Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 15 ದಿನಗಳಿಂದ ಲಾಡ್ಜ್‌ನಲ್ಲಿ ವಾಸ – ಮೈಸೂರು ಸ್ಫೋಟಕ್ಕೆ ಎನ್‌ಐಎ ಎಂಟ್ರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | 15 ದಿನಗಳಿಂದ ಲಾಡ್ಜ್‌ನಲ್ಲಿ ವಾಸ – ಮೈಸೂರು ಸ್ಫೋಟಕ್ಕೆ ಎನ್‌ಐಎ ಎಂಟ್ರಿ

Crime

15 ದಿನಗಳಿಂದ ಲಾಡ್ಜ್‌ನಲ್ಲಿ ವಾಸ – ಮೈಸೂರು ಸ್ಫೋಟಕ್ಕೆ ಎನ್‌ಐಎ ಎಂಟ್ರಿ

Public TV
Last updated: December 26, 2025 12:40 pm
Public TV
Share
3 Min Read
Helium Cylinder Blast Case
SHARE

– ಹೀಲಿಯಂ ಸಿಲಿಂಡರ್‌ ಸ್ಫೋಟ ಪ್ರಕರಣದ ತನಿಖೆ ಚುರುಕು
– ಲಷ್ಕರ್ ಮೊಹಲ್ಲಾದ ಲಾಡ್ಜ್‌ನಲ್ಲಿ ಸಲೀಂ ವಾಸ

ಮೈಸೂರು: ಹೀಲಿಯಂ ಸಿಲಿಂಡರ್‌ ಸ್ಫೋಟ ಪ್ರಕರಣಕ್ಕೆ (Helium Cylinder Blast) ಈಗ ರಾಷ್ಟ್ರೀಯ ತನಿಖೆ (NIA) ದಳ ಎಂಟ್ರಿಯಾಗಿದೆ. ಇಂದು ಮೈಸೂರಿಗೆ(Mysuru) ಎನ್‌ಎಐ ಅಧಿಕಾರಿಗಳು ಆಗಮಿಸಿ ಸ್ಥಳ ಪರಿಶೀಲನೆ ನಡೆಸಿ ಪೊಲೀಸರ ಜೊತೆ ತನಿಖೆಯ ಮಾಹಿತಿ ಪಡೆಯಲಿದ್ದಾರೆ.

ಸಾಧಾರಣವಾಗಿ ಹೀಲಿಯಂ ಸ್ಫೋಟವಾಗುವುದಿಲ್ಲ. ಹೀಗಿದ್ದರೂ ಅರಮನೆಯ ಆವರಣದಲ್ಲೇ ಸ್ಫೋಟಗೊಂಡ ಹಿನ್ನೆಲೆಯಲ್ಲಿ ಹಲವಾರು ಅನುಮಾನಗಳು ಈಗ ವ್ಯಕ್ತವಾಗಿದೆ. ಸ್ಫೋಟದ ತೀವ್ರತೆಗೆ ಅಂಬಾವಿಲಾಸ ಅರಮನೆ ಮುಂಭಾಗದ ಜಯಮಾರ್ತಾಂಡ ದ್ವಾರದ ಬಳಿ ಬಲೂನ್‌ ಮಾರುತ್ತಿದ್ದ ಸಲೀಂ (40) ಮೃತಪಟ್ಟಿದ್ದು, ಮೃತದೇಹ ಛಿದ್ರ-ಛಿದ್ರವಾಗಿದೆ.

ಆರಂಭದಲ್ಲಿ ಮೃತ ಸಲೀಂ ಕೋಲ್ಕತ್ತಾದ ಮೂಲದವನು ಎನ್ನಲಾಗಿತ್ತು. ಆದರೆ ಈಗ ಉತ್ತರ ಪ್ರದೇಶ (Uttar Pradesh) ಮೂಲದವನು ಎಂಬ ಮಾಹಿತಿ ಲಭ್ಯವಾಗಿದೆ. ಉತ್ತರ ಪ್ರದೇಶದಿಂದ ಸಹೋದರರ ಜೊತೆ ಮೈಸೂರಿಗೆ ಆಗಮಿಸಿದ ಈತ ಕಳೆದ 15 ದಿನಗಳಿಂದ ಲಷ್ಕರ್ ಮೊಹಲ್ಲಾದ ಷರೀಫ್ ಲಾಡ್ಜ್‌ನಲ್ಲಿ ವಾಸವಾಗಿದ್ದ.

 

ಅನುಮಾನ ಯಾಕೆ?
ಮೈಸೂರು ಪ್ರಕರಣದಲ್ಲಿ ಹೀಲಿಯಂಗೆ ಬೇರೆ ಗ್ಯಾಸ್‌ ಮಿಶ್ರಣ ಮಾಡಿರುವ ಅನುಮಾನ ಮೇಲ್ನೋಟಕ್ಕೆ ವ್ಯಕ್ತವಾಗಿದೆ. ಮೂಲಗಳ ಪ್ರಕಾರ ಒಂದು ತಿಂಗಳ ಹಿಂದೆ ಸಲೀಂ ಮೈಸೂರಿಗೆ ಬಂದಿದ್ದಾನೆ. ಬಂದವನಿಗೆ ಅಷ್ಟು ಸುಲಭವಾಗಿ ಹೀಲಿಯಂ ಸಿಲಿಂಡರ್‌ ಸಿಕ್ಕಿದ್ದು ಹೇಗೆ ಎನ್ನುವ ಪ್ರಶ್ನೆಯೂ ಈಗ ಎದ್ದಿದೆ. ಇದನ್ನೂ ಓದಿ: Chitradurga Bus Accident | ಚಿಕಿತ್ಸೆ ಪಡೆಯುತ್ತಿದ್ದ ಬಸ್ ಚಾಲಕ ಸಾವು – ಮೃತರ ಸಂಖ್ಯೆ 7ಕ್ಕೆ ಏರಿಕೆ

ಸೈಕಲ್‌ನಲ್ಲಿ ಹೀಲಿಯಂ ಬಲೂನ್ ಮಾರುತ್ತಿದ್ದಾಗ ರಾತ್ರಿ 8:30ರ ವೇಳೆಗೆ ಸಿಲಿಂಡರ್ ಸ್ಫೋಟವಾಗಿದೆ. ಪ್ರತ್ಯಕ್ಷದರ್ಶಿ ಅರಮನೆಯ ಗೈಡ್‌ ನೀಡಿದ ಮಾಹಿತಿ ಪ್ರಕಾರ ಬಲೂನ್ ಮಾರಾಟಗಾರ ಅರಮನೆ ಮುಂಭಾಗದಲ್ಲಿ ನಿಂತು ಯಾವತ್ತೂ ಬಲೂನ್ ಮಾರುತ್ತಿರಲಿಲ್ಲ. ಆತ ಬಂದ ಕೂಡಲೇ ಸ್ಫೋಟ ಸಂಭವಿಸಿದೆ ಎಂದು ತಿಳಿಸಿದ್ದಾರೆ. ಗುರುವಾರ (ಡಿ.25) ಈ ಜಾಗದಲ್ಲಿ ನಿಂತು ಬಲೂನು ಮಾರಾಟ ಮಾಡಿರಲಿಲ್ಲ. ಹಾಗಾದರೆ ಅರಮನೆ ಮುಂಭಾಗವೇ ಸಿಲಿಂಡರ್ ಸ್ಪೋಟ ಯಾಕಾಯ್ತು  ಎಂಬ ಪ್ರಶ್ನೆ  ಹುಟ್ಟಿಕೊಂಡಿದೆ.

ಸಿಲಿಂಡರ್ ಸ್ಪೋಟ ಆಕಸ್ಮಿಕವೇ? ಅಥವಾ ಉದ್ದೇಶಪೂರ್ವಕವೇ? ಯಾವತ್ತೂ ಅರಮನೆ ಮುಂಭಾಗದಲ್ಲಿ ಕಾಣಿಸಿಕೊಳ್ಳದವನೂ ರಾತ್ರಿ ಇಲ್ಲಿಗೆ ಬಂದಿದ್ದು ಯಾಕೆ? ಏಕಾಏಕಿ ಅರಮನೆ ಮುಂಭಾಗವೇ ಸಿಲಿಂಡರ್ ಸ್ಫೋಟ ಯಾಕಾಯಿತು ಎಂಬ ಪ್ರಶ್ನೆಗಳನ್ನು ಮುಂದಿಟ್ಟುಕೊಂಡು ಪೊಲೀಸರು ಈಗ ತನಿಖೆ ಆರಂಭಿಸಿದ್ದಾರೆ.

ಅರಮನೆ ಬಳಿ ವಸ್ತುಗಳನ್ನು ಮಾರಾಟ ಮಾಡುವವರು ಸಾಮಾನ್ಯವಾಗಿ ಮೈಸೂರಿನ ಅಸುಪಾಸಿನ ಜನರೇ ಆಗಿರುತ್ತಾರೆ. ಈಗ ಬಲೂನ್ ಮಾರುತ್ತಿದ್ದ ವ್ಯಕ್ತಿಯ ಹಿನ್ನೆಲೆಯ ಬಗ್ಗೆ ಈಗ ತನಿಖೆ ಶುರುವಾಗಿದೆ. ಉತ್ತರ ಪ್ರದೇಶ ಮೂಲದ ಸಲೀಂ ಮೈಸೂರಿಗೆ ಬಂದಿದ್ದು ಯಾವಾಗ? ಎಷ್ಟು ವರ್ಷದಿಂದ ಬಲೂನ್ ಮಾರುತ್ತಿದ್ದ? ಅರಮನೆ ಮುಂಭಾಗವೇ ಸಲೀಂ ನಿರಂತರವಾಗಿ ಬಲೂನ್ ಮಾರುತ್ತಿದ್ದನೇ ಅಥವಾ ನಿನ್ನೆ ಮೊದಲು ಬಂದಿದ್ದ ಎಂಬ ಪ್ರಶ್ನೆಗೆ ಉತ್ತರ ತಿಳಿಯಲು ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಇಬ್ಬರ ವಿಚಾರಣೆ
ಸಲೀಂ ಜೊತೆ ವಾಸವಿದ್ದ ಇಬ್ಬರನ್ನು ಪೊಲೀಸರು ವಿಚಾರಣೆಗೆ ಕರೆದುಕೊಂಡು ಹೋಗಿದ್ದಾರೆ. ಸಲೀಂ ಜೊತೆ ಬಲೂನ್ ಮಾರಾಟಕ್ಕೆ ಉತ್ತರ ಪ್ರದೇಶದಿಂದ ಇಬ್ಬರು ಬಂದಿದ್ದರು. ಪ್ರತಿ ದಿನ ಸಲೀಂ ಜೊತೆ ಇಬ್ಬರು ಬಲೂನ್ ಮಾರಾಟ ಮಾಡುವುದಕ್ಕೆ ಹೋಗುತ್ತಿದ್ದರು. ನಿನ್ನೆ ಸಲೀಂ ಒಬ್ಬನೇ ಮಾತ್ರ ಬಲೂನ್ ಮಾರಾಟ ಮಾಡಲು ಹೋಗಿದ್ದ. ಮತ್ತಿಬ್ಬರು ನಿನ್ನೆ ರೂಂನಲ್ಲಿಯೇ ಇದ್ದರು. ಲಾಡ್ಜ್ ಮುಂಭಾಗದಲ್ಲೇ ಎರಡು ಸೈಕಲ್ ಗಳು ನಿಂತಿತ್ತು.

Helium Cylinder Blast Case Saleem

 

ಅರಮನೆಯೊಳಗೆ ಫೋಟೋ
ಸಲೀಂ ಅರಮನೆಯ ಒಳಗಡೆ ಹೋಗಿರುವ ಫೋಟೋ ಈಗ ಲಭ್ಯವಾಗಿದೆ. ಅರಮನೆಯೊಳಗೆ ಸಲೀಂ ಹೋಗಿದ್ದು ಯಾವಾಗ? ಸಲೀಂ ಕೇವಲ ಬಲೂನ್ ಮಾರಾಟ ಮಾಡುತಿದ್ದನೇ ಅಥವಾ ಬೇರೆ ಯಾವ ಕೆಲಸ ಮಾಡುತ್ತಿದ್ದನೇ ಈ ಆಯಾಮದಲ್ಲೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಹೀಲಿಯಂ ಸ್ಫೋಟಗೊಳ್ಳುತ್ತಾ?
ಹೀಲಿಯಂ ಜಡ ಅನಿಲವಾಗಿದ್ದು ಆಮ್ಲಜನಕ ಅಥವಾ ಇತರ ಅಂಶಗಳೊಂದಿಗೆ ಪ್ರತಿಕ್ರಿಯಿಸದ ಕಾರಣ ಅದು ಸ್ಫೋಟವಾಗುವುದಿಲ್ಲ. ಇದು ಸಂಪೂರ್ಣವಾಗಿ ದಹಿಸಲಾಗದ ಮತ್ತು ಹೆಚ್ಚು ದಹಿಸಬಲ್ಲ ಹೈಡ್ರೋಜನ್‌ ಬಲೂನ್‌ಗಳಿಗೆ ಹೆಚ್ಚು ಸುರಕ್ಷಿತವಾಗಿದೆ. ಈ ಕಾರಣಕ್ಕೆ ಜಾತ್ರೆಗಳಲ್ಲಿ, ಪ್ರವಾಸಿ ಸ್ಥಳಗಳಲ್ಲಿ ಹೀಲಿಯಂ ತುಂಬಿಸಿದ ಬಲೂನ್‌ಗಳನ್ನು ಮಾರಾಟ ಮಾಡಲಾಗುತ್ತದೆ.

ಹೀಲಿಯಂ ರಾಸಾಯನಿಕವಾಗಿ ಸ್ಥಿರವಾಗಿರುತ್ತದೆ ಮತ್ತು ಸುಡುವುದಿಲ್ಲ. ಇದಕ್ಕೆ ವ್ಯತಿರಿಕ್ತವಾಗಿ ಹೈಡ್ರೋಜನ್ ಬಲೂನ್‌ ಗಾಳಿಯಲ್ಲಿರುವ ಆಮ್ಲಜನಕದೊಂದಿಗೆ ಪ್ರತಿಕ್ರಿಯಿಸಿದಾಗ ಸ್ಫೋಟ ಆಗುತ್ತದೆ. ಪಾರ್ಟಿಗಳಲ್ಲಿ MRI ಕೂಲಿಂಗ್ ಮತ್ತು ವೈಜ್ಞಾನಿಕ ಸಂಶೋಧನೆಗಳಲ್ಲಿ ಹೀಲಿಯಂ ಬಳಕೆ ಮಾಡಲಾಗುತ್ತದೆ.

TAGGED:cylinder blastmysurumysuru palaceಮೈಸೂರುಸಿಲಿಂಡರ್ ಸ್ಫೋಟಹೀಲಿಯಂ ಬಲೂನು
Share This Article
Facebook Whatsapp Whatsapp Telegram

Cinema news

Bigg Boss Maalu
ಬಿಗ್‌ಬಾಸ್‌ ಮನೆಗೆ ಮಾಳು ಮಡದಿ ಎಂಟ್ರಿ  –  ಅಪ್ಪನಂತೆ ಹೇರ್‌ಕಟ್‌… ಮಕ್ಕಳೊಂದಿಗೆ ತರ್ಲೆ ಮಾಡಿದ ಗಿಲ್ಲಿ
Cinema Latest Top Stories TV Shows
bigg boss
ಕಾವ್ಯ ಮನೆಯವರಿಂದ ನಿಯಮ ಉಲ್ಲಂಘನೆ; ಹೊರ ಕಳಿಸಿದ್ರಾ ಬಿಗ್‌ ಬಾಸ್‌? – ಕಣ್ಣೀರಿಟ್ಟ ಕಾವ್ಯ
Cinema Latest Sandalwood Top Stories
kavya gilli
ಗಿಲ್ಲಿಯನ್ನ ಮಾತ್ರ ಬಿಟ್ಕೊಡ್ಬೇಡ: ಕಾವ್ಯಗೆ ಬುದ್ದಿವಾದ ಹೇಳಿದ ತಾಯಿ
Cinema Latest Sandalwood Top Stories
shiva rajkumar
ಫ್ಯಾನ್ಸ್ ವಾರ್ ಬಗ್ಗೆ ನಟ ಶಿವರಾಜ್‌ಕುಮಾರ್ ಖಡಕ್ ರಿಯಾಕ್ಷನ್
Cinema Latest Sandalwood Top Stories

You Might Also Like

china flag
Latest

ಅರುಣಾಚಲ ಪ್ರದೇಶದ ಮೇಲೆ ಚೀನಾ ಕಣ್ಣು – ಅಮೆರಿಕಾ ವರದಿ ತಿರಸ್ಕರಿಸಿದ ಡ್ರ‍್ಯಾಗನ್

Public TV
By Public TV
32 seconds ago
Siddaramaiah 5
Karnataka

ಸಿಎಂ ಬದಲಾವಣೆ ಗೊಂದಲದ ನಡುವೆ ಸಿದ್ದರಾಮಯ್ಯ ದೆಹಲಿಗೆ; ಹೈಕಮಾಂಡ್ ಜೊತೆ ನಡೆಯಲಿದ್ಯಾ ಪ್ರತ್ಯೇಕ ಮಾತುಕತೆ?

Public TV
By Public TV
53 seconds ago
Gaganashree 1
Bengaluru City

Chitradurga Bus Accident ನಾನು ರಕ್ಷಿತಾ ಜಿಗಿದು ಹೊರ ಬಂದ್ವಿ, ರಶ್ಮಿ ಒಳಗೆ ಸಿಲುಕಿದ್ರು: ದುರಂತದ ಭೀಕರತೆ ಬಿಚ್ಚಿಟ್ಟ ಗಗನಶ್ರೀ

Public TV
By Public TV
3 minutes ago
Indian Student Canada
Crime

Toronto: ಟೊರೊಂಟೊ ವಿವಿ ಬಳಿ 20 ವರ್ಷದ ಭಾರತೀಯ ವಿದ್ಯಾರ್ಥಿಗೆ ಗುಂಡಿಕ್ಕಿ ಹತ್ಯೆ; ಆರೋಪಿ ಬಂಧನ

Public TV
By Public TV
30 minutes ago
Hyderabad Man
Crime

ಮಕ್ಕಳ ಮುಂದೆಯೇ ಪತ್ನಿಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಕೊಂದ ಪಾಪಿ ಪತಿ

Public TV
By Public TV
32 minutes ago
Chitradurga Accident Bus Driver
Chitradurga

Chitradurga Bus Accident | ಚಿಕಿತ್ಸೆ ಪಡೆಯುತ್ತಿದ್ದ ಬಸ್ ಚಾಲಕ ಸಾವು – ಮೃತರ ಸಂಖ್ಯೆ 7ಕ್ಕೆ ಏರಿಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?