Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಯೋಧ್ಯೆ ರಾಮ ಮಂದಿರದಲ್ಲಿ ವಿಶೇಷತೆ ಏನು? ಹೇಗಿರಲಿದೆ ದೇವಾಲಯ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಅಯೋಧ್ಯೆ ರಾಮ ಮಂದಿರದಲ್ಲಿ ವಿಶೇಷತೆ ಏನು? ಹೇಗಿರಲಿದೆ ದೇವಾಲಯ?

Latest

ಅಯೋಧ್ಯೆ ರಾಮ ಮಂದಿರದಲ್ಲಿ ವಿಶೇಷತೆ ಏನು? ಹೇಗಿರಲಿದೆ ದೇವಾಲಯ?

Public TV
Last updated: November 9, 2019 6:00 pm
Public TV
Share
2 Min Read
Ram Mandir 1 e1570442071862
SHARE

ನವದೆಹಲಿ: ಹಿಂದೂಗಳ ಪರವಾಗಿ ಅಯೋಧ್ಯೆ ತೀರ್ಪು ಬಂದಾಗಿದ್ದು, ಇನ್ನಿರುವುದು ರಾಮಮಂದಿರ ನಿರ್ಮಾಣ. ಮಂದಿರ ನಿರ್ಮಾಣಕ್ಕೆ ಈಗಾಗಲೇ ನೀಲಿನಕ್ಷೆ, ಮಾದರಿ ಸಜ್ಜಾಗಿದೆ. ಜೊತೆಗೆ ಸ್ತಂಭ-ಸ್ತೂಪಗಳು, ಗೋಪುರಗಳನ್ನು ಈಗಾಗಲೇ ಸಿದ್ಧಗೊಂಡಿವೆ.

ರಾಮ ಜನ್ಮ ಭೂಮಿಯಿಂದ 3 ಕಿ.ಮೀ ದೂರದಲ್ಲಿರುವ ಕರಸೇವಕಪುರಂನ ಕಾರ್ಯ ಶಾಲೆಯಲ್ಲಿ ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕಾಗಿ ಶಿಲ್ಪ ಕೆತ್ತನೆ ನಡೆಯುತ್ತಿದೆ. 1990ರಿಂದಲೇ ಕಾರ್ಯಶಾಲೆಯಲ್ಲಿ ಕೆತ್ತನೆ ಕಾರ್ಯ ಆರಂಭವಾಗಿದ್ದು, ನಿರಂತರವಾಗಿ ನಡೆದುಕೊಂಡು ಬಂದಿದೆ.

Ayodhya temple D

ರಾಮಮಂದಿರ ವಿನ್ಯಾಸ ಹೇಗಿದೆ?:
ಮಂದಿರದ ಪ್ರಮುಖ ಆಕರ್ಷಣೆಯಾಗಿ 221 ಅಡಿ ಎತ್ತರದ ಬಿಲ್ಲು-ಬಾಣ ಹಿಡಿದಿರುವ ಶ್ರೀರಾಮನ ಪ್ರತಿಮೆಯನ್ನು ನಿರ್ಮಾಣ ಮಾಡುವ ಉದ್ದೇಶವನ್ನು ಉತ್ತರ ಪ್ರದೇಶ ಸರ್ಕಾರ ಹೊಂದಿದೆ. ಒಂದು ಮಹಡಿಯ ರಾಮ ಮಂದಿರ ನಿರ್ಮಾಣಕ್ಕೆ ನೀಲಿನಕ್ಷೆ ಸಿದ್ಧವಾಗಿದೆ. ಅದರಂತೆ ನೆಲ ಮಹಡಿಯಲ್ಲಿ 106 ಕಂಬಗಳ ನಿರ್ಮಾಣವಾಗಲಿದ್ದು, ಒಂದೊಂದು ಕಂಬವು 15.6 ಅಡಿ ಉದ್ದ ಇರಲಿವೆ. ಅದೇ ರೀತಿ ಮೊದಲ ಮಹಡಿಯಲ್ಲೂ 14.6 ಅಡಿ ಉದ್ದದ 106 ಕಂಬಗಳ ನಿರ್ಮಾಣವಾಗಲಿವೆ. ಪ್ರತಿಕಂಬದಲ್ಲಿ 16 ಮೂರ್ತಿಗಳ ಕೆತ್ತನೆ ಇರಲಿದೆ.

ನೆಲಮಹಡಿಯ ಒಂದು ಭಾಗದಲ್ಲಿ ರಾಮಲಲ್ಲಾ (ಬಾಲರಾಮ) ಮೂರ್ತಿ ನಿರ್ಮಾಣ ಹಾಗೂ ಮೊದಲ ಮಹಡಿಯಲ್ಲಿ ರಾಮನ ದರ್ಬಾರ್ ಮೂರ್ತಿ (ರಾಮ-ಸೀತೆ-ಲಕ್ಷಣ ಮತ್ತು ಹನುಮಂತ) ನಿರ್ಮಿಸಲಾಗುತ್ತದೆ. ಮೊದಲ ಮಹಡಿಯ ಎದುರಿನ ಭಾಗ 140 ಅಡಿ ಹಾಗೂ ಬಲಭಾಗ 268 ಅಡಿ ಇರಲಿದೆ. ಹಿಂದಿನ ಭಾಗದ ನೆಲ ಮಹಡಿ 18 ಅಡಿ ಮತ್ತು ಮೊದಲ ಮಹಡಿಯ ಒಂದು ಭಾಗ 15.9 ಅಡಿ ಇರಲಿದೆ. ರಾಮ ಮಂದಿರಕ್ಕೆ ಒಟ್ಟು 24 ಬಾಗಿಲುಗಳಿವೆ.

vlcsnap 2019 11 09 17h51m44s716

ಮೊದಲ ಮಹಡಿಯ ಹಾಸಿನಿಂದ ಧ್ವಜಸ್ತಂಭದವರೆಗೆ 65.3 ಅಡಿ ಗೋಪುರವಿದೆ. ಮತ್ತೊಂದು ಗೋಪುರವು 128 ಅಡಿ ನೆಲದಿಂದ ಗೋಪುರದ ತುತ್ತತುದಿವರೆಗೆ ಇದೆ. ಮಂದಿರದಲ್ಲಿ 6 ಭಾಗದಲ್ಲಿ ಸಿಂಹದ್ವಾರ, ಕೋಲಿ, ನೃತ್ಯ ಮಂಟಪ, ಗರ್ಭಗುಡಿ, ರಂಗಮಂಟಪ ಇರಲಿದೆ.

ದೇವಾಲಯದ ಜೊತೆಗೆ ವಸ್ತುಪ್ರದರ್ಶನ, ಐತಿಹಾಸಿಕ ಕೇಂದ್ರವನ್ನೂ ನಿರ್ಮಾಣ ಮಾಡಲಾಗುತ್ತದೆ. ಅಷ್ಟೇ ಅಲ್ಲದೆ ವಿಷ್ಣುವಿನ ದಶಾವತಾರ ಪ್ರದರ್ಶನಕ್ಕೆ ಏರ್ಪಾಟು ಮಾಡಲಾಗುತ್ತದೆ. ಈ ಅಂಶಗಳೆಲ್ಲವೂ ನೀಲಿನಲ್ಲಿದ್ದು, ಶಿಲ್ಪ ಕೆತ್ತನೆ ಕೆಲಸ ಭರದಿಂದ ಸಾಗಿದೆ.

Ayodhya temple E

ಕಾರ್ಯಶಾಲೆ ಇತಿಹಾಸ:
ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ 1989ರ ನವೆಂಬರ್ 10ರಂದೇ ನಡೆದಿತ್ತು. ಮುಲಾಯಂ ಸಿಂಗ್ ಯಾದವ್ ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿದ್ದಾಗ ಅಂದರೆ 1990ರಿಂದಲೇ ಕಾರ್ಯಶಾಲೆಯಲ್ಲಿ ಕೆತ್ತನೆ ಕಾರ್ಯ ಆರಂಭವಾಗಿತ್ತು. 1992ರಲ್ಲಿ ಬಾಬ್ರಿ ಮಸೀದಿ ಧ್ವಂಸದಿಂದಾಗಿ ಆರ್‍ಎಸ್‍ಎಸ್, ವಿಶ್ವ ಹಿಂದೂ ಪರಿಷತ್ ಸೇರಿದಂತೆ ಕೆಲ ಸಂಘಟನೆಗಳ ನಾಯಕರ ಮೇಲೆ ಪ್ರಕರಣ ದಾಖಲಾಗಿದ್ದರೂ ಕೆತ್ತನೆ ಕಾರ್ಯ ಮುಂದುವರಿದಿತ್ತು.

ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಸಿಎಂ ಆಗಿದ್ದಾಗಲೂ ರಾಜಸ್ಥಾನ ಮತ್ತು ಗುಜರಾತ್‍ಗಳಿಂದ ಕಲ್ಲುಗಳನ್ನು ಆಮದು ಮಾಡಿಕೊಳ್ಳಲಾಗಿದ್ದು, ಕೆತ್ತನೆ ಕಾರ್ಯ ಮುಂದುವರಿದಿತ್ತು. ಆದರೆ ಇತ್ತೀಚೆಗೆ ಕಾರ್ಯಶಾಲೆಯ ಪ್ರಧಾನ ಶಿಲ್ಪಿ ನಿಧನರಾದ ಬಳಿಕ ಕಾರ್ಯಗಳು ಸ್ಥಗಿತವಾಗಿದ್ದವು. ಈಗಾಗಲೇ ಶೇ.65ರಷ್ಟು ಕಾರ್ಯವು ಪೂರ್ಣಗೊಂಡಿದೆ.

Ayodhya temple F

ಈಗಾಗಲೇ ಉತ್ತರ ಹಾಗೂ ದಕ್ಷಿಣ ಭಾರತದ ಸಾವಿರಾರು ಜನರು ರಾಮ ಮಂದಿರ ನಿರ್ಮಾಣಕ್ಕೆ ಇಟ್ಟಿಗೆಗಳನ್ನು ನೀಡಿದ್ದಾರೆ. ಅವುಗಳಿಗೆ ಮೇಲೆ ಜೈ ಶ್ರೀರಾಮ್ ಎಂದು ಬರೆಯಲಾಗಿದೆ. ಈ ಮೂಲಕ ನೆಲ ಮಹಡಿಯ ನಿರ್ಮಾಣಕ್ಕೆ ಬೇಕಾದ ಕಂಬಗಳು, ಇಟ್ಟಿಗೆ ಎಲ್ಲವೂ ಈಗಲೇ ಸಿದ್ಧವಾಗಿದೆ.

TAGGED:AyodhyaBlueprintPublic TVRam Mandiruttar pradeshಅಯೋಧ್ಯೆಉತ್ತರ ಪ್ರದೇಶನೀಲಿನಕ್ಷೆಪಬ್ಲಿಕ್ ಟಿವಿರಾಮ ಮಂದಿರಸುಪ್ರೀಂಕೋರ್ಟ್
Share This Article
Facebook Whatsapp Whatsapp Telegram

Cinema news

Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi
Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories

You Might Also Like

ballot paper counting india
Bengaluru City

ಈಗ ಅಧಿಕೃತ – ಕರ್ನಾಟಕದಲ್ಲಿ ಇನ್ಮುಂದೆ ಇವಿಎಂ ಬದಲು ಬ್ಯಾಲೆಟ್‌ ಪೇಪರ್‌

Public TV
By Public TV
7 minutes ago
GBA
Bengaluru City

ಜಿಬಿಎ ಚುನಾವಣೆ – ಸುಪ್ರೀಂಗೆ ಅಫಿಡವಿಟ್ ಸಲ್ಲಿಸಿದ ರಾಜ್ಯ ಸರ್ಕಾರ

Public TV
By Public TV
33 minutes ago
Love with Nadaf Bhumika commits suicide Bagalkote Town
Bagalkot

ನದಾಫ್‌ ಜೊತೆ ಪ್ರೀತಿ – ಮನೆಯಲ್ಲೇ ಭೂಮಿಕಾ ಆತ್ಮಹತ್ಯೆ

Public TV
By Public TV
1 hour ago
Yogesh Gowda Sister Akkamma
Dharwad

ನಮ್ಮ ತಮ್ಮನ ಸಾವಿನ ಪ್ರಕರಣ ಎಲ್ಲಾ ರಾಜಕಾರಣಿಗಳಿಗೆ ತಕ್ಕ ಪಾಠವಾಗಬೇಕು: ಯೋಗೇಶ್ ಗೌಡ ಸಹೋದರಿ

Public TV
By Public TV
1 hour ago
RR Nagar Son Kills Mother
Bengaluru City

ಅರೆ ಪ್ರಜ್ಞಾವಸ್ಥೆಯಲ್ಲಿದ್ದ ತಾಯಿಯನ್ನು ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಲೆಗೈದ ಮಗ

Public TV
By Public TV
2 hours ago
ಟಿಸಿಎಸ್‌ನಲ್ಲಿದ್ದ ಬಂಧಿತ ನೌಕರರು
Crime

ಕಾರ್ಪೋರೇಟ್‌ ಜಿಹಾದ್‌ಗೆ ಮಲೇಷ್ಯಾ ಲಿಂಕ್‌ – ವಿದೇಶಿ ಉದ್ಯೋಗ ಮಾರ್ಗದರ್ಶಕನಾಗಿದ್ದ ಧಾರ್ಮಿಕ ಬೋಧಕ!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?