ಬೆಂಗಳೂರು: ಕರ್ನಾಟಕ ಶಾಂತಿಗೆ ಹೆಸರಾದ ರಾಜ್ಯ. ಆದರೆ ಇಲ್ಲಿ ಕೆಲವರು ಶಾಂತಿ ಕದಡುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಶಾಸಕ ರೇಣುಕಾಚಾರ್ಯ ಕಿಡಿಕಾರಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ಧರಿಸಲು ಈ ಹಿಂದೆ ಕೇರಳ ಹೈಕೋರ್ಟ್ ಹೇಳಿದೆ. ಜೊತೆಗೆ ನಮ್ಮ ಸರ್ಕಾರ ಕೂಡಾ ಹೇಳಿದೆ. ಆದೇಶಗಳನ್ನು ನಾವು ಪಾಲಿಸಬೇಕು. ಹೈಕೋರ್ಟ್ ಹೇಳುವುದನ್ನು ನಾವು ಕೇಳಬೇಕು. ಕಾಂಗ್ರೆಸ್ ನಾಯಕರು ಬಿಜೆಪಿ ಸರ್ಕಾರವನ್ನು ಅಸ್ಥಿರ ಮಾಡಲು ಈ ರೀತಿಯ ಪ್ರಯತ್ನ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಅಲ್ಪಸಂಖ್ಯಾತ ಮುಖಂಡರು ಇಂತಹ ವಿಚಾರಗಳಿಗೆ ಪ್ರಚೋದನೆ ನೀಡಬಾರದು. ಕಾಲೇಜು ಆವರಣದಲ್ಲಿ ಧಾರ್ಮಿಕ ಸಮವಸ್ತ್ರ ಬೇಡ. ಹೀಗಾಗಿ ಎರಡು ಸಮುದಾಯದ ವಿದ್ಯಾರ್ಥಿಗಳು ನ್ಯಾಯಲಯ ಮತ್ತು ಸರ್ಕಾರ ಆದೇಶ ಪಾಲಿಸಬೇಕು ಎಂದ ಅವರು, ಹೊನ್ನಾಳ್ಳಿಯಲ್ಲೂ ಇಂತಹ ಕಹಿ ಘಟನೆ ನಡೆದಿದೆ. ನಾನು ಮಧ್ಯಪ್ರವೇಶ ಮಾಡಿ ಶಾಂತಿ ಕಾಪಾಡಲು ಮನವಿ ಮಾಡಿದ್ದೇನೆ ಜೊತೆಗೆ ಸಂಘರ್ಷದ ಬದಲು ಸಾಮರಸ್ಯ ಕಾಪಾಡಿಕೊಳ್ಳಲು ತಿಳಿಸಿದ್ದೇನೆ ಎಂದರು. ಇದನ್ನೂ ಓದಿ: ಹಿಜಬ್-ಕೇಸರಿ ಅಂತಾ ಮಕ್ಕಳ ಭವಿಷ್ಯ ಹಾಳು ಮಾಡಬೇಡಿ: HDK ಕಿಡಿ
ಹಿಜಬ್ ವಿವಾದದ ಕುರಿತು ಸುನಿಲ್ ಕುಮಾರ್, ಈಶ್ವರಪ್ಪ ಪ್ರಚೋದನೆ ನೀಡಿಲ್ಲ. ಸರ್ಕಾರದ ನಿಯಮ ಪಾಲಿಸಲು ಹೇಳಿದ್ದಾರೆ. ರಾಹುಲ್ ಗಾಂಧಿ, ಸಿದ್ದರಾಮಯ್ಯ ಅವರು ಮೂಲಭೂತ ಹಕ್ಕುಗಳು ಎಂದು ಪ್ರಚೋದನೆ ನೀಡುತ್ತಿದ್ದಾರೆ. ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಕಾಂಗ್ರೆಸ್ ಈ ರೀತಿ ಮಾಡುತ್ತಿದೆ. ಹೀಗೆ ಮಾಡಿ ದೇಶದಲ್ಲಿ ಕಾಂಗ್ರೆಸ್ ನಶಿಸಿ ಹೋಗಿದೆ. ಈಗ ಕರ್ನಾಟಕದಲ್ಲೂ ಓಟ್ ಬ್ಯಾಂಕ್ ರಾಜಕಾರಣ ಮಾಡಿದರೆ ಕಾಂಗ್ರೆಸ್ ಅಡ್ರೇಸ್ ಇಲ್ಲದ ಹಾಗೇ ಹೋಗುತ್ತದೆ ಎಂದು ಟೀಕಿಸಿದರು. ಇದನ್ನೂ ಓದಿ: ರಾಜವಂಶದ ಆಚೆಗೆ ಕಾಂಗ್ರೆಸ್ ಯೋಚಿಸಲು ಸಾಧ್ಯವಿಲ್ಲ: ಮೋದಿ ವಾಗ್ದಾಳಿ