Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಕೊಡವರ ಶಸ್ತ್ರಾಸ್ತ್ರ ಹಕ್ಕು ಉಲ್ಲೇಖ, ವಿಶ್ವಾದ್ಯಂತ ಮಾನ್ಯತೆ ಇರೋ ಹಿಜಬ್‌ಗೆ ಕರ್ನಾಟಕದಲ್ಲಿ ಅನುಮತಿ ಯಾಕಿಲ್ಲ: ಸುಪ್ರೀಂನಲ್ಲಿ ವಕೀಲರ ಪ್ರಶ್ನೆ

Public TV
Last updated: September 14, 2022 2:50 pm
Public TV
Share
3 Min Read
HIJAB SUPREME COURT
SHARE

ನವದೆಹಲಿ:ವಿಶ್ವಾದ್ಯಂತ ಹಿಜಬ್‌ಗೆ(Hijab) ಮಾನ್ಯತೆ ಇದೆ, ಕರ್ನಾಟಕದಲ್ಲಿ(Karnataka) ಯಾಕಿಲ್ಲ? ಹಿಜಬ್ ನಿರ್ಬಂಧಿಸುವುದು ಎಷ್ಟು ಸರಿ ಎಂದು ಹಿಜಬ್‌ ಪರ ವಕೀಲರು ಪ್ರಶ್ನಿಸಿದ್ದಾರೆ.

ಶಾಲೆ ಮತ್ತು ಕಾಲೇಜುಗಳ ತರಗತಿಗಳಲ್ಲಿ ಹಿಜಬ್ ನಿಷೇಧಕ್ಕೆ ಸಂಬಂಧಿಸಿದಂತೆ ಹೈಕೋರ್ಟ್(High Court) ಆದೇಶ ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿ ಅರ್ಜಿಗಳನ್ನು ಸುಪ್ರೀಂಕೋರ್ಟ್(Supreme Court) ವಿಚಾರಣೆಗೆ ನಡೆಸುತ್ತಿದೆ. ಕಳೆದ ಐದು ದಿನಗಳಿಂದ ನ್ಯಾ. ಹೇಮಂತ್ ಗುಪ್ತಾ ನೇತೃತ್ವದ ಪೀಠ ವಿಚಾರಣೆ ನಡೆಸುತ್ತಿದೆ.

ಇಂದು ಮೂವರು ವಕೀಲರು ಹಿಜಬ್ ಪರವಾಗಿ ವಾದ ಮಂಡಿಸಿದ್ದಾರೆ. ಮೊದಲು ವಾದ ಆರಂಭಿಸಿದ ಹಿರಿಯ ವಕೀಲ ಆದಿತ್ಯ ಸೋಂಧಿ, ಪ್ರಕರಣ ಬಹಳ ಗಂಭೀರವಾಗಿದೆ. ಸಾಮಾಜಿಕ – ಆರ್ಥಿಕ ಮಾನದಂಡಗಳು ಮತ್ತು ವಿದ್ಯಾರ್ಥಿಗಳು ಹಿನ್ನೆಲೆಯನ್ನು ಇಲ್ಲಿ ಪರಿಗಣಿಸಬೇಕಾಗಿದೆ. ನಾನು ಓದುತ್ತಿದ್ದ ಕಾಲೇಜಿನಲ್ಲಿ ಹಿಜಬ್ ಧರಿಸದ ಮುಸ್ಲಿಂ ಸಹಪಾಠಿಗಳು ಇದ್ದರು. ಹಿಜಬ್ ಎನ್ನುವುದು ಒಂದು ಆಯ್ಕೆಯಾಗಿದ್ದು ಅದಕ್ಕೆ ಅನುಮತಿ ನೀಡಬೇಕಿದೆ.‌ ‌ಕೊಡವರಿಗೆ(Kodava) ಶಸ್ತ್ರಾಸ್ತ್ರಗಳನ್ನು(Arms) ಹೊಂದುವ ಹಕ್ಕಿದೆ ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚಿಗೆ ಈ ತೀರ್ಪು ನೀಡಿದೆ. ಧಾರ್ಮಿಕ ಹೋರಾಟ ಅಥವಾ ಸಾಂಸ್ಕೃತಿಕ ಹಕ್ಕಿನ ನಡುವಿನ ಇರುವುದು ತೆಳುವಾದ ಗೆರೆ ಮಾತ್ರ. ಇವುಗಳನ್ನು ಪ್ರತ್ಯೇಕಿಸುವುದು ಕಷ್ಟ. ಸಾರ್ವಜನಿಕ ಸುವ್ಯವಸ್ಥೆಗಾಗಿ ಹಿಜಬ್ ನಿಷೇಧಿಸಿ ಸರ್ಕಾರ ಆದೇಶ ಮಾಡಿದೆ. ಶಾಲೆಗಳಿಗೆ ಸಮವಸ್ತ್ರ ನಿರ್ಧರಿಸುವ ಅಧಿಕಾರ ನೀಡಿದೆ. ಹಿಜಬ್ ನಿಂದ ಯಾವ ಸುವ್ಯವಸ್ಥೆ ಹಾಳಾಗುತ್ತದೆ? ಹುಡುಗಿಯರು ಹಿಜಬ್ ಧರಿಸುವುದು ಸಾಮಾನ್ಯ ಎಂದರು. ಇದನ್ನೂ ಓದಿ: 200 ಕೋಟಿ ಮೌಲ್ಯದ ಡ್ರಗ್ಸ್‌ ಸಾಗಿಸುತ್ತಿದ್ದ ಪಾಕಿಸ್ತಾನಿ ಹಡಗು ಗುಜರಾತ್‌ನಲ್ಲಿ ವಶ

SUPREME COURT 1

ಬಳಿಕ ವಾದ‌ ಮಂಡಿಸಿದ ಹಿರಿಯ ವಕೀಲ ರಾಜೀವ್ ಧವನ್(Rajeev Dhavan), ಉಡುಗೆ ತೊಡುಗೆಯ ಹಕ್ಕು ವಾಕ್ ಸ್ವಾತಂತ್ರ್ಯದ ಭಾಗವಾಗಿದೆ. ಇದು ಸಾರ್ವಜನಿಕ ಆದೇಶಕ್ಕೆ ಮಾತ್ರ ಒಳಪಟ್ಟಿರುತ್ತದೆ. ಈಗಾಗಲೇ ಉಲ್ಲೇಖಿಸಿರುವ ಪುಟ್ಟಸ್ವಾಮಿ ಮತ್ತು ನಲ್ಸಾ ಪ್ರಕರಣಗಳ ಆದೇಶದಂತೆ ಖಾಸಗಿತನ ಹಕ್ಕಾಗಿದೆ. ಹಿಜಬ್ ಧರಿಸಿದ ವ್ಯಕ್ತಿಯನ್ನು ಧರ್ಮ ಮತ್ತು ಲಿಂಗದ ಆಧಾರದ ಮೇಲೆ ತಾರತಮ್ಯ ಮಾಡಲಾಗುವುದಿಲ್ಲ ಎಂದು ವಾದಿಸಿದರು.

ಈ ಪ್ರಕರಣವನ್ನು ಅದರ ಸರಿಯಾದ ದೃಷ್ಟಿಕೋನದಲ್ಲಿ ವಿಚಾರಣೆ ನಡೆಸಬೇಕು. ಇಂದು ಬಹುಸಂಖ್ಯಾತ ಸಮುದಾಯದಲ್ಲಿ ಇಸ್ಲಾಂ ಎಂದು ಬಂದಿದ್ದನ್ನು ಹೊಡೆದುರುಳಿಸುವ ಅತೃಪ್ತಿ ಬಹಳಷ್ಟಿದೆ. ನನ್ನ ಅರ್ಜಿದಾರರು ಕಾಲೇಜಿನಲ್ಲಿದ್ದು ಹಿಜಬ್ ಧರಿಸಿಯೇ ಕರಾಟೆ ಸ್ಪರ್ಧೆಯಲ್ಲಿ ಸಾಧನೆ ಮಾಡಿದ್ದಾಳೆ. ಪ್ರಪಂಚದಾದ್ಯಂತ ಹಿಜಬ್ ಅನ್ನು ಮಾನ್ಯವೆಂದು ಗುರುತಿಸಲಾಗಿದೆ. ಇದು ಲಿಂಗ ಮತ್ತು ಧಾರ್ಮಿಕ ಹಕ್ಕುಗಳನ್ನು ನಿರ್ಧರಿಸುವ ವಿಷಯವಾಗಿದೆ ಎಂದು ಕೋರ್ಟ್‌ಗೆ ತಿಳಿಸಿದರು.

HIJAB

ಕೇಂದ್ರಿಯ ವಿದ್ಯಾಲಯಗಳಲ್ಲಿ ಹಿಜಬ್‌ಗೆ ಅನುಮತಿ ಇದೆ. ಅದು ಕೇಂದ್ರಿಯ ವಿದ್ಯಾಲಯಕ್ಕೆ ಸಂಬಂಧಿಸಿದ ನಿರ್ಧಾರ ಎಂದು ಅವರು ಹೇಳುತ್ತಾರೆ. ಧರ್ಮ ಮತ್ತು ಅದರ ಆಚರಣೆಗಳನ್ನು ಅಗತ್ಯ ಭಾಗಗಳಲ್ಲ ಎಂದು ಹೇಳುವ ಅಧಿಕಾರ ಹೊರಗಿನವರಿಗಿಲ್ಲ. ಅಂತವುಗಳನ್ನು ನಿಷೇಧಿಸಲು ಜಾತ್ಯಾತೀತ ಸರ್ಕಾರ ಮುಕ್ತವಾಗಿಲ್ಲ. ಲಕ್ಷಾಂತರ ಮಹಿಳೆಯರು ಸ್ಕಾರ್ಫ್ ಧರಿಸುತ್ತಿದ್ದಾರೆ. ಸಾರ್ವಜನಿಕ ಸುವ್ಯವಸ್ಥೆಗೆ ವಿರುದ್ಧವಾಗಿದೆ ಎಂದು ಹೇಳಲು ಏನು ಸಮರ್ಥನೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಸ್ಕೂಲ್ ಬಸ್ಸಿನೊಳಗೆ ಉಸಿರುಗಟ್ಟಿ ಬಾಲಕಿ ಸಾವು ಪ್ರಕರಣ- ಶಾಲೆ ಮುಚ್ಚಲು ಆದೇಶ

ಸಮವಸ್ತ್ರ ನಿಯಮ ರೂಪಿಸುವಾಗ ಬುರ್ಖಾಗೆ ಅವಕಾಶ ನೀಡುವುದಿಲ್ಲ ಎಂದು ಹೇಳಬಹುದು. ಹಿಜಬ್ ನಿರ್ಬಂಧಿಸುವುದು ಎಷ್ಟು ಸರಿ? ಸಮವಸ್ತ್ರ ಬಣ್ಣದೇ ಹಿಜಬ್ ಧರಿಸಲಾಗುತ್ತಿದೆ ಎಂದು ವಾದ ಮಂಡಿಸಿದರು.

mdk kodava festival 7

ಕೊಡವರಿಗೆ ವಿಶೇಷ ವಿನಾಯಿತಿ ಯಾಕೆ?
ಕೊಡಗಿನ ಜನರ ವಿಶಿಷ್ಟ ಸಂಸ್ಕೃತಿಯ ಭಾಗ ಕೋವಿ. ಯೋಧ ಪರಂಪರೆಯ ಜನಾಂಗ ಕೊಡವರಿಗೆ ಕೋವಿ ಬಳಸಲು ವಿಶೇಷ ವಿನಾಯಿತಿಯ ಅನುಮತಿಯಿದೆ. ಇಂಡಿಯನ್ ಆರ್ಮ್ಸ್ ಆಕ್ಟ್ ಸೆಕ್ಷನ್ ಮೂರರ ಪ್ರಕಾರ ಯಾರಿಗೂ ಇಲ್ಲದ ಅನುಮತಿ ಕೊಡವರಿಗೆ ಇದೆ. ಕೊಡಗಿನ ಜನರ ಹಬ್ಬ ಹರಿದಿನ. ಹುಟ್ಟು, ಸಾವು ಎಲ್ಲದರಲ್ಲಿಯೂ ಕೋವಿಯ ಮಹತ್ವವಿದೆ. ಬಂದೂಕು ಕೊಡವರಿಗೆ ಕೇವಲ ಒಂದು ಅಯುಧವಲ್ಲ, ಇದು ಇಲ್ಲಿನ ಜನರ ಧಾರ್ಮಿಕ ಸಂಕೇತ ಕೊಡವರಲ್ಲಿ ಕೋವಿಗೆ ಪೂಜ್ಯಭಾವನೆಯಿದೆ, ಪವಿತ್ರ ಸ್ಥಾನವಿದೆ.

mdk kodava festival 1

ಸಮರ ಸಮುದಾಯವಾಗಿರುವ ಕೊಡವ ಸಮುದಾಯವು ಸ್ವಾತಂತ್ರ್ಯ ಪೂರ್ವದಿಂದಲೂ ಜುಮ್ಮಾ ಹಿಡುವಳಿದಾರರು, ಅಂದಿನಿಂದ ಅವರು ಈ ವಿನಾಯಿತಿಯ ಲಾಭವನ್ನು ಪಡೆಯುತ್ತಿದ್ದಾರೆ. ಹೀಗಾಗಿ ಈಗಲೂ ಅವರಿಗೆ ಅನಿರ್ದಿಷ್ಟ ಅವಧಿಗೆ ವಿನಾಯಿತಿ ನೀಡಲಾಗಿದೆ. ಈ ವಿನಾಯಿತಿ ಕೆಲವು ನಿಯಮಗಳು ಮತ್ತು ಷರತ್ತುಗಳಿಗೆ ಒಳಪಟ್ಟಿರುತ್ತದೆ. ಆದ್ದರಿಂದ, ಅಧಿಸೂಚನೆಯ ಸಾಂವಿಧಾನಿಕ ಸಿಂಧುತ್ವವನ್ನು ಎತ್ತಿಹಿಡಿಯಲಾಗಿದೆ ಎಂದು ಈ ಹಿಂದೆ ಹೈಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿತ್ತು.

Live Tv
[brid partner=56869869 player=32851 video=960834 autoplay=true]

TAGGED:high courtHijabKodavaSupreme Courtಕರ್ನಾಟಕಸಮವಸ್ತ್ರಸುಪ್ರೀಂ ಕೋರ್ಟ್ಹಿಜಬ್
Share This Article
Facebook Whatsapp Whatsapp Telegram

You Might Also Like

Shivamogga Heart Attack copy
Crime

Shivamogga | ದೆವ್ವ ಬಿಡಿಸುತ್ತೇನೆಂದು ಚಿತ್ರಹಿಂಸೆ – ಮಹಿಳೆ ಸಾವು

Public TV
By Public TV
25 minutes ago
siddaramaiah student letter
Chamarajanagar

ನಮಗೆ ಕುಡಿಯೋಕೆ ನೀರು ಕೊಡಿ: ಸಿಎಂಗೆ ವಿದ್ಯಾರ್ಥಿನಿ ಪತ್ರ

Public TV
By Public TV
35 minutes ago
Bommanahalli Rowdy Sheeter
Crime

ಕುಡಿದ ಮತ್ತಿನಲ್ಲಿ ರೌಡಿಶೀಟರ್‌ನಿಂದ ದಾಂಧಲೆ – 18ಕ್ಕೂ ಹೆಚ್ಚು ವಾಹನಗಳ ಗಾಜು ಪುಡಿಪುಡಿ, ಮೂವರು ಅರೆಸ್ಟ್

Public TV
By Public TV
40 minutes ago
Okalipuram Road Rage
Bengaluru City

ನಡುರಸ್ತೆಯಲ್ಲಿ ಲಾಂಗ್ ತೆಗೆದು ಗೂಂಡಾವರ್ತನೆ – ಇನ್ನೋವಾ ಕಾರು ಪುಡಿಗಟ್ಟಿದ ಸಾರ್ವಜನಿಕರು

Public TV
By Public TV
1 hour ago
Karnataka Congress Meet to Mangaluru ashraf Family
Dakshina Kannada

ಕುಡುಪು ಮೈದಾನದಲ್ಲಿ ಹತ್ಯೆಯಾಗಿದ್ದ ಅಶ್ರಫ್ ಕುಟುಂಬಸ್ಥರ ಭೇಟಿಯಾದ ರಾಜ್ಯ ಕಾಂಗ್ರೆಸ್ ನಿಯೋಗ

Public TV
By Public TV
2 hours ago
Anna Bhagya Rs 260 crore rent due Lorry owners call for indefinite strike against karnataka govt 2
Bengaluru City

ಅನ್ನ ಭಾಗ್ಯ | 260 ಕೋಟಿ ಬಾಡಿಗೆ ಬಾಕಿ – ಇಂದಿನಿಂದ ಸಾಗಾಣಿಕೆ ಬಂದ್‌

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?