ಬೆಂಗಳೂರು: ರಾಜ್ಯದಲ್ಲಿ ದಿನೇದಿನೇ ಬಿಸಿಲಬ್ಬರ ಹೆಚ್ಚಾಗಿದ್ದು, ದಾಖಲೆ ಪ್ರಮಾಣದ ಉಷ್ಣಾಂಶ ಏರಿಕೆಯಾಗಿದೆ. ಕರಾವಳಿ (Karavali) ಭಾಗದಲ್ಲಿ ಸೂರ್ಯನ ಅಬ್ಬರ ಸಾರ್ವಕಾಲಿಕ ದಾಖಲೆ ಬರೆದಿದೆ.
ಈ ವರ್ಷ ಫ್ರೆಬ್ರವರಿಯಲ್ಲೇ ರಾಜ್ಯದಲ್ಲಿ ಹೀಟ್ ವೇವ್ (Heat Wave) ಕಾಟ ಶುರುವಾಗಿದೆ. ಉತ್ತರ ಕರ್ನಾಟಕಕ್ಕಿಂತಲೂ ಕರಾವಳಿಯಲ್ಲಿ ಅತಿ ಹೆಚ್ಚು ಉಷ್ಣಾಂಶ ದಾಖಲಾಗಿದೆ. ಕರಾವಳಿ ಭಾಗದಲ್ಲಿ ಏಕಾಏಕಿ 5 ಡಿಗ್ರಿಯಷ್ಟು ಗರಿಷ್ಠ ತಾಪಮಾನ ಏರಿಕೆಯಾಗಿದೆ. ಈ ಹಿನ್ನೆಲೆ ಇಂದು ಕರಾವಳಿಗೆ ಬಿಸಿಗಾಳಿ ಎಚ್ಚರಿಕೆಯನ್ನು ಹವಾಮಾನ ಇಲಾಖೆ ಕೊಟ್ಟಿದೆ. ಇದನ್ನೂ ಓದಿ: ನಾರಾಯಣಪುರ ಡ್ಯಾಂನಿಂದ ತೆಲಂಗಾಣಕ್ಕೆ ನೀರು – ರೈತರು ಕಿಡಿ
Advertisement
Advertisement
ವಾಡಿಕೆಯಂತೆ ಸಾಮಾನ್ಯವಾಗಿ ಏಪ್ರಿಲ್, ಮೇ ತಿಂಗಳ ವೇಳೆಗೆ ಜನರು ಈ ಪ್ರಮಾಣದ ಬಿಸಿಲಿನ ಅಬ್ಬರವನ್ನು ಎದುರಿಸುತ್ತಿದ್ದರು. ಆದರೆ ಈ ಬಾರಿ ಫೆಬ್ರವರಿಯಲ್ಲೇ ಸೂರ್ಯ ಅಬ್ಬರಿಸುತ್ತಿದ್ದಾನೆ. ಉತ್ತರ, ದಕ್ಷಿಣ ಒಳನಾಡಿನಲ್ಲಿ ಕಳೆದೊಂದು ವಾರದಿಂದ 1-2 ಡಿಗ್ರಿ ವ್ಯತ್ಯಾಸದಲ್ಲಿ ಬಿಸಿಲು ಹೆಚ್ಚಾಗಿದೆ. ಇದನ್ನೂ ಓದಿ: ಕಲಬುರಗಿ | ಇಎಸ್ಐಸಿ ಆಸ್ಪತ್ರೆಯಲ್ಲಿ ಬಾಣಂತಿ ಸಾವು
Advertisement