ಬೆಂಗಳೂರು: ಐಎಂಎ (IMA) ನಡೆಸುತ್ತಿದ್ದ ಬೆಂಗಳೂರಿನ (Bengaluru) ಶಿವಾಜಿನಗರದ ನೆಹರೂ ಶಾಲೆಯನ್ನು (Neharu School) ಲಾಕ್ ಮಾಡಲಾಗಿದೆ. ಇದರಿಂದಾಗಿ ಮಕ್ಕಳ ಭವಿಷ್ಯದ ಬಗ್ಗೆ ಆತಂಕಗೊಂಡ ಪೋಷಕರು ಶಾಲಾ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಈಗಾಗಲೇ ಆಸ್ತಿ ಮುಟ್ಟುಗೋಲು ಹಾಕಿ ಹೂಡಿಕೆದಾರರ ಹಣವನ್ನು ವಾಪಸ್ಸು ಕೊಡುವ ಪ್ರಕ್ರಿಯೆ ನಡೆಯುತ್ತಿದೆ. ಹೈಕೋರ್ಟ್ ಆದೇಶದಂತೆ ನಿನ್ನೆ ರಾತ್ರಿ ಐಎಂಐ ನಡೆಸುತ್ತಿದ್ದ ಶಿವಾಜಿನಗರ ಭಾರತಿನಗರದ ನೆಹರೂ ಸ್ಕೂಲ್ ಆಸ್ತಿಯೂ ಕೂಡ ಸೀಜ್ ಆಗಿದ್ದು ನೋಟಿಸ್ ಅಂಟಿಸಲಾಗಿದೆ. ಇದರ ಅರಿವೇ ಇಲ್ಲದೇ ಮಕ್ಕಳನ್ನು ಶಾಲೆಗೆ ಕರೆದುಕೊಂಡು ಬಂದ ಪೋಷಕರಿಗೆ ಶಾಲೆ ಸೀಜ್ ಆಗಿದ್ದು ನೋಡಿ ಫುಲ್ ಶಾಕ್ ಆಗಿದ್ದಾರೆ. ಶಾಲಾ ಆವರಣದಲ್ಲಿ ಧರಣಿ ಕೂತರು. ಸ್ಥಳಕ್ಕೆ ಬಂದ ಪೊಲೀಸರು ಪೋಷಕರನ್ನು ನಿಯಂತ್ರಣಕ್ಕೆ ತರಲು ಹರಸಾಹಸಪಟ್ಟರು. ಪೋಷಕರ ಪ್ರತಿಭಟನೆಗೆ ಎಎಪಿ (AAP) ಕೂಡ ಸಾಥ್ ಕೊಟ್ಟಿತು.
ಗಲಾಟೆ ಜೋರಾಗುತ್ತಿದ್ದಂತೆ ಸ್ಥಳಕ್ಕೆ ಬಂದ ಶಾಸಕ ರಿಜ್ವಾನ್ ಅರ್ಷದ್, ಕ್ಷೇತ್ರ ಶಿಕ್ಷಣಾಧಿಕಾರಿ ಜಯಪ್ರಕಾಶ್ ಸೋಮವಾರ ಶಿಕ್ಷಣ ಇಲಾಖೆಯ ಜೊತೆ ಪೋಷಕರ ಜೊತೆ ಸಭೆ ನಡೆಸುವುದಾಗಿ ಹೇಳಿದರು. ಆದರೆ ಪೋಷಕರು, ಅನುದಾನಿತ ಅಥವಾ ಸರ್ಕಾರಿ ಶಾಲೆಗೆ ದಾಖಲಾತಿ ಮಾಡಿ ಪರ್ಯಾಯ ವ್ಯವಸ್ಥೆ ಬೇಕಾಗಿಲ್ಲ. ಇದೇ ಶಾಲೆಯಲ್ಲಿ ಮುಂದುವರಿಸಿ ಅಂತಾ ಪಟ್ಟು ಹಿಡಿದರು. ಆದರೆ ಇಲ್ಲಿ ಮುಂದುವರಿಸಲು ಅಸಾಧ್ಯ. ಸೋಮವಾರ ಸಭೆಯಲ್ಲಿ ಮುಂದಿನ ನಿರ್ಧಾರ ತೆಗೆದುಕೊಳ್ಳೋಣ ಅಂತಾ ಶಾಸಕರು ಸಮಾಧಾನಪಡಿಸಿದರು.
4 ತಿಂಗಳು ಈಗಾಗಲೇ ಅಕಾಡೆಮಿಕ್ ಇಯರ್ ಶುರುವಾಗಿದೆ. ಮಕ್ಕಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸದೇ ಏಕಾಏಕಿ ಮಕ್ಕಳನ್ನು ಬೀದಿಗೆ ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಪೋಷಕರು 490 ಮಕ್ಕಳನ್ನು ನಾವು ಎಲ್ಲಿಗೆ ಕರೆದುಕೊಂಡು ಹೋಗಬೇಕು ಎಂದು ಗಲಾಟೆ ಮಾಡಿದ್ದಾರೆ. ನಾವು ಇದೇ ಶಾಲೆಯಲ್ಲಿ ಓದಬೇಕು ಅಂತಾ ವಿದ್ಯಾರ್ಥಿಗಳು ಭಾವುಕ ಮಾತುಗಳನ್ನು ಆಡಿದರು. ಇದನ್ನೂ ಓದಿ: ಬೆಲೆ ಮಿತಿ ನ್ಯಾಯುತವಾಗಿಲ್ಲದಿದ್ದರೇ ಜಾಗತಿಕ ಮಾರುಕಟ್ಟೆಗೆ ತೈಲ ಪೂರೈಕೆ ಬಂದ್ – ರಷ್ಯಾ
ಕ್ಷೇತ್ರ ಶಿಕ್ಷಣಾಧಿಕಾರಿ ಜಯಪ್ರಕಾಶ್ ಪಬ್ಲಿಕ್ ಟಿವಿಗೆ ಹೇಳಿಕೆ ನೀಡಿ, ನೆಹರೂ ಸ್ಕೂಲ್ನಲ್ಲಿನ ಗಲಾಟೆ ಗಮನಕ್ಕೆ ಬಂದಿದೆ. ಮಕ್ಕಳ ಭವಿಷ್ಯ ಹಾಳಾಗಲು ಬಿಡುವುದಿಲ್ಲ. ಪರ್ಯಾಯವಾಗಿ ಹತ್ತಿರ ಇರುವ ಸರ್ಕಾರಿ ಅಥವಾ ಅನುದಾನಿತ ಶಾಲೆಯಲ್ಲಿ ಪೋಷಕರ ಜೊತೆ ಮಾತಾನಾಡಿ ಮಕ್ಕಳಿಗೆ ವ್ಯವಸ್ಥೆ ಮಾಡುತ್ತೇವೆ. ಶಾಲೆಗೆ ಭೇಟಿ ನೀಡಿ ಪೋಷಕರ ಜೊತೆ ಮಾತನಾಡಲಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಮಂಗಳೂರು ಹಾಸ್ಟೆಲ್ನ ಕಿಟಕಿ ರಾಡ್ ಮುರಿದು ಪರಾರಿಯಾಗಿದ್ದ ಮೂವರು ವಿದ್ಯಾರ್ಥಿನಿಯರು ಚೆನ್ನೈನಲ್ಲಿ ಪತ್ತೆ