– ಪ್ರತಿಭಟನೆ ಹಿಂಪಡೆದ ಕಡಲ ಮಕ್ಕಳು
ಕಾರವಾರ: ಕೇಂದ್ರ ಸರ್ಕಾರದ ಸಾಗರಮಾಲಾ ಯೋಜನೆಗೆ ಅಡಿ ಆರಂಭಿಸಲಾಗಿದ್ದ 2ನೇ ಹಂತದ ಬಂದರು ವಿಸ್ತರಣೆ ಕಾಮಗಾರಿಗೆ ತಡೆ ನೀಡಿ ಹೈಕೋರ್ಟ್ ಆದೇಶ ನೀಡಿದೆ.
ಕಳೆದ ನಾಲ್ಕು ದಿನದ ಹಿಂದೆ ಬೈತಕೋಲ್ ಬಂದರು ನಿರಾಶ್ರಿತರ ಯಾಂತ್ರಿಕ ದೋಣಿ ಮೀನುಗಾರರ ಸಹಕಾರಿ ಸಂಘದಿಂದ ಬಂದರು ವಿಸ್ತರಣೆ ಕಾಮಗಾರಿ ಪ್ರಶ್ನಿಸಿ ಹೈಕೋರ್ಟಿನಲ್ಲಿ ಅರ್ಜಿ ಸಲ್ಲಿಕೆ ಮಾಡಲಾಗಿತ್ತು. ಇಂದು ವಿಚಾರಣೆಗೆ ತೆಗೆದುಕೊಂಡ ಹೈಕೋರ್ಟ್ ಬಂದರು ವಿಸ್ತರಣೆ ಕಾಮಗಾರಿಗೆ ತಾತ್ಕಾಲಿಕ ತಡೆ ನೀಡಿದ್ದು, ಮುಂದಿನ ಆದೇಶದವರೆಗೂ ಯತಾಸ್ಥಿತಿ ಕಾಪಾಡುವಂತೆ ಸೂಚಿಸಿದೆ.
ಸಾಗರ ಮಾಲಾ ಯೋಜನೆಯನ್ನು ಅನುಷ್ಟಾನ ವಾದ ನಂತರ ಕಾರವಾರ ಬಂದರು ವಿಸ್ತರಣೆಗಾಗಿ ಮೊದಲ ಹಂತದ 126 ಕೋಟಿ ರೂ.ಗಳಲ್ಲಿ ಕಾಮಗಾರಿಯನ್ನು ಪ್ರಾರಂಭಿಸಲಾಗಿತ್ತು. ಇದಕ್ಕೆ ಮೀನುಗಾರರು ವಿರೋಧ ವ್ಯಕ್ತಪಡುಸಿ ನಿರಂತರವಾಗಿ 10 ದಿನದಿಂದ ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನೆ ಉಗ್ರ ರೂಪ ಪಡೆದು 200ಕ್ಕೂ ಹೆಚ್ಚು ಜನರನ್ನು ಬಂಧಿಸಿ ಬಿಡುಗಡೆ ಮಾಡಲಾಗಿತ್ತು. ಸದ್ಯ ಈ ಯೋಜನೆ ಕಾಮಗಾರಿಗೆ ತಾತ್ಕಾಲಿಕ ತಡೆ ಸಿಕ್ಕಿದ್ದು ಕಡಲ ಮಕ್ಕಳು ಹರ್ಷ ವ್ಯಕ್ತಪಡಿಸಿದ್ದಾರೆ.