ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳಾಗಬೇಕು ಅಂತ ಸಚಿವರಿಗೆ ಹೈಕಮಾಂಡ್‌ ಹೇಳಿಲ್ಲ: ಸತೀಶ್‌ ಜಾರಕಿಹೊಳಿ

Public TV
3 Min Read
satish jarkiholi

ಬೆಳಗಾವಿ: ಇಲ್ಲಿವರೆಗೆ ಯಾವುದೇ ಸಚಿವರಿಗೆ ಲೋಕಸಭೆ ಚುನಾವಣೆಗೆ ಅಭ್ಯರ್ಥಿಯಾಗಬೇಕೆಂದು ಹೈಕಮಾಂಡ್‌ ಹೇಳಿಲ್ಲ. ಅಭ್ಯರ್ಥಿಗಳ ಆಯ್ಕೆಗಾಗಿ ಮೊದಲು ಅರ್ಜಿ ಕರೆಯಲಾಗುತ್ತೆ ಎಂದು ಸಚಿವ ಸತೀಶ್‌ ಜಾರಕಿಹೊಳಿ (Satish Jarkiholi) ತಿಳಿಸಿದರು.

ನಗರದ ಕಾಂಗ್ರೆಸ್‌ (Congress) ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಲೋಕಸಭೆ ಚುನಾವಣೆಗೆ ತಯಾರಿ ನಡೆದಿದೆ. ಕಾರ್ಯಕರ್ತರು ಚುನಾವಣೆ ಎದುರಿಸಲು ಸಿದ್ಧರಾಗಿದ್ದಾರೆ. ಎಲ್ಲಾ ರೀತಿಯ ಮಾನದಂಡಗಳನ್ನು ಅನುಸರಿಸಿ, ಮೂರು ಹಂತಗಳಲ್ಲಿ ಚರ್ಚಿಸಿದ ನಂತರ ಹೈಕಮಾಂಡ್‌ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತದೆ. ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ಲಿಂಗಾಯತ, ಚಿಕ್ಕೋಡಿ ಕ್ಷೇತ್ರಕ್ಕೆ ಕುರುಬ ಸಮಾಜದ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕೆಂದು ಚಿಂತನೆ ನಡೆದಿದೆ. ರಾಜ್ಯದ 20 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಗೆಲುವಿಗೆ ಗುರಿ ಇಟ್ಟುಕೊಳ್ಳಲಾಗಿದೆ ಎಂದರು. ಇದನ್ನೂ ಓದಿ: ಸರ್ಕಾರಿ ಶಾಲೆಯಲ್ಲಿ ಶೂ ಬದಲು ಚಪ್ಪಲಿ ಭಾಗ್ಯ – ದ್ವಂದ್ವ ನಿಲುವಿನ ಆದೇಶದಿಂದ ಹಠ ಹಿಡಿದ ಮಕ್ಕಳು

telangana congress guarantee

ಅಭ್ಯರ್ಥಿಗಳ ಆಯ್ಕೆಗಾಗಿ ಮೊದಲು ಅರ್ಜಿ ಕರೆಯಲಾಗುತ್ತೆ. ಚುನಾವಣೆಗೆ ಸ್ಪರ್ಧಿಸಲು ಇಚ್ಛಿಸುವವರು ಅರ್ಜಿ ಸಲ್ಲಿಸಬೇಕು. ಅರ್ಜಿಗೆ ಯಾವುದೇ ರೀತಿಯ ಶುಲ್ಕ ಇರುವುದಿಲ್ಲ. ರಾಹುಲ್‌ ಜಾರಕಿಹೊಳಿ, ಮೃಣಾಲ್‌ ಹೆಬ್ಬಾಳ್ಕರ್‌ ಲೋಕಸಭೆಗೆ ಸ್ಪರ್ಧೆ ಮಾಡುತ್ತೇನೆಂದು ಎಲ್ಲಿಯೂ ಹೇಳಿಲ್ಲ ಎಂದು ಸ್ಪಷ್ಟಪಡಿಸಿದರು.

ಹೆಚ್.ಡಿ. ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಜಾರಕಿಹೊಳಿ, ಹೆಚ್.ಡಿ. ಕುಮಾರಸ್ವಾಮಿಯವರು ವಿರೋಧ ಪಕ್ಷದಲ್ಲಿ ಇದ್ದಾರೆ. ಆರೋಪ ಮಾಡಲು ಅವರಿಗೆ ಹಕ್ಕು ಇದೆ. ಮಾತನಾಡುತ್ತಾರೆ, ನಾವು ಮಾತನಾಡಬೇಡ ಅಂತಾ ಹೇಳಲು ಆಗಲ್ಲ. ಹೆಚ್ಡಿಕೆ ಸೋಪಾ ಗಿಪ್ಟ್‌ ಆರೋಪಕ್ಕೆ ಮುಖ್ಯಮಂತ್ರಿ ಕಚೇರಿ ಅಧಿಕಾರಿಗಳು ಸ್ಪಷ್ಟೀಕರಣ ನೀಡುತ್ತಾರೆ. ಅದರ ಬಗ್ಗೆ ನಮಗೆ ಗೊತ್ತಿಲ್ಲ. ಸಚಿವರಿಗೆ ಹಣ ಸಂಗ್ರಹ ಟಾರ್ಗೆಟ್‌ ನೀಡಲಾಗಿದೆ ಎಂದು ಆರೋಪಿಸಲಾಗಿದೆ. ಆ ರೀತಿಯ ಕಂಡಿಷನ್‌ ನಮ್ಮ ಮಂತ್ರಿ ಮಂಡಲದಲ್ಲಿ ನಡೆದಿಲ್ಲ ಎಂದು ಆರೋಪ ತಳ್ಳಿಹಾಕಿದರು. ಇದನ್ನೂ ಓದಿ: ವಿಜಯೇಂದ್ರಗೆ ಮೋದಿ, ಅಮಿತ್‌ ಶಾ ಮಹತ್ವದ ಹೊಣೆ ನೀಡಿದ್ದಾರೆ: ಎಸ್.ಎಂ ಕೃಷ್ಣ ಶ್ಲಾಘನೆ

HD Kumaraswamy

ಕಾಂಗ್ರೆಸ್‌ ಪಕ್ಷ ಸಾಕಷ್ಟು ಯೋಜನೆಗಳನ್ನು ಜನಕ್ಕೆ ನೀಡಿದೆ. ಆದರೆ ಪ್ರಚಾರ ಪಡೆದಿಲ್ಲ. ಪ್ರಚಾರ ಪಡೆಯುವ ಕಾರ್ಯ ಆಗಬೇಕಿದೆ. ಜಾತಿ ಜನಗಣತಿ ವರದಿ ಬಗ್ಗೆ ಗೊತ್ತಿಲ್ಲ. ಅದರಲ್ಲಿ ಏನಿದೆ, ಏನಿಲ್ಲ ಎನ್ನುವ ಅಂಶಗಳ ಕುರಿತು ಚರ್ಚೆ ನಡೆಯಬೇಕು. ಯಾರಿಗೆ ಜಾತಿ ಜನಗಣತಿ ಬಗ್ಗೆ ಗೊಂದಲ ಇದೆ ಅವರು ಸದನದಲ್ಲಿ ಹೇಳಲಿ. ಹೊರಗಡೆ ಹೇಳಿಕೆ ನೀಡಿದರೆ ಗೊಂದಲಕ್ಕೆ ಪರಿಹಾರ ಸಿಗಲ್ಲ ಎಂದರು.

ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ
ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ. ಕೆಲವು ಚಿಕ್ಕ ವಯಸ್ಸಿನ ಯುವಕರು ಗುಂಪು ಕಟ್ಟಿಕೊಂಡು ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದು, ಅದೇ ಕಾರಣದಿಂದ ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಲ್ಲಿ ಕೊಲೆಗಳು ಆಗುತ್ತಿವೆ. ಇದಕ್ಕೆ ಪೊಲೀಸ್‌ ಅಧಿಕಾರಿಗಳು ಕಾರಣರಲ್ಲ. ಪೊಲೀಸರ ಗಮನಕ್ಕೆ ಬಂದರೆ ಕೆಲ ಘಟನೆಗಳನ್ನ ತಡೆಯುತ್ತಾರೆ. ಆದರೆ ಆಕಸ್ಮಿಕವಾಗಿ ನಡೆದರೆ ಏನು ಮಾಡುವುದು ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಸರಿಯಾದ ಸಮಯದಲ್ಲಿ ಆಯ್ಕೆ – ಹೆಚ್‌ಡಿಡಿ ಭೇಟಿಯಾದ ವಿಜಯೇಂದ್ರ

siddu dks 1

ನಾವು ಆಪರೇಶನ್ ಹಸ್ತ ಮಾಡುವುದಿಲ್ಲ
ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಸದಸ್ಯರಿಗೆ ಸ್ವಾತಂತ್ರ್ಯವಾಗಿ ಕೆಲಸ ಮಾಡಲು ಅವರ ನಾಯಕರು ಬಿಡುತ್ತಿಲ್ಲ. ಅದಕ್ಕಾಗಿ ಅವರು ಪದೇ ಪದೇ ಸಭೆ ಮಾಡುತ್ತಿದ್ದಾರೆ. ಜನ ಬಿಜೆಪಿಯವರಿಗೆ ಅಧಿಕಾರ ನೀಡಿದ್ದು, ಅವರು ಆಡಳಿತ ನಡೆಸಲಿ. ನಾವು ಆಪರೇಶನ್ ಹಸ್ತ ಮಾಡುವುದಿಲ್ಲ. ಮಹಾನಗರ ಪಾಲಿಕೆ ಅನುದಾನ ಒಂದೇ ಕಡೆ ಹೋಗಿದ್ದು, ಇದೇ ವಿಚಾರಕ್ಕೆ ಉತ್ತರ ಮತ್ತು ದಕ್ಷಿಣ ಶಾಸಕರಲ್ಲಿ ಚರ್ಚೆ ನಡೆಯುತ್ತಿದೆ ಎಂದು ತಿಳಿಸಿದರು.

ಮಾಜಿ ಸಚಿವ ವೀರಕುಮಾರ ಪಾಟೀಲ್‌, ಮಾಜಿ ಶಾಸಕ ಕಾಕಾಸಾಹೇಬ್ ಪಾಟೀಲ್‌,‌ ಬೆಳಗಾವಿ ಗ್ರಾಮೀಣ ಕಾಂಗ್ರೆಸ್‌ ಅಧ್ಯಕ್ಷ ವಿನಯ ನಾವಲಗಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯಾದರ್ಶಿ ಸುನೀಲ್‌ ಹಣಮನ್ನವರ್‌, ಕೆಪಿಸಿಸಿ ಸದಸ್ಯ ಕಿರಣ ಸಾಧುನ್ನವರ್‌ ಸೇರಿದಂತೆ ಹಲವು ಮುಖಂಡರಿದ್ದರು.

Share This Article