– ಎಸ್ಟಿ ಸಮುದಾಯಕ್ಕೆ 2 ಸಚಿವ ಸ್ಥಾನ ಕೊಡಬೇಕು
ಬೆಂಗಳೂರು: ಸಿಎಂ-ಡಿಸಿಎಂ ನಡುವೆ ಕುರ್ಚಿ ಗಲಾಟೆ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಹೈಕಮಾಂಡ್ ಹೇಳಿದಂತೆ ನಾವೆಲ್ಲ ಶಾಸಕರು ಕೇಳುತ್ತೇವೆ ಅಂತ ಶಾಸಕ ಬಸನಗೌಡ ದದ್ದಲ್ (Basanagouda Daddal) ತಿಳಿಸಿದ್ದಾರೆ.
ಸಿಎಂ-ಡಿಸಿಎಂ ನಡುವೆ ಕುರ್ಚಿ ಗಲಾಟೆ ವಿಚಾರಕ್ಕೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಡಿಕೆ ಶಿವಕುಮಾರ್ಗೆ (DK Shivakumar) ಸಿಎಂ ಸ್ಥಾನ ಬಿಟ್ಟು ಕೊಡಿ ಅಂತ ಯಾವ ಶಾಸಕರು ಮಾತಾಡಿದ್ದಾರೋ ಗೊತ್ತಿಲ್ಲ. ಅವರಿಗೆ ಇರೋ ಮಾಹಿತಿ ಏನು ಅಂತ ನಮಗೆ ಗೊತ್ತಿಲ್ಲ. ಏನೇ ಬದಲಾವಣೆ ಆದ್ರು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಕಾಂಗ್ರೆಸ್ ರಾಷ್ಟ್ರೀಯ ಪಕ್ಷ. ಹೈಕಮಾಂಡ್ ತೀರ್ಮಾನಕ್ಕೆ ನಾವೆಲ್ಲರು ಬದ್ಧರಾಗಿ ಇರ್ತೀವಿ. ಎಲ್ಲಾ ಶಾಸಕರು ಹೈಕಮಾಂಡ್ ಸೂಚನೆಗೆ ಬದ್ಧರಾಗಿ ಇರುತ್ತೇವೆ ಅಂತ ಸ್ಪಷ್ಟಪಡಿಸಿದರು. ಇದನ್ನೂ ಓದಿ: ರಾಜ್ಯ ರಾಜಕೀಯಕ್ಕೆ ಮರಳುವ ಸುಳಿವು ನೀಡಿದ ರೋಷನ್ ಬೇಗ್
ಡಿಕೆ ಶಿವಕುಮಾರ್ಗೆ ಸ್ಥಾನ ಬಿಟ್ಟು ಕೊಡಬೇಕು ಅಂತ ಕೆಲವು ಶಾಸಕರು ಹೇಳಬಹುದು. ನಾವೆಲ್ಲರು ಹೈಕಮಾಂಡ್ ಸಿದ್ಧಾಂತದಲ್ಲಿ ಇರೋ ಶಾಸಕರು. ಹೈಕಮಾಂಡ್ ಏನು ಹೇಳ್ತಾರೋ ಕೇಳ್ತೀವಿ ಎಂದರು. ಇದನ್ನೂ ಓದಿ: ಕುಡಿಯೋದು ಬಿಡು ಎಂದಿದ್ದಕ್ಕೆ 11 ವರ್ಷದ ಮಗಳನ್ನೇ ಕೊಂದ ಪಾಪಿ ತಾಯಿ!
ಸಿದ್ದರಾಮಯ್ಯ 5 ವರ್ಷ ಇರ್ತಾರಾ ಎಂಬ ಪ್ರಶ್ನೆಗೆ ಅದರ ಬಗ್ಗೆ ಗೊತ್ತಿಲ್ಲ. ಹೈಕಮಾಂಡ್ ತೀರ್ಮಾನದಂತೆ ಸಿದ್ದರಾಮಯ್ಯ ಇರ್ತಾರೆ. ಹೈಕಮಾಂಡ್ ಹೇಳೋವರೆಗೂ ಸಿದ್ದರಾಮಯ್ಯ ಇರ್ತಾರೆ ಎಂದು ಹೇಳಿದರು. ಇದನ್ನೂ ಓದಿ: ಪ್ರಧಾನಿ ಕುರ್ಚಿ ಬಳಿ ಕೈ ಮಹಿಳಾ ಸದಸ್ಯರ ಪ್ರತಿಭಟನೆಯ ವಿಡಿಯೋ ಬಿಡುಗಡೆ – ಕಿರಣ್ ರಿಜಿಜು ಆಕ್ರೋಶ
ಡಿಸಿಎಂ ದೆಹಲಿಗೆ ಹೋಗಿರೋ ವಿಚಾರಕ್ಕೆ ಡಿಕೆಶಿವಕುಮಾರ್ ಇಲಾಖೆ ಸಚಿವರ ಭೇಟಿಗೆ ಮತ್ತು ಹೈಕಮಾಂಡ್ ನಾಯಕರ ಭೇಟಿಗೆ ಹೋಗ್ತಾ ಇರ್ತಾರೆ. ನಮ್ಮ ರಾಷ್ಟ್ರೀಯ ನಾಯಕರನ್ನ ಭೇಟಿಯಾಗೋದು ಸಹಜ. ಪಕ್ಷದಲ್ಲಿ ಯಾವುದೇ ಕುರ್ಚಿ ಗೊಂದಲ ಇಲ್ಲ.ನಮಗೇನು ಗೊಂದಲ ಇದೆ ಅಂತ ಅನ್ನಿಸುತ್ತಿಲ್ಲ.ನಮ್ಮ ನಮ್ಮ ಕ್ಷೇತ್ರದಲ್ಲಿ ಕೆಲಸ ಆಗ್ತಿದೆ. ಶಾಸಕಾಂಗ ಸಭೆಯಲ್ಲಿ 2.5 ವರ್ಷ ಸಿಎಂ ಅಂತ ಯಾವುದೇ ಚರ್ಚೆ ಆಗಿಲ್ಲ ಅಂತ ಸ್ಪಷ್ಟಪಡಿಸಿದರು. ಇದನ್ನೂ ಓದಿ: ಚಾರ್ಮಾಡಿ ದಟ್ಟಡವಿ ಮಧ್ಯೆ ಆನೆ, ಅಪಘಾತದ ಆತಂಕದಲ್ಲಿ ಮಂಜುನಾಥನ ಭಕ್ತರ ಪಾದಯಾತ್ರೆ!
ಎಸ್ಟಿ ಸಮುದಾಯಕ್ಕೆ ಸಚಿವ ಸ್ಥಾನ ನೀಡುವ ವಿಚಾರಕ್ಕೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ಸಮುದಾಯಕ್ಕೆ 3 ಸಚಿವ ಸ್ಥಾನ ಕೊಟ್ಟಿದ್ದರು. ಈಗ ಎರಡು ಸ್ಥಾನ ಖಾಲಿ ಇದೆ. ಎಸ್ಟಿ ಸಮುದಾಯಕ್ಕೆ ಬಾಕಿ ಇರೋ 2 ಸಚಿವ ಸ್ಥಾನ ಕೊಡಬೇಕು. ಸತೀಶ್ ಜಾರಕಿಹೋಳಿ ನೇತೃತ್ವದಲ್ಲಿ ಸಮುದಾಯದ ಎಲ್ಲಾ ಶಾಸಕರ ಒತ್ತಾಯ ಇದೆ. ಸಮುದಾಯದ ಯಾವುದೇ ಶಾಸಕರಿಗಾದರೂ ಸಚಿವ ಸ್ಥಾನ ಕೊಡಬೇಕು ಅಂತ ನಮ್ಮ ಒತ್ತಾಯ ಇದೆ ಎಂದು ತಿಳಿಸಿದರು. ಇದನ್ನೂ ಓದಿ: ಕದ್ದುಮುಚ್ಚಿ ಮಾತನಾಡಿಲ್ಲ, ನಾನು ಸಿಎಂ ಏನು ಮಾತನಾಡಿದ್ದೇವೆ ಅನ್ನೋದು ಗೊತ್ತಿದೆ: ಡಿಕೆಶಿ

