Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ನವರಾತ್ರಿ ಉಪವಾಸ- ಈ ಆಹಾರಗಳನ್ನು ಸೇವಿಸಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿ

Public TV
Last updated: October 9, 2021 8:09 am
Public TV
Share
3 Min Read
FOOD copy
SHARE

ದೇಶದಲ್ಲಿ ಅತಿ ದೊಡ್ಡ ಹಬ್ಬವೆಂದು ಕರೆಯಲಾಗುವ ನವರಾತ್ರಿ ಈಗಾಗಲೇ ಪ್ರಾರಂಭವಾಗಿದೆ. ಭಾರತೀಯರು ಈ ಹಬ್ಬವನ್ನು ವಿಶೇಷವಾಗಿ ಆಚರಿಸುತ್ತಾರೆ. ಈ ಹಬ್ಬದ ವಿಶೇಷವೆಂದರೆ ಉಪವಾಸ ಇರುವುದು ಇಂತಹ ಸಮಯದಲ್ಲಿ ಯಾವೆಲ್ಲಾ ಆಹಾರವನ್ನು ಸೇವಿಸುವುದು ಸೂಕ್ತ ಎಂಬುದರ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ.

ONION

ಶೇ.75ದಷ್ಟು ಹಸಿವೆಯಲ್ಲಿರಬೇಕು ಎಂಬುದು ಹಬ್ಬದ ಉಪವಾಸದ ನಿಯಮವಾಗಿದೆ. ಉಪವಾಸ ಕೈಗೊಳ್ಳುವಾಗ ಈರುಳ್ಳಿ, ಬೆಳ್ಳುಳ್ಳಿ, ಶುಂಠಿ, ಗೋಧಿ ಮತ್ತು ಅಕ್ಕಿ ಮೊದಲಾದ ಆಹಾರಗಳನ್ನು ಸೇವಿಸುವುದನ್ನು ದಸರಾ ಉಪವಾಸದಲ್ಲಿ ನಿಷೇಧಿಸಲಾಗಿದೆ. ಅಂತೆಯೇ ಹೊಟ್ಟೆ ತುಂಬಾ ತಿಂದು ಉಪವಾಸ ಮಾಡಬಾರದು, ಅದೇ ರೀತಿ ಹಸಿವೆಯ ನಿಶ್ಯಕ್ತಿಯಿಂದ ಕೂಡ ದೇವರನ್ನು ನೆನೆಯಬಾರದು.

GINGER

ಕೊರೊನಾ ವೈರಸ್ ಎಲ್ಲೆಡೆ ಇರುವುದರಿಂದ ಪ್ರತಿವರ್ಷದಂತೆ ಈ ಬಾರಿಯ ಹಬ್ಬ ಆಚರಿಸಲು ಆಗದೆ ಇರಬಹುದು ಆದರೆ ಹಬ್ಬದ ಆಚರಣೆ ಅನುಸಾರವಾಗಿ ಉಪವಾಸ ಇದ್ದೆ ಇರುತ್ತದೆ. ಈ ಸಮಯದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಈ ಕೆಳಗೆ ಸೂಚಿಸಲಾದ ಆಹಾರಗಳ ಸೇವನೆ ಮಾಡಬಹುದಾಗಿದೆ.

CORONA VIRUS 12

ಕುಂಬಳಕಾಯಿ: ಕುಂಬಳಕಾಯಿ ರೋಗ ನಿರೋಧಕ ಶಕ್ತಿಯನ್ನು ಹೊಂದಿದೆ. ನವರಾತ್ರಿ ಉಪವಾಸದಲ್ಲಿ ಕುಂಬಳಕಾಯಿ ಬಳಕೆಗೆ ಹೆಚ್ಚಿನ ಆದ್ಯತೆಯನ್ನು ನೀಡಲಾಗಿದೆ. ಉತ್ತಮವಾದ ಪೋಷಕಾಂಶವುಳ್ಳ ಗುಣವನ್ನು ಹೊಂದಿದೆ. ಬೀಟಾ ಕ್ಯಾರೋಟಿನ್ ಅಂಶ ಅಧಿಕ ಪ್ರಮಾಣದಲ್ಲಿ ಇರುವುದರಿಂದ ವಿಟಮಿನ್ ಎ ಪರಿವರ್ತಿಸುವ ಗುಣವನ್ನು ಹೊಂದಿದೆ. ವಿಟಮಿನ್ ಎ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಸೋಂಕು ತಗಲುವುದರಿಂದ ದೂರವಿರಲು ಸಹಾಯ ಮಾಡುತ್ತದೆ.

PUMPKIN

ಎಳನೀರು: ರಿಬೋಫ್ಲಾವಿನ್, ಥಯಾಮಿನ್, ಪಿರಿಡಾಕ್ಸಿನ್, ನಿಯಾಸಿನ್ ಮತ್ತು ಫೋಲೇಟ್‍ಗಳಂತಹ ಪೋಷಕಾಂಶ ಮತ್ತು ಜೀವಸತ್ವವಗಳನ್ನು ಅಧಿಕ ಪ್ರಮಾಣದಲ್ಲಿ ಎಳನೀರು ಹೊಂದಿದೆ. ಎಳನೀರಿನಲ್ಲಿ ಆ್ಯಂಟಿವೈರಲ್ ಮತ್ತು ಬ್ಯಾಕ್ಟೀರಿಯಾವನ್ನು ವಿರೋಧಿಸುವ ಗುಣವನ್ನು ಹೊಂದಿದೆ. ಜ್ವರ ಮತ್ತು ವೈರಲ್ ಸೋಂಕುಗಳ ವಿರುದ್ಧ ಹೋರಾಡುತ್ತದೆ. ಪ್ರತಿನಿತ್ಯ ಒಮ್ಮೆಯಾದರೂ ಒಂದು ಎಳನೀರು ಸೇವನೆ ಮಾಡುವುದರಿಂದ ಉತ್ತಮ ಆರೋಗ್ಯವನ್ನು ನಮ್ಮದಾಗಿಸಿಕೊಳ್ಳ ಬಹುದಾಗಿದೆ.

COCUNUT

ಹುರಿದ ಕಮಲದ ಹೂವಿನ ಬೀಜ: ನವರಾತ್ರಿಯಲ್ಲಿ ವಿಶೇಷ ಆಹಾರಗಳ ಪಟ್ಟಿಯಲ್ಲಿ ಕಮಲದ ಹೂವಿನ ಬೀಜವು ಒಂದು. ಹಬ್ಬದ ದಿನದಂದು ಮಾಡುವ ಖೀರ್, ಸಬ್ಜಿ ಮಾಡಹುದು. ಹುರಿದ ಈ ಬೀಜಗಳನ್ನು ಸ್ವಲ್ಪ ಕಲ್ಲು ಉಪ್ಪು ಮತ್ತು ಮೆಣಸಿನಕಾಯಿಯೊಂದಿಗೆ ಸೇರಿಸಿದಾಗ ದೇಹದಲ್ಲಿ ಸೇರಿರುವ ವಿಷಕಾರಿ ಅಂಶವನ್ನು ಹೊರಹಾಕಲು ಸಹಾಯ ಮಾಡುತ್ತದೆ. ಕೆಂಪು ರಕ್ತಕಣಗಳು ಹೆಚ್ಚಿಸುತ್ತದೆ. ಬಿಳಿ ರಕ್ತಕಣಗಳು ಮತ್ತು ಪ್ಲೇಟ್‍ಲೆಟ್‍ಗಳನ್ನು ಸಮಾನ ಪ್ರಮಾಣದಲ್ಲಿ ಇರುವಂತೆ ಮಾಡುತ್ತದೆ.

SEED

ಬಾಳೆಹಣ್ಣಿನ ಬರ್ಫಿ: ಬಾಳೆಹಣ್ಣು ಬರಿದಾಗಿ ತಿನ್ನಲು ಮಾತ್ರವಲ್ಲ. ಅವುಗಳಿಂದ ರುಚಿಯಾದ ಬರ್ಫಿಯನ್ನು ತಯಾರಿಸಬಹುದಾಗಿದೆ. ಬಾಳೆಹಣ್ಣು, ಸಕ್ಕರೆ, ಹಾಲಿನಿಂದ ತಯಾರಿಸಿದ ಕ್ಯಾಚೆ ಕೆಲೆ ಕಿ ಬರ್ಫಿ ಸಾಕಷ್ಟು ಆರೋಗ್ಯಕರ ಮತ್ತು ಆರೋಗ್ಯಕರ ಅಂಶವನ್ನು ಹೊಂದಿದೆ. ವಿಟಮಿನ್ ಸಿ ಮತ್ತು ವಿಟಮಿನ್ ಬಿ ಪೋಷಕಾಂಶವನ್ನು ಹೊಂದಿದ್ದು ಚರ್ಮ ಮತ್ತು ಕೂದಲಿನ ಆರೋಗ್ಯಕ್ಕೆ ಅವಶ್ಯ ಇರುವ ಖನಿಜ ಅಂಶಗಳನ್ನು ದೇಹಕ್ಕೆ ನೀಡುತ್ತದೆ.

banana burfi

ಗೆಡ್ಡೆ ಗೆಣಸಿನ ಚಾಟ್: ನವರಾತ್ರಿ ಸಮಯದಲಿ ತಯಾರಿಸಿದ ಚಾಟ್‍ಗಳು ಹಬ್ಬಕ್ಕೆ ಬಲು ವಿಶೇಷ. ಗೆಣಸಿನಿಂದ ತಯಾರಿಸಿದ ಚಾಟ್ ನವರಾತ್ರಿ ಹಬ್ಬದ ವಿಶೇಷ ಖಾದ್ಯವಾಗಿದೆ. ನಿಂಬೆ, ಕಲ್ಲು, ಉಪ್ಪು ಮತ್ತು ಮಸಾಲೆಯೊಂದಿಗೆ ಸೇರಿಸಿ ಚಾಟ್ ತಯಾರಿಸಲಾಗುತ್ತದೆ. ವಿಟಮಿನ್ ಎ ಅಂಶವನ್ನು ದೇಹಕ್ಕೆ ಒದಗಿಸುತ್ತದೆ. ಕಡಿಮೆ ರಕ್ತ ಮಟ್ಟ ಇರುವವರಿಗೆ ಇದರ ಸೇವನೆಯಿಂದ ರಕ್ತಮಟ್ಟವನ್ನು ಸರಿದೂಗಿಸುವ ಅಂಶವನ್ನು ಹೊಂದಿದೆ. ರೋಗ ನಿರೋಧಕ ಅಂಶವನ್ನು ಅಧಿಕ ಪ್ರಮಾಣದಲ್ಲಿ ಹೊಂದಿದೆ.

maxresdefault

ಹುರುಳಿ ದೋಸೆ: ಹುರುಳಿ ಹಿಟ್ಟಿನಿಂದ ಮಾಡುವ ದೋಸೆಯು ಅತ್ಯಂತ ಪೋಷಕಾಂಶ ಹಾಗೂ ಶಕ್ತಿಯನ್ನು ನೀಡುತ್ತದೆ. ವ್ರತಾಚರಣೆಯಲ್ಲಿ ಇದನ್ನು ಸವಿದರೆ ಯಾವುದೇ ಆರೋಗ್ಯ ಸಮಸ್ಯೆ ಉಂಟಾಗದು. ಇದರಲ್ಲಿ ಸಮೃದ್ಧವಾದ ನಾರಿನಂಶವನ್ನು ಪಡೆದುಕೊಂಡಿದೆ.

huruli kalu 600x400 1

ಹಾಲಿನ ಉತ್ಪನ್ನ: ಹಾಲು, ಮೊಸರು, ಪನೀರ್, ಬೆಣ್ಣೆ, ತುಪ್ಪ, ಖೊಯಾ ಮತ್ತು ಮಂದಗೊಳಿಸಿದ ಹಾಲಿನಂತಹ ನೈಸರ್ಗಿಕ ಉತ್ಪನ್ನಗಳನ್ನು ಸೇವಿಸಬಹುದು. ಯಾವುದೇ ಮಂಗಳಕರ ಸಂದರ್ಭಕ್ಕೆ ಹಾಲಿನ ಉತ್ಪನ್ನಗಳನ್ನು ಪವಿತ್ರ ಎಂದು ಪರಿಗಣಿಸಲಾಗುತ್ತದೆ.

ಒಣಫಲಗಳು: ಉಪವಾಸ ಸಮಯದಲ್ಲಿ ಒಣಫಲಗಳ ಸೇವನೆಯನ್ನು ಮಾಡಬಹುದಾಗಿದೆ. ಬಾದಾಮಿ, ಗೇರುಬೀಜ, ಕಡಲೆ ಕಾಳು, ಆಕ್ರೋಟ್, ಮೆಲನ್ ಕಾಳುಗಳು, ಪೈನ್ ನಟ್‍ಗಳು, ದ್ರಾಕ್ಷಿ, ಪಿಸ್ತಾವನ್ನು ಸೇವಿಸಬಹುದಾಗಿದೆ.

vegetables 2

ಹಣ್ಣುಗಳು ಮತ್ತು ತರಕಾರಿಗಳು: ಉಪವಾಸ ಸಮಯದಲ್ಲಿ ಹಸಿ ತರಕಾರಿಗಳು ಮತ್ತು ಹಣ್ಣುಗಳನ್ನು ಸೇವಿಸಬಹುದಾಗಿದೆ. ನವರಾತ್ರಿ ಸಮಯದಲ್ಲಿ ಸಾಮಾನ್ಯವಾಗಿ ಸೇವಿಸುವ ತರಕಾರಿಗಳು ಸೋರೆಕಾಯಿ, ಆಲೂಗೆಡ್ಡೆ, ಕುಂಬಳಕಾಯಿ, ಸಿಹಿ ಆಲೂಗೆಡ್ಡೆ, ಸೌತೆಕಾಯಿ, ಟೊಮೆಟೊ, ಕ್ಯಾರೆಟ್, ಆಪಲ್ಸ್, ದ್ರಾಕ್ಷಿಗಳು, ಪಪ್ಪಾಯ, ಪೇರಳೆ, ಪೀಚ್, ಬೆರ್ರಿ ಇತ್ಯಾದಿ ಯಾವುದೇ ಋತುಮಾನದಲ್ಲಿ ಸಿಗುವ ಹಣ್ಣುಗಳ ಸೇವನೆ ಮಾಡಬಹುದಾಗಿದೆ.

vegetables

ಉಪವಾಸ ಮಾಡುವುದರಿಂದ ದೈಹಿಕ, ಮಾನಸಿಕ ಮತ್ತು ಧಾರ್ಮಿಕ ಪ್ರಯೋಜನಗಳನ್ನು ಸಿಗುತ್ತದೆ. ನವರಾತ್ರಿಯ ಸಮಯದಲ್ಲಿ ಮಾಡುವ ಒಂಬತ್ತು ದಿನಗಳ ಕಾಲ ಉಪವಾಸ ದೇಹ, ಮನಸ್ಸು ಮತ್ತು ಆತ್ಮದ ಶುದ್ಧೀಕರಣಕ್ಕೆ ಕಾರಣವಾಗುತ್ತದೆ. ಹೆಚ್ಚಿನ ಧಾರ್ಮಿಕ ಮತ್ತು ಆರೋಗ್ಯಕ್ಕೆ ಪೂರಕವಾದ ಕಾರಣಗಳನ್ನು ಉಪವಾಸದೊಂದಿಗೆ ಥಳಕು ಹಾಕಿಕೊಂಡಿವೆ.

TAGGED:fastinghealthnavratriPublic TVಆರೋಗ್ಯಉಪವಾಸನವರಾತ್ರಿಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

You Might Also Like

Dinesh Gundurao 1
Bengaluru City

ಹಾಸನದಲ್ಲಿ ಹಠಾತ್‌ ಸಾವು| 75% ಕ್ಕಿಂತ ಹೆಚ್ಚು ಮಂದಿ ಒಂದಕ್ಕಿಂತ ಹೆಚ್ಚು ಹೃದಯ ಸಂಬಂಧಿ ರೋಗದಿಂದ ಬಳಲುತ್ತಿದ್ದರು: ದಿನೇಶ್‌

Public TV
By Public TV
18 minutes ago
DARSHAN 5
Cinema

Exclusive- ಇಂದು ಮಧ್ಯರಾತ್ರಿ ಥೈಲ್ಯಾಂಡ್‌ಗೆ ಹೊರಡಲಿದ್ದಾರೆ ನಟ ದರ್ಶನ್; ಏನೇನು ಶೂಟಿಂಗ್‌ ನಡೆಯಲಿದೆ?

Public TV
By Public TV
23 minutes ago
Increase in number of heart attack cases in Hassan Government forms special committee to investigate
Bengaluru City

ಹಾಸನ ಸರಣಿ ಹೃದಯಾಘಾತದ ವರದಿ ಬಹಿರಂಗ – ಮೃತಪಟ್ಟವರಲ್ಲಿ ಹೆಚ್ಚಿನವರು ಕ್ಯಾಬ್‌ ಚಾಲಕರು!

Public TV
By Public TV
33 minutes ago
Bidar Woman
Bidar

ಫ್ರೀ ರೇಷನ್ ಕಾರ್ಡ್ ಅಂದ್ರು, ಈಗ 100, 200 ರೂ. ತೆಗೆದುಕೊಂಡ್ರು – ಗ್ಯಾರಂಟಿ ಜಿಲ್ಲಾಧ್ಯಕ್ಷನಿಗೆ ಚಳಿ ಬಿಡಿಸಿದ ಮಹಿಳೆ

Public TV
By Public TV
46 minutes ago
Gali Anjaneya Temple Bengaluru
Bengaluru City

ಮುಜರಾಯಿ ಇಲಾಖೆ ಸುಪರ್ದಿಗೆ ಗಾಳಿ ಆಂಜನೇಯ ದೇವಸ್ಥಾನ

Public TV
By Public TV
48 minutes ago
Gurugram Father Killed tennis player Daughter
Latest

ರೀಲ್ಸ್ ಚಟ – ಟೆನ್ನಿಸ್ ಆಟಗಾರ್ತಿ ಮಗಳನ್ನು ಗುಂಡಿಕ್ಕಿ ಕೊಂದ ತಂದೆ

Public TV
By Public TV
50 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?