Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಿಜಬ್‌ ಧರಿಸುವುದು ಮೂಲಭೂತ ಹಕ್ಕು: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹಿಜಬ್‌ ಧರಿಸುವುದು ಮೂಲಭೂತ ಹಕ್ಕು: ಸಿದ್ದರಾಮಯ್ಯ

Bengaluru City

ಹಿಜಬ್‌ ಧರಿಸುವುದು ಮೂಲಭೂತ ಹಕ್ಕು: ಸಿದ್ದರಾಮಯ್ಯ

Public TV
Last updated: February 4, 2022 3:35 pm
Public TV
Share
3 Min Read
siddaramaiah
SHARE

ಬೆಂಗಳೂರು: ಹಿಜಬ್‌ ಧರಿಸುವುದು ಮೂಲಭೂತ ಹಕ್ಕು. ಅದು ಸಾಕಷ್ಟು ವರ್ಷಗಳಿಂದ ನಡೆದುಕೊಂಡು ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಉಡುಪಿ ಸರ್ಕಾರಿ ಪಿಯು ಕಾಲೇಜಿನಲ್ಲಿ ತಲೆದೋರಿರುವ ಹಿಜಬ್‌-ಕೇಸರಿ ಶಾಲು ವಿವಾದ ಕುರಿತು ಮಾತನಾಡಿದ ಸಿದ್ದರಾಮಯ್ಯ, ಸಮವಸ್ತ್ರ ಕಡ್ಡಾಯ ಅಂತ ಸರ್ಕಾರ ಎಲ್ಲೂ ಹೇಳಿಲ್ಲ. ಪಿಯುಸಿ ಲೆವೆಲ್‌ನಲ್ಲಿ ಇಲ್ಲಾ. ಮುಸ್ಲಿಂ ಹೆಣ್ಣು ಮಕ್ಕಳಿಗೆ ಗೇಟ್ ಹಾಕಿಕೊಂಡು ಬರಬೇಡಿ ಅಂತ ಪ್ರಿನ್ಸಿಪಾಲ್ ಹೇಳಿದ್ದಾರೆ. ಸರ್ಕಾರಿ ಕಾಲೇಜು ಅದು. ಅದು ಮೂಲಭೂತ ಹಕ್ಕಿನ ಉಲ್ಲಂಘನೆ. ಹಿಜಬ್ ಹಾಕುವುದು ಮೂಲಭೂತ ಹಕ್ಕು. ಸಾಕಷ್ಟು ವರ್ಷಗಳಿಂದ ನಡೆದುಕೊಂಡು ಬಂದಿದೆ. ಈಗ ಅದು ನ್ಯಾಯಾಲಯದಲ್ಲಿದೆ, ಏನಾಗುತ್ತೆ ನೋಡೋಣ ಎಂದು ತಿಳಿಸಿದರು. ಇದನ್ನೂ ಓದಿ: ಸಮವಸ್ತ್ರದ ಆದೇಶ ಪಾಲಿಸದಿದ್ದರೆ ಕಾಲೇಜಿನಿಂದಲೇ ಡಿಬಾರ್

UDP HIJAB 1 1 780x450 1

ಯಾರೋ ಬಿಜೆಪಿಯವರು ಹೇಳಿ ಮಾಡಿಸುತ್ತಿದ್ದಾರೆ. ಇದು ಮುಸ್ಲಿಂ ಹೆಣ್ಣುಮಕ್ಕಳ ವಿದ್ಯಾಭ್ಯಾಸವನ್ನು ತಡೆಯುವ ಪ್ರಯತ್ನ. ಸರ್ಕಾರಿ ಕಾಲೇಜಿನ ಪ್ರಿನ್ಸಿಪಾಲ್ ಹೆಣ್ಣುಮಕ್ಕಳನ್ನ ತಡೆದಿದ್ದು ಅಮಾನವೀಯ. ಕಣ್ಣೀರು ಹಾಕಿದರೂ ಬಿಡಲಿಲ್ಲ. ಅವನ್ಯಾವನೋ ಶಾಸಕ ರಘುಪತಿ ಬಟ್, ಅವನು ಹೇಳಿದನಂತೆ ಇವನು ತಡೆದನಂತೆ ಅವನು ಯಾರು ಹೇಳೋಕೆ ಯುನಿಫಾರ್ಮ್ ತನ್ನಿ ಅಂತ ಎಂದು ಏಕವಚನದಲ್ಲಿ ಕಿಡಿಕಾರಿದರು.

ಈ ಬೆಳವಣಿಗೆ ಸಂವಿಧಾನ ವಿರೋಧಿ ನಡೆ. ಕೇಸರಿ ಶಾಲು ಹಾಕಿಕೊಂಡು ಬಂದಿದ್ದರ ಉದ್ದೇಶ ಏನು? ಆ ಪ್ರಿನ್ಸಿಪಾಲ್‌ನ ಸಸ್ಪೆಂಡ್ ಮಾಡಬೇಕು. ಕೇಸರಿ ಶಾಲು ಮೊದಲಿನಿಂದ ಹಾಕ್ತಿದ್ರಾ? ಹಿಜಬ್ ಮೊದಲಿನಿಂದಲೂ ಹಾಕುತ್ತಿದ್ದರು. ಕೋರ್ಟ್‌ನಲ್ಲಿ ವಿಚಾರಣೆಯಿದೆ. ನಾನು ಲಾಯರ್, ಪ್ರತಿಪಕ್ಷ ನಾಯಕನಾಗಿಯೇ ಹೇಳುತ್ತಿದ್ದೇನೆ. ಕೇಸರಿ ಶಾಲು ಹಾಕೋದು ಯಾವಾಗಿಂತ ಬಂತು? ನಿನ್ನೆ, ಮೊನ್ನೆಯಿಂದ ಬಂದಿದೆ. ಹಿಜಬ್ ಹಿಂದಿನಿಂದಲೂ ಇದೆ. ಕರಾವಳಿಯು ಸಂಘ ಪರಿವಾರದ ಕೋಮುವಾದದ ಪ್ರಯೋಗಾಲಯವಾಗಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಹಿಜಬ್ ನೆಪವೊಡ್ಡಿ ಮುಸ್ಲಿಂ ಹೆಣ್ಮಕ್ಕಳ ಶಿಕ್ಷಣಕ್ಕೆ ತಡೆ ಒಡ್ಡಲಾಗ್ತಿದೆ: ಮುಫ್ತಿ

UDP HIJAB VS KESARI SHALYA

ನದಿ ಜೋಡಣೆ ಸಂಬಂಧ ಮಾತನಾಡಿ, ನಿರ್ಮಲಾ ಸೀತಾರಾಮನ್ ಫೆಬ್ರವರಿ 1 ರಂದು ಬಜೆಟ್‌ನಲ್ಲಿ ದಕ್ಷಿಣದ ನದಿಗಳನ್ನು 46 ಸಾವಿರ ಕೋಟಿ ವೆಚ್ಚದಲ್ಲಿ ಜೋಡಣೆ ಮಾಡುತ್ತೇವೆ ಎಂದಿದ್ದಾರೆ. ಇದು ಕಾರ್ಯಸಾಧುವಾದ ಯೋಜನೆ ಅಲ್ಲ. ನಿರ್ಮಲಾ ಸೀತಾರಾಮನ್ ತಮಿಳುನಾಡಿನವರು ಅದಕ್ಕೆ ಇದನ್ನ ಪ್ರಸ್ತಾಪ ಮಾಡಿದಂತೆ ಕಾಣುತ್ತಿದೆ. ನಮ್ಮ ರಾಜ್ಯದ ಜೊತೆ ಚರ್ಚೆ ಮಾಡಿಲ್ಲ. ಕೃಷ್ಣ, ಗೋದಾವರಿ, ಪೆನ್ನಾರ್ ನದಿಗಳು ಆಂಧ್ರ, ತೆಲಂಗಾಣ, ತಮಿಳುನಾಡು ರಾಜ್ಯದ ವ್ಯಾಪ್ತಿಗೆ ಬರುತ್ತವೆ. ನ್ಯಾಷನಲ್ ವಾಟರ್ ಡೆವಲಪ್‌ಮೆಂಟ್ ಏಜೆನ್ಸಿಯಲ್ಲಿ ಇದರ ಬಗ್ಗೆ ಚರ್ಚೆ ಆಗಿದೆ. ರಾಜಸ್ಥಾನ ಬಿಟ್ಟರೆ ಹೆಚ್ಚು ಒಣ ಭೂಮಿ ಇರುವುದು ಕರ್ನಾಟಕದಲ್ಲಿ. ನದಿ ಜೋಡಣೆಯಿಂದ ತಮಿಳುನಾಡಿಗೆ ಹೆಚ್ಚು ನೀರು ಸಿಗುತ್ತದೆ ಎಂದು ವಿವರಿಸಿದರು.

ನ್ಯಾಷನಲ್ ವಾಟರ್ ಡೆವಲಪ್‌ಮೆಂಟ್‌ ಏಜೆನ್ಸಿ ಸಭೆ ಆಗಿದೆ. ಅಲ್ಲಿ ನದಿ ಜೋಡಣೆ ಬಗ್ಗೆ ಚರ್ಚೆ ಆಗಿದೆ. ಇದರಿಂದ 347 ಟಿಎಂಸಿ ನೀರು ಸಿಗುತ್ತದೆ. ಇದರಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನುಕೂಲ ಎಂದು ಚರ್ಚೆ ಆಗಿದೆ. ರಾಜಸ್ಥಾನ ಬಿಟ್ಟರೆ, ಬಹುತೇಕ ರಾಜ್ಯಗಳಲ್ಲಿ ಒಣ ಭೂಮಿಯಿದೆ. ಕೇರಳ, ಮಹಾರಾಷ್ಟ್ರ, ತಮಿಳುನಾಡು ನೀರಾವರಿ ಭೂಮಿಯಿದೆ. ಕರ್ನಾಟಕದಲ್ಲಿ 35% ನೀರಾವರಿ ಇದೆ. ರಾಜಸ್ಥಾನ ಬಿಟ್ಟರೆ ರಾಜ್ಯದಲ್ಲಿ ಒಣ ಭೂಮಿ ಹೆಚ್ಚಿದೆ. ನದಿ ಜೋಡಣೆಯಿಂದ ಹೆಚ್ಚು ನೀರು ಸಿಗಲ್ಲ. ಯಾವ ಯಾವ ನದಿಗಳಿಂದ ಹೆಚ್ಚು ನೀರು ಸಿಗುತ್ತದೆ ಎಂದು ರಾಜ್ಯದವರ ಜೊತೆಗೆ ಚರ್ಚೆ ಮಾಡಿಲ್ಲ. ಇದರಿಂದ ಜಲವಿವಾದ ಶುರುವಾಗುತ್ತದೆ. ಹಾಗಾಗಿ ದಕ್ಷಿಣ ಭಾರತದ ರಾಜ್ಯಗಳ ಜೊತೆ ಸಭೆ ಕರಿಯಬೇಕು. ಸರ್ವ ಪಕ್ಷ ಸಭೆ ಕರೆಯಬೇಕು. ಎಲ್ಲಾ ಮಾಹಿತಿ ಜನರ ಮುಂದೆ ಇಡಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಹಿಜಬ್ ವಿರುದ್ಧ ಕೇಸರಿ ಶಾಲು ಧರಿಸಿ ಜೈ ಶ್ರೀರಾಮ್ ಘೋಷಣೆ ಕೂಗುತ್ತ ಆಗಮಿಸಿದ ವಿದ್ಯಾರ್ಥಿಗಳು

RAGHUPATI BHAT large

ಗೋದಾವರಿಯಿಂದ ಎಷ್ಟು, ಕಾವೇರಿಯಿಂದ ಎಷ್ಟು, ಪೆನ್ನಾರ್‌ನಿಂದ ಎಷ್ಟು ನೀರು ಲಭ್ಯವಾಗಲಿದೆ. ಯಾವ್ಯಾವ ರಾಜ್ಯಕ್ಕೆ ಎಷ್ಟು ನೀರು ಸಿಗುತ್ತದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿ ಜನರಿಗೆ ತಿಳಿಸಬೇಕು. ನಾವು ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ. ಏಕಮುಖವಾಗಿ ನಡೆದುಕೊಳ್ಳುವುದು ಸರಿಯಲ್ಲ. ಅದು ಸರ್ವಾಧಿಕಾರಿ ಧೋರಣೆಯಾಗಲಿದೆ. ಇದಕ್ಕೆ ನಮ್ಮ ತೀವ್ರ ವಿರೋಧವಿದೆ ಎಂದರು.

TAGGED:Hijabkesari-shalyasiddaramaiahudupiಉಡುಪಿಕೇಸರಿ ಶಾಲುಬೆಂಗಳೂರುಸಿದ್ದರಾಮಯ್ಯಹಿಜಬ್
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Donald Trump Asim Munir Shehbaz Sharif
Latest

ಅಮೆರಿಕದ ವಿರುದ್ಧ ಮುನೀರ್‌ ಡಬಲ್‌ಗೇಮ್‌ – ಟ್ರಂಪ್‌ಗೆ ಗುಪ್ತಚರ ಸಂಸ್ಥೆಯಿಂದ ಎಚ್ಚರಿಕೆ

Public TV
By Public TV
15 minutes ago
Davanagere Kavya Murder Case
Crime

ಮಹಿಳೆ ಅನುಮಾನಾಸ್ಪದ ಸಾವು – ಪರಸ್ತ್ರೀ ಸಹವಾಸದಿಂದ ಹತ್ಯೆಗೈದ್ನಾ ಪತಿ?

Public TV
By Public TV
28 minutes ago
Pahalgam QR Code IdentificationS
Latest

ಪಹಲ್ಗಾಮ್‌ ನರಮೇಧಕ್ಕೆ 1 ವರ್ಷ – ಪ್ರವಾಸಿಗರ ರಕ್ಷಣೆಗೆ ಸರ್ಕಾರ ಕೈಗೊಂಡಿರುವ ಕ್ರಮಗಳೇನು?

Public TV
By Public TV
1 hour ago
pm modi meeting
Latest

ದೇಶವನ್ನು ಉದ್ದೇಶಿಸಿ ಭಾಷಣ – ಮೋದಿ ವಿರುದ್ಧ ಕಾಂಗ್ರೆಸ್‌, ಸಿಪಿಎಂನಿಂದ ದೂರು

Public TV
By Public TV
1 hour ago
UP Man Kills Twin Daughters In kanpur
Crime

ಅವಳಿ ಹೆಣ್ಣುಮಕ್ಕಳನ್ನು ಕತ್ತು ಸೀಳಿ ಕೊಂದ ಪಾಪಿ ತಂದೆ

Public TV
By Public TV
1 hour ago
Modi 1
Latest

ಕಾಂಗ್ರೆಸ್‌ ಜೊತೆ ಸೇರಿ ಟಿಎಂಸಿ ಪಿತೂರಿ, ಬಂಗಾಳದ ಮಹಿಳೆಯರಿಗೆ ಮತ್ತೆ ದ್ರೋಹ: ಮೋದಿ ವಾಗ್ದಾಳಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?