Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರ್ನಾಟಕದಲ್ಲಿ ಟ್ರಾಫಿಕ್ ದಂಡದ ಮೊತ್ತ ಇಳಿಯುವುದು ಅನುಮಾನ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಕರ್ನಾಟಕದಲ್ಲಿ ಟ್ರಾಫಿಕ್ ದಂಡದ ಮೊತ್ತ ಇಳಿಯುವುದು ಅನುಮಾನ

Public TV
Last updated: September 13, 2019 11:59 am
Public TV
Share
3 Min Read
dvg traffic fine 2
SHARE

– ಕಾನೂನು ಸಚಿವಾಲಯದ ಮೊರೆ ಹೋದ ಕೇಂದ್ರ ಸಾರಿಗೆ ಇಲಾಖೆ
– ಬಿಜೆಪಿ ರಾಜ್ಯಗಳಿಂದ ಭಾರೀ ವಿರೋಧ

ನವದೆಹಲಿ: ಹೊಸ ಸಂಚಾರ ನಿಯಮ ಉಲ್ಲಂಘನೆ ಪ್ರಕರಣದಲ್ಲಿ ವಿಧಿಸಲಾಗುತ್ತಿರುವ ದಂಡದ ಮೊತ್ತವನ್ನು ಒಂದೊಂದು ರಾಜ್ಯಗಳು ಕಡಿಮೆ ಮಾಡುತ್ತಿರುವ ಬೆನ್ನಲ್ಲೇ ಕೇಂದ್ರ ಸಾರಿಗೆ ಸಚಿವಾಲಯ ಈಗ ಕಾನೂನು ಸಚಿವಾಲಯದ ಮೊರೆ ಹೋಗಿದೆ.

ಹೌದು, ಆರಂಭದಲ್ಲಿ ಗುಜರಾತ್ ಸರ್ಕಾರ ಇಳಿಸಿದ ಬೆನ್ನಲ್ಲೇ ಉತ್ತರಾಖಂಡ್ ಸರ್ಕಾರ ಸಹ ಇಳಿಕೆ ಮಾಡಿತ್ತು. ಇದರ ಬೆನ್ನಲ್ಲೇ ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ಹಲವು ಬಿಜೆಪಿ ರಾಜ್ಯಗಳು ಸಹ ದರವನ್ನು ಇಳಿಕೆ ಮಾಡಲು ಚಿಂತಿಸಿವೆ. ಹೀಗಾಗಿ ಸಾರಿಗೆ ಸಚಿವಾಲಯ ತಿದ್ದುಪಡಿಯಾದ ಕಾಯ್ದೆಯಲ್ಲಿ ನಿಗದಿಯಾದ ದಂಡದ ಪ್ರಮಾಣಕ್ಕಿಂತಲೂ ಕಡಿಮೆ ಮೊತ್ತದ ದಂಡವನ್ನು ವಿಧಿಸುತ್ತಿರುವ ರಾಜ್ಯಗಳ ನಡೆಯ ಬಗ್ಗೆ ಕಾನೂನು ಸಚಿವಾಲಯದ ಜೊತೆ ಸಲಹೆ ಕೇಳಿದೆ.

traffic 1

ಈ ಸಂಬಂಧ ಸಾರಿಗೆ ಸಚಿವಾಲಯದ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿ, ದಂಡ ಇಳಿಸುವ ಬಗ್ಗೆ ಕಾನೂನು ಸಚಿವಾಲಯದ ಜೊತೆ ಸಲಹೆ ಕೇಳಲಾಗಿದೆ. ಸಚಿವಾಲಯದ ಉತ್ತರ ಬಂದ ನಂತರ ಮುಂದಿನ ನಿರ್ಧಾರವನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ರಾಜ್ಯಗಳಿಗೆ ಇದೆ ಅಧಿಕಾರ:
ಭಾರತದ ಸಂವಿಧಾನದ 7ನೇ ಶೆಡ್ಯೂಲ್ ಪ್ರಕಾರ ಮೂರು ಪ್ರತ್ಯೇಕ ಪಟ್ಟಿಯನ್ನು ರಚಿಸಿ ವಿಷಯಗಳ ಮೇಲೆ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ಹಂಚಿಕೆ ಮಾಡಲಾಗಿದೆ. ರಕ್ಷಣೆ, ವಿದೇಶಾಂಗ ಸೇರಿದಂತೆ 97 ವಿಷಯಗಳು ಕೇಂದ್ರ ಪಟ್ಟಿಯಲ್ಲಿ ಬಂದರೆ ಪೊಲೀಸ್, ರಾಜ್ಯ ಲೋಕಸಭಾ ಆಯೋಗ ಸೇರಿದಂತೆ 61 ವಿಷಯಗಳು ರಾಜ್ಯ ಪಟ್ಟಿಯಲ್ಲಿ ಹಂಚಿಕೆಯಾಗಿದೆ. ಆದರೆ ರಸ್ತೆ ಸಾರಿಗೆ, ಶಿಕ್ಷಣ, ಅರಣ್ಯದಂತಹ ವಿಚಾರಗಳು ಸಮವರ್ತಿ ಪಟ್ಟಿಯಲ್ಲಿ ಸ್ಥಾನ ಪಡೆದಿದೆ.

ಸಮವರ್ತಿ ಪಟ್ಟಿಯಲ್ಲಿ ಸ್ಥಾನ ಪಡೆದ ವಿಷಯಗಳ ಮೇಲೆ ಅಧಿಕಾರ ಚಲಾಯಿಸುವ ಸಮಾನ ಹಕ್ಕು ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಸಂವಿಧಾನ ನೀಡಿದೆ. ಹೀಗಾಗಿ ರಾಜ್ಯ ಸರ್ಕಾರಗಳು ಈ ಅಧಿಕಾರವನ್ನು ಬಳಸಿಕೊಂಡು ಕೇಂದ್ರ ವಿಧಿಸಿದ ದಂಡದ ದರಕ್ಕಿಂತ ಕಡಿಮೆ ದರವನ್ನು ವಿಧಿಸುತ್ತಿದೆ. ಇದನ್ನೂ ಓದಿ: ನಾಯಕರ ‘ದಂಡ’ಯಾತ್ರೆ – ಟ್ರಾಫಿಕ್ ನಿಯಮಕ್ಕೆ ಸಿಎಂ ಡೋಂಟ್‍ಕೇರ್

Traffic fine Gujarat

ಕೆಂದ್ರಕ್ಕೆ ಸಿಟ್ಟು?
ಬಿಜೆಪಿ ರಾಜ್ಯಗಳೇ ಈಗ ದಂಡದ ದರ ಇಳಿಸುತ್ತಿರುವ ವಿಚಾರ ಕೇಂದ್ರದ ಸಿಟ್ಟಿಗೆ ಕಾರಣವಾಗಿದೆ ಎನ್ನಲಾಗುತ್ತಿದೆ. ಒಂದೊಂದು ರಾಜ್ಯ ಸರ್ಕಾರಗಳು ಒಂದೊಂದು ದರವನ್ನು ನಿಗದಿ ಪಡಿಸಿದರೆ ಕಾಯ್ದೆಯ ಮೂಲ ಸ್ವರೂಪವೇ ಬದಲಾಗುತ್ತದೆ. ಹೀಗಾಗಿ ಕಾನೂನು ಸಚಿವಾಲಯದ ಮೊರೆ ಹೋಗಿದೆ. ಆದರೆ ಅನಿವಾರ್ಯ ಸಂದರ್ಭದಲ್ಲಿ ರಾಜ್ಯಗಳ ಆದೇಶದ ವಿರುದ್ಧ ಕೇಂದ್ರದ್ದೇ ಮೇಲುಗೈ ಆಗಲಿದ್ದು ಅಂತಿಮವಾಗಿ ಕೇಂದ್ರ ಸರ್ಕಾರದ ಆದೇಶವನ್ನೇ ಪಾಲಿಸಬೇಕಾಗುತ್ತದೆ.

ಈ ವರ್ಷದ ಕೊನೆಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಮಹಾರಾಷ್ಟ್ರ ಸರ್ಕಾರ ದಂಡದ ಮೊತ್ತ ಇಳಿಕೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಮನವಿ ಮಾಡಿಕೊಂಡಿದೆ.

dvg traffic fine 1

ಜೀವ ಮುಖ್ಯವಲ್ಲವೇ?
ದೇಶದಲ್ಲಿ ಪ್ರತಿ ವರ್ಷ 1.5 ಲಕ್ಷ ಜನರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪುತ್ತಿದ್ದಾರೆ. ಇದರಲ್ಲಿ ಶೇ.65 ರಷ್ಟು 18-35 ವಯಸ್ಸಿನವರೇ ಇದ್ದಾರೆ. ಅಷ್ಟೇ ಅಲ್ಲದೆ ಪ್ರತಿ ವರ್ಷ 2 ಲಕ್ಷ ಜನರು ರಸ್ತೆ ಅಪಘಾತಗಳಿಂದ ಅಂಗವಿಕಲರಾಗುತ್ತಿದ್ದಾರೆ. ಹೀಗಾಗಿ ಕಠಿಣ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ ಎಂದು ಸಾರಿಗೆ ಸಚಿವ ಗಡ್ಕರಿ ಸಮರ್ಥಿಸಿಕೊಂಡಿದ್ದಾರೆ.

ದಂಡದ ಮೊತ್ತ ದುಬಾರಿ ಆಗಿಲ್ಲವೇ ಎಂದು ಮಾಧ್ಯಮಗಳು ಪ್ರಶ್ನಿಸಿದ್ದಕ್ಕೆ ಜೀವಕ್ಕಿಂತ ಹಣ ಮುಖ್ಯವೇ ಎಂದು ಮರು ಪ್ರಶ್ನೆ ಹಾಕಿದ ಗಡ್ಕರಿ, ಯುವಕರನ್ನು ಪ್ರಾಣಾಪಾಯದಿಂದ ರಕ್ಷಣೆ ಮಾಡಲು ಹಾಗೂ ಅಪಘಾತದಿಂದ ಅಂಗವಿಕಲತೆಗೆ ತುತ್ತಾಗುವುದನ್ನು ತಪ್ಪಿಸುವ ಉದ್ದೇಶದಿಂದ ಹೊಸ ಟ್ರಾಫಿಕ್ ದಂಡವನ್ನು ಜಾರಿಗೆ ತರಲಾಗಿದೆ. ದಂಡವನ್ನು ಯಾವ ರೀತಿ ಅಳವಡಿಸಿಕೊಳ್ಳಬೇಕು ಎನ್ನುವುದು ಆಯಾ ರಾಜ್ಯ ಸರ್ಕಾರಕ್ಕೆ ಬಿಟ್ಟ ವಿಚಾರವಾಗಿದೆ. ಸಂಗ್ರಹವಾದ ದಂಡದ ಮೊತ್ತವು ರಾಜ್ಯ ಸರ್ಕಾರಕ್ಕೆ ಹೋಗುತ್ತದೆ. ಟ್ರಾಫಿಕ್ ದಂಡ ಏರಿಕೆ ಉದ್ದೇಶ ಜನರ ಜೀವ ರಕ್ಷಣೆಗಾಗಿಯೇ ಹೊರತು ಸರ್ಕಾರಕ್ಕೆ ಆದಾಯ ತರುವುದಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮದ್ಯ ಸೇವಿಸಿ ಕಾರು ಓಡಿಸಿ ಆಟೋಗೆ ಡಿಕ್ಕಿ ಹೊಡೆದ ಆರ್‌ಟಿಓ ಇನ್ಸ್‌ಪೆಕ್ಟರ್

NITHIN GADKARI

ಸಂಚಾರ ನಿಯಮ ಉಲ್ಲಂಘಿಸುವ ಚಾಲಕರು, ಸವಾರರಿಗೆ 30 ವರ್ಷಗಳ ಹಿಂದೆ 100 ರೂ. ದಂಡ ವಿಧಿಸಲಾಗುತ್ತಿತ್ತು. ಆಗ 100 ರೂ.ಗೆ ಇದ್ದ ಮೌಲ್ಯವು ಈಗ ಎಷ್ಟಾಗಬಹುದು ನೀವೇ ಯೋಚನೆ ಮಾಡಿ. ಸಂಚಾರ ನಿಮಯವನ್ನು ಸರಿಯಾಗಿ ಜನರು ಪಾಲಿಸಿದರೆ ಯಾವುದೇ ದಂಡ ಪಾವತಿಸುವ ಅಗತ್ಯವಿರಲ್ಲ. ಟ್ರಾಫಿಕ್ ನಿಯಮ ಉಲ್ಲಂಘನೆಗೆ ವಿಧಿಸುತ್ತಿದ್ದ ದಂಡದ ಮೊತ್ತವು ಹೆಚ್ಚಾದ ಬಳಿಕ ಅನೇಕ ಬದಲಾವಣೆಗಳಾಗಿವೆ. ಅನೇಕರು ಲೈಸನ್ಸ್, ಹೆಲ್ಮೆಟ್ ಪಡೆಯುತ್ತಿದ್ದಾರೆ. ತಮ್ಮ ವಾಹನಗಳ ದಾಖಲೆಗಳನ್ನು ಸರಿ ಮಾಡಿಕೊಳ್ಳುತ್ತಿದ್ದಾರೆ ಎಂದು ಸರ್ಕಾರದ ನಡೆಯನ್ನು ಸಮರ್ಥಿಸಿದ್ದಾರೆ.

Share This Article
Facebook Whatsapp Whatsapp Telegram
Previous Article ranu mondal lata mangeshkar ಯಾರನ್ನಾದರೂ ಅನುಕರಿಸುವುದರಿಂದ ಯಶಸ್ಸು ಸಿಗುವುದಿಲ್ಲ: ಲತಾ ಹೇಳಿಕೆಗೆ ರಾನು ಪ್ರತಿಕ್ರಿಯೆ
Next Article v sommanna ನಾನು ಎಲ್ ಬೋರ್ಡ್ ಎಂದು ತಿಳಿಯಬೇಡಿ: ಎಚ್‍ಡಿಕೆಗೆ ಸೋಮಣ್ಣ ಟಾಂಗ್

Latest Cinema News

Zubeen Garg 2
ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕ ಜುಬೀನ್ ಗಾರ್ಗ್ ಅಂತ್ಯಕ್ರಿಯೆ
Cinema Latest National Sandalwood Top Stories
dada saheb phalke award
ಮಲಯಾಳಂ ನಟ ಮೋಹನ್‌ಲಾಲ್‌ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ
Cinema Latest Main Post National
Sai Pallavi
ತಂಗಿ ಮಾಡಿರೋ ತಪ್ಪಿಗೆ ಟ್ರೋಲ್ ಆದ ಸಾಯಿಪಲ್ಲವಿ
Cinema Latest South cinema Top Stories
Male Moda mattu Shaila
ಅಕ್ಷತಾ ಪಾಂಡವಪುರ ಪ್ರಧಾನ ಪಾತ್ರದಲ್ಲಿ ಮೋಡ ಮಳೆ ಮತ್ತು ಶೈಲ
Cinema Latest Sandalwood Top Stories
rishab shetty kollur mookambika temple
Kantara Chapter 1 ಟ್ರೈಲರ್‌ ರಿಲೀಸ್ ಬೆನ್ನಲ್ಲೇ ಕೊಲ್ಲೂರು ಮೂಕಾಂಬಿಕೆ ದರ್ಶನಗೈದ ರಿಷಬ್‌ ಶೆಟ್ಟಿ
Cinema Latest Main Post Sandalwood Udupi

You Might Also Like

Chaitanyananda Saraswati Swamiji
Crime

17 ವಿದ್ಯಾರ್ಥಿನಿಯರಿಂದ ಲೈಂಗಿಕ ಕಿರುಕುಳ ಆರೋಪ – ಚೈತನ್ಯಾನಂದ ಸರಸ್ವತಿ ಸ್ವಾಮೀಜಿ ವಿರುದ್ಧ FIR

12 minutes ago
BJP Protest 4
Bengaluru City

ರಸ್ತೆ ಗುಂಡಿ ಮುಚ್ಚದ ಸರ್ಕಾರದ ವಿರುದ್ಧ ಸಿಡಿದ ಕೇಸರಿ ಪಡೆ – ರಾಜ್ಯಾದ್ಯಂತ ರಸ್ತೆ ತಡೆ ಪ್ರತಿಭಟನೆ

1 hour ago
Gurupantvant Singh Pannun
Crime

ಮೋದಿ ರಾಷ್ಟ್ರಧ್ವಜ ಹಾರಿಸೋದನ್ನ ತಡೆಯಲು ಬಹುಮಾನ ಘೋಷಿಸಿದ್ದ ಪನ್ನುನ್ ವಿರುದ್ಧ ಕೇಸ್

1 hour ago
Pakistan
Latest

ತನ್ನ ದೇಶದಲ್ಲೇ ಪಾಕ್‌ ಏರ್‌ಸ್ಟ್ರೈಕ್‌ಗೆ 30 ಮಂದಿ ಬಲಿ – UNHRC ಸಭೆಯಲ್ಲಿ ಭಾರತ ತೀವ್ರ ಖಂಡನೆ

2 hours ago
Sonna Barrage Kalaburagi
Districts

ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ 2.80 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ – ಪ್ರವಾಹ ಆತಂಕ

3 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?