Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಕರ್ನಾಟಕದಲ್ಲಿ ಟ್ರಾಫಿಕ್ ದಂಡದ ಮೊತ್ತ ಇಳಿಯುವುದು ಅನುಮಾನ

Public TV
Last updated: September 13, 2019 11:59 am
Public TV
Share
3 Min Read
dvg traffic fine 2
SHARE

– ಕಾನೂನು ಸಚಿವಾಲಯದ ಮೊರೆ ಹೋದ ಕೇಂದ್ರ ಸಾರಿಗೆ ಇಲಾಖೆ
– ಬಿಜೆಪಿ ರಾಜ್ಯಗಳಿಂದ ಭಾರೀ ವಿರೋಧ

ನವದೆಹಲಿ: ಹೊಸ ಸಂಚಾರ ನಿಯಮ ಉಲ್ಲಂಘನೆ ಪ್ರಕರಣದಲ್ಲಿ ವಿಧಿಸಲಾಗುತ್ತಿರುವ ದಂಡದ ಮೊತ್ತವನ್ನು ಒಂದೊಂದು ರಾಜ್ಯಗಳು ಕಡಿಮೆ ಮಾಡುತ್ತಿರುವ ಬೆನ್ನಲ್ಲೇ ಕೇಂದ್ರ ಸಾರಿಗೆ ಸಚಿವಾಲಯ ಈಗ ಕಾನೂನು ಸಚಿವಾಲಯದ ಮೊರೆ ಹೋಗಿದೆ.

ಹೌದು, ಆರಂಭದಲ್ಲಿ ಗುಜರಾತ್ ಸರ್ಕಾರ ಇಳಿಸಿದ ಬೆನ್ನಲ್ಲೇ ಉತ್ತರಾಖಂಡ್ ಸರ್ಕಾರ ಸಹ ಇಳಿಕೆ ಮಾಡಿತ್ತು. ಇದರ ಬೆನ್ನಲ್ಲೇ ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ಹಲವು ಬಿಜೆಪಿ ರಾಜ್ಯಗಳು ಸಹ ದರವನ್ನು ಇಳಿಕೆ ಮಾಡಲು ಚಿಂತಿಸಿವೆ. ಹೀಗಾಗಿ ಸಾರಿಗೆ ಸಚಿವಾಲಯ ತಿದ್ದುಪಡಿಯಾದ ಕಾಯ್ದೆಯಲ್ಲಿ ನಿಗದಿಯಾದ ದಂಡದ ಪ್ರಮಾಣಕ್ಕಿಂತಲೂ ಕಡಿಮೆ ಮೊತ್ತದ ದಂಡವನ್ನು ವಿಧಿಸುತ್ತಿರುವ ರಾಜ್ಯಗಳ ನಡೆಯ ಬಗ್ಗೆ ಕಾನೂನು ಸಚಿವಾಲಯದ ಜೊತೆ ಸಲಹೆ ಕೇಳಿದೆ.

traffic 1

ಈ ಸಂಬಂಧ ಸಾರಿಗೆ ಸಚಿವಾಲಯದ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿ, ದಂಡ ಇಳಿಸುವ ಬಗ್ಗೆ ಕಾನೂನು ಸಚಿವಾಲಯದ ಜೊತೆ ಸಲಹೆ ಕೇಳಲಾಗಿದೆ. ಸಚಿವಾಲಯದ ಉತ್ತರ ಬಂದ ನಂತರ ಮುಂದಿನ ನಿರ್ಧಾರವನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ರಾಜ್ಯಗಳಿಗೆ ಇದೆ ಅಧಿಕಾರ:
ಭಾರತದ ಸಂವಿಧಾನದ 7ನೇ ಶೆಡ್ಯೂಲ್ ಪ್ರಕಾರ ಮೂರು ಪ್ರತ್ಯೇಕ ಪಟ್ಟಿಯನ್ನು ರಚಿಸಿ ವಿಷಯಗಳ ಮೇಲೆ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ಹಂಚಿಕೆ ಮಾಡಲಾಗಿದೆ. ರಕ್ಷಣೆ, ವಿದೇಶಾಂಗ ಸೇರಿದಂತೆ 97 ವಿಷಯಗಳು ಕೇಂದ್ರ ಪಟ್ಟಿಯಲ್ಲಿ ಬಂದರೆ ಪೊಲೀಸ್, ರಾಜ್ಯ ಲೋಕಸಭಾ ಆಯೋಗ ಸೇರಿದಂತೆ 61 ವಿಷಯಗಳು ರಾಜ್ಯ ಪಟ್ಟಿಯಲ್ಲಿ ಹಂಚಿಕೆಯಾಗಿದೆ. ಆದರೆ ರಸ್ತೆ ಸಾರಿಗೆ, ಶಿಕ್ಷಣ, ಅರಣ್ಯದಂತಹ ವಿಚಾರಗಳು ಸಮವರ್ತಿ ಪಟ್ಟಿಯಲ್ಲಿ ಸ್ಥಾನ ಪಡೆದಿದೆ.

ಸಮವರ್ತಿ ಪಟ್ಟಿಯಲ್ಲಿ ಸ್ಥಾನ ಪಡೆದ ವಿಷಯಗಳ ಮೇಲೆ ಅಧಿಕಾರ ಚಲಾಯಿಸುವ ಸಮಾನ ಹಕ್ಕು ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಸಂವಿಧಾನ ನೀಡಿದೆ. ಹೀಗಾಗಿ ರಾಜ್ಯ ಸರ್ಕಾರಗಳು ಈ ಅಧಿಕಾರವನ್ನು ಬಳಸಿಕೊಂಡು ಕೇಂದ್ರ ವಿಧಿಸಿದ ದಂಡದ ದರಕ್ಕಿಂತ ಕಡಿಮೆ ದರವನ್ನು ವಿಧಿಸುತ್ತಿದೆ. ಇದನ್ನೂ ಓದಿ: ನಾಯಕರ ‘ದಂಡ’ಯಾತ್ರೆ – ಟ್ರಾಫಿಕ್ ನಿಯಮಕ್ಕೆ ಸಿಎಂ ಡೋಂಟ್‍ಕೇರ್

Traffic fine Gujarat

ಕೆಂದ್ರಕ್ಕೆ ಸಿಟ್ಟು?
ಬಿಜೆಪಿ ರಾಜ್ಯಗಳೇ ಈಗ ದಂಡದ ದರ ಇಳಿಸುತ್ತಿರುವ ವಿಚಾರ ಕೇಂದ್ರದ ಸಿಟ್ಟಿಗೆ ಕಾರಣವಾಗಿದೆ ಎನ್ನಲಾಗುತ್ತಿದೆ. ಒಂದೊಂದು ರಾಜ್ಯ ಸರ್ಕಾರಗಳು ಒಂದೊಂದು ದರವನ್ನು ನಿಗದಿ ಪಡಿಸಿದರೆ ಕಾಯ್ದೆಯ ಮೂಲ ಸ್ವರೂಪವೇ ಬದಲಾಗುತ್ತದೆ. ಹೀಗಾಗಿ ಕಾನೂನು ಸಚಿವಾಲಯದ ಮೊರೆ ಹೋಗಿದೆ. ಆದರೆ ಅನಿವಾರ್ಯ ಸಂದರ್ಭದಲ್ಲಿ ರಾಜ್ಯಗಳ ಆದೇಶದ ವಿರುದ್ಧ ಕೇಂದ್ರದ್ದೇ ಮೇಲುಗೈ ಆಗಲಿದ್ದು ಅಂತಿಮವಾಗಿ ಕೇಂದ್ರ ಸರ್ಕಾರದ ಆದೇಶವನ್ನೇ ಪಾಲಿಸಬೇಕಾಗುತ್ತದೆ.

ಈ ವರ್ಷದ ಕೊನೆಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಮಹಾರಾಷ್ಟ್ರ ಸರ್ಕಾರ ದಂಡದ ಮೊತ್ತ ಇಳಿಕೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಮನವಿ ಮಾಡಿಕೊಂಡಿದೆ.

dvg traffic fine 1

ಜೀವ ಮುಖ್ಯವಲ್ಲವೇ?
ದೇಶದಲ್ಲಿ ಪ್ರತಿ ವರ್ಷ 1.5 ಲಕ್ಷ ಜನರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪುತ್ತಿದ್ದಾರೆ. ಇದರಲ್ಲಿ ಶೇ.65 ರಷ್ಟು 18-35 ವಯಸ್ಸಿನವರೇ ಇದ್ದಾರೆ. ಅಷ್ಟೇ ಅಲ್ಲದೆ ಪ್ರತಿ ವರ್ಷ 2 ಲಕ್ಷ ಜನರು ರಸ್ತೆ ಅಪಘಾತಗಳಿಂದ ಅಂಗವಿಕಲರಾಗುತ್ತಿದ್ದಾರೆ. ಹೀಗಾಗಿ ಕಠಿಣ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ ಎಂದು ಸಾರಿಗೆ ಸಚಿವ ಗಡ್ಕರಿ ಸಮರ್ಥಿಸಿಕೊಂಡಿದ್ದಾರೆ.

ದಂಡದ ಮೊತ್ತ ದುಬಾರಿ ಆಗಿಲ್ಲವೇ ಎಂದು ಮಾಧ್ಯಮಗಳು ಪ್ರಶ್ನಿಸಿದ್ದಕ್ಕೆ ಜೀವಕ್ಕಿಂತ ಹಣ ಮುಖ್ಯವೇ ಎಂದು ಮರು ಪ್ರಶ್ನೆ ಹಾಕಿದ ಗಡ್ಕರಿ, ಯುವಕರನ್ನು ಪ್ರಾಣಾಪಾಯದಿಂದ ರಕ್ಷಣೆ ಮಾಡಲು ಹಾಗೂ ಅಪಘಾತದಿಂದ ಅಂಗವಿಕಲತೆಗೆ ತುತ್ತಾಗುವುದನ್ನು ತಪ್ಪಿಸುವ ಉದ್ದೇಶದಿಂದ ಹೊಸ ಟ್ರಾಫಿಕ್ ದಂಡವನ್ನು ಜಾರಿಗೆ ತರಲಾಗಿದೆ. ದಂಡವನ್ನು ಯಾವ ರೀತಿ ಅಳವಡಿಸಿಕೊಳ್ಳಬೇಕು ಎನ್ನುವುದು ಆಯಾ ರಾಜ್ಯ ಸರ್ಕಾರಕ್ಕೆ ಬಿಟ್ಟ ವಿಚಾರವಾಗಿದೆ. ಸಂಗ್ರಹವಾದ ದಂಡದ ಮೊತ್ತವು ರಾಜ್ಯ ಸರ್ಕಾರಕ್ಕೆ ಹೋಗುತ್ತದೆ. ಟ್ರಾಫಿಕ್ ದಂಡ ಏರಿಕೆ ಉದ್ದೇಶ ಜನರ ಜೀವ ರಕ್ಷಣೆಗಾಗಿಯೇ ಹೊರತು ಸರ್ಕಾರಕ್ಕೆ ಆದಾಯ ತರುವುದಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮದ್ಯ ಸೇವಿಸಿ ಕಾರು ಓಡಿಸಿ ಆಟೋಗೆ ಡಿಕ್ಕಿ ಹೊಡೆದ ಆರ್‌ಟಿಓ ಇನ್ಸ್‌ಪೆಕ್ಟರ್

NITHIN GADKARI

ಸಂಚಾರ ನಿಯಮ ಉಲ್ಲಂಘಿಸುವ ಚಾಲಕರು, ಸವಾರರಿಗೆ 30 ವರ್ಷಗಳ ಹಿಂದೆ 100 ರೂ. ದಂಡ ವಿಧಿಸಲಾಗುತ್ತಿತ್ತು. ಆಗ 100 ರೂ.ಗೆ ಇದ್ದ ಮೌಲ್ಯವು ಈಗ ಎಷ್ಟಾಗಬಹುದು ನೀವೇ ಯೋಚನೆ ಮಾಡಿ. ಸಂಚಾರ ನಿಮಯವನ್ನು ಸರಿಯಾಗಿ ಜನರು ಪಾಲಿಸಿದರೆ ಯಾವುದೇ ದಂಡ ಪಾವತಿಸುವ ಅಗತ್ಯವಿರಲ್ಲ. ಟ್ರಾಫಿಕ್ ನಿಯಮ ಉಲ್ಲಂಘನೆಗೆ ವಿಧಿಸುತ್ತಿದ್ದ ದಂಡದ ಮೊತ್ತವು ಹೆಚ್ಚಾದ ಬಳಿಕ ಅನೇಕ ಬದಲಾವಣೆಗಳಾಗಿವೆ. ಅನೇಕರು ಲೈಸನ್ಸ್, ಹೆಲ್ಮೆಟ್ ಪಡೆಯುತ್ತಿದ್ದಾರೆ. ತಮ್ಮ ವಾಹನಗಳ ದಾಖಲೆಗಳನ್ನು ಸರಿ ಮಾಡಿಕೊಳ್ಳುತ್ತಿದ್ದಾರೆ ಎಂದು ಸರ್ಕಾರದ ನಡೆಯನ್ನು ಸಮರ್ಥಿಸಿದ್ದಾರೆ.

TAGGED:lawLegalnitin gadkariRoad MinistryTraffic Fineಕಾನೂನು ಸಚಿವಾಲಯದಂಡನಿತಿನ್ ಗಡ್ಕರಿಸಂಚಾರಸಂಚಾರ ನಿಯಮಸಾರಿಗೆ ಇಲಾಖೆ ಟ್ರಾಫಿಕ್
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

kiccha sudeep birthday Bigg Boss promo released
ಬಿಗ್‌ ಬಾಸ್‌ ಪ್ರೋಮೋ ರಿಲೀಸ್‌ – ಸ್ಪರ್ಧಿಗಳ ಬಗ್ಗೆ ಮಾಹಿತಿಯೂ ಔಟ್‌
Cinema Latest Main Post TV Shows
Pushpa Arunkumar Deepika Das
ನಮ್ಮನೆ ಅವ್ರ ಮನೆ ಒಂದೇ, ನಾವೆಲ್ಲ ಒಂದೇ ಕುಟುಂಬದವರು: ಯಶ್‌ ತಾಯಿ ಪುಷ್ಪ ಅರುಣ್‌ಕುಮಾರ್
Cinema Latest Sandalwood
Actresses request for posthumous Karnataka Ratna award for late Dr. Vishnuvardhan Sarojadevi
ದಿ.ಡಾ.ವಿಷ್ಣುವರ್ಧನ್, ಸರೋಜಾದೇವಿಯವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆಗೆ ನಟಿಯರ ಮನವಿ
Bengaluru City Cinema Karnataka Latest Sandalwood Top Stories
darshan ballari jail 1
ಬಳ್ಳಾರಿಯಿಂದ ಪದೇ ಪದೇ ಕರೆತರಲು ಸಾಧ್ಯವಿಲ್ಲ: ದರ್ಶನ್‌ ಪರ ವಕೀಲ
Cinema Court Latest Main Post
Bharathi vishnuvardhan
ವಿಷ್ಣು ಸ್ಮಾರಕ ವಿಚಾರ – ನಾಳೆ ಸಿಎಂ ಭೇಟಿಯಾಗಲಿರುವ ಭಾರತಿ ವಿಷ್ಣುವರ್ಧನ್
Cinema Karnataka Latest National Sandalwood Top Stories

You Might Also Like

End of BBMP era 500 members to be elected to Greater Bengaluru Authority
Bengaluru City

ಇತಿಹಾಸದ ಪುಟ ಸೇರಿದ ಬಿಬಿಎಂಪಿ – ಜಿಬಿಎಗೆ ಆಯ್ಕೆಯಾಗಲಿದ್ದಾರೆ 500 ಸದಸ್ಯರು

Public TV
By Public TV
53 minutes ago
KC Veerendra Pappi ED Raid
Chitradurga

‘ಕೈ’ ಶಾಸಕ ವೀರೇಂದ್ರ ಪಪ್ಪಿ ಮನೆ ಮೇಲೆ ಮತ್ತೆ ಇ.ಡಿ ದಾಳಿ – ಆರು ಐಷಾರಾಮಿ ಕಾರುಗಳು ವಶಕ್ಕೆ

Public TV
By Public TV
56 minutes ago
Koppal Mother death 1
Districts

ಸಂತಾನಹರಣ ಚಿಕಿತ್ಸೆ ವೇಳೆ ತಾಯಿ ಸಾವು – ಅನಸ್ತೇಶಿಯಾ ನೀಡದೇ ಶಸ್ತ್ರಚಿಕಿತ್ಸೆ ಮಾಡಿದ್ದಾಗಿ ಕುಟುಂಬಸ್ಥರ ಆರೋಪ

Public TV
By Public TV
3 hours ago
Bagalkote District Magistrates property seized for not paying compensation to farmers
Bagalkot

ರೈತರಿಗೆ ಪರಿಹಾರ ಹಣ ನೀಡದ ಸರ್ಕಾರ – ಬಾಗಲಕೋಟೆ ಜಿಲ್ಲಾಧಿಕಾರಿಗಳ ವಸ್ತುಗಳು ಜಪ್ತಿ

Public TV
By Public TV
3 hours ago
Chitradurga Croploss
Chitradurga

ಚಿತ್ರದುರ್ಗದಲ್ಲಿ ನಿರಂತರ ಮಳೆಗೆ ಬೆಳೆಹಾನಿ – ಜಮೀನುಗಳಿಗೆ ಅಧಿಕಾರಿಗಳ ಭೇಟಿ, ಪರಿಶೀಲನೆ

Public TV
By Public TV
4 hours ago
Dr Manjunath
Districts

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುವವರಿಗೆ ಕಠಿಣ ಶಿಕ್ಷೆ ಅವಶ್ಯಕ, ಕೇಂದ್ರದ ತನಿಖೆ ಆಗಲಿ: ಡಾ.ಮಂಜುನಾಥ್

Public TV
By Public TV
4 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?