೇಲೆ ದಾಳಿ ನಡೆಸಿ – ಟ್ರಂಪ್‌ಗೆ ಹಲವು ಬಾರಿ ಫೋನ್‌ ಮಾಡಿ ಒತ್ತಡ ಹೇರಿದ್ದ ಸೌದಿ

Public TV
By Public TV
7 hours ago
iran
Latest

ಇರಾನ್‌ ದಾಳಿಗೆ ಅಮೆರಿಕದ ಮೂವರು ಸೈನಿಕರು ಸಾವು

Public TV
By Public TV
7 hours ago
Strait of Hormuz closed india oil
Latest

ವಿಶ್ವದ ಪ್ರಮುಖ ತೈಲಮಾರ್ಗ ಹಾರ್ಮೂಜ್‌ ಜಲಸಂಧಿ ಬಂದ್‌ – ಭಾರತದ ಮೇಲೆ ಪರಿಣಾಮ ಏನು?

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?