Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Chamarajanagar

ಹೈಕಮಾಂಡ್ ಡಿ.6ರವರೆಗೂ ಮಾತನಾಡದಂತೆ ಸೂಚಿಸಿದೆ: ಸೋಮಣ್ಣ

Public TV
Last updated: November 23, 2023 10:13 pm
Public TV
Share
2 Min Read
SOMANNA
SHARE

ಚಾಮರಾಜನಗರ: ಹೈಕಮಾಂಡ್ ಡಿ.6 ತನಕ ಏನು ಮಾತನಾಡಬೇಡ ಎಂದು ಹೇಳಿದೆ. ಅಲ್ಲಿಯವರೆಗೂ ಕೂಡ ಕಾದು ನೋಡುತ್ತೇನೆ ಎಂದು ಮಾಜಿ ಸಚಿವ ವಿ.ಸೋಮಣ್ಣ (V.Somanna) ಹೇಳಿದ್ದಾರೆ.

ಚಾಮರಾಜನಗರದಲ್ಲಿ (Chamarajanagar) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಸೇರ್ಪಡೆ ವದಂತಿ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್‍ಗೆ ಹೋಗುವ ವಿಚಾರ ನನ್ನ ತಲೆಯಲ್ಲಿ ಇಲ್ಲ. ನನ್ನ ಕೋಳಿಯಿಂದಲೇ ಬೆಳಕಾಗೋದು ಅಂತ ಕೆಲವರು ಎಂದುಕೊಂಡಿದ್ದಾರೆ. ಅದೆಲ್ಲ ನಡಿಯಲ್ಲ, ಮುದುಕಿ ಯಾರು? ಕೋಳಿ ಯಾರು? ಅನ್ನೋದನ್ನ ನೀವೇ ತೀರ್ಮಾನಿಸಿ ಎಂದಿದ್ದಾರೆ. ಇದನ್ನೂ ಓದಿ: ಡಿಕೆಶಿ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ- CBIಗೆ ವಹಿಸಿದ್ದ ಕೇಸ್ ಹಿಂಪಡೆಯಲು ಸಂಪುಟ ಸಮ್ಮತಿ

ಇನ್ನೂ 64 ವಿದ್ಯೆಯಲ್ಲಿ 62 ವಿದ್ಯೆ ಗೊತ್ತು ಎಂಬ ಮದುವೆ ವಿಚಾರದ ಕಥೆ ಹೇಳಿ, ಪರೋಕ್ಷವಾಗಿ ವಿಜಯೇಂದ್ರ (B.Y Vijayendra) ಅವರಿಗೆ ಟಾಂಗ್ ಕೊಟ್ಟಿದ್ದಾರೆ. 64 ವಿದ್ಯೆಯಲ್ಲಿ 62 ವಿದ್ಯೆಯಷ್ಟೆ ಅವರಿಗೆ ಗೊತ್ತಿದೆ. ಅವರಿಗೆ ಸ್ವಂತ ಬುದ್ದಿ ಇಲ್ಲ. ಬೇರೆ ಯಾರು ಹೇಳೋದನ್ನು ಕೇಳಲ್ಲ ಎಂದು ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೇ ರೆಬೆಲ್ ನಾಯಕರಾದ ಬೆಲ್ಲದ್, ಲಿಂಬಾವಳಿ, ಯತ್ನಾಳ್ ಹೇಳಿಕೆಗಳನ್ನು ಸಮರ್ಥಿಸಿಕೊಂಡರು. ಇವತ್ತಿನ ಪರಿಸ್ಥಿತಿ ಸೋಮನಹಳ್ಳಿ ಮುದುಕಿ ಕಥೆಯಾಗಿದೆ. ಅದನ್ನು ಡಿ.6 ತನಕ ಹೇಗೆ ಬಗೆ ಹರಿಸುತ್ತಾರೆ ಕಾದು ನೋಡೋಣವೆಂದು ಹೇಳಿದ್ದಾರೆ.

ನನ್ನ ಜೀವನದಲ್ಲಿ ಯಾರನ್ನೂ ಭೇಟಿ ಮಾಡುವ ಪರಿಸ್ಥಿತಿ ನನಗೆ ಬಂದಿಲ್ಲ. ನಾನು ಇನ್ನೊಬ್ಬರ ಬಳಿ ಹೋಗಿ ಹಲ್ಲು ಕಿಸಿದು, ನನ್ನನ್ನು ಪಾರ್ಟಿಗೆ ಸೇರಿಸಿಕೊಳ್ಳಿ ಎಂದು ಹೇಳುವುದಿಲ್ಲ. ನನಗೆ ಆ ಗತಿ ಬಂದಿಲ್ಲ. ನಾನು ಬೆಳೆದಿರುವುದು ಜೆ.ಎಚ್.ಪಟೇಲ್, ದೇವೇಗೌಡ, ರಾಮಕೃಷ್ಣ ಹೆಗಡೆಯವರ ಗರಡಿಯಲ್ಲಿ. ನಾನು ಸ್ವಾಭಿಮಾನ, ಸಂಸ್ಕಾರ ಇಟ್ಟುಕೊಂಡು ಬದುಕುತ್ತಿದ್ದೇನೆ ಎಂದಿದ್ದಾರೆ.

ಸಚಿವ ರಾಜಣ್ಣ ಅವರಿಗೆ ಕರೆ ಮಾಡಿದ ವಿಚಾರವಾಗಿ, ಸಿದ್ದಗಂಗಾ ಮಠದ ಕಾರ್ಯಕ್ರಮಕ್ಕೆ ಆಹ್ವಾನ ನೀಡಲು ಕರೆ ಮಾಡಿದ್ದೆ. ನಾನೇನು ಶಕ್ತಿ ಪ್ರದರ್ಶನಕ್ಕೆ ಮಠವನ್ನು ಬಳಸಿಕೊಳ್ಳುವುದಿಲ್ಲ. ಅಷ್ಟೊಂದು ಕಿರಾತಕ ನಾನಲ್ಲ. ನಮ್ಮ ಕುಟುಂಬದಿಂದ ಗುರು ಭವನ ಕಟ್ಟಿದ್ದೇವೆ. ಆ ಕಾರ್ಯಕ್ರಮಕ್ಕೆ ಎಲ್ಲಾ ಪಕ್ಷದವರು ಬರುತ್ತಾರೆ. ಅದೇ ರೀತಿ ಆ ಜಿಲ್ಲೆಯ ಇಬ್ಬರು ಸಚಿವರನ್ನು ಆಹ್ವಾನ ಮಾಡಿದ್ದೇನೆ ಎಂದಿದ್ದಾರೆ.

ನಾನು ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ಕೇಳಿದ್ದೆ. ಆ ವಿಚಾರ ಏನಾಗಿದೆ ಎಂದು ಡಿ.6 ರಂದು ಹೇಳುತ್ತೇನೆ. ಯಡಿಯೂರಪ್ಪ ಅವರು ಸಂಪರ್ಕ ಮಾಡಿದ್ದರಾ? ಎಂಬ ಪತ್ರ ಕರ್ತರ ಪ್ರಶ್ನೆಗೆ, ಯಡಿಯೂರಪ್ಪನೂ ಇಲ್ಲ, ತಿಮ್ಮಪ್ಪ, ಯಾವ ಬೊಮ್ಮಪ್ಪ, ನನಗೆ ಯಾರೂ ಕರೆ ಮಾಡಿಲ್ಲ. ನಾನು ಯಾರನ್ನೂ ಸಂಪರ್ಕ ಮಾಡುವ ಪರಿಸ್ಥಿತಿಯಲ್ಲಿಯೂ ಇಲ್ಲ. ಲೋಕಸಭೆ ಸ್ಪರ್ಧೆ ಕುರಿತು ನಾನು ಕಂಟೆಂಡರೂ ಅಲ್ಲ, ಕಾಂಪಿಟೇಟರೂ ಅಲ್ಲ. ಯಾರನ್ನೂ ಕೂಡ ನನ್ನ ಜೊತೆ ಹೋಲಿಕೆ ಮಾಡಬೇಡಿ. ನೀವು ನೋಡಿದ್ದೀರಾ ಏನೇನು ಹಲ್ಕಾ ಕೆಲ್ಸ ಆಯ್ತು ಎಂದು ನಿಮಗೆ ಗೊತ್ತಿದೆ. ನನಗೆ ನನ್ನದೇ ಆದ ದುಡಿಮೆ ಇದೆ. ಶ್ರಮ ಇದೆ. ಸೋಮಣ್ಣ ನಿಂತ ನೀರಲ್ಲ, ಹರಿಯುವ ನೀರು. ನನ್ನ ಅಂತರಾಳದ ನೋವನ್ನು ವರಿಷ್ಠರಿಗೆ ತಿಳಿಸಿದ್ದೇನೆ. ಎಲ್ಲೆಲ್ಲಿ ತಪ್ಪಾಗಿದೆ ಎನ್ನುವ ಮಾಹಿತಿಯನ್ನು ವರಿಷ್ಠರಿಗೆ ತಿಳಿಸಿದ್ದೇನೆ. ಡಿ.6 ರಂದು ಎಲ್ಲವನ್ನೂ ಕೂಡ ವಿವರಿಸುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಭಾರತ ವಿಶ್ವಕಪ್ ಸೋಲಲು ಇಂದಿರಾ ಗಾಂಧಿ ಕಾರಣವೆಂದ ಅಸ್ಸಾಂ ಸಿಎಂ!

TAGGED:B.Y vijayendrabjpchamarajanagarpoliticsV.Somannaಚಾಮರಾಜನಗರಬಿಜೆಪಿರಾಜಕೀಯಸೋಮಣ್ಣ
Share This Article
Facebook Whatsapp Whatsapp Telegram

Cinema Updates

Kamal Haasan
ಕಮಲ್ `ಕನ್ನಡ’ ವಿವಾದ – ಜೂ.20ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್
12 hours ago
Kangana Ranaut to bengaluru
ಬೆಂಗಳೂರಿನ ಶಿವೋಹಂ ಶಿವ ದೇವಸ್ಥಾನಕ್ಕೆ ಭೇಟಿ ನೀಡಿದ ಕಂಗನಾ ರಣಾವತ್‌
13 hours ago
Timmana Mottegalu
ಜೂ.27ಕ್ಕೆ `ತಿಮ್ಮನ ಮೊಟ್ಟೆಗಳು’ ರಿಲೀಸ್
15 hours ago
Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
1 day ago

You Might Also Like

krs dam selfie
Latest

ಕೆಆರ್‌ಎಸ್ ಅಣೆಕಟ್ಟೆಯಲ್ಲಿ ಭದ್ರತಾ ವೈಫಲ್ಯ?- ಡ್ಯಾಂನ ಕ್ರಸ್ಟ್ ಗೇಟ್ ಬಳಿ ಓಡಾಡುತ್ತ ಸೆಲ್ಫಿ ವೀಡಿಯೋ

Public TV
By Public TV
11 minutes ago
Haveri Car Bus Accident
Crime

ಹಾವೇರಿ | ಸಾರಿಗೆ ಬಸ್‌ಗೆ ಕಾರು ಡಿಕ್ಕಿ – ಇಬ್ಬರು ದುರ್ಮರಣ, ಓರ್ವ ಗಂಭೀರ

Public TV
By Public TV
52 minutes ago
Narayanapura Dam
Districts

ನಾರಾಯಣಪುರ ಜಲಾಶಯಕ್ಕೆ ಒಳಹರಿವು ಹೆಚ್ಚಳ – ಕೃಷ್ಣಾ ನದಿಗೆ 29,226 ಕ್ಯೂಸೆಕ್ ನೀರು ಬಿಡುಗಡೆ

Public TV
By Public TV
1 hour ago
Ahmedabad Air India Plane Crash 2
Latest

ಏರ್‌ ಇಂಡಿಯಾ ವಿಮಾನ ದುರಂತ – ಸಾವಿನ ಸಂಖ್ಯೆ 274ಕ್ಕೆ ಏರಿಕೆ

Public TV
By Public TV
1 hour ago
Ahmedabad Air India Plane Crash 1
Latest

ಅಹಮದಾಬಾದ್ ವಿಮಾನ ಪತನ – 5 ತಂಡಗಳಿಂದ ತನಿಖೆ

Public TV
By Public TV
1 hour ago
Ahmedabad Plane Crash 1 1
Latest

ಬ್ಲ್ಯಾಕ್‌ಬಾಕ್ಸ್‌ನಲ್ಲಿ ಅಡಗಿದೆ ವಿಮಾನ ದುರಂತದ ರಹಸ್ಯ – ನಾಳೆಯೊಳಗೆ ಅಪಘಾತಕ್ಕೆ ಅಸಲಿ ಕಾರಣ ಸಿಗುತ್ತಾ?

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?