ಬೆಂಗಳೂರು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ವಿರುದ್ಧ ಅಶ್ಲೀಲ ಪದ ಬಳಕೆ ಪ್ರಕರಣದಲ್ಲಿ ಬಿಜೆಪಿ ಪರಿಷತ್ ಸದಸ್ಯ ಸಿಟಿ ರವಿ (CT Ravi) ಅವರಿಗೆ ಹೈಕೋರ್ಟ್ (High Court) ತಾತ್ಕಾಲಿಕ ರಿಲೀಫ್ ನೀಡಿದೆ.
ಎಫ್ಐಆರ್ ರದ್ದು ಕೋರಿ ಸಿಟಿ ರವಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ಹೈಕೋರ್ಟ್ನಲ್ಲಿ ನಡೆಯಿತು. ತನಿಖೆಯ ವ್ಯಾಪ್ತಿಯ ಪ್ರಶ್ನೆಯನ್ನು ತೀರ್ಮಾನಿಸಬೇಕಿದೆ ಎಂದು ಅಭಿಪ್ರಾಯಪಟ್ಟು ಫೆ.20 ರವರೆಗೆ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಪೀಠ ಮಧ್ಯಂತರ ತಡೆ ನೀಡಿ ನೀಡಿ ದೂರುದಾರೆ ಲಕ್ಷ್ಮಿ ಹೆಬ್ಬಾಳ್ಕರ್ ನೋಟಿಸ್ ಜಾರಿ ಮಾಡಿದೆ. ಇದನ್ನೂ ಓದಿ: ಬಿಗ್ ಬಾಸ್ ವಿನ್ನರ್ ಹನುಮಂತಗೆ ಹುಟ್ಟೂರಲ್ಲಿ ಅದ್ದೂರಿ ಸ್ವಾಗತ
ಸಿಟಿ ರವಿ ಪರ ವಾದ ಮಂಡಿಸಿದ ಪ್ರಭುಲಿಂಗ ನಾವದಗಿ, ಸದನದೊಳಗೆ ಭೀತಿರಹಿತವಾಗಿ ಮಾತನಾಡಲು ಅವಕಾಶವಿದೆ. ಮಾನನಷ್ಟ ಪ್ರಕರಣದ ಭೀತಿಯಿಲ್ಲದೇ ಚರ್ಚೆ ನಡೆಸಬಹುದು. ಮಹಿಳೆ ಗೌರವಕ್ಕೆ ಧಕ್ಕೆಯಾಗುವ ಮಾತುಗಳಿದ್ದರೂ ಸಭಾಪತಿ ಕ್ರಮ ಕೈಗೊಳ್ಳಬಹುದು ಎಂದು ಹೇಳಿದರು.
ಎಸ್ಪಿಪಿ ಬಿ.ಎ.ಬೆಳ್ಳಿಯಪ್ಪ ಅವರು,ರವಿ ಅವರ ಧ್ವನಿ ಮಾದರಿ ಪಡೆಯಲು ಅವಕಾಶ ನೀಡಬೇಕೆಂದು. ಸದನದ ವ್ಯಾಪ್ತಿಯ ಚರ್ಚೆಗೆ ಮಾತ್ರ ಕ್ರಮದಿಂದ ವಿನಾಯಿತಿ ಇದೆ. ಟೇಬಲ್ ಮುರಿದು ದಾಂಧಲೆ, ಅಶ್ಲೀಲ ಪದ ಬಳಕೆಗೆ ವಿನಾಯಿತಿ ಇಲ್ಲ ಎಂದು ವಾದಿಸಿದರು.