ದೂದ್ ಸಾಗರ್ ಬಳಿ ಗುಡ್ಡ ಕುಸಿತ – ರೈಲು ಸಂಚಾರದಲ್ಲಿ ವ್ಯತ್ಯಯ

Public TV
1 Min Read
Dudhsagar Railway Track 1

ಬೆಳಗಾವಿ: ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಧಾರಾಕಾರ ಮಳೆಗೆ ಕರ್ನಾಟಕ-ಗೋವಾ ಗಡಿಭಾಗದಲ್ಲಿರುವ ದೂದ್ ಸಾಗರ್ (Dudhsagar) ಬಳಿ ಗುಡ್ಡ ಕುಸಿದಿದ್ದು, ಯಾವುದೇ ರೀತಿಯ ಅಹಿತಕರ ಘಟನೆ ಸಂಭವಿಸಿಲ್ಲ.

DudhSagr Railway Track

ಭಾನುವಾರ ಸಂಜೆ 6 ಗಂಟೆಗೆ ಗುಡ್ಡ ಕುಸಿದು ರೈಲ್ವೆ ಟ್ರಾಕ್ (Railway Track) ಮೇಲೆ ಮಣ್ಣು, ಬಂಡೆಗಳು ಬಿದ್ದಿವೆ. ಘಟನೆಯ ಪರಿಣಾಮ ನಾಲ್ಕು ಗಂಟೆಗಳ ಕಾಲ ಬೆಳಗಾವಿ- ಗೋವಾ ಮಧ್ಯೆ ರೈಲ್ವೆ ಸಂಚಾರದಲ್ಲಿ ವ್ಯತ್ಯಯವಾಗಿತ್ತು. ಮಣ್ಣು-ಬಂಡೆಗಳ ತೆರವಿಗೆ ಗೋವಾದ ಅಗ್ನಿಶಾಮಕ ದಳದ ಠಾಣೆ ಸಿಬ್ಬಂದಿಗಳು, ರೈಲ್ವೆ ಪೊಲೀಸರ ಹರಸಾಹಸಪಟ್ಟರು. ಇದನ್ನೂ ಓದಿ: ಭೀಮನ ಅಮವಾಸ್ಯೆ; ರಾಜ್ಯಾದ್ಯಂತ ದೇವಾಲಯಗಳಲ್ಲಿ ವಿಶೇಷ ಪೂಜೆ – ಮಹಿಳೆಯರಿಂದ ಪ್ರಾರ್ಥನೆ

ಭಾನುವಾರ ದೂದ್ ಸಾಗರ್ ಜಲಪಾತ ವೀಕ್ಷಣೆಗೆ ಅಪಾರ ಪ್ರಮಾಣದಲ್ಲಿ ಪ್ರವಾಸಿಗರು ತೆರಳಿದ್ದರು. ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ. ರಾತ್ರಿ 10 ಗಂಟೆಯ ಬಳಿಕ ರೈಲುಗಳ ಕಾರ್ಯಾಚರಣೆ ಪುನರಾರಂಭವಾಗಿದೆ. ಇದನ್ನೂ ಓದಿ: ಪರಿಷತ್‍ನಲ್ಲಿ ಕೆ.ಟಿ ಶ್ರೀಕಂಠೇಗೌಡ ಅತ್ಯುತ್ತಮ ಶಾಸಕ

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article