Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Karnataka

ಸಚಿವ ಕೆ.ಜೆ ಜಾರ್ಜ್ ಪುತ್ರನ ಅರಣ್ಯದೊಳಗಿನ ಜಮೀನಿಗೆ ದಾರಿ ಬಂದ್‌ – ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್‌

Public TV
Last updated: November 16, 2024 7:49 pm
Public TV
Share
3 Min Read
COURT
SHARE

ಮಡಿಕೇರಿ: ರಾಜ್ಯ ಸರ್ಕಾರದ ಇಂಧನ ಸಚಿವರಾಗಿರುವ ಕೆ.ಜೆ ಜಾರ್ಜ್ (KJ George) ಅವರ ಪುತ್ರ ರಾಣಾ ಜಾರ್ಜ್ ಅವರು ಹೆಚ್.ಡಿ ಕೋಟೆ ಬಳಿಯ ಗ್ರಾಮಗಳ ಅರಣ್ಯದೊಳಗೆ ಕೃಷಿ ಸಂಬಂಧಿತ ತೋಟ ಹಾಗೂ ಜಮೀನು ಹೊಂದಿದ್ದಾರೆ. ಆದರೆ, ಅರಣ್ಯದೊಳಗಿರುವ ಜಮೀನಿಗೆ ಹೋಗದಂತೆ ರಾಜ್ಯ ಸರ್ಕಾರ ತಡೆ ನೀಡಿತ್ತು. ಈ ಸಂಬಂಧ ಪ್ರಕರಣ ಕೈಗೆತ್ತಿಕೊಂಡ ಹೈಕೋರ್ಟ್‌ (Karnataka Highcourt) ವಿಚಾರಣೆ ಬಳಿಕ ರಾಜ್ಯ ಸರ್ಕಾರಕ್ಕೆ ನೋಟೀಸ್ ಜಾರಿ ಮಾಡಲಾಗಿದೆ. ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಸಚಿವರು, ಕೋರ್ಟ್‌ ತೀರ್ಮಾನ ಏನೇ ಬಂದರೂ ಎಲ್ಲರೂ ತಲೆಬಾಗಬೇಕು ಎಂದಿದ್ದಾರೆ.

KJ George

ಸರ್ಕಾರದ ವಿರುದ್ಧ ತಮ್ಮ ಮಗ ಹೋಗಿದ್ದಾರೆ. ಎಂದು ಯಾಕೆ ಹೇಳುತ್ತೀರಿ ಅವರು ತಮ್ಮ ಹಕ್ಕನ್ನು ಕೋರ್ಟ್‌ನಲ್ಲಿ‌ ಕೇಳಿದ್ದಾರೆ. ‌ನಾನು ಮಂತ್ರಿಯಾಗಿ ಪ್ರಭಾವ ಬೀರಿ ಅದಕ್ಕೆ ಅನುಮತಿ ನೀಡಿದ್ರೆ ಮಾದ್ಯಮಗಳಲ್ಲೇ ಅಧಿಕಾರ ದುರುಪಯೋಗ ಮಾಡಿದ್ದೀರಿ ಎಂದು ಹೇಳುತ್ತಿದ್ದರು. ತಮ್ಮ ಮಗ ರಾಣಾ ಜಾರ್ಜ್‌ (Rana George) ಅವರು ತಮ್ಮ ಹಕ್ಕನ್ನು ಕಾನೂನು ರೀತಿಯಲ್ಲಿ ಕೋರ್ಟ್‌ಗೆ ಹೋಗಿ ಕೇಳಿದ್ದಾರೆ. ಕೋರ್ಟ್‌ನಲ್ಲಿ ಈ ಪ್ರಕರಣ ಇರುವಾಗ ಅದರ ಬಗ್ಗೆ ನಾನು ಚರ್ಚೆ ಮಾಡಲ್ಲ. ತೀರ್ಪು ಏನೇ ಬಂದರೂ ತಲೆಬಾಗುತ್ತೇನೆ ಎಂದು ತಿಳಿಸಿದ್ದಾರೆ. ಇದ‌ನ್ನೂ ಓದಿ: ಕಾರಿನೊಳಗೆ ಬೆಂಕಿ ಹಚ್ಚಿಕೊಂಡು ವ್ಯಕ್ತಿ ಆತ್ಮಹತ್ಯೆ? – ಗುರುತು ಪತ್ತೆಗೆ ಪೊಲೀಸರ ಹರಸಾಹಸ

ಏನಿದು ಪ್ರಕರಣ..?
ಮೈಸೂರು ಜಿಲ್ಲೆಯ ಹೆಚ್‌.ಡಿ.ಕೋಟೆ ಬಳಿಯ ಶಂಭುಗೌಡನಹಳ್ಳಿ, ಲಕ್ಕಸೋಗೆ ಗ್ರಾಮಗಳಲ್ಲಿ ಇಂಧನ ಸಚಿವ ಕೆ.ಜೆ ಜಾರ್ಜ್ ಅವರ ಪುತ್ರ ರಾಣಾ ಜಾರ್ಜ್‌ ಜಮೀನು ಹೊಂದಿದ್ದಾರೆ. ಈ ಜಮೀನಿಗೆ ಹೋಗಬೇಕೆಂದರೆ ಹೆಚ್.ಡಿ ಕೋಟೆಯ ನುಗು ವನ್ಯಜೀವಿ ಅಭಯಾರಣ್ಯದಲ್ಲಿನ ರಸ್ತೆ ಮಾರ್ಗದ ಮೂಲಕ ಜಮೀನಿಗೆ ಹೋಗಬೇಕು. ಆದರೆ, ರಾಜ್ಯ ಸರ್ಕಾರದಿಂದ ಅರಣ್ಯದೊಳಗೆ ಜಮೀನಿಗೆ ಹೋಗಲು ಹಾದಿ ಬಳಕೆ ಮಾಡದಂತೆ ನಿರ್ಬಂಧ ವಿಧಿಸಲಾಗಿತ್ತು. ಇದರಿಂದ ಕುಪಿತಗೊಂಡ ರಾಣಾ ಜಾರ್ಜ್ ಸರ್ಕಾರದ ನಿರ್ಬಂಧವನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು.

ಅರಣ್ಯದಲ್ಲಿ ಜಮೀನನ್ನು ಹೊಂದಿದವರು ತಮ್ಮ ಜಮೀನಿಗೆ ಹೋಗಲು ಅವಕಾಶ ನೀಡಬೇಕು. ರಾತ್ರಿ ಹಾಗೂ ಹಗಲಿನ ಸಮಯದಲ್ಲಿ ಅನಿರ್ಬಂಧಿವಾಗಿ ಸಂಚರಿಸಲು ಅನುಮತಿ ಅಗತ್ಯವಿದೆ. ಅನುಮತಿ ನೀಡುವಂತೆ ಅರಣ್ಯಾಧಿಕಾರಿಗೆ ನಿರ್ದೇಶಿಸಬೇಕೆಂದು ಅರ್ಜಿಯಲ್ಲಿ ಉಲ್ಲೇಖ ಮಾಡಿದ್ದರು. ಈ ಅರ್ಜಿ ವಿಚಾರಣೆ ಮಾಡಿದ ಹೈಕೋರ್ಟ್ ಅರಣ್ಯ ಇಲಾಖೆ ಹಾಗೂ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದೆ. ಇದ‌ನ್ನೂ ಓದಿ: BBK 11: ಕಿಚ್ಚನ ಕೋಪಕ್ಕೆ ಚೈತ್ರಾ ಕುಂದಾಪುರ ಗಪ್‌ ಚುಪ್‌- ಅಷ್ಟಕ್ಕೂ ಆಗಿದ್ದೇನು?

ಈ ವೇಳೆ ರಾಣಾ ಜಾರ್ಜ್‌ ಪರ ಹಿರಿಯ ವಕೀಲ ವಿಕ್ರಂ ಹುಯಿಲಗೋಳ ಅವರು, ಅಭಯಾರಣ್ಯದ ವ್ಯಾಪ್ತಿಯಲ್ಲಿ ಜಮೀನು ಹೊಂದಿರುವವರಿಗೆ ಸಂಚರಿಸಲು ವಿನಾಯಿತಿ ಇದೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ–1972ರ ಕಲಂ 27(1)(ಸಿ) ಅಡಿ ವಿನಾಯಿತಿ ಇದೆ. ಆದರೆ, ಅರಣ್ಯ ಇಲಾಖೆ ಅರ್ಜಿದಾರರ ವಿರುದ್ಧ ಕಾನೂನುಬಾಹಿರ ಆದೇಶ ಹೊರಡಿಸಿದೆ. ಇದು ಸಂವಿಧಾನದ 19 (1)(ಡಿ) ವಿಧಿಗೆ ವ್ಯತಿರಿಕ್ತವಾಗಿದೆ. ಮುಕ್ತಸಂಚಾರಕ್ಕೆ ಅಡ್ಡಿ ಮಾಡಿರುವ ಅರಣ್ಯ ಇಲಾಖೆಯ ಈ ನಿರ್ಬಂಧವನ್ನು ರದ್ದುಗೊಳಿಸಬೇಕು ಎಂದು ಮನವಿ ಮಾಡಿದ್ದರು. ಇದ‌ನ್ನೂ ಓದಿ: ಬಿಜೆಪಿ, ಕಾಂಗ್ರೆಸ್ ದೂರು – ನಡ್ಡಾ, ಖರ್ಗೆಯಿಂದ ಸ್ಪಷ್ಟನೆ ಕೇಳಿದ ಚುನಾವಣಾ ಆಯೋಗ

ಈ ಪ್ರಕರಣವನ್ನು ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಹೇಮಂತ ಚಂದನಗೌಡರ್‌ ಅವರಿದ್ದ ಏಕಸದಸ್ಯ ಪೀಠ ರಾಣಾ ಜಾರ್ಜ್ ಪರ ವಕೀಲರು ಹಾಗೂ ರಾಜ್ಯ ಸರ್ಕಾರದ ಪರ ವಕೀಲರ ವಾದ-ಪ್ರತಿವಾದ ಆಲಿಸಿದೆ. ನಂತರ ಅರಣ್ಯ ಇಲಾಖೆಯ ನಿಯಮಾವಳಿಯಲ್ಲಿ ಜಮೀನಿಗೆ ಹೋಗಲು ಅವಕಾಶ ನೀಡಬೇಕು ಎಂಬ ಬಗ್ಗೆ ಉಲ್ಲೇಖವಿದ್ದರೂ, ನಿರ್ಬಂಧ ವಿಧಿಸಿದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅರಣ್ಯ ಇಲಾಖೆ, ಅರಣ್ಯ ಇಲಾಖೆ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ರಾಜ್ಯದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಹೆಡಿಯಾಲ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗೆ ನೋಟಿಸ್‌ ಜಾರಿ ಮಾಡಲಾಗಿದೆ. ಮುಂದಿನ ವಿಚಾರಣೆಯನ್ನು ನ.29ಕ್ಕೆ ಮುಂದೂಡಿಕೆ ಮಾಡಿದ್ದಾರೆ.

TAGGED:ಅರಣ್ಯ ಇಲಾಖೆಕರ್ನಾಟಕ ಸರ್ಕಾರಕರ್ನಾಟಕ ಹೈಕೋರ್ಟ್ಕೆ ಜೆ ಜಾರ್ಜ್ರಾಣಾ ಜಾರ್ಜ್
Share This Article
Facebook Whatsapp Whatsapp Telegram

Cinema Updates

Darshan Vijayalakshmi
ಥಾಯ್ಲೆಂಡ್‌ನಲ್ಲಿರುವ ದರ್ಶನ್ ವಿಜಯಲಕ್ಷ್ಮಿಗೆ ನೋ ಟೆನ್ಷನ್
Cinema Latest Sandalwood Top Stories
Darshan Pavithra
ದರ್ಶನ್‌-ಪವಿತ್ರಾ ಲಿವ್‌ ಇನ್‌ ರಿಲೇಷನ್‌ ಶಿಪ್‌ನಲ್ಲಿದ್ದರು: ಸರ್ಕಾರ ಪರ ವಕೀಲ
Bengaluru City Cinema Court Latest Main Post National Sandalwood
Darshan Court
ದರ್ಶನ್‌ ಜಾಮೀನು ಭವಿಷ್ಯ | ನಾವು ಹೈಕೋರ್ಟ್ ಮಾಡಿದ ತಪ್ಪು ಮಾಡಲ್ಲ, ತರಾತುರಿಯಲ್ಲಿ ಆದೇಶ ಕೊಡಲ್ಲ – ಸುಪ್ರೀಂ
Bengaluru City Cinema Court Latest Main Post National Sandalwood
Appu Cup League
ಅಪ್ಪು ಕಪ್ ಸೀಸನ್ 3; ಜರ್ಸಿ ಅನಾವರಣ
Bengaluru City Cinema Karnataka Latest Top Stories
The Task Movie
ಭೀಮ ಖ್ಯಾತಿಯ ಜಯ ಸೂರ್ಯ ನಟನೆಯ `ದಿ ಟಾಸ್ಕ್’ ಚಿತ್ರೀಕರಣ ಮುಕ್ತಾಯ
Cinema Latest Sandalwood Top Stories

You Might Also Like

Madikeri Teacher Suicide
Crime

Madikeri | ನೇಣು ಬಿಗಿದ ಸ್ಥಿತಿಯಲ್ಲಿ ಶಿಕ್ಷಕಿಯ ಶವ ಪತ್ತೆ – ಕೊಲೆ ಶಂಕೆ, ಕುಟುಂಬಸ್ಥರಿಂದ ದೂರು

Public TV
By Public TV
9 minutes ago
Boeing 787 air india dreamliner
Latest

ಏರ್‌ ಇಂಡಿಯಾ ವಿಮಾನ ಪತನವಾದ 4 ದಿನದ ಬಳಿಕ ಸಿಕ್‌ ಲೀವ್‌ ಹಾಕಿದ್ರು 100ಕ್ಕೂ ಹೆಚ್ಚು ಪೈಲಟ್‌ಗಳು

Public TV
By Public TV
32 minutes ago
savadatti yellamma temple
Belgaum

ಸವದತ್ತಿ ಯಲ್ಲಮ್ಮನ ಗುಡ್ಡಕ್ಕೆ `ಮಾಸ್ಟರ್ ಪ್ಲ್ಯಾನ್’ – ಕಾಮಗಾರಿಗೆ ಸರ್ಕಾರದಿಂದ 215 ಕೋಟಿ ಅನುಮೋದನೆ

Public TV
By Public TV
1 hour ago
HK Patil
Bengaluru City

ಜನತೆಗೆ ಮತ್ತೊಂದು ಶಾಕ್‌; ರಾಜ್ಯದ ಎಲ್ಲಾ ಬಹುಮಹಡಿ, ಎತ್ತರದ ಕಟ್ಟಡಗಳಿಗೆ 1% ಸೆಸ್ ವಿಧಿಸಲು ಕ್ಯಾಬಿನೆಟ್ ಅಸ್ತು

Public TV
By Public TV
1 hour ago
Kalaburagi Student
Districts

ಪರೀಕ್ಷೆ ಬರೆಯಲು ತಂದೆಯ ಕೈ ಹಿಡಿದು ತುಂಬಿ ಹರಿಯುತ್ತಿರುವ ನದಿ ದಾಟಿದ ವಿದ್ಯಾರ್ಥಿನಿ

Public TV
By Public TV
1 hour ago
Dharwad Police Firing
Dharwad

ಧಾರವಾಡ | ವಿಚಾರಣೆ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನ – ಕಳ್ಳರಿಬ್ಬರ ಕಾಲಿಗೆ ಗುಂಡೇಟು

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?