ಬೆಂಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿ ಮನೆಗೆ ಚಿತ್ರದುರ್ಗದಿಂದ ವಿದ್ಯಾರ್ಥಿಗಳ ದಂಡೇ ಆಗಮಿಸಿದೆ.
ಚಿತ್ರದುರ್ಗ ತಾಲೂಕಿನ ಆಲಘಟ್ಟ ಗ್ರಾಮದ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ಸಿಎಂ ಮನೆಗೆ ಭೇಟಿ ನೀಡಿದ್ದಾರೆ. ವಿದ್ಯಾರ್ಥಿಗಳು ಬೆಳಗ್ಗೆ 6 ಗಂಟೆಯಿಂದ ಸಿಎಂ ಭೇಟಿಗಾಗಿ ಕಾಯುತ್ತಿದ್ದಾರೆ.
ಏಕಾಏಕಿ ಶಾಲೆಯನ್ನು ಹಾಲಘಟ್ಟದಿಂದ ಭರಮಸಾಗರಕ್ಕೆ ಸ್ಥಳಾಂತರಿಸಿರುವ ಹಿನ್ನೆಲೆಯಲ್ಲಿ ಬ್ಯಾಗ್ ಸಹಿತ ಸುಮಾರು 42 ವಿದ್ಯಾರ್ಥಿಗಳು ಆಗಮಿಸಿದ್ದಾರೆ. ಈವರೆಗೂ ಸ್ಥಳಾಂತರ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ. ವಿದ್ಯಾರ್ಥಿಗಳನ್ನು ಅಡ್ಮಿಷನ್ ಮಾಡಿದ ಬಳಿಕ ಏಕಾಏಕಿ ಸ್ಥಳಾಂತರ ಮಾಡಲಾಗಿದೆ.
ಹಾಲಘಟ್ಟದ ಹಳೆಯ ಶಾಲೆಯ ಬಳಿಯೇ ಬಂದು ವಿದ್ಯಾರ್ಥಿಗಳು ಹೋಗುತ್ತಿದ್ದರು. ಮಾಹಿತಿ ಇಲ್ಲದೇ ಸ್ಥಳಾಂತರಗೊಂಡಿರುವುದರಿಂದ ಇದೀಗ ವಿದ್ಯಾರ್ಥಿಗಳ ಪರದಾಡುತ್ತಿದ್ದಾರೆ ಅಂತ ವಿದ್ಯಾರ್ಥಿಗಳೊಂದಿಗೆ ಆಗಮಿಸಿರುವ ಕೆಲ ಪೋಷಕರು ತಿಳಿಸಿದ್ದಾರೆ.