ಪರಿಹಾರ ಸಾಮಾಗ್ರಿ ಹೊತ್ತೊಯ್ತಿದ್ದ ಹೆಲಿಕಾಪ್ಟರ್ ಪತನ- ಮೂವರ ದುರ್ಮರಣ

Public TV
1 Min Read
kashi 1

ಡೆಹ್ರಾಡೂನ್: ಪ್ರವಾಹ ಸಂತ್ರಸ್ತರಿಗೆ ಪರಿಹಾರ ಸಾಮಾಗ್ರಿ ಹೊತ್ತೊಯ್ಯುತ್ತಿದ್ದ ಖಾಸಗಿ ಹೆಲಿಕಾಪ್ಟರ್ ಪತನಗೊಂಡಿದ್ದು, ಮೂವರು ದುರ್ಮರಣಕ್ಕೀಡಾಗಿದ್ದಾರೆ.

ಮೃತರನ್ನು ಪೈಲಟ್ ರಾಜ್ ಪಾಲ್, ಸಹ ಪೈಲಟ್ ಕಪ್ತಾಲ್ ಲಾಲ್ ಹಾಗೂ ಸ್ಥಳೀಯರಾದ ರಮೇಶ್ ಸವಾರ್ ಎಂದು ಗುರುತಿಸಲಾಗಿದೆ. ಈ ಘಟನೆ ಬುಧವಾರ ಮಧ್ಯಾಹ್ನ ಉತ್ತರಾಖಂಡ್‍ನ ಉತ್ತರ ಕಾಶಿಯಲ್ಲಿ ನಡೆದಿದೆ.

ಉತ್ತರಕಾಶಿಯಲ್ಲಿ ಹೆಲಿಕಾಪ್ಟರ್ ಪತನವಾಗಿದೆ. ಇದು ಪ್ರವಾಹ ಪೀಡಿತ ಪ್ರದೇಶಗಳ ಜನರಿಗೆ ಆಹಾರ ಸಾಮಾಗ್ರಿಗಳನ್ನು ಕೊಂಡೊಯ್ಯುತ್ತಿತ್ತು ಎಂದು ಅಲ್ಲಿನ ಜಿಲ್ಲಾ ಮ್ಯಾಜಿಸ್ಟ್ರೇಟರ್ ಮಾಹಿತಿ ನೀಡಿದ್ದಾರೆ.

ಹೆಲಿಕಾಪ್ಟರ್ ಉತ್ತರ ಕಾಶಿ ಜಿಲ್ಲೆಯ ಮೊರಿಯಿಂದ ಮೊಲ್ದಿ ಕಡೆ ಹಾರುತ್ತಿತ್ತು. ಈ ವೇಳೆ ವಿದ್ಯುತ್ ತಂತಿ ತಗುಲಿ ಪತನಗೊಂಡಿದೆ. ಹೆಲಿಕಾಪ್ಟರ್ ಪತನವಾದ ಮಾಹಿತಿ ತಿಳಿಯುತ್ತಿದ್ದಂತೆಯೇ ಇಂಡೋ ಟಿಬೇಟಿಯನ್ ಬಾರ್ಡರ್ ಪೊಲೀಸರು(ಐಟಿಬಿಪಿ) ಘಟನಾ ಸ್ಥಳಕ್ಕೆ ದೌಡಾಯಿಸಿ, ಮೃತದೇಹಗಳನ್ನು ಪಡೆದುಕೊಂಡಿದ್ದಾರೆ.

ಸದ್ಯ ಮೃತರ ಕುಟುಂಬಕ್ಕೆ ಉತ್ತರಾಖಂಡ್ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಅವರು 15 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ. ಉತ್ತರ ಕಾಶಿಯಲ್ಲಿ ಉಂಟಾದ ಪ್ರವಾಹದಲ್ಲಿ ಇಲ್ಲಿಯವರೆಗೆ ಸರಿ ಸುಮಾರು 16 ಮಂದಿ ಸಾವಿಗೀಡಾಗಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *